ಬೆಂಗಳೂರು: ವೇತನ ಪರಿಷ್ಕರಣೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರು ಜ. 24(ಮಂಗಳವಾರ)ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಆದರೆ ಇದರಿಂದ ಸಾರಿಗೆ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗುವುದಿಲ್ಲ. ಆದರೆ ಇದರಿಂದ ಸಾರಿಗೆ ಸೇವೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಆಗುವುದಿಲ್ಲ. ಜಿಲ್ಲಾ ಬಸ್ ಘಟಕಗಳ (ಡಿಪೋ) ಮುಂಭಾಗ, ಹುಬ್ಬಳ್ಳಿ, ಕಲಬುರಗಿ, ಬೆಂಗಳೂರು ಸಾರಿಗೆ ನಿಗಮಗಳ ವಿಭಾಗೀಯ ಕಚೇರಿ ಮುಂಭಾಗ ಮತ್ತು ಸ್ವಾತಂತ್ರ್ಯ ಉದ್ಯಾನದಲ್ಲಿ …
Read More »Monthly Archives: ಜನವರಿ 2023
ಡಾ.ರಾಜೇಂದ್ರ ಚೆನ್ನಿ, ಡಾ.ಜಿನದತ್ತ ದೇಸಾಯಿಗೆ ಬೇಂದ್ರೆ ರಾಷ್ಟ್ರೀಯ ಪ್ರಶಸ್ತಿ
ಧಾರವಾಡ: ವರಕವಿ ಡಾ.ದ.ರಾ.ಬೇಂದ್ರೆ ಅವರ 127ನೇ ಜನ್ಮದಿನಾಚರಣೆ ಪ್ರಯುಕ್ತ ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ್ ವತಿಯಿಂದ ಕೊಡ ಮಾಡುವ 2023ನೇ ಸಾಲಿನ ಅಂಬಿಕಾತನಯದತ್ತ ರಾಷ್ಟೀಯ ಪ್ರಶಸ್ತಿಗೆ ಈ ಸಲ ಇಬ್ಬರು ಭಾಜನರಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ ಹೇಳಿದರು. ನಗರದ ಬೇಂದ್ರೆ ಭವನದಲ್ಲಿ ಮಂಗಳವಾರ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಲಕ್ಷ ನಗದು, ಸ್ಮರಣಿಕೆ ಫಲಕ ಒಳಗೊಂಡ ಈ ಪ್ರಶಸ್ತಿಯನ್ನು ಪ್ರತ್ಯೇಕ ತಲಾ 50 ಸಾವಿರದಂತೆ ಮೂಲತ: …
Read More »ತೊಗರಿ ನೆಟೆರೋಗಕ್ಕೆ ಪರಿಹಾರ ನೀಡಲು ನಿರ್ಧಾರ: ಸಿಎಂ ಬೊಮ್ಮಾಯಿ
ಕಲಬುರಗಿ: ನೆಟೆರೋಗದಿಂದ ಹಾಳಾಗಿರುವ ತೊಗರಿಗೆ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಷ್ಟು ಪ್ರಮಾಣದಲ್ಲಿ ಪರಿಹಾರ ನೀಡಬೇಕು ಎಂಬುದನ್ನು ನಿರ್ಣಯಿಸಲು ಉನ್ನತಾಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಸ್ಪಷ್ಟ ಪಡಿಸಿದರು. ಈ ಮೊದಲು ಅತಿವೃಷ್ಟಿ ಹಾಗೂ ಈಗ ನೆಟೆರೋಗದಿಂದ ಹಾಳಾಗಿದ್ದರಿಂದ ರೈತರ ಸಂಕಷ್ಟ ಸರ್ಕಾರ ಅರಿವಿದೆ ಎಂದರು. ವಿಠಲ್ ಹೇರೂರ್ ಅವರ ಕಂಚಿನ ಪ್ರತಿಮೆ ಅನಾವರಣಕ್ಕೆ ಬಂದಿದ್ದೇನೆ. …
Read More »ಪಿಎಸ್ಐ ಕೇಸ್ ಗೆ ಟ್ವಿಸ್ಟ್: ಸಿಐಡಿ ಅಧಿಕಾರಿಗೆ 76 ಲಕ್ಷ ರೂ. ಲಂಚ ನೀಡಿದ ಆರೋಪ
ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಿಂದ ಪಾರು ಮಾಡಲು ತಾನು ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ 76 ಲಕ್ಷ ರೂ ನೀಡಿರುವುದಾಗಿ ಪ್ರಕರಣದ ಪ್ರಮುಖ ಆರೋಪಿ ಆರ್.ಡಿ. ಪಾಟೀಲ ಲೋಕಾಯುಕ್ತರಿಗೆ ದೂರು ನೀಡಿದ್ದಾನೆ. ಇದರೊಂದಿಗೆ ಪ್ರಕರಣಕ್ಕೆ ಹೊಸ ತಿರುವು ದೊರೆತಂತಾಗಿದೆ. ದೂರಿನೊಂದಿಗೆ 8.4 ನಿಮಿಷ ಅವಧಿಯ ಆಡಿಯೋದ ಪೆನ್ ಡ್ರೈವ್ ದಾಖಲೆಯಾಗಿ ನೀಡಿದ್ದಾರೆ. ಈ ಸಂಬಂದ ‘ಆರ್.ಡಿ. ಪಾಟೀಲ ಯುವ ಬ್ರಿಗೇಡ್’ ಹೆಸರಿನ ಫೇಸ್ಬುಕ್ ಪೇಜ್ ಮೂಲಕ …
Read More »ಬೆಳಗಾವಿ ಜಿಲ್ಲಾಧಿಕಾರಿಗೆ ರಾಜ್ಯಮಟ್ಟದ ‘ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ’ ಪ್ರಶಸ್ತಿ
ಬೆಳಗಾವಿ: ಭಾರತ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕೊಡಮಾಡುವ ಅತ್ಯುತ್ತಮ “ಜಿಲ್ಲಾ ಚುನಾವಣಾಧಿಕಾರಿ” ಪ್ರಶಸ್ತಿಗೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾಜನರಾಗಿದ್ದಾರೆ. ಭಾರತ ಚುನಾವಣಾ ಆಯೋಗ ಮತ್ತು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯ ವತಿಯಿಂದ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಬೆಂಗಳೂರಿನ ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜ.25 ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ “ರಾಷ್ಟ್ರೀಯ ಮತದಾರರ ದಿನಾಚರಣೆ” ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ …
Read More »ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಇಲ್ಲ’: ಯಡಿಯೂರಪ್ಪ
ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕೋಲಾರದಿಂದ ಸ್ಪರ್ಧಿಸುವುದಿಲ್ಲ. ಈಗ ನಡೆದಿರುವುದೆಲ್ಲ ಕೇವಲ ನಾಟಕ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಕೋಲಾರದ ಬದಲು ಮೈಸೂರಿನಿಂದ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ದಾರೆ. ಕೋಲಾರದಲ್ಲಿ ನಿಂತರೆ ಮನೆಗೆ ಹೋಗುವುದು ನಿಶ್ಚಿತ ಎಂಬುದು ಅವರಿಗೆ ಮನದಟ್ಟಾಗಿದೆ. ಒಂದು ವೇಳೆ ಅವರು ಮೈಸೂರಿನಿಂದ ಸ್ಪರ್ಧಿಸುವುದು ಖಚಿತವಾದರೆ ನಾವು ನಮ್ಮ ಕಾರ್ಯತಂತ್ರವನ್ನು ರೂಪಿಸುತ್ತೇವೆ ಎಂದರು. ಸಿದ್ದರಾಮಯ್ಯ ಎರಡಲ್ಲ, …
Read More »ಸಂಕೇಶ್ವರ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು
ಸಂಕೇಶ್ವರ : ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸಂಕೇಶ್ವರ ನಗರದ ಹೊರವಲಯದ ಪೂನಾ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟಿರುವ ವ್ಯಕ್ತಿಯ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಈ ಅಪಘಾತದಲ್ಲಿ ಬೈಕ್ ಸವಾರನ ದೇಹವು ಮೂರು ಭಾಗವಾಗಿ ತುಂಡರಿಸಿದಂತಾಗಿದೆ. ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿರುವ ಅಪರಿಚಿತ ವಾಹನ ಪತ್ತೆ ಹಚ್ಚಲು ಸಂಕೇಶ್ವರ ಪೊಲೀಸರು …
Read More »ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುರುಘರಾಜೇಂದ್ರಗೌಡ ಹಾಟ್ ಬಾಕ್ಸ್ ವಿತರಿಸುವ ಮೂಲಕ ಜನರನ್ನು ಓಲೈಸುತ್ತಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಎಲೆಕ್ಷನ್ ಪ್ರಚಾರ ಭರ್ಜರಿಯಿಂದ ಸಾಗುತ್ತಿದೆ. ಪಕ್ಷಗಳು, ಟಿಕೆಟ್ ಆಕಾಂಕ್ಷಿಗಳು ತಮ್ಮ ಗೆಲುವಿಗಾಗಿ ಮತ ಬೇಟೆಗೆ ಇಳಿದಿವೆ. ಇಂಥಾ ಸಮಯಲ್ಲಿ ಕುಂದಾನಗರಿ ಬೆಳಗಾವಿ ಜಿಲ್ಲೆ ಜನರಿಗೆ ಭರಪೂರದ ಉಡುಗೊರೆ ಭಾಗ್ಯ ಸಿಕ್ಕಿದೆ. ರಾಜಕಾರಣಿಗಳು ಮತದಾರರ ಓಲೈಕೆಗಾಗಿ ವಿವಿಧ ಗಿಫ್ಟ್ ನೀಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಮುರುಘರಾಜೇಂದ್ರಗೌಡ ಹಾಟ್ ಬಾಕ್ಸ್ ವಿತರಿಸುವ ಮೂಲಕ ಜನರನ್ನು ಓಲೈಸುತ್ತಿದ್ದಾರೆ. ಅರಿಶಿಣ ಕುಂಕುಮ …
Read More »ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ಗೆ ಭೀಕರ ಅಪಘಾತ: ವೃದ್ಧೆ ಸಾವು
ಬೆಳಗಾವಿ: ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿರೋ ಘಟನೆ ಬೈಲಹೊಂಗಲ ತಾಲೂಕಿನ ಶಿಗೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಗಂಗವ್ವ ಕಂಬಾರ (56) ಮೃತ ವೃದ್ಧೆ. ಟ್ರ್ಯಾಕ್ಟರ್ವೊಂದು ರಸ್ತೆಯ ಪಕ್ಕದ ಗುಡಿಸಲು ಮೇಲೆ ಪಲ್ಟಿಯಾಗಿದೆ. ಇದರ ಪರಿಣಾಮ ಗುಡಿಸಲಿನಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಜೊತೆಗೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಶ್ರೀ ಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಗಮನ ಸೆಳೆದ ಶ್ವಾನ ಪ್ರದರ್ಶನ; ಫೋಟೋ ಇಲ್ಲಿದೆ
ಬೆಳಗಾವಿ: ಶ್ರೀ ಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವದಲ್ಲಿ ಬೃಹತ್ ಕೃಷಿ ಮೇಳವನ್ನ ಆಯೋಜಿಸಲಾಗಿತ್ತು. ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಈ ಮೇಳದಲ್ಲಿ ಶ್ವಾನ ಪ್ರದರ್ಶನವೂ ನಡೀತು. ವಿವಿಧ ತಳಿಯ ಶ್ವಾನಗಳ ಪ್ರದರ್ಶನ ನೀಡಿವೆ. ಸುಮಾರು 65ಕ್ಕೊ ಹೆಚ್ಚು ವಿವಿಧ ತಳಿಯ ಶ್ವಾನಗಳು ಪ್ರದರ್ಶನದಲ್ಲಿ ಭಾಗವಹಿಸಿದ್ದವು. ಕರ್ನಾಟಕ, ಮಹಾರಾಷ್ಟ್ರದಿಂದ ನೂರಾರು ಮಂದಿ ತಮ್ಮ ಶ್ವಾನಗಳನ್ನ ಸ್ಪರ್ಧೆಗೆ ಕರೆ ತಂದಿದ್ರು. ಈ ಸ್ಫರ್ಧೆಯಲ್ಲಿ ಭಾಗವಹಿಸಿದ್ದ ಶ್ವಾನಗಳು ವಿಷೇಶವಾದ ಕೂದಲು, ಬಣ್ಣ, ದೇಹಾಕಾರದಿಂದ ಪ್ರೇಕ್ಷಕರನ್ನು …
Read More »