Breaking News

Daily Archives: ಜನವರಿ 22, 2023

ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಇಬ್ಬರು ಪುತ್ರರ ವಿವಾಹ ಸಮಾರಂಭ ಸೋಮವಾರ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸೋಮವಾರ ಬೆಳಗಾವಿಗೆ ಗಣ್ಯರ ದಂಡೇ ಹರಿದು ಬರಲಿದೆ. ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಇಬ್ಬರು ಪುತ್ರರ ವಿವಾಹ ಸಮಾರಂಭ ಸೋಮವಾರ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯಲಿದೆ. ಇದರಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶೇಷ ವಿಮಾನದಲ್ಲಿ ಆಗಮಿಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಹೊರಡಲಿರುವ ಬೊಮ್ಮಾಯಿ 12.15ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿಯುವರು. ಅಲ್ಲಿಂದ ಸಿಪಿಎಡ್ ಮೈದಾನಕ್ಕೆ ಆಗಮಿಸಿ ವಿವಾಹ ಸಮಾರಂಭದಲ್ಲಿ …

Read More »

ಇಂದಿರಾ ಗಾಂಧಿ ಸಿನಿಮಾಕ್ಕಾಗಿ ತನ್ನೆಲ್ಲ ಆಸ್ತಿ ಅಡವಿಟ್ಟ ಕಂಗನಾ ರನೌತ್!

ಕಂಗನಾ ರನೌತ್ ಸದಾ ವಿವಾದಗಳಿಂದಲೇ ಸುದ್ದಿಯಲ್ಲಿರುವವರು. ಒಂದರ ಹಿಂದೊಂದು ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾ ಕೇಸುಗಳನ್ನು ಮೈಮೇಲೆ ಎಳೆದುಕೊಳ್ಳುತ್ತಿರುತ್ತಾರೆ. ಆದರೆ ನಟನೆ ವಿಷಯಕ್ಕೆ ಬಂದಾಗ ಆಕೆಯನ್ನು ಮೀರಿಸುವ ನಟಿ ಬಾಲಿವುಡ್‌ನಲ್ಲಿ ಮತ್ತೊಬ್ಬರಿಲ್ಲ. ಯಾವುದೇ ಪಾತ್ರವಾದರೂ ಪರಕಾಯ ಪ್ರವೇಶ ಮಾಡುವ ಕಂಗನಾ, ಪಾತ್ರವೇ ತಾವಾಗಿಬಿಡುತ್ತಾರೆ. ಕಂಗನಾರನ್ನು ದ್ವೇಷಿಸುವವರು ಸಹ ಆಕೆಯ ನಟನೆಗೆ ಮಾರು ಹೋಗದೇ ಬೇರೆ ವಿಧಿಯಿಲ್ಲ. ನಟನೆಗೆ ಎರಡು ರಾಷ್ಟ್ರಪ್ರಶಸ್ತಿ ಪಡೆದಿರುವ ಕಂಗನಾ ಇದೀಗ ಮತ್ತೊಂದು ರಾಷ್ಟ್ರಪ್ರಶಸ್ತಿ ಮೇಲೆ ಕಣ್ಣು ಹಾಕಿದಂತೆ …

Read More »

ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ನೌಕಾಪಡೆಯ ತುಕಡಿಗೆ ಮಂಗಳೂರಿನ ದಿಶಾ ಕ್ಯಾಪ್ಟನ್‌

ಮಂಗಳೂರು: ಇಲ್ಲಿನ ತಿಲಕನಗರದ ದಿಶಾ ಅಮೃತ್‌ ಅವರು, ಇದೇ 26ರಂದು ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸಲಿದ್ದಾರೆ. ನೌಕಾಪಡೆಯ 144 ಸೈನಿಕರನ್ನು ಒಳಗೊಂಡ ತುಕಡಿ ಹಾಗೂ ಸ್ತಬ್ಧಚಿತ್ರವು ಈ ಕವಾಯತಿನಲ್ಲಿ ‘ನಾರಿಶಕ್ತಿ’ಯನ್ನು ಪ್ರದರ್ಶಿಸಲಿದೆ.   ಅಂಡಮಾನ್‌ ನಿಕೋಬಾರ್‌ನಲ್ಲಿ ನೌಕಾಪಡೆಯಲ್ಲಿ ಲೆಫ್ಟಿನೆಂಟ್‌ ಕಮಾಂಡರ್‌ ಆಗಿರುವ ಮಗಳು ಗಣರಾಜ್ಯೋತ್ಸವ ಪರೇಡ್‌ನಲ್ಲಿ ತುಕಡಿಯ ನಾಯಕಿಯಾಗಿ ಹೆಜ್ಜೆಹಾಕುವುದನ್ನು ಕಣ್ತುಂಬಿಕೊಳ್ಳಲು ಆಕೆಯ ತಂದೆತಾಯಿ ಅಮೃತ್ ಕುಮಾರ್‌- ಲೀಲಾ ದಂಪತಿ ನವದೆಹಲಿಗೆ ತೆರಳಿದ್ದಾರೆ. ಮಗಳ ಸಾಧನೆ …

Read More »

ವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಆರೋಪದ ಕುರಿತು ಕಾಂಗ್ರೆಸ್‌ನಿಂದ ಬೆಂಗಳೂರಿನ 300 ಸ್ಥಳಗಳಲ್ಲಿ ನಾಳೆ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಆರೋಪದ ಕುರಿತು ಕ್ರಮಕ್ಕೆ ಆಗ್ರಹಿಸಿ ಬೆಂಗಳೂರಿನ 300 ಸ್ಥಳಗಳಲ್ಲಿ ಕಾಂಗ್ರೆಸ್ ಸೋಮವಾರ ಪ್ರತಿಭಟನೆ ನಡೆಸಲಿದೆ. ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಅವರೊಂದಿಗೆ ಭಾನುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎನ್.ಎ.‌ಹ್ಯಾರಿಸ್, ‘ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಹಾಸುಹೊಕ್ಕಾಗಿದೆ. ಆರೋಪಗಳು ಬಂದರೂ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದಲ್ಲಿನ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಮೂಡಿಸುವುದಕ್ಕಾಗಿ ಬೆಂಗಳೂರಿನ 51 ಮೆಟ್ರೊ ರೈಲು ನಿಲ್ದಾಣಗಳು, 26 ಮೇಲುಸೇತುವೆಗಳು, 200 ಟ್ರಾಫಿಕ್ ಸಿಗ್ನಲ್ …

Read More »

ಭರವಸೆ ಈಡೇರಿಸದಿದ್ದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಹಾಸನ: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬದ ಯಜಮಾನಿಗೆ ₹2 ಸಾವಿರ ಸಹಾಯಧನ, 10 ಕೆ.ಜಿ. ಅಕ್ಕಿಯನ್ನು ಕೊಡುವುದಾಗಿ ಭರವಸೆ ನೀಡಿದ್ದೇವೆ.‌ ಅದನ್ನು‌ ಈಡೇರಿಸುತ್ತೇವೆ. ಒಂದು‌ ವೇಳೆ‌ ಈಡೇರಿಸದೇ ಹೋದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇವೆ’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ‌ ಹೇಳಿದರು.   ಇಲ್ಲಿ ಶನಿವಾರ ನಡೆದ ‘ಪ್ರಜಾಧ್ವನಿ‌’ ಯಾತ್ರೆಯಲ್ಲಿ‌ ಮಾತನಾಡಿರುವ ಅವರು, ‘ಈ ಬಗ್ಗೆ ಜಿಲ್ಲೆಯ ಪ್ರತಿಯೊಬ್ಬರಿಗೆ ಪಕ್ಷದ ಕಾರ್ಯಕರ್ತರೂ ಮನವರಿಕೆ ಮಾಡಿಕೊಡಬೇಕು. ಜಿಲ್ಲೆಯಲ್ಲಿ …

Read More »

ಬೆಳಗಾವಿ: ಗಂಡು ಮಕ್ಕಳಿಗೆ ಸಂಸ್ಕಾರ ಕಲಿಸಿ: ಹೈಕೋರ್ಟ್‌ ಸಿಜೆ ಪ್ರಸನ್ನ ವರಾಳೆ

ಬೆಳಗಾವಿ: ‘ಬೇಟಿ ಪಡಾವೋ, ಬೇಟಿ ಬಚಾವೋ’ ಎಂದು ಕೇಂದ್ರ ಸರ್ಕಾರ ಆಂದೋಲನ ಆರಂಭಿಸಿದೆ. ಆದರೆ, ಪ್ರಸ್ತುತ ಸನ್ನಿವೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ನಮ್ಮ ಮನೆಯ ಗಂಡು ಮಕ್ಕಳಿಗೆ ಸಂಸ್ಕಾರ ಕಲಿಸಬೇಕಿದೆ’ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ವರಾಳೆ ಅವರು ಪ್ರತಿಪಾದಿಸಿದರು.   ಇಲ್ಲಿನ ನ್ಯಾಯಾಲಯ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಹೆಚ್ಚುವರಿ ನ್ಯಾಯಾಲಯ ಕಟ್ಟಡದ (ನೆಲಮಹಡಿ) ಉದ್ಘಾಟನೆ, ವಕೀಲರ ಭವನದ ಎರಡನೇ ಮಹಡಿ ನಿರ್ಮಾಣ, ಖಾನಾಪುರ ನ್ಯಾಯಾಧೀಶರ ವಸತಿಗೃಹಗಳ …

Read More »

ದಟ್ಟ ಅರಣ್ಯದ ಮಧ್ಯೆ ಶಾಂತಚಿತ್ತವಾಗಿ ಹರಿಯುವ ಜಲಧಾರೆ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ತನ್ನತ್ತ ಸೆಳೆಯುತ್ತಿದೆ.

ಖಾನಾಪುರ: ತಾಲ್ಲೂಕಿನ ನಾಗರಗಾಳಿ ಅರಣ್ಯ ವ್ಯಾಪ್ತಿಯಲ್ಲಿರುವ ಜಲಪಾತ ಚಾರಣಪ್ರಿಯರ ಮನ ತಣಿಸುತ್ತಿದೆ. ದಟ್ಟ ಅರಣ್ಯದ ಮಧ್ಯೆ ಶಾಂತಚಿತ್ತವಾಗಿ ಹರಿಯುವ ಜಲಧಾರೆ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ತನ್ನತ್ತ ಸೆಳೆಯುತ್ತಿದೆ. ಲೋಂಡಾ, ಉತ್ತರ ಕನ್ನಡ ಜಿ ಖಾನಾಪುರ ಲ್ಲೆಯ ದಾಂಡೇಲಿ ಮತ್ತು ಧಾರವಾಡ ಜಿಲ್ಲೆಯ ಅಳ್ನಾವರ ಅರಣ್ಯದ ಮಧ್ಯೆ ನಾಗರಗಾಳಿ ಅರಣ್ಯ ಪ್ರದೇಶವಿದೆ. ಬಹುತೇಕ ಸಾಗವಾನಿ ಹಾಗೂ ಸೀಸಂ ಮರಗಳಿರುವ ಈ ಕಾಡಿನಲ್ಲಿ ಹರಿಯುವ ಜಲಪಾತ ಮುಂದೆ ಕಾಳಿ ನದಿ ಸೇರುತ್ತದೆ. ಅನುಮತಿ ಬೇಕು: ದಾಂಡೇಲಿಯಿಂದ ನಾಗರಗಾಳಿ ಅರಣ್ಯಕ್ಕೆ …

Read More »

ಬೆಳಗಾವಿ: ಬಾನಂಗಳದಲ್ಲಿ ಗಾಳಿಪಟ ಚಿತ್ತಾರ

ಬೆಳಗಾವಿ: ಇಲ್ಲಿನ ಬಿ.ಎಸ್‌. ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಶನಿವಾರ ಆರಂಭಗೊಂಡ ಅಂತರರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ ಹಾರಾಡಿದ ಬಗೆಬಗೆಯ ವಿನ್ಯಾಸಗಳ ಗಾಳಿಪಟಗಳು ಬಾನಂಗಳದಲ್ಲಿ ಚಿತ್ತಾರ ಮೂಡಿಸಿದವು. ಕಾಂತಾರ, ಇಂಡಿಯನ್‌ ಲಿಫ್ಟರ್‌, ಕವ್‌, ಮಾಂತಾ ರೇ, ರಿಂಗ್‌ ಮಾದರಿಯ ಪತಂಗ ಕಣ್ಮನಸೆಳೆದವು. ಗಾಳಿಪಟಗಳ ಹಾರಾಟ ನೋಡಿ ಬಾನಲ್ಲಿ ಜನರ ಮನ ತೇಲಿತು. ಪ್ರತಿವರ್ಷ ಶಾಸಕ ಅಭಯ ಪಾಟೀಲ ನೇತೃತ್ವದಲ್ಲಿ ಅಂತರರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜಿಸಲಾಗುತ್ತಿತ್ತು. ಕೊರೊನಾ ಆತಂಕದಿಂದಾಗಿ ಕಳೆದ ಎರಡು ವರ್ಷ ರದ್ದಾಗಿತ್ತು. …

Read More »

ಬೆಳಗಾವಿ: ”ಸಾಹಿತ್ಯದಿಂದ ಸೈನಿಕರ ಸ್ಥೈರ್ಯ ಹೆಚ್ಚಳ’: ದಯಾಲನ್

ಬೆಳಗಾವಿ: ‘ದೇಶದ ಗಡಿ ಕಾಯುವ ಸೈನಿಕರಿಗೆ ಸಾಹಿತಿ ನೀಲಗಂಗಾ ಚರಂತಿಮಠ ಅವರಿ ತಮ್ಮ ಕೃತಿಗಳಲ್ಲಿ ದೊಡ್ಡ ಗೌರವ ನೀಡಿದ್ದಾರೆ. ಇಂಥ ಪುಸ್ತಕಗಳಿಂದ ಸೈನಿಕರ ನೈತಿಕ ಸ್ಥೈರ್ಯ ಹೆಚ್ಚುತ್ತದೆ’ ಎಂದು ಕಮಾಂಡೆಂಟ್‌ ಪಿ.ಸಿ. ವಿಂಗ್‌ನ ಬ್ರಿಗೇಡಿಯರ್ ದಯಾಲನ್ ಹೇಳಿದರು.   ಸಾಹಿತಿ ನೀಲಗಂಗಾ ಚರಂತಿಮಠ ಅವರ ‘ಧಾರಿಣಿ’, ‘ಜನನಿ ಜನ್ಮಭೂಮಿ’, ‘ಒಂದೇ ಮಾತರಂ’ ಮತ್ತು ‘ಪ್ರಣಾಮ್’ ಎಂಬ ನಾಲ್ಕು ಪುಸ್ತಕಗಳನ್ನು ಗುರುವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಸ್.ಎಂ. …

Read More »

ಆಸ್ಪತ್ರೆ ನಿರ್ಮಾಣಕ್ಕೆ ₹27 ಕೋಟಿ ಬಿಡುಗಡೆ:ಶಾಸಕ ಅನಿಲ ಬೆನಕೆ

ಬೆಳಗಾವಿ: ನಗರದಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ ಅಡಿಯಲ್ಲಿ ₹27 ಕೋಟಿ ಅನುದಾನ ನೀಡಲಾಗಿದೆ. ಶಾಸಕ ಅನಿಲ ಬೆನಕೆ ಪ್ರಯತ್ನ ಮಾಡಿ ಈ ಅನುದಾನ ಮಂಜೂರು ಮಾಡಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.   ಜಿಲ್ಲಾಸ್ಪತ್ರೆ ಅಭಿವೃದ್ಧಿ, ಮಲ್ಟಿ ಸೂಪರ್ ಸ್ಪೆಷಾಲಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಒತ್ತು ನೀಡಿರುವ ಶಾಸಕ ಅನಿಲ ಬೆನಕೆ, ಬೆಳಗಾವಿಯಲ್ಲಿ ನಡೆದ ಅಧಿವೇಶನ …

Read More »