Breaking News

Monthly Archives: ಫೆಬ್ರವರಿ 2023

ಚುನಾವಣಾ ಪ್ರಚಾರ ಸಾಮಗ್ರಿಗಳ ದರ ನಿಗದಿ

ಬೆಳಗಾವಿ: ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳ ಪ್ರಚಾರಕ್ಕೆ ಬಳಸುವ ಕೆಲವು ಸಾಮಗ್ರಿಗಳ ದರಗಳನ್ನು ತುಸು ಕಡಿಮೆ ಮಾಡಲು, ಗುರುವಾರ ಇಲ್ಲಿ ನಡೆದ ಅಧಿಕಾರಿಗಳು ಹಾಗೂ ವಿವಿಧ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ನಿರ್ಧರಿಸಲಾಯಿತು. ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಚಾರ ಸಾಮಗ್ರಿಗಳು, ವಾಹನ, ಪೋಸ್ಟರ್‌, ಮೈಕ್‌ ಸೇರಿದಂತೆ ವಿವಿಧ ಸಾಮಗ್ರಿಗಳ ಮಾರುಕಟ್ಟೆ ದರವನ್ನು ಪರಿಶೀಲಿಸಲಾಯಿತು.   ನೀತಿ ಸಂಹಿತೆ ಜಾರಿ ಆದ ಸಂದರ್ಭದಲ್ಲಿ ಇರುವ ಮಾರುಕಟ್ಟೆ ದರ ಹಾಗೂ ಗುಣಮಟ್ಟ ಅಧರಿಸಿ, …

Read More »

ಎಂ. ಕೆ. ಹುಬ್ಬಳ್ಳಿ| ಅನುಮಾನಾಸ್ಪದವಾಗಿ ಸಾವಿಗೀಡಾದ ಹಸುವಿನ ಮೇಲೆ ‘A’ ಗುರುತು

ಎಂ.ಕೆ.ಹುಬ್ಬಳ್ಳಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಪಕ್ಕ, ಮಲಪ್ರಭಾ ನದಿಗೆ ತೆರಳುವ ಮಾರ್ಗದಲ್ಲಿ ಗುರುವಾರ ನಸುಕಿನಲ್ಲಿ ಹಸುವೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದೆ. ಹಸುವಿನ ಕತ್ತಿನ ಕೆಳಭಾಗವನ್ನು ಕತ್ತರಿಸಿದ್ದು, ರಸ್ತೆ ಪಕ್ಕದಲ್ಲಿ ಎಸೆಯಲಾಗಿದೆ.   ಗುರುವಾರ ಬೆಳಿಗ್ಗೆ ವಾಯು ವಿಹಾರಿಗಳು ಇತ್ತ ಬಂದಾಗ ಹಸುವಿನ ಶವ ಪತ್ತೆಯಾಗಿದೆ. ಕೆಲವು ಜನ ಸೇರಿಕೊಂಡು ಹೆದ್ದಾರಿ ಪಕ್ಕದಲ್ಲೇ ತಗ್ಗು ತೆಗೆದು ಹೂತಿದ್ದಾರೆ. ಆದರೆ, ಗುರುವಾರ ಸಂಜೆಯವರೆಗೂ ಹಸುವಿನ ಮಾಲೀಕರು ಯಾರು ಎಂಬುದು ಗೊತ್ತಾಗಿಲ್ಲ. ಯಾರೂ ಪೊಲೀಸರಿಗೆ ದೂರು …

Read More »

ಇಂದು ಕರ್ನಾಟಕ ರಾಜ್ಯ ಬಜೆಟ್‌: ರೈತರಿಗೆ ಶೂನ್ಯ ಬಡ್ಡಿದರದಲ್ಲಿ ₹5 ಲಕ್ಷ ಸಾಲ?

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರ ಹಿಡಿಯಲೇಬೇಕು ಎಂಬ ಛಲತೊಟ್ಟಂತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಾವು ಮಂಡಿಸಲಿರುವ ಎರಡನೇ ಬಜೆಟ್‌ನಲ್ಲಿ ಎಲ್ಲ ಸಮುದಾಯದ ಮತದಾರರನ್ನು ಸೆಳೆಯುವತ್ತ ಲಕ್ಷ್ಯ ನೆಟ್ಟಿದ್ದಾರೆ.   ಸರ್ಕಾರಿ ನೌಕರರು, ವಿವಿಧ ಜಾತಿ ಸಮುದಾಯಗಳು, ನಗರವಾಸಿಗಳು, ಮಹಿಳೆಯರು, ರೈತರನ್ನು ಕೇಂದ್ರೀಕರಿಸಿ ಬಜೆಟ್‌ ತಯಾರಿಗೆ ಆದ್ಯತೆ ನೀಡಲಾಗಿದೆ ಎಂದು ಮೂಲಗಳು ಹೇಳಿವೆ. ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಲಾಗಿರುವ ಏಳನೇ ವೇತನ ಆಯೋಗದ ಅನುಷ್ಠಾನದತ್ತ ಇಡೀ ನೌಕರರ ವರ್ಗ …

Read More »

ವಿದ್ಯುತ್ ಸಮಸ್ಯೆ ಪರಿಹಾರ ಸಭೆ ರೈತರ ಕುಂದುಕೊರತೆಗಳಿಗೆ ಪರಿಹಾರ

ಬೆಳಗಾವಿ: ಹೆಸ್ಕಾಂ ನಗರ ಉಪವಿಭಾಗ-3 ರ ನೆಹರೂ ನಗರ ಬೆಳಗಾವಿ ಕಚೇರಿಯಲ್ಲಿ ರೈತ ಗ್ರಾಹಕರ ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸಲು ಫೆ. ಇಂದು ಬೆಳಿಗ್ಗೆ 10.30ಕ್ಕೆ ಸಭೆ ನಡೆಸಲಾಗುವುದು. ರೈತ ಗ್ರಾಹಕರು ತಮ್ಮ ಸಮಸ್ಯೆ ಹಾಗೂ ಕುಂದು ಕೊರತೆಗಳ ಕುರಿತು ಸಭೆಯಲ್ಲಿ ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಬೆಳಗಾವಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಕೊನೆಯದಾಗಿ ಸ್ವೀಕರಿಸಿದ್ದ ಕರೆ ಆಧರಿಸಿ ಆರೋಪಿತರನ್ನುಬಂಧಿಸಿದ್ ಪೊಲೀಸರು

ಗೋಕಾಕ: ಇಲ್ಲಿನ ಉದ್ಯಮಿ ರಾಜು ಝಂವರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವೈದ್ಯರು ಸೇರಿದಂತೆ ಮೂವರು ಆರೋಪಿತರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಪ್ರಥಮ ಆರೋಪಿ ಗೋಕಾಕ ಚನ್ನಮ್ಮನಗರ ನಿವಾಸಿ ಸಚಿನ್ ಶಂಕರ್ ಶಿರಗಾವೆ(36), ಎರಡನೇ ಆರೋಪಿ ಸಿಟಿ ಆಸ್ಪತ್ರೆ ವೈದ್ಯ, ಹುಕ್ಕೇರಿ ತಾಲೂಕು ಶಿರಢಾಣ ಸಮೂಲದ  ಡಾ. ಶಿವಾನಂದ ಕಾಡಗೌಡ ಪಾಟೀಲ (28) ಹಾಗೂ ರೆಫ್ರಿಜರೇಟರ್ ರಿಪೇರಿ ಕೆಲಸ ಮಾಡಿಕೊಂಡಿದ್ದ ಶಾಪಥ್ ಇರ್ಷಾದ್ ತ್ರಾಸಗರ(25) ಬಂಧಿತರು. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿಂತೆ ಉಂಟಾಗಿದ್ದ …

Read More »

ಮಲಪ್ರಭಾ ನದಿ ಕಲುಷಿತ; ಪರಿಶೀಲನೆಗೆ ಸೂಚನೆ:

ಬೆಳಗಾವಿ  : ಮಲಪ್ರಭಾ ಮತ್ತು ಘಟಪ್ರಭಾ ನದಿ ತೀರಗಳಲ್ಲಿನ ಅತಿಕ್ರಮಣವನ್ನು ತೆರವುಗೊಳಿಸಲು ಮೊದಲ ಹಂತವಾಗಿ ಹಳೆಯ ಉಪಯೋಗದಲ್ಲಿ ಇಲ್ಲದಿರುವ ಬ್ರಿಡ್ಜ್, ಬ್ಯಾರೇಜ್ ತೆರವುಗೊಳಿಸಲು ಹಾಗೂ ಅತಿಕ್ರಮಣಗೊಂಡಿರುವ ಜಮೀನುಗಳ ಗಡಿಗಳಿಗೆ ಕಲ್ಲುಗಳನ್ನು ಹಾಕಿಸಲು ಅಂದಾಜು ಪತ್ರಿಕೆಯನ್ನು ಆದ್ಯತೆ ಮೇರೆಗೆ 10 ದಿನದೊಳಗಾಗಿ ಸಲ್ಲಿಸಬೇಕು ಎಂದು ಪ್ರಾದೇಶಿಕ ಆಯುಕ್ತರಾದ ಎಂ.ಜಿ.ಹಿರೇಮಠ ಅವರು ನೀರಾವರಿ ಇಲಾಖೆಯ ಅಭಿಯಂತರರಿಗೆ ಸೂಚನೆ ನೀಡಿದರು. ಮಲಪ್ರಭಾ ಹಾಗೂ ಘಟಪ್ರಭಾ ನದಿ ತೀರಗಳಲ್ಲಿನ ಅತಿಕ್ರಮಣವನ್ನು ತೆರವುಗೊಳಿಸುವ ಗುರುವಾರ(ಫೆ.16) ನಡೆದ ವಿಭಾಗದ …

Read More »

ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ.

ಸವದತ್ತಿ:  ಅಪರಿಚಿತ ಯುವಕನ ಶವವೊಂದು ಮಲಪ್ರಭಾ ಕಾಲುವೆ ದಂಡೆ ಬಂದು ನಿಂತಿದೆ. ಶವವಾದ ಯುವಕ ಯಾರು ಎನ್ನುವ ಕುರಿತು ಪೊಲೀಸರು ತಲೆಕೆಡಿಸಿಕೊಂಡಿದ್ದಾರೆ. ಈ ಕುರಿತು ಮಾಹಿತಿಗೆ ಪ್ರಯತ್ನಿಸುತ್ತಿದ್ದಾರೆ. ಪೊಲೀಸರು ಈ ಸಂಬಂಧ ಪ್ರಕಟಣೆಯೊಂದನ್ನು ನೀಡಿದ್ದಾರೆ. ಅದು ಹೀಗಿದೆ; “ಹೆಸರು ವಿಳಾಸ ತಿಳಿಯದ ಸುಮಾರು 28-30 ವಯಸ್ಸಿನ ಅನಾಮಧೇಯ ಗಂಡಸಿನ  ಶವ ಮಲಪ್ರಭಾ ಬಲದಂಡೆಯ ಕಾಲುವೆಯಲ್ಲಿ ಹಂಚಿನಾಳ ಗ್ರಾಮ ಹದ್ದಿಯಲ್ಲಿ ಬಂದು ನಿಂತಿದ್ದು ಸಂಬಂಧಿಕರು ಪತ್ತೆ ಆದಲ್ಲಿ ಸೌದತ್ತಿ ಪೊಲೀಸ್ ಠಾಣೆಗೆ ಸಂಪರ್ಕಿಸಲು …

Read More »

ಹೇಗೆ ನಡೆದುಕೊಳ್ಳಬೇಕು ಎಂದು ಕಲಿಯಿರಿ: ಸಚಿವ ಚವ್ಹಾಣಗೆ ಸಭಾಪತಿ ಹೊರಟ್ಟಿ ಪಾಠ

ಬೆಂಗಳೂರು : ‘ಹೇಗೆ ನಡೆದುಕೊಳ್ಳಬೇಕು ಎನ್ನುವುದನ್ನು ಸದನದಲ್ಲಿ ಕಲಿಯಬೇಕು, ನಿಮ್ಮ ನಡೆ ಸರಿಯಲ್ಲ, ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವಾಗ ಅದನ್ನು ನಿಭಾಯಿಸಬೇಕು. . .’ -ಇದು ವಿಧಾನ ಪರಿಷತ್‌ನಲ್ಲಿ ಪಶುಸಂಗೋಪನಾ ಸಚಿವ ಪ್ರಭು ಬಿ. ಚವ್ಹಾಣ ಅವರಿಗೆ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ ಪಾಠ. ಕಲಾಪ ಬುಧವಾರ ಬೆಳಿಗ್ಗೆ ಆರಂಭವಾಗುತ್ತಿದ್ದಂತೆ ಜೆಡಿಎಸ್‌ನ ಎಸ್‌.ಎಲ್‌.ಭೋಜೇಗೌಡ, ರಾಜ್ಯದಿಂದ ಗೋವಾಕ್ಕೆ ಎಷ್ಟು ಪ್ರಮಾಣದಲ್ಲಿ ದನದ ಮಾಂಸ ರಫ್ತಾಗುತ್ತಿದೆ ಎನ್ನುವ ಕುರಿತು ಫೆ. 4ರಂದೇ ಪ್ರಶ್ನೆ ಕಳುಹಿಸಲಾಗಿದೆ. ಆದರೆ, …

Read More »

ಬಿಜೆಪಿ ಮತ್ತೆ ಅಧಿಕಾರಕ್ಕೇರಿದರೆ ಸಿವಿಲ್ ವಾರ್ ಶುರು

ಹುಬ್ಬಳ್ಳಿ: ಬಿಜೆಪಿಯನ್ನು ಸೋಲಿಸುವುದೊಂದೇ ನಮ್ಮ ಗುರಿಯಾಗಬೇಕು. ಈ ಸಲ ಮತ್ತೆ ಅವರು ಅಧಿಕಾರಕ್ಕೆ ಬಂದರೆ ಸಿವಿಲ್ ವಾರ್ (ನಾಗರಿಕ ದಂಗೆ) ಶುರುವಾಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿಯಲ್ಲಿ ಗುರುವಾರ ಸ್ಥಳೀಯ ಜೆಡಿಎಸ್ ಮುಖಂಡರನ್ನು ಕಾಂಗ್ರೆಸ್‌ಗೆ ಬರಮಾಡಿ ಕೊಂಡ ನಂತರ ಮಾತನಾಡಿದರು.   ನೀವು ಜೆಡಿಎಸ್ ಬಿಟ್ಟು ಬಂದಿದ್ದು ಒಳ್ಳೆಯದಾಯಿತು. ಟಿಕೆಟ್ ಯಾರಿಗೇ ಸಿಕ್ಕರೂ ಅವರನ್ನು ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸುವುದು ಮುಖ್ಯ ಎಂದು ಹೇಳಿದರು. ಹೊಡಿ, ಬಡಿ, …

Read More »

ಅಪಘಾತದಲ್ಲಿ ಎಸ್​ಐ, ಪೇದೆ ಸಾವು ಪ್ರಕರಣ: ಹುತಾತ್ಮ ಖಾಕಿ ಕುಟುಂಬಕ್ಕಿಲ್ಲ ಬಿಡಿಗಾಸು, ಫಲ ಕೊಡದ ಸಿಎಂ ಭರವಸೆ

ಬೆಂಗಳೂರು: ರಾಜಕೀಯ ಪಕ್ಷದ ಅಥವಾ ಸಂಘಟನೆಯೊಂದರಲ್ಲಿ ಮುಖಂಡ, ಕಾರ್ಯಕರ್ತನಾಗಿ ನನ್ನ ಮಗ ಸಾವನ್ನಪ್ಪಿದ್ದರೆ ಇಷ್ಟರಲ್ಲಿ ಪರಿಹಾರ ಸಿಗುತ್ತಿತ್ತು. ಸಬ್​ಇನ್​ಸ್ಪೆಕ್ಟರ್ ಆಗಿದ್ದರ ಕಾರಣ ಇಂದು ಪುತ್ರನೂ ಇಲ್ಲ. ಪರಿಹಾರವೂ ಇಲ್ಲದಂತೆ ಆಗಿದೆ… ಇದು 2022ರ ಜೂ.7ರಂದು ಡ್ರಗ್ಸ್ ಪೆಡ್ಲರ್​ಗಳ ಬಂಧನ ಕಾರ್ಯಾಚರಣೆ ವೇಳೆ ಆಂಧ್ರಪ್ರದೇಶದ ಚಿತ್ತೂರು ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಿವಾಜಿನಗರ ಠಾಣೆ ಎಸ್​ಐ ಅವಿನಾಶ್ ಅವರ ತಂದೆ ಕಾಶಿನಾಥ್ ನೋವಿನ ಮಾತುಗಳು. 40 ವರ್ಷ ಪೊಲೀಸ್ ಸೇವೆ ಸಲ್ಲಿಸಿ ನಿವೃತ್ತಿಯಾಗಿರುವ …

Read More »