Breaking News

Monthly Archives: ಜನವರಿ 2023

ಈ ಅಧಿಕಾರಿಯ ಮಾನವೀಯ ಕಾರ್ಯವನ್ನು ಮೆಚ್ಚಲೇ ಬೇಕು…!

ಬೆಳಗಾವಿ :ಯಕ್ಸಂಬಾ-ರಾಯಬಾಗ ರಸ್ತೆ ಮಧ್ಯೆ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಸೇರಿಸಿ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಕಬ್ಬು ಕಟಾವು ಕಾರ್ಮಿಕರಾಗಿದ್ದ ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ ದತ್ತಾ ಎಂಬುವರು ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರೂ ಯಾರೂ ಅವರ ರಕ್ಷಣೆಗೆ ಮುಂದಾಗಿರಲಿಲ್ಲ. …

Read More »

ಇಡಿ ಅಧಿಕಾರಿಗಳು ಫಿಲ್ಡ್​​ಗೆ ಇಳಿದು ಹುಡುಕಿದ್ರು ಸಿಗದ ಬಿಬಿಎಂಪಿ ಕೊರೆದ 9,588 ಕೊಳವೆ ಬಾವಿಗಳು

ಬೆಂಗಳೂರು: ನಗರದಲ್ಲಿ ಕೊಳವೆ ಬಾವಿ (Borewells) ಹಾಗೂ ಶುದ್ಧಕುಡಿಯುವ ನೀರಿನ ಘಟಕ (Drinking water plants) ಸ್ಥಾಪನೆ ವಿಚಾರದಲ್ಲಿ ನಡೆದ ಮಹಾ ಭ್ರಷ್ಟಾಚಾರದ (Corruption) ಬೆನ್ನು ಬಿದ್ದ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ತಲೆ ಕೆಡಿಸಿಕೊಳ್ಳುವಂತಾಗಿದೆ. ಬಿಬಿಎಂಪಿ (BBMP) ವತಿಯಿಂದ ಕೊರೆಯಲಾದ ಸಾವಿರಾರು ಕೊಳವೆ ಬಾವಿಗಳೇ ಅಧಿಕಾರಿಗಳ ಕಣ್ಣಿಗೆ ಕಾಣಿಸುತ್ತಿಲ್ಲ. ಸ್ಥಳ ಪರಿಶೀಲನೆ ವೇಳೆಯೂ 9,588 ಕೊಳವೆ ಬಾವಿಗಳ ಪೈಕಿ 5 ಸಾವಿರ ಕೊಳವೆ ಬಾವಿಗಳ ಲೆಕ್ಕ ಸಿಗುತ್ತಿಲ್ಲ. ನೂರಾರು ಕೋಟಿ ಖರ್ಚು ಮಾಡಿ ಕೊರೆಸಿದ ಕೊಳವೆ ಬಾವಿಗಳೇ ನಾಪತ್ತೆಯಾಗಿದೆ. ಹಾಗಿದ್ದರೆ ಬಿಬಿಎಂಪಿಯಿಂದ …

Read More »

ಕುಲಗೋಡದಲ್ಲಿ ಭಜಂತ್ರಿ ಮತ್ತು ವಡ್ಡರ ಸಮಾಜಗಳ ಸಭಾ ಭವನಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

  ಕುಲಗೋಡ, ತಾ:ಮೂಡಲಗಿ : ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಸರ್ವ ಜನಾಂಗದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವುದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಪ್ರಸಿದ್ಧ ಬಲಭೀಮ ದೇವಸ್ಥಾನದ ದರ್ಶನ ಪಡೆದು ಮಾತನಾಡಿದ ಅವರು, ಎಲ್ಲ ಧರ್ಮ ಮತ್ತು ಜಾತಿಗಳನ್ನು ಒಗ್ಗೂಡಿಸಿ ಪರಸ್ಪರ ಸಹೋದರತ್ವವನ್ನು ಸಾರುತ್ತಿರುವ ಜಾತ್ಯಾತೀತ ದೇಶವಾಗಿದೆ ಎಂದು ಹೇಳಿದರು. ಕುಲಗೋಡ ಗ್ರಾಮದ ಅಭಿವೃದ್ಧಿಗಾಗಿ ಸರ್ಕಾರದ ಹಲವಾರು ಪ್ರಗತಿಪರ ಯೋಜನೆಗಳನ್ನು ಅನುಷ್ಠಾನ …

Read More »

ಗವಿಮಠದ ಜಾತ್ರೆ ಎಂದರೆ ಕೇವಲ ಜನಜಂಗುಳಿ ಅಲ್ಲ, ಸಾಮಾಜಿಕ ಕಾರ್ಯಗಳಿಗೂ ಸೈ

ಕೊಪ್ಪಳ ಗವಿ ಮಠದಲ್ಲಿ ವಾರ್ಷಿಕ ಜಾತ್ರೆ ನಡೆಯುತ್ತಿದೆ. ಜಾತ್ರೆಯಲ್ಲಿ ಲಕ್ಷಾಂತರ ಜನ ಸೇರುತ್ತಾರೆ. ಜಾತ್ರೆ ಸೇರಿದಂತೆ ಇಡೀ ಮಠದಿಂದ ತ್ರಿವಿಧ ದಾಸೋಹಗಳು ನಡೆಯುತ್ತಿವೆ. ಇದು ಒಂದು ಕಡೆಯಾದರೆ ಇನ್ನೊಂದು ಕಡೆ, ಜಾತ್ರೆಯ ಸಂದರ್ಭದಲ್ಲಿ ಇಡೀ ವರ್ಷ ಸಮಾಜಿಕ ಸಂದೇಶ ನೀಡುವಂಥ ಸಂಕಲ್ಪ ಮಾಡಲಾಗುತ್ತಿದೆ. gavi mutt ಹೈಲೈಟ್ಸ್‌: ಉತ್ತರ ಕರ್ನಾಟಕದ ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ ಕೊಪ್ಪಳ ಗವಿಮಠದಲ್ಲಿ ಜಾತ್ರೆಯ ಸಂದರ್ಭದಲ್ಲಿ ಇಡೀ ವರ್ಷ ಸಮಾಜಿಕ ಸಂದೇಶ ನೀಡುವಂಥ ಸಂಕಲ್ಪ ಮಾಡಲಾಗುತ್ತಿದೆ. …

Read More »

ಕೇವಲ 3,000 ರೂಪಾಯಿಗೆ ಖರೀದಿಸಿ ನಥಿಂಗ್ ಫೋನ್ 1! ಫ್ಲಿಪ್‌ಕಾರ್ಟ್​ ನೀಡುತ್ತಿದೆ ಭರ್ಜರಿ ರಿಯಾಯಿತಿ

  ಫ್ಲಿಪ್‌ಕಾರ್ಟ್ ಸದ್ಯ ಬಿಗ್ ಬಚತ್ ಧಮಾಲ್​ ಸೇಲ್​​ ಆಫರ್‌ಗಳನ್ನು ಬಳಸಿಕೊಳ್ಳುವ ಮೂಲಕ ಬಳಕೆದಾರರು ನಥಿಂಗ್ ಫೋನ್1 ಕೇವಲ 3,124 ರೂ.ಗೆ ಖರೀದಿಸಬಹುದಾಗಿದೆ. ನಥಿಂಗ್ ಫೋನ್1 (Nothing Phone 1) 2022ರಲ್ಲಿ ಬಿಡುಗಡೆಯಾದ ಬಹು ನಿರೀಕ್ಷಿತ ಫೋನ್​ಗಳಲ್ಲಿ ಒಂದು. ಮಾರುಕಟ್ಟೆ ಈ ಫೋನ್​ ಯಾವಾಗ ಲಗ್ಗೆಯಿಟ್ಟಿತೊ ಆವಾಗ ಜನರು ಇದಕ್ಕೆ ಮಾರು ಹೋಗಿದ್ದಾರೆ. ನಥಿಂಗ್ ಫೋನ್ 1 ತನ್ನ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳಿಂದ ಟಾಪ್​ ಫೋನ್​ಗಳಲ್ಲಿ ಒಂದಾಗಿದೆ. ಸದ್ಯ ಬಳಕೆದಾರರು …

Read More »

ವಿಧಾನಸೌಧದ ಬಳಿ ಹಣ ಪತ್ತೆ: ಪೊಲೀಸರ ವಿರುದ್ಧ ಆರೋಪಿ ಜಗದೀಶ್‌ ಪರ ವಕೀಲ ಗರಂ

ಬೆಂಗಳೂರು: ವಿಧಾನಸೌಧ ಬಳಿ ಪಿಡಬ್ಲ್ಯೂಡಿ ಎಂಜಿನಿಯರ್‌ ಜಗದೀಶ್‌ ಎಂಬವರಿಂದ 10 ಲಕ್ಷ ರೂಪಾಯಿ ಹಣ ಸಿಕ್ಕಿರುವ ಪ್ರಕರಣ ನಿನ್ನೆ ನಡೆದಿತ್ತು. ಈ ಕುರಿತು ಟ್ವೀಟ್ ಮಾಡಿರುವ ಬಂಧಿತ ಎಂಜಿನಿಯರ್‌ ಜಗದೀಶ್ ಪರ ವಕೀಲ ರಾಜು ಗಡೇಕರ್, ‘ಡಿಸಿಪಿ ಆಣತಿಯಂತೆ ವಕೀಲರೊಂದಿಗೆ ಠಾಣೆಗೆ ಹಾಜರಾದ ವ್ಯಕ್ತಿಯನ್ನು ಅಕ್ರಮವಾಗಿ ಕೂಡಿ ಹಾಕಿದ್ದು, ನಂತರ ಭೇಟಿ ಮಾಡಲು ಅವಕಾಶ ಕಲ್ಪಿಸಿಲ್ಲ’ ಎಂದು ಆರೋಪಿಸಿದ್ದಾರೆ. ಎಂಜಿನಿಯರ್ ಜಗದೀಶ್‌ ಬ್ಯಾಗ್​ನಲ್ಲಿ ಹಣ ಪತ್ತೆ: ಮಂಡ್ಯದ ಸಹಾಯಕ ಕಾರ್ಯ …

Read More »

ಮರಾಠಿಗರಿಗೆ ಒಂದಂಗುಲ ನೆಲ ಬಿಟ್ಟುಕೊಡುವುದಿಲ್ಲ; ಇದು ಕನ್ನಡಿಗರ ಶಪಥ: ಡಾ.ದೊಡ್ಡರಂಗೇಗೌಡ

ದಾವಣಗೆರೆ (ಜ.6) : ಕನ್ನಡ ಮಧುರ ಹಾಗೂ ಕನ್ನಡ ಮಾನವೀಯ ನೆಲೆಯುಳ್ಳ ಭಾಷೆ. ನಮ್ಮಲ್ಲಿ ಇಚ್ಛಾಶಕ್ತಿ ಇದ್ದರೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರವನ್ನು ಕನ್ನಡದಲ್ಲಿ ಹೇಳಲು ಸಾಧ್ಯ ಎಂದು ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ತಿಳಿಸಿದರು.   ಹಾವೇರಿ(Haveri)ಯಲ್ಲಿ ಆರಂಭವಾಗಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ(Kannada Sahitya sammelana)ದ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಹಾವೇರಿಗೆ ಹೋಗುವ ಮಾರ್ಗದಲ್ಲಿ ದಾವಣಗೆರೆಯ ಕುವೆಂಪು ಕನ್ನಡ ಭವನ(Kuvempu kannada Bhavana)ಕ್ಕೆ ಗುರುವಾರ ಆಗಮಿಸಿ ಜಿಲ್ಲಾ ಕನ್ನಡ …

Read More »

2ಡಿ ಮೀಸಲು ತಿರಸ್ಕರಿಸಿದ ಪಂಚಮಸಾಲಿಗಳು, 2ಎಗೆ ಪಟ್ಟು: ಸರ್ಕಾರಕ್ಕೆ 24 ಗಂಟೆಗಳ ಗಡುವು

ಬೆಳಗಾವಿ (ಜ.06): ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಿಸಿದ್ದ 2ಡಿ ಮೀಸಲಾತಿಯನ್ನು ಪಂಚಮಸಾಲಿ ಸಮುದಾಯ ತಿರಸ್ಕರಿಸಿದ್ದು, 2ಎ ಮೀಸಲಾತಿಗಾಗಿ ಮತ್ತೆ ಪಟ್ಟು ಹಿಡಿದಿದೆ. 2ಎ ಮೀಸಲಾತಿ ಘೋಷಿಸಲು ಸರ್ಕಾರಕ್ಕೆ 24 ಗಂಟೆಗಳ ಗಡುವನ್ನೂ ನೀಡಿರುವ ಸಮುದಾಯ, ಇಲ್ಲವಾದಲ್ಲಿ ಜ.13ರಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಹಾವೇರಿಯ ಮನೆ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿದೆ. ನಗರದ ಗಾಂಧಿಭವನದಲ್ಲಿ ಗುರುವಾರ 2ಡಿ ಪಂಚಮಸಾಲಿಗಳ ಹೋರಾಟಕ್ಕೆ ಸಿಕ್ಕ ನ್ಯಾಯವೋ? ಅನ್ಯಾಯವೋ? ಎಂಬ ಕುರಿತು ಚರ್ಚಿಸಲು ಕರೆಯಲಾಗಿದ್ದ …

Read More »

ಸತ್ತ ಕುರಿ ನೇತು ಹಾಕಿ ರೈತನ ಪ್ರತಿಭಟನೆ

ಹೊಸನಗರ : ಪಶುವೈದ್ಯ ಸಿಬ್ಬಂದಿಯ ಕಾರ್ಯವೈಖರಿ ಖಂಡಿಸಿ ರೈತರೊಬ್ಬರು ಬುಧವಾರ ಸತ್ತ ಕುರಿಯನ್ನು ಆಸ್ಪತ್ರೆ ಕಟ್ಟಡದ ತೊಲೆಗೆ ಕಟ್ಟಿ ವಿನೂತನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟರಲ್ಲೇ ಹೊಟ್ಟೆ ಉಬ್ಬರಿಸಿ ಒಂದು ಕುರಿ ಮೃತಪಟ್ಟಿತು. ಮರಣೋತ್ತರ ಪರೀಕ್ಷೆಗಾಗಿ ಮಧ್ಯಾಹ್ನ 3.30ಕ್ಕೆ ಸತ್ತ ಕುರಿಯನ್ನು ರೈತ ಆಸ್ಪತ್ರೆಗೆ ತಂದರು. ಆದರೆ ಅಷ್ಟರೊಳಗೆ ಪಶುವೈದ್ಯ ಸಿಬ್ಬಂದಿ ಆಸ್ಪತ್ರೆಗೆ ಬೀಗ ಹಾಕಿ ಹೋಗಿದ್ದರು. ಇದರಿಂದ ಆಕ್ರೋಶಗೊಂಡ ಅವರು ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ …

Read More »

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನ ಪಟ್ಟಣ ಪಂಚಾಯಿತಿ ಸದಸ್ಯತ್ವ ವಜಾ

ಸಾರ್ವಜನಿಕರೊಬ್ಬರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದವನು ಈಗ ತನ್ನ ಪಟ್ಟಣ ಪಂಚಾಯಿತಿ ಸದಸ್ಯತ್ವ ಕಳೆದುಕೊಂಡಿದ್ದಾನೆ. ಇಂತಹದೊಂದು ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ನಲ್ಲಿ ನಡೆದಿದೆ.   ಪ್ರಕರಣದ ವಿವರ: ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ ಎಂಬಾತ ಅಹ್ಮದ್ ಅಬ್ದುಲ್ ಎಂಬವರಿಗೆ ಮಾಂಸ ಮಾರಾಟ ನಡೆಸಲು ಪರವಾನಿಗೆ ಕೊಡಿಸುತ್ತೇನೆ ಎಂದು ಹೇಳಿ ಐವತ್ತು ಸಾವಿರ …

Read More »