Breaking News

Monthly Archives: ಮಾರ್ಚ್ 2023

ಗೋವಾಕ್ಕೆ ಬರುವ ಪ್ರವಾಸಿಗರು ಕೂಡ ಕಾನೂನು ಪಾಲಿಸಬೇಕು : ಸಿಎಂ ಸಾವಂತ್

ಪಣಜಿ: ”ಗೋವಾದ ಹಣಜುಣದಲ್ಲಿ ಪ್ರವಾಸಿ ಕುಟುಂಬದ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಹಾಗೂ ಪೊಲೀಸರ ನಿರ್ಲಕ್ಷ್ಯದಿಂದ ರಾಜ್ಯಕ್ಕೆ ದೇಶಾದ್ಯಂತ ಅಪಖ್ಯಾತಿಯಾಗುತ್ತಿದೆ. ಗೋವಾ ರಾಜ್ಯವು ಪ್ರವಾಸಿಗರಿಗೆ ಸುರಕ್ಷಿತವಾಗಿದೆ ಮತ್ತು ಪ್ರವಾಸೋದ್ಯಮಕ್ಕೆ ಧಕ್ಕೆ ತರುವವರ ಕೃತ್ಯ ಸಹಿಸಲಾಗುವುದಿಲ್ಲ. ಪ್ರವಾಸಿಗರು ಕೂಡ ಕಾನೂನು ಪಾಲಿಸಬೇಕು” ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ. ಮುಖ್ಯಮಂತ್ರಿಗಳು ಪೊಲೀಸ್ ಪ್ರಧಾನ ಕಚೇರಿಯಲ್ಲಿ ಗೃಹ, ಕಾರ್ಮಿಕ ಮತ್ತು ಪ್ರವಾಸೋದ್ಯಮ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಘಟನೆಯ ಸಂಪೂರ್ಣ ತನಿಖೆಯ ನಂತರ ದಾಳಿಕೋರನ …

Read More »

5 ಮತ್ತು 8 ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಅನುಮತಿ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಬುಧವಾರ ಮಧ್ಯಂತರ ಆದೇಶದ ಮೂಲಕ ಎರಡು ವಾರಗಳ ನಂತರ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಮಂಡಳಿಗೆ ಅನುಮತಿ ನೀಡಿ, ರಾಜ್ಯ ಸರಕಾರದ ಮೂರು ಸುತ್ತೋಲೆಗಳನ್ನು ರದ್ದುಗೊಳಿಸಿದ ಏಕ ಪೀಠದ ಆದೇಶಕ್ಕೆ ತಡೆ ನೀಡಿದೆ.   ನ್ಯಾಯಮೂರ್ತಿ ಜಿ ನರೇಂದರ್ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠವು ಮಾರ್ಚ್ 10 ರ ಆದೇಶಕ್ಕೆ ತಡೆ …

Read More »

ನೌಕರರ ಮುಷ್ಕರ: ನಾಳೆಯಿಂದ ಕೆಪಿಟಿಸಿಎಲ್​, ಎಸ್ಕಾಂ, ಬೆಸ್ಕಾಂ ಎಲ್ಲವೂ ಬಂದ್!

ಬೆಂಗಳೂರು: ಸರ್ಕಾರಿ ನೌಕರರ ಸಂಘದ ಬಳಿಕ ವೇತನ ಪರಿಷ್ಕರಣೆಗೆ ಸಿಡಿದೆದ್ದ KPTCL ನೌಕರರ ಸಂಘ ನಾಳೆಯಿಂದ ಕೆಪಿಟಿಸಿಎಲ್​, ಎಸ್ಕಾಂ, ಬೆಸ್ಕಾಂ ಎಲ್ಲವೂ ಬಂದ್​ ಮಾಡಿ ಮುಷ್ಕರ ಮಾಡಲಿದೆ. ಇದೀಗ ಮಾರ್ಚ್​ 21ರಿಂದ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹೂಡಲಿದ್ದು ಅದರ ಜತೆಗೆ ಈಗ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಹಾಗೂ ಒಕ್ಕೂಟ ಅನಿರ್ದಿಷ್ಟವಧಿ ಮುಷ್ಕರ ಮಾಡುವುದಾಗಿ ಕರೆ ಕೊಟ್ಟು ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.   ‘ನಾಳೆಯಿಂದ ರಾಜ್ಯಾದ್ಯಂತ ಕೆಲಸಕ್ಕೆ …

Read More »

ಬೆಲೆ ಕುಸಿತಕ್ಕೆ ಕಂಗಾಲಾಗಿ ಗಿಡದಿಂದ ಹತ್ತಿ ಬಿಡಿಸದ ರೈತ.

ಧಾರವಾಡ: ರೈತರ ಪಾಲಿನ ಬಿಳಿ ಬಂಗಾರ ಅಂತಲೇ ಹೆಸರುವಾಸಿಯಾಗಿರುವ ಮತ್ತು ವರ್ಷದಿಂದ ವರ್ಷಕ್ಕೆ ಏರುತ್ತ ಹೊರಟಿದ್ದ ಹತ್ತಿ ಯ ಬೆಲೆ ಈ ಬಾರಿ ಏಕಾಏಕಿಯಾಗಿ ಕುಸಿದಿದ್ದು, ಇದರಿಂದಾಗಿ ರೋಸಿ ಹೋದ ರೈತರು ಇದೀಗ ಹತ್ತಿಯನ್ನು ಬಿಡಿಸದೇ ಗದ್ದೆಯಲ್ಲಿ ಹಾಗೆಯೇ ಬಿಡುತ್ತಿದ್ದು, ಬೆಳೆದು ನಿಂತಲ್ಲಿಯೇ ಹತ್ತಿಯೆಲ್ಲವೂ ಹಾಳಾಗಿ ಹೋಗುತ್ತಿದೆ.   ಧಾರವಾಡ, ನವಲಗುಂದ, ಅಣ್ಣಿಗೇರಿ ತಾಲೂಕಿನ ಭಾಗದಲ್ಲಿ ಹತ್ತಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಾರೆ. ಕಳೆದ ವರ್ಷ ಒಂದು ಕ್ವಿಂಟಾಲ್​ ಹತ್ತಿಗೆ 12 ಸಾವಿರ …

Read More »

ಕಣ್ಣೀರು ಹಾಕಿ ಮಾತನಾಡಿದ C.M.ಬೊಮ್ಮಾಯಿ!

ಹುಬ್ಬಳ್ಳಿ: ತಮ್ಮ ಹಳೆ ಸ್ನೇಹಿತರು ಸಂಬಂಧಿಕರನ್ನು ನೋಡಿ ಭಾವುಕಾರದ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ಹುಟ್ಟೂರಿನಲ್ಲಿ ಕಣ್ಣೀರು ಹಾಕಿದರು. ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿರುವ ತಮ್ಮ ತಂದೆ ತಾಯಿ ಜನಿಸಿದ ಬಾಳಿ ಬದುಕಿದ ಕಮಡೊಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದು ಆ ಸಂದರ್ಭ ತಮ್ಮ ಬಾಲ್ಯದ ನೆನಪು ಮೆಲುಕು ಹಾಕಿ ಕಣ್ಣೀರಿಟ್ಟರು. ಇದೇ ಸಂದರ್ಭ ಅವರು ಸಿಎಂ ಹುದ್ದೆಗೆ ಏರಲು ಸ್ನೇಹಿತರ ಸಹಾಯವನ್ನು ಸಿಎಂ ಬೊಮ್ಮಾಯಿ ನೆನೆದರು. ಇದೇ ಸಂದರ್ಭ ಮುಖ್ಯಮಂತ್ರಿ ಬೊಮ್ಮಾಯಿ …

Read More »

ರಟ್ಟಿಹಳ್ಳಿಯಲ್ಲಿ ಕೋಮು ಗಲಭೆ, ಕಲ್ಲು ತೂರಾಟ; ಇಂದು ಎಡಿಜಿಪಿ ಅಲೋಕ್ ಕುಮಾರ್​ ಭೇಟಿ.

ಹಾವೇರಿ: ನಿನ್ನೆ ರಟ್ಟಿಹಳ್ಳಿಯಲ್ಲಿ ಕೋಮು ಗಲಭೆ ಮತ್ತು ಕಲ್ಲು ತೂರಾಟ ನಡೆದಿದೆ. ಈ ಘಟನೆ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಂಡಿದ್ದು ಮಧ್ಯರಾತ್ರಿ ಮೂರು ಗಂಟೆಗೆ ರಟ್ಟಿಹಳ್ಳಿ ಪಟ್ಟಣದಲ್ಲಿ ಗಸ್ತು ಹಾಕಿದ್ದಾರೆ.   ಕಲ್ಲು ತೂರಾಟ ಮಾಡಿದ್ದ ಪರಾರಿಯುಗಿದ್ದ ಯುವಕರ ಮನೆಗೆ ಪೊಲಿಸರು ಭೇಟಿ ನೀಡಿದ್ದು ಈ ಸಂದರ್ಭ ಮನೆಗೆ ಬಂದ ಯುವಕರನ್ನು ಬಂಧಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಪರಾರಿಯಾಗಿದ್ದ ಯುವಕರಲ್ಲಿ ಯಾರೂ ನಿನ್ನೆ ರಾತ್ರಿ ಅವರ ಮನೆಗೆ ಹೋಗಿಲ್ಲ …

Read More »

ಎಂಎಲ್‌ಸಿ ಆರ್​.ಶಂಕರ್ ಮನೆ ಮೇಲೆ ದಾಳಿ: 8 ಕೋಟಿ ರೂ. ಮೌಲ್ಯದ ಸೀರೆ, ತಟ್ಟೆ-ಲೋಟಾ, ಬ್ಯಾಗ್‌ ಪತ್ತೆ

ಹಾವೇರಿ : ಬಿಜೆಪಿ ವಿಧಾನಪರಿಷತ್ ಸದಸ್ಯ ಆರ್​.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಬೀರಲಿಂಗೇಶ್ವರ ನಗರದಲ್ಲಿರುವ ಶಂಕರ್​ ಮನೆ ಮೇಲೆ ನಿನ್ನೆ ತಡರಾತ್ರಿ ದಾಳಿಯಾಗಿದ್ದು, ಈ ವೇಳೆ ಆರ್.ಶಂಕರ್ ಗೃಹಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕರಿಗೆ ಹಂಚಲು ತಂದಿದ್ದ ಹಲವು ವಸ್ತುಗಳು ಪತ್ತೆಯಾಗಿವೆ.   ಆರ್.ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ, ಲೋಟಾ ಹಾಗೂ ಎಲ್.ಕೆ.ಜಿಯಿಂದ ಪದವಿ ಕಾಲೇಜು ಮಕ್ಕಳ ತನಕ ಹಂಚಲು …

Read More »

ಉದ್ಘಾಟನೆಗೊಂಡ ಎರಡೇ ದಿನಗಳಲ್ಲಿ ಕಿತ್ತುಬಂದ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ ವೇ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಿದ ಎರಡೇ ದಿನಗಳಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಮೂಲಗಳ ಪ್ರಕಾರ, ಬೀಳಗಿ ಬೈಪಾಸ್ ನ ಕೊನೆಯಲ್ಲಿ ಗುಂಡಿಗಳು ಕಂಡುಬಂದಿವೆ.   ಈಗ, ಎನ್‌ಎಚ್‌ಎಐ ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಂಡಿದೆ. ಇದು ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿರುವ ಈ 9,000 ಕೋಟಿ ರೂ.ಗಳ ಕೆಲಸದ ಸಾಲದ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಈ ಯೋಜನೆಯ ಅನುಷ್ಠಾನದಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ …

Read More »

ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ.

ಖಾನಾಪುರ: ತಾಲೂಕಿನ ನಂದಗಡದಲ್ಲಿ ಕಾಡುಕೋಣ ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ತಂಡ ಬಂಧಿಸಿದೆ. ಡೆವಿಡ್ ಫಿಗೇರ್ ಮತ್ತು ಹಸನ್ ಬೇಪಾರಿ ಬಂಧಿತರು. ಇವರಿಂದ 11 ಕೆಜಿ ಕಾಡುಕೋಣದ ಮಾಂಸ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ, ೆರಡು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.     ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.     ಬೆಳಗಾವಿ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಜುನಾಥ ಚವ್ಹಾಣ ಅವರ …

Read More »

ಬೆಳಗಾವಿ ನಗರದ ಕ್ಲಬ್ ರೋಡ್ ನಲ್ಲಿರುವ ಸಿಪಿಇಡಿ ಗ್ರೌಂಡ್‌ನಲ್ಲಿ17ರಂದು ಅಪ್ಪು ಜನ್ಮದಿನೋತ್ಸವ

ಬೆಳಗಾವಿ: ಡಾ. ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಮಾರ್ಚ್ 17ರಂದು  ‘ಅಪ್ಪು ಜನ್ಮದಿನೋತ್ಸವ’  ಕಾರ್ಯಕ್ರಮ ಆಯೋಜಿಸಲಾಗಿದೆ. ನಗರದ ಕ್ಲಬ್ ರೋಡ್ ನಲ್ಲಿರುವ ಸಿಪಿಇಡಿ ಗ್ರೌಂಡ್‌ನಲ್ಲಿ ಅದ್ಧೂರಿ ಸಮಾರಂಭವನ್ನು ಅಪ್ಪು ಅಭಿಮಾನಿ ಬಳಗ ಅಯೋಜಿಸಿದೆ. ಅಂದು ಸಂಜೆ 4.30ರಿಂದ ಕಾರ್ಯಕ್ರಮಗಳು ಆರಂಭವಾಗಲಿದ್ದು, ಈ ಶುಭ ಸಂದರ್ಭದಲ್ಲಿ ಮಮತ ಕ್ರಿಯೇಷನ್ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಪರ್ಯಾಯ ಕನ್ನಡ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗುವುದು ಎಂದು ಅಪ್ಪು ಜನ್ಮದಿನೋತ್ಸವ ದ ಸಂಘಟಕ …

Read More »