ಖಾನಾಪುರ: ಸ್ಥಳೀಯ ಶಾಸಕಿ ಡಾ.ಅಂಜಲಿ ನಿಂಬಾಳಕರ ಗುರುವಾರ ಪಟ್ಟಣದ ಚೌರಾಶಿದೇವಿ ಮತ್ತು ತಾಲೂಕಿನ ಕಕ್ಕೇರಿ ಗ್ರಾಮದ ಬಿಷ್ಠಾದೇವಿ ದೇವಾಲಯಗಳಲ್ಲಿ ಉಭಯ ಶಕ್ತಿದೇವಿಯರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮುಂಬರುವ ಚುನಾವಣೆಯ ಪ್ರಚಾರ ಕಾರ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದರು. ಕಕ್ಕೇರಿ ಗ್ರಾಮದ ಬಿಷ್ಠಾದೇವಿ ಆಲಯದ ಮುಂಭಾಗದಲ್ಲಿ ತಮ್ಮ ಬೆಂಬಲಿಗರು ಮತ್ತು ಕಾಂಗ್ರೆಸ್ ಮುಖಂಡರೊಂದಿಗೆ ಪಕ್ಷದ ಪ್ರಚಾರ ವಾಹನಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, “ತಾಲೂಕಿನ ವಿವಿಧ ಭಾಗಗಳಲ್ಲಿ ಕಳೆದ 5 ವರ್ಷಗಳಿಂದ ಹಲವು …
Read More »Daily Archives: ಮಾರ್ಚ್ 30, 2023
4 ಐಎಎಸ್ ಅಧಿಕಾರಿಗಳ ಹಠಾತ್ ವರ್ಗಾವಣೆ
ಬೆಂಗಳೂರು: ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಡಾ. ಗೌತಮ ಬಗಾದಿ ವರ್ಗಾವಣೆಯಾಗಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ವರ್ಗಾವಣೆ ಮಾಡಲಾಗಿದೆ. ಪ್ರಾದೇಶಿಕ ಆಯುಕ್ತರಾಗಿದ್ದ ಎಂ.ಜಿ.ಹಿರೇಮಠ ಅವರನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ಮಂಡಳಿಗೆ ವರ್ಗಾಯಿಸಲಾಗಿದೆ. ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಸುರೇಶ್ ಇಟ್ನಾಳ ಅವರನ್ನು ದಾವಣಗೆರೆ ಜಿಲ್ಲಾ ಪಂಚಾಯತಕ್ಕೆ ವರ್ಗಾಯಿಸಲಾಗಿದೆ. ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಆಗಿ ಸ್ವರೂಪ ಟಿಕೆ ನೇಮಕಗೊಂಡಿದ್ದಾರೆ.
Read More »ಸ್ವಾತಂತ್ರ್ಯ ಹೋರಾಟದಲ್ಲಿ ರಂಗಭೂಮಿ ಪಾತ್ರ ಮುಖ್ಯ; ಅಜಿತ ವಾರಕರಿ
ಬೆಳಗಾವಿ: ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ರಂಗಭೂಮಿಯ ಪಾತ್ರ ಬಹು ಮುಖ್ಯವಾಗಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಹೆಚ್ಚು ಜನ ಅನಕ್ಷರಸ್ಥರಿದ್ದರು. ಜನರಲ್ಲಿ ದೇಶಾಭಿಮಾನ ಮೂಡಿಸುವುದು, ದೇಶದ ಸ್ವಾತಂತ್ರ್ಯದ ಅವಶ್ಯಕತೆ ಕುರಿತು ತಿಳಿಸಿಕೊಡುವುದು ಅಷ್ಟೇ ಅಲ್ಲದೆ, ಎಲ್ಲರಲ್ಲಿ ಒಗ್ಗಟ್ಟನ್ನು ಮೂಡಿಸುವುದು ಕಷ್ಟದ ಕೆಲಸವಾಗಿತ್ತು. ಈ ಎಲ್ಲ ಕೆಲಸವನ್ನು ಮಾಡುವಲ್ಲಿ ನಾಟಕ ಪ್ರಮುಖ ಪಾತ್ರ ವಹಿಸಿತು ಎಂದು ಬೆಳಗಾವಿಯ ಭಾರತೀಯ ಜೀವ ವಿಮಾ ನಿಗಮದ ಹಿರಿಯ ವಿಭಾಗಾಧಿಕಾರಿ ಅಜಿತ ವಾರಕರಿ ಹೇಳಿದರು. ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ …
Read More »ನೀತಿ ಸಂಹಿತೆ ಉಲ್ಲಂಘನೆ: ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಎಫ್ ಐಆರ್
ಬೆಳಗಾವಿ: ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಹಮ್ಮಿಕೊಂಡಿದ್ದ ಅತಿಶಿನ-ಕುಂಕುಮ ಕಾರ್ಯಕ್ರಮ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಸಚಿವೆ ಶಶಿಕಲಾ ಜೊಲ್ಲೆ ಸೇರಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ನಿಪ್ಪಾಣಿ ಪಟ್ಟಣದ ಮುನ್ಸಿಪಲ್ ಆವರಣದಲ್ಲಿ ಮಹಿಳೆಯರಿಗಾಗಿ ಅರಿಶಿನ- ಕುಂಕುಮ ಕಾರ್ಯಕ್ರಮ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಶಶಿಕಲಾಜೊಲ್ಲೆ ಹಾಗೂ ರಣರಾಗಿನಿ ಮಹಿಳಾ ಮಂಡಳ ಅಧ್ಯಕ್ಷರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅತಿಶಿನ ಕುಂಕುಮ ಕಾರ್ಯಕ್ರಮದಲ್ಲಿ ಶಶಿಕಲಾ ಜೊಲ್ಲೆ …
Read More »ನಂದಿನಿ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿʼ ; HDK ಆಕ್ರೋಶ
ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು ಹಾಗೂ ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ ‘ದಹಿ’ ಎಂದು ಮುದ್ರಿಸಿರುವುದು,ಅದನ್ನು …
Read More »ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಗೋಕಾಕ : ಕೆಎಂಎಫ್ ರೈತರ ಬೃಹತ್ ಸಂಸ್ಥೆಯಾಗಿದ್ದು ರೈತರ ಶ್ರೇಯೋಭಿವೃದ್ಧಿಗೆ ಮತ್ತು ಅವರ ಆರ್ಥಿಕ ಬಲವರ್ಧನೆಗಾಗಿ ಸಾಕಷ್ಟು ಯೋಜನೆಗಳನ್ನು ಅನುಷ್ಠಾನ ಮಾಡಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ಇಲ್ಲಿನ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಒಟ್ಟು ೮.೬೦ ಲಕ್ಷ ರೂ.ಗಳ ಚೆಕ್ಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ರೈತರು ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಹಾಲು ಉತ್ಪಾದಕರ ಸಂಘಗಳು …
Read More »ಸಿದ್ದರಾಮಯ್ಯ ಅವರ ಬಯೋಪಿಕ್ನ ಪೋಸ್ಟರ್ ರಿಲೀಸ್
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಜೀವನಾಧರಿತ ಕಥೆಯನ್ನು ಆಧರಿಸಿ ಸಿನಿಮಾಗಳನ್ನು ಮಾಡಲಾಗುತ್ತಿದೆ. ಇದೀಗ ರಾಮನವಮಿ ಹಬ್ಬದ ಶುಭ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಯೋಪಿಕ್ನ ಪೋಸ್ಟರ್ ರಿಲೀಸ್ ಆಗಿದೆ. ಚಿತ್ರಕ್ಕೆ ‘ಲೀಡರ್ ರಾಮಯ್ಯ’ ಎಂದು ಹೆಸರಿಡಲಾಗಿದ್ದು, ಸಿದ್ದರಾಮಯ್ಯ ಅಭಿಮಾನಿ ಸಂಘದಿಂದ ಸಿನಿಮಾದ ಮೊದಲ ಪೋಸ್ಟರ್ನ್ನು ಸಿದ್ದರಾಮಯ್ಯ ನಿವಾಸದಲ್ಲಿ ಇಂದು(ಮಾ.30) ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಸಿದ್ದರಾಮಯ್ಯನವರ ಪಾತ್ರವನ್ನು ತಮಿಳಯ ನಟ ವಿಜಯ್ ಸೇತುಪತಿ ಮಾಡಲಿದ್ದಾರೆ. ಚಿತ್ರವನ್ನು ಸತ್ಯರತ್ನಂ ನಿರ್ದೇಶಿಸಲಿದ್ದಾರೆ. ಹಯಾತ್ ಫೀರ್ …
Read More »ತೀವ್ರ ಅನನುಕೂಲ ಇರುವವರಿಗೆ ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಿ; ಪ್ರಾಥಮಿಕ ಶಾಲಾ ಶಿಕ್ಷಕರ ಮನವಿ
ಬೆಂಗಳೂರು: ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ವೇಳೆ 55 ವರ್ಷ ಮೇಲ್ಪಟ್ಟ ಶಿಕ್ಷಕರು, ಗರ್ಭಿಣಿ ಶಿಕ್ಷಕಿಯರು, ಅಂಗವಿಕಲ ಶಿಕ್ಷಕರಿಗೆ ವಿನಾಯಿತಿ ನೀಡುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಈ ಕುರಿತು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ಕುಮಾರ್ ಮೀನಾ ಅವರಿಗೆ ಪತ್ರ ಬರೆದು ಮನವಿ ಮಾಡಲಾಗಿದೆ. 55 ವರ್ಷಕ್ಕೂ ಮೇಲ್ಪಟ್ಟ ಶಿಕ್ಷಕರನ್ನು ಚುನಾವಣಾ ಕರ್ತವ್ಯದಿಂದ ವಿನಾಯಿತಿ ನೀಡಬೇಕು. ವಿಶೇಷವಾಗಿ ಮಹಿಳಾ ಶಿಕ್ಷಕಿಯರನ್ನು ಕರ್ತವ್ಯ ನಿರ್ವಹಿಸುತ್ತಿರುವ ಮತಕ್ಷೇತ್ರ/ತಾಲ್ಲೂಕಿನಲ್ಲಿಯೇ ಚುನಾವಣಾ …
Read More »ವಕೀಲರ ಮೇಲೆ ಹಲ್ಲೆ: ಪ್ರತಿಭಟನೆ
ಅಥಣಿ: ವಾಹನ ನಿಲುಗಡೆ ವಿಚಾರವಾಗಿ ಪೊಲೀಸರು ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಅವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಖು ಎಂದು ಆಗ್ರಹಿಸಿ ಅಥಣಿ ವಕೀಲರ ಸಂಘದಿಂದ ಶಿವಯೋಗಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ಮೇತ್ರಿ ಮಾತನಾಡಿ, ‘ಮೂಲತಃ ರಾಮದುರ್ಗದ ವಕೀರೊಬ್ಬರು ಪ್ರಸ್ತುತ ಬೆಳಗಾವಿಯಲ್ಲಿ ವೃತ್ತಿ ನಡೆಸುತ್ತಿದ್ದು, ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ಠಾಣೆ ಹಿಂಬದಿ ವಾಹನ ನಿಲ್ಲಿಸಿದ್ದರು. ಈ ವೇಳೆ ಮಹಿಳಾ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿ ವಾಹನ …
Read More »ಕಾಗವಾಡ: ದಾಖಲೆ ಇಲ್ಲದ ₹70 ಲಕ್ಷ ನಗದು ವಶ
ಕಾಗವಾಡ (ಬೆಳಗಾವಿ ಜಿಲ್ಲೆ): ಕಾಗವಾಡ- ಮಿರಜ್ ರಸ್ತೆಯ ಚೆಕ್ಪೋಸ್ಟ್ನಲ್ಲಿ ಬುಧವಾರ, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ₹ 70 ಲಕ್ಷ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಮಿರಜ್ನಿಂದ ಕಾಗವಾಡ ತಾಲ್ಲೂಕಿನ ಉಗಾರ ಪಟ್ಟಣಕ್ಕೆ ಬರುತ್ತಿದ್ದ ಕಾರಿನಲ್ಲಿ ಈ ಹಣ ಸಿಕ್ಕಿದೆ. ಕಾರ್ ವಶಪಡಿಸಿಕೊಂಡ ಪೊಲೀಸರು ಚಾಲನಕನ್ನು ಬಂಧಿಸಿದ್ದಾರೆ. ಆದರೆ, ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ನೀಡಿಲ್ಲ. ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ ಹಾರೂಗೇರಿ ಚೆಕ್ಪೋಸ್ಟ್ನಲ್ಲಿ ಕೂಡ ₹2.30 ಲಕ್ಷ ಹಣವನ್ನು …
Read More »