(ಬೆಳಗಾವಿ): ಒಂದೆಡೆ ಮಹಿಳೆಯರ ಪೂರ್ಣಕುಂಭ ಮೆರವಣಿಗೆ ಕಣ್ಮನ ಸೆಳೆದರೆ, ಮತ್ತೊಂದೆಡೆ ಮಕ್ಕಳ ಜಾನಪದ ಕಲೆಗಳ ಪ್ರದರ್ಶನ ಜನರನ್ನು ರಂಜಿಸಿತು. ಆಲಂಕೃತ ಚಕ್ಕಡಿಗಳು, ಟ್ರ್ಯಾಕ್ಟರ್ಗಳ ಸಾಲು ಗ್ರಾಮೀಣ ಸೊಗಡು ಸೂಸಿತು. ಇಡೀ ಊರಿಗೆ ಊರೇ ಸಂಭ್ರಮದಲ್ಲಿ ಮಿಂದೆದ್ದರೆ, ನೂರಾರು ಮಕ್ಕಳು ತಮ್ಮ ಪ್ರತಿಭೆ ಅನಾವರಣಗೊಳಿಸಿ ಬೀಗಿದರು. ಮಾಸ್ತಮರ್ಡಿಯಲ್ಲಿ ಸೋಮವಾರದಿಂದ ಆರಂಭಗೊಂಡ ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ‘ಮಕ್ಕಳ ಕಲಿಕಾ ಹಬ್ಬ’ದಲ್ಲಿ ಇಂತಹ ದೃಶ್ಯಕಾವ್ಯಕ್ಕೆ ಸಾಕ್ಷಿಯಾಯಿತು. ಮಕ್ಕಳಲ್ಲಿ ಕಲಿಕೆ ಬಗ್ಗೆ ಪ್ರೇರಣೆ ತುಂಬಲು …
Read More »Daily Archives: ಫೆಬ್ರವರಿ 14, 2023
ಬ್ರಹ್ಮಕುಮಾರಿ ಈಶ್ವರೀಯ ವಿ.ವಿಯಿಂದ ಶಾಂತಿ ಸಂದೇಶ’
ಎಂ.ಕೆ.ಹುಬ್ಬಳ್ಳಿ: ‘ಹಣ-ಆಸ್ತಿ ಎಷ್ಟಿದ್ದರೇನು. ಮನುಷ್ಯನಿಗೆ ಅಗತ್ಯವಿರುವುದು ನೆಮ್ಮದಿ ಮತ್ತು ಮನಃಶಾಂತಿ. ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯಗಳು ಮನುಷ್ಯನಲ್ಲಿ ಮನಃಶಾಂತಿ ತುಂಬುತ್ತಿವೆ. ನಾಮ ಹಲವಾರೂ, ದೇವನೊಬ್ಬನೆ ಎಂಬ ತತ್ವದಡಿ ಮುನ್ನಡೆಯುತ್ತಿವೆ’ ಎಂದು ಶಾಸಕ ಮಹಾಂತೇಶ ದೊಡಗೌಡರ ಹೇಳಿದರು. ಸ್ಥಳೀಯ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ಭಾನುವಾರ ನಡೆದ ಶಿವರಾತ್ರಿ ಕಾರ್ಯಕ್ರಮ ಹಾಗೂ ನೂತನ ಕಟ್ಟಡ ‘ಶಿವಶಕ್ತಿ’ ಭವನ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯೆ ರೋಹಿಣಿ ಪಾಟೀಲ, …
Read More »ಕರಿಕಟ್ಟಿ ಗ್ರಾಮದಲ್ಲಿ ಮನೆಯ ಛಾವಣಿ ಕುಸಿದು ಬಿದ್ದು ಹಿರಿಯ ಮಹಿಳೆ ಸಾವು
ಸವದತ್ತಿ: ತಾಲೂಕಿನ ಕರಿಕಟ್ಟಿ ಗ್ರಾಮದಲ್ಲಿ ಮನೆಯ ಛಾವಣಿ ಕುಸಿತಕ್ಕೊಳಗಾಗಿ ಹಿರಿಯ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ 7.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಗ್ರಾಮದ ಶಾಂತವ್ವ ಶಿವಮೂರ್ತಯ್ಯ ಹಿರೇಮಠ (60) ಮೃತಪಟ್ಟವರು. ಹಳೆಯದಾದ ಮನೆಯ ಛಾವಣಿ ಏಕಾಏಕಿ ಕುಸಿತಕ್ಕೊಳಗಾಯಿತು. ಅದರಡಿಯಲ್ಲೇ ಇದ್ದ ಶಾಂತವ್ವ ಅವರ ಮೇಲೆ ವ್ಯಾಪಕ ಪ್ರಮಾಣದ ಮಣ್ಣು, ಹಲಗೆಗಳು ಬಿದ್ದು ಅದರಲ್ಲಿ ಮುಚ್ಚಿ ಹೋಗಿ ಸ್ಥಳದಲ್ಲೇ ಅಸುನೀಗಿದ್ದಾರೆ. ಈ ಸಂಬಂಧ ಸವದತ್ತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು …
Read More »BBC ಕಚೇರಿ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ
ಬೆಂಗಳೂರು: ಬ್ರಿಟಿಷ್ ಬ್ರಾಡ್ ಕಾಸ್ಟಿಂಗ್ ಸರ್ವಿಸ್-BBC ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೆಹಲಿ, ಮುಂಬೈ ಕಚೇರಿಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಿಬಿಸಿ ಕಚೇರಿಯಲ್ಲಿನ ಸಿಬ್ಬಂದಿಗಳ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಅಂತರಾಷ್ಟ್ರೀಯ ತೆರಿಗೆ ಮತ್ತು ವರ್ಗಾವಣೆ ಬೆಲೆ ಅಕ್ರಮಗಳ ಆರೋಪದ ಮೇಲೆ ತೆರಿಗೆ ಇಲಾಖೆ ತಪಾಸಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ತಪಾಸಣೆ ಅವಧಿಯಲ್ಲಿ ಬಿಬಿಸಿ ಕಚೇರಿ, ಸ್ಟುಡಿಯೋಗಳನ್ನು ಮುಚ್ಚಲಾಗುತ್ತಿದ್ದು, ವಿವರಗಳನ್ನು ಯಾರೊಂದಿಗೂ ಹಂಚಿಕೊಳ್ಳದಂತೆ …
Read More »ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಗೆ ‘ಅತ್ಯುತ್ತಮ’ ಪ್ರಶಸ್ತಿ
ಬೆಳಗಾವಿ: ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಗೆ ಕರ್ನಾಟಕದ ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ ಲಭಿಸಿದೆ. ಭಾರತ ಸರಕಾರದ ಗೃಹ ಸಚಿವಾಲಯ ಪ್ರತಿ ವರ್ಷ ಉತ್ತಮ ಪೊಲೀಸ್ ಠಾಣೆಗಳನ್ನು ನಿರ್ಧರಿಸುತ್ತಿದ್ದು ಕಳೆದ ವರ್ಷದಲ್ಲಿನ ಉತ್ತಮ ನಿರ್ವಹಣೆ ಹಾಗೂ ಕಾರ್ಯನಿರ್ವಹಣೆ ಪರಿಗಣಿಸಿ ಈ ಪ್ರಶಸ್ತಿ ಘೋಷಿಸಲಾಗಿದೆ. ದೇಶಾದ್ಯಂತ ಪೊಲೀಸ್ ಠಾಣೆಗಳ ಶ್ರೇಯಾಂಕ ನಿರ್ಧಾರ ಗೃಹ ವ್ಯವಹಾರಗಳ ಸಚಿವಾಲಯದ ವಾರ್ಷಿಕ ಪ್ರಕ್ರಿಯೆಯಾಗಿದೆ. ಅಪರಾಧ ದರ, ತನಿಖೆ, ಪ್ರಕರಣಗಳ ವಿಲೇವಾರಿ, ಮೂಲಸೌಕರ್ಯ ಮತ್ತು ಸಾರ್ವಜನಿಕ ಸೇವೆಯ ವಿತರಣೆ ಸೇರಿದಂತೆ 165 …
Read More »4 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ; ಅಮಿತ್ ಶಾ
ನವದೆಹಲಿ: ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ ತಿಳಿಸಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ ಅಮಿತ್ ಶಾ, ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಬಿಜೆಪಿ ಗೆಲ್ಲಲಿದೆ. ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು. ಕರ್ನಾಟಕದ ಜೊತೆಗೆ ಇತರ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಪೂರ್ಣ …
Read More »ಪರವಾನಿಗೆ ಪಡೆಯದೆ ಕಳಸಾ-ಬಂಡೂರಿ ಕಾಮಗಾರಿ ಆರಂಭಿಸಬಾರದು: ಸುಪ್ರೀಂ ಕೋರ್ಟ್
ಪಣಜಿ: ಆಯೋಗ ನೀಡಿರುವ ಡಿಪಿಆರ್ ಅನುಮೋದನೆಯನ್ನು ಹಿಂಪಡೆಯುವಂತೆ ಹಾಗೂ ಕೂಡಲೇ ಜಲ ನಿರ್ವಹಣಾ ಪ್ರಾಧಿಕಾರ ರಚಿಸುವಂತೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಿದ್ದು,”ಅಗತ್ಯ ಪರವಾನಿಗೆ ಪಡೆಯದೆ ಕರ್ನಾಟಕ ಕಳಸಾ-ಬಂಡೂರಿ ಕಾಮಗಾರಿ ಆರಂಭಿಸಬಾರದು ಹಾಗೂ ಜಲ ಆಯೋಗವು ಡಿಪಿಆರ್ ಪ್ರತಿಯನ್ನು ಗೋವಾ ಸರ್ಕಾರಕ್ಕೆ ಸಲ್ಲಿಸಬೇಕು” ಎಂದು ತೀರ್ಪು ನೀಡಿದೆ. ಕರ್ನಾಟಕಕ್ಕೆ ಕಳುಹಿಸಿದ ಶೋಕಾಸ್ ನೋಟಿಸ್ ಕುರಿತು ತೀರ್ಮಾನಿಸುವಂತೆ ಗೋವಾದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸುಪ್ರೀಂ …
Read More »ಬಜೆಟ್ ಅಧಿವೇಶನದ ಭಾಗ 1 ಮುಕ್ತಾಯ : ಮಾರ್ಚ್ 13 ರಿಂದ ಮತ್ತೆ ಲೋಕಸಭೆಯ ಕಲಾಪ
ನವದೆಹಲಿ: ಲೋಕಸಭೆಯ ಕಲಾಪನ್ನು ಸೋಮವಾರ ಒಂದು ತಿಂಗಳ ಅವಧಿಗೆ ಮುಂದೂಡಲಾಗಿದ್ದು, ಮಾರ್ಚ್ 13 ರಂದು ಮತ್ತೆ ಸಭೆ ಸೇರಲಿದೆ. ಬಜೆಟ್ ಅಧಿವೇಶನದ ಮೊದಲ ಭಾಗ ಜನವರಿ 31 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಪ್ರಾರಂಭವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ‘ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ’ದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ …
Read More »ಪುಲ್ವಾಮಾ ದುರಂತಕ್ಕೆ 4 ವರ್ಷ
ಹೊಸದಿಲ್ಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಘೋರ ದುರಂತದಲ್ಲಿ ಮಡಿದ ವೀರ ಯೋಧರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೆನೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, “ಪುಲ್ವಾಮಾದಲ್ಲಿ ಈ ದಿನ ನಾವು ಕಳೆದುಕೊಂಡ ನಮ್ಮ ಪರಾಕ್ರಮಿಗಳನ್ನು ನೆನಪಿಸಿಕೊಳ್ಳುತ್ತೇನೆ. ಅವರ ಅತ್ಯುನ್ನತ ತ್ಯಾಗವನ್ನು ನಾವು ಎಂದಿಗೂ ಮರೆಯುವುದಿಲ್ಲ. ಅವರ ಧೈರ್ಯವು ಬಲಿಷ್ಠ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಮ್ಮನ್ನು ಪ್ರೇರೇಪಿಸುತ್ತದೆ’ …
Read More »ಸಿದ್ದರಾಮಯ್ಯ ರಾಜಕಾರಣ ಬಿಟ್ಟು ಜ್ಯೋತಿಷಿಯಾಗಲಿ: ನಳಿನ್ ಕುಮಾರ
ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜಕಾರಣ ಬಿಟ್ಟು ಜ್ಯೋತಿಷ್ಯ ಹೇಳಲಿ. ಅವರು ಇನ್ನು ಮುಂದೆ ನಿರುದ್ಯೋಗಿಗಳಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ ಹೇಳಿದರು. ಕೊಪ್ಪಳ ತಾಲೂಕಿನ ಹಲಗೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹಿಂದೆ ಅವರು ಹೇಳಿದ ಜ್ಯೋತಿಷ್ಯ ಸುಳ್ಳಾಗಿದೆ. ಅಪ್ಪನಾಣೆಗೂ ನರೇಂದ್ರ ಮೋದಿ ಪ್ರಧಾನಿ ಆಗಲ್ಲ ಎಂದರು, ಮೋದಿ ಅವರು ಎರಡೆರಡು ಬಾರಿ ಪ್ರಧಾನ ಮಂತ್ರಿಯಾದರು. ಕಳೆದ ಬಾರಿಯೂ ನನ್ನಪ್ಪನಾಣೆ ಯಡಿಯೂರಪ್ಪ ಸಿಎಂ ಆಗಲ್ಲ ಎಂದರು. …
Read More »