Breaking News

Monthly Archives: ಜನವರಿ 2023

ಹತ್ತಿ ನೆಲದ ನೆತ್ಯಾಗ ತೆಲಿ ಎತ್ತಿತ್ರಪಾ ಕನ್ನಡಾ

ಹಾವೇರಿ: ಏ ಮಗನಾ ನಿನ್ನ ಜಿಲ್ಲಾ ಅಷ್ಟ … ದೊಡ್ಡದನ ನಮ್ಮ ಜಿಲ್ಲಾದಾಗನೂ ಗಂಡಸೂರ ಅದೇವಿ. ನಾವು ನಮ್ಮ ಸ್ವಂತ ರೊಕ್ಕಾ ಖರ್ಚ ಮಾಡಿ ಸಮ್ಮೇಳಾನಾ ಮಾಡುವಂಗ ಅದೇವಿ. ಮಾಡಿ ತೋರಸ್ತೇವಿ, ಹೊಳ್ಳಾಮಳ್ಳಾ ಮಾತಾಡ್‌ಬ್ಯಾಡ್‌. ಯಾನೋ ಎಲ್ಲಿಂದ ಬಂದಿ ನಮ್ಮ ಜಿಲ್ಲಾ ಏನ ಕಡಿಮೇಯೇನ್‌?   ಓಯ್‌ ಮಾರಾಯಾ ಸ್ವಲ್ಪ ಸುಮ್ಮನಿರಿ ಎಷ್ಟು ಜಗಳ ಮಾರಾಯಾ ನಿಮ್ಮದು. ಮಂಡೆ ಬಿಸಿಯಾಗಿ ಹೋಯ್ತು. ಏ ಅದೆಲ್ಲ ಗೊತ್ತಿಲ್ರಪ್ಪಾ ನಮ್ಗೆ, ಈ ಸಲಾ ಕೊಡ್ತಿವಿ …

Read More »

ಬೆಳಗಾವಿ ವಿವಾದ: ಮಹಾರಾಷ್ಟ್ರ ಪರ ಹರೀಶ್‌ ಸಾಳ್ವೆ ವಾದ?

ಮುಂಬೈ : ಬೆಳಗಾವಿ ತನಗೇ ಸೇರಬೇಕು ಎಂದು ಪದೇ ಪದೆ ಮೊಂಡು ವಾದ ಮಾಡುತ್ತಿರುವ ಮಹಾರಾಷ್ಟ್ರ ಸರ್ಕಾರ ಖ್ಯಾತ ನ್ಯಾಯವಾದಿ ಹರೀಶ್‌ ಸಾಳ್ವೆ ಅವರ ಕಾನೂನು ಸಲಹೆ ಪಡೆದಿದೆ. ಜತೆಗೆ ಅವರೇ ಕರ್ನಾಟಕದ ನೆರೆಯ ರಾಜ್ಯದ ಪರ ವಾದಿಸುವ ಸಾಧ್ಯತೆ ಇದೆ. ಈ ಬಗ್ಗೆ ಭಾನುವಾರ ಔರಂಗಾಬಾದ್‌ನಲ್ಲಿ ಮಾತನಾಡಿದ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ “ಗಡಿ ವಿವಾದವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ವಕೀಲ ಹರೀಶ್‌ ಸಾಳ್ವೆ ಅವರನ್ನೂ ಸಂಪರ್ಕಿಸಿ, ಸಲಹೆ ಪಡೆದಿದ್ದೇವೆ. ಸುಪ್ರೀಂಕೋರ್ಟ್‌ನಲ್ಲಿ ನಮ್ಮ …

Read More »

ಸ್ಯಾಂಟ್ರೊ ರವಿ ವಿಚಾರ: ಹೆಚ್‌ ಡಿಕೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ; ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿದ್ದ ಹೆಚ್ ಡಿ ಕುಮಾರಸ್ವಾಮಿಯವರು ಅತ್ಯಂತ ಬೇಜವಾಬ್ದಾರಿಯಿಂದ ಸ್ಯಾಂಟ್ರೊ ರವಿ ನನ್ನ ನಿವಾಸದಲ್ಲಿ ಹಣ ಎಣಿಸಿದ್ದ ಎಂಬ ಹಸಿ ಸುಳ್ಳನ್ನು ಹೇಳುವುದರ ಮೂಲಕ ಎಷ್ಟರ ಮಟ್ಟಿಗೆ ರಾಜಕೀಯವಾಗಿ ಹತಾಶ ಸ್ಥಿತಿಗೆ ತಲುಪಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ.   ಈ ಕುರಿತು ಮಾಧ್ಯಮ ಪ್ರಕಟನೆ ಬಿಡುಗಡೆ ಮಾಡಿರುವ ಅವರು, ಕುಮಾರಸ್ವಾಮಿಯವರು ನನ್ನ ಮೇಲೆ ಮಾಡಿದ ಆಪಾದನೆಯನ್ನು ಸಾಬೀತು ಪಡಿಸಬೇಕು. ಸಾಂಟ್ರೋ ರವಿಯ ಹಿನ್ನೆಲೆಯ ಬಗ್ಗೆ …

Read More »

ಸಿದ್ದರಾಮಯ್ಯ ಕ್ಷೇತ್ರ ಘೋಷಣೆ: ಕೋಲಾರವೇ ಅಂತಿಮ?

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು(ಜ.8) ತಾವು ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಅಧಿಕೃತ ಘೋಷಣೆ ಮಾಡುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಆಪ್ತ ಮೂಲಗಳ ಪ್ರಕಾರ, ಸೋಮವಾರ ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿ ಆ ಬಳಿಕ ನೇರವಾಗಿ ಕೋಲಾರಕ್ಕೆ ತೆರಳಲಿದ್ದಾರೆ‌. ಆ ಬಳಿಕ ಅಲ್ಲಿನ ಸ್ಥಳೀಯ‌ ಮುಖಂಡರ ಜತೆ ಸೇರಿ‌ ಕೋಲಾರದಿಂದಲೇ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಲಿದ್ದಾರೆ …

Read More »

ಮತ್ತೆ ಭುಗಿಲೆದ್ದ ಟಿಪ್ಪು- ಸಿದ್ದು ವಿವಾದ; ಕಾಂಗ್ರೆಸ್ ಕಿಡಿ

ಬೆಂಗಳೂರು : ಬೆಂಗಳೂರಿನ ಟೌನ್ ಹಾಲ್ ನಲ್ಲಿ ಇಂದು ಬಿಡುಗಡೆಯಾಗಲಿರುವ ” ಸಿದ್ದು ನಿಜಕನಸುಗಳು” ಪುಸ್ತಕ ಭಾರಿ ವಿವಾದಕ್ಕೆ ಕಾರಣವಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಟಿಪ್ಪು ನಿಜ ಕನಸು ಮಾದರಿಯಲ್ಲಿ ಸಿದ್ದು ನಿಜಕನಸು ಪುಸ್ತಕ ಬರೆಯಲಾಗಿದ್ದು, ಮಧ್ಯಾಹ್ನ 3 ಗಂಟೆಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರೋಹಿತ್ ಚಕ್ರತೀರ್ಥ ಬಿಡುಗಡೆ ಮಾಡಲಿದ್ದಾರೆ.   ಸಿದ್ದರಾಮಯ್ಯ ಆಡಳಿತದಲ್ಲಿ ನಡೆದ ಅಲ್ಪಸಂಖ್ಯಾತರ …

Read More »

ಕಳೆದ ಬಾರಿ ಕುಕ್ಕರ ಈ ಬಾರಿ ಮಿಕ್ಸರ್ ಕೊಟ್ಟು ಮತ ಸೆಳೆಯುವ ಪ್ರಯತ್ನದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್: ಧನಂಜಯ್ ಜಾಧವ

ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ಶುರು ಮಾಡಿವೆ. ತಮ್ಮ ಮತದಾರರನ್ನು ಸೆಳೆಯಲು ಹೊಸ ಹೊಸ ಆಫರ್​ಗಳ ಮೊರೆ ಹೋಗುತ್ತಿದ್ದಾರೆ. ಕೆಲ ದಿನಗಳ ಹಿಂದೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಗಿಫ್ಟ್ ಪಾಲಿಟಿಕ್ಸ್(Gift Politics) ಬಗ್ಗೆ ಸುದ್ದಿಯಾಗಿತ್ತು. ಆದ್ರೆ ಈಗ ತೆಂಗಿನಕಾಯಿ ಮೇಲೆ ಆಣೆ ಪ್ರಮಾಣ ಮಾಡಿಸಿಕೊಳ್ಳಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ವಿರುದ್ಧ ಬಿಜೆಪಿ ಮುಖಂಡ ಧನಂಜಯ ಜಾಧವ್ ವಾಗ್ದಾಳಿ ನಡೆಸಿದ್ದಾರೆ.  ಬೆಳಗಾವಿಯಲ್ಲಿ …

Read More »

ಮುಂದಿನ ವರ್ಷ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ: ಡಾ ಮಹೇಶ್ ಜೋಶಿ

ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ಏರ್ಪಡಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ದಿನ ಹಾವೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಾವೇರಿ: ಮುಂದಿನ ವರ್ಷದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಸಕ್ಕರೆ ನಾಡು ಮಂಡ್ಯದಲ್ಲಿ ಏರ್ಪಡಲಿದೆ. ಇಂದು 86ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ …

Read More »

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಗೆ 22 ಲಕ್ಷ ಜೋಳದ ರೊಟ್ಟಿ

ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಭಾನುವಾರದಿಂದ ಆರಂಭವಾಗಿದ್ದು, ಜಾತ್ರೆಯಲ್ಲಿ ಪಾಲ್ಗೊಳ್ಳಲು ಭಕ್ತರ ಸಾಗರವೇ ಹರಿದು ಬರುತ್ತಿದೆ. ಕೊಪ್ಪಳ: ದಕ್ಷಿಣ ಭಾರತದ ಕುಂಭಮೇಳ ಖ್ಯಾತಿಯ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಭಾನುವಾರದಿಂದ ಆರಂಭವಾಗಿದ್ದು, ಜಾತ್ರೆಯಲ್ಲಿ ಪಾಲ್ಗೊಳ್ಳಲು ಭಕ್ತರ ಸಾಗರವೇ ಹರಿದು ಬರುತ್ತಿದೆ. ಮುಂದಿನ 15 ದಿನಗಳಲ್ಲಿ ಜಿಲ್ಲೆಗೆ 10-12 ಲಕ್ಷ ಭಕ್ತರು ಭೇಟಿ ನೀಡುವ ನಿರೀಕ್ಷೆಗಳಿದ್ದು, ದಾಸೋಹದ ಅಡುಗೆಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗಾಗಲೇ 22 ಲಕ್ಷ ಜೋಳದ …

Read More »

ಪ್ರತಿಭಟನೆ ಹಿಂಪಡೆದಿರುವ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಸಂಘವು ಶನಿವಾರದಿಂದ ತಮ್ಮ ಕಾರ್ಯಾಚರಣೆಯನ್ನು ಆರಂಭ

  ಬೆಂಗಳೂರು: ಪ್ರತಿಭಟನೆ ಹಿಂಪಡೆದಿರುವ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಸಂಘವು ಶನಿವಾರದಿಂದ ತಮ್ಮ ಕಾರ್ಯಾಚರಣೆಯನ್ನು ಆರಂಭ ಮಾಡಿದ್ದಾರೆ. ಕ್ವಾರಿ ಮಾಲೀಕರು ಡಿಸೆಂಬರ್ 21 ರಿಂದ ಮುಷ್ಕರ ಆರಂಭಿಸಿದ್ದರು, 2,800 ಕಲ್ಲು ಕ್ವಾರಿಗಳು ಮತ್ತು 1,980 ಸ್ಟೋನ್ ಕ್ರಷರ್ ಘಟಕಗಳಲ್ಲಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಿದ್ದವು. ಇದರಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮೇಲೆ ಪರಿಣಾಮ ಬೀರಿತ್ತು. ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಶುಕ್ರವಾರ …

Read More »

ಬಿಜೆಪಿ ಸುಳ್ಳಿಗೆ ಬಲಿಯಾಗಬೇಡಿ. ಬಿಜೆಪಿಗೆ ಸುಳ್ಳೇ ಮನೆ ದೇವರು.

ಚಿತ್ರದುರ್ಗ: ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ಸಮಾಜದವರು ಅಧಿಕಾರಕ್ಕೆ ಬಂದಂತೆ. ಈ ಐಕ್ಯತಾ ಸಮಾವೇಶ ಇಡೀ ದೇಶಕ್ಕೆ ಸಂದೇಶ ರವಾನಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು. ಚಿತ್ರದುರ್ಗದಲ್ಲಿ ನಡೆದ ಐಕ್ಯತಾ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿ ಅವರು ಈ ನೆಲದಲ್ಲಿ ಭಾರತ ಜೋಡೋ ಯಾತ್ರೆ ಮಾಡಿದರು. ಆಗ ನೀವು ತೋರಿದ ಪ್ರೀತಿ, ವಿಶ್ವಾಸ ದೇಶಾದ್ಯಂತ ಶಕ್ತಿ ತುಂಬಿದೆ. …

Read More »