Breaking News

Monthly Archives: ಮಾರ್ಚ್ 2023

ನಮ್ಮ ಪಕ್ಷಕ್ಕೆ ಬರ್ತಿಯೋ ಇಲ್ಲ ಸಿಡಿ ಬಿಡಲೋ ಎಂದು ಡಿ.ಕೆ.ಶಿ. ಸಚಿವರೊಬ್ಬರನ್ನು ಬೆದರಿಸುತ್ತಿದ್ದಾರೆ:. ರಮೇಶ್ ಜಾರಕಿಹೊಳಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಮಂತ್ರಿಯೋರ್ವರಿಗೆ ಡಿ.ಕೆ.ಶಿ ಕಾಂಗ್ರೆಸ್ ಸೇರ್ತಿಯಾ ಇಲ್ಲ ಸಿಡಿ ಬಿಡುಗಡೆ ಮಾಡ್ಲಾ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ಸಚಿವರೊಬ್ಬರನ್ನು ಬೆದರಿಸುತ್ತಿದ್ದಾರೆ. ನಮ್ಮ ಪಕ್ಷಕ್ಕೆ ಬರ್ತಿಯೋ ಇಲ್ಲ ಸಿಡಿ ಬಿಡಲೋ ಎಂದು ಹೇಳುತ್ತಿದ್ದಾರೆ ಎಂದು ಆರೋಪಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಸಿಡಿ ರಾಜಕಾರಣ ಪ್ರಸ್ತಾಪಿಸಿದ್ದಾರೆ. ನಾವು ಯುದ್ಧ ಮಾಡುವವರು ಹೊರತು ಷಡ್ಯಂತ್ರ ಮಾಡುವವರಲ್ಲ. …

Read More »

ಸೋಮಣ್ಣ ನಮ್ಮ ಜೊತೆಯೇ ಇರುತ್ತಾರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ‘ಸಚಿವ ವಿ. ಸೋಮಣ್ಣ ನಮ್ಮ ಜೊತೆನೆ ಇದ್ದಾರೆ. ಮುಂದೆಯೂ ಜೊತೆಗೇ ಇರುತ್ತಾರೆ. ಯಾವುದೇ ಊಹಾಪೋಹ ಬೇಡ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಸೋಮವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ವಿ. ಸೋಮಣ್ಣ ಅವರ ಜೊತೆ ನಿನ್ನೆ ಹುಬ್ಬಳ್ಳಿಯಲ್ಲಿ ಯಾವುದೇ ಮಾತುಕತೆ ನಡೆದಿಲ್ಲ. ನಮ್ಮ ಭೇಟಿ ಕೇವಲ ಔಪಚಾರಿಕ’ ಎಂದರು. ‘ಒಂದಿಷ್ಟು ಯೋಜನೆಗಳ ಕ್ರೆಡಿಟ್ ಪಡೆಯಲು ಕೆಲವರು ಮುಂದಾಗಿದ್ದಾರೆ. ಕ್ರೆಡಿಟ್ ವಾರ್ ಸಹಜ. ಪಕ್ಕದ ಮನೆಯವರು ಗಂಡು ಹಡೆದರೆ, ಇವರು …

Read More »

ಗಾಜಿನ ಪೆಟ್ಟಿಗೆಯೊಳಗಿನ ಪೇಢಾ: ನಗೆ ಚಟಾಕಿ ಹಾರಿಸಿದ ಪ್ರಧಾನಿ ಮೋದಿ

ಧಾರವಾಡ: ‘ಧಾರವಾಡದ ಪೇಢಾ ಒಮ್ಮೆ ಸವಿದರೆ ಮತ್ತೊಮ್ಮೆ ತಿನ್ನಬೇಕೆನಿಸುತ್ತದೆ. ಸಿಹಿ ತಿನ್ನುವ ಆಸೆಗೆ ಮಿತಿ ಹೇರಲು, ನನ್ನ ಆರೋಗ್ಯದ ಕಾಳಜಿ ಮಾಡಲೆಂದೇ ಮಿತ್ರ ಪ್ರಲ್ಹಾದ ಜೋಶಿ, ಗಾಜಿನ ಪೆಟ್ಟಿಗೆಯಲ್ಲಿ ಇಟ್ಟು ಕೊಟ್ಟಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪೇಡೆ ಸ್ವೀಕರಿಸಿ, ನಗೆ ಚಟಾಕಿ ಹಾರಿಸಿದರು.   ಧಾರವಾಡದ ಕರಕುಶಲ ವಸ್ತುಗಳ ಉಡುಗೊರೆಯನ್ನೇ ಪ್ರಧಾನಿಗಳಿಗೆ ನೀಡಲಾಯಿತು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಸಖಿ ಸಾಫಲ್ಯದ ಕಸೂತಿ ಶಾಲನ್ನು ಹೊದಿಸಿ, ಧಾರವಾಡದ …

Read More »

ಫೈಟರ್ ರವಿಗೆ ಕೈಮುಗಿದು ನಿಂತ ಮೋದಿ: ಪ್ರಧಾನಿ ಹುದ್ದೆಗೆ ಕಳಂಕ ಎಂದ ಕಾಂಗ್ರೆಸ್

ಬೆಂಗಳೂರು: ಮಲ್ಲಿಕಾರ್ಜುನ್‌ (ಫೈಟರ್‌ ರವಿ) ಎಂಬುವವರ ಎದುರು ಕೈಮುಗಿದು ನಿಂತ ನರೇಂದ್ರ ಮೋದಿ ಅವರಿಂದ ಪ್ರಧಾನಿ ಹುದ್ದೆಗೆ ಕಳಂಕ ಅಂಟಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಫೈಟರ್‌ ರವಿ ಅವರನ್ನು ರೌಡಿ ಶೀಟರ್‌ ಎಂದು ಕಾಂಗ್ರೆಸ್‌ ಆರೋಪಿಸಿದೆ.       ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಮಂಡ್ಯ ಮತ್ತು ಧಾರವಾಡದ ಕಾರ್ಯಕ್ರಮಗಳಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಕರ್ನಾಟಕಕ್ಕೆ ಆಗಮಿಸಿದ್ದರು. ಮಂಡ್ಯದಲ್ಲಿ ಆಯೋಜಿಸಿದ್ದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉದ್ಘಾಟನೆಗೆಂದು ಮೈಸೂರಿಗೆ ಬಂದಿಳಿದಿದ್ದ …

Read More »

ಬಿಜೆಪಿ ಭಿನ್ನಮತ ಶಮನಕ್ಕೆ ಯತ್ನ, ಸಭೆ ನಡೆಸಿದ ಧರ್ಮೇಂದ್ರ ಪ್ರಧಾನ

ಬೆಳಗಾವಿ: ಜಿಲ್ಲೆಯಲ್ಲಿ ಉಂಟಾಗಿರುವ ಭಿನ್ನಮತ ಶಮನಗೊಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ನಗರಕ್ಕೆ ಆಗಮಿಸಿದ್ದ ಪಕ್ಷದ ರಾಜ್ಯ ಚುನಾವಣೆ ಉಸ್ತುವಾರಿಯೂ ಆಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ ಭಾನುವಾರ ಬಾಗಲಕೋಟೆ, ಬೆಳಗಾವಿ, ಹಾಗೂ ವಿಜಯಪುರ ಜಿಲ್ಲೆಗಳ ಆಯ್ದ ಸಂಸದರು, ಶಾಸಕರೊಂದಿಗೆ ಪ್ರತ್ಯೇಕವಾಗಿ ಸಭೆ ನಡೆಸಿದರು.   ‘ಪಕ್ಷದ ಕೆಲವು ನಾಯಕರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ. ಹಾಗಾಗಿ ಪ್ರಧಾನ ಪ್ರತ್ಯೇಕವಾಗಿ ನಾಯಕರ ಸಭೆ ನಡೆಸಿ, ಭಿನ್ನಮತ ಶಮನಗೊಳಿಸಲು ಪ್ರಯತ್ನಿಸಿದರು. ಎಲ್ಲರೂ ಒಂದಾಗಿ ಹೋಗುವಂತೆ ಸೂಚಿಸಿದರು’ …

Read More »

ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ಫಲಿತಾಂಶ ಪ್ರಕಟ, ಬಿಜೆಪಿಗೆ ಆಘಾತ

ಬೆಂಗಳೂರು, ಮಾರ್ಚ್ 11: ವಿಧಾನಸಭಾ ಚುನಾವಣೆಗೆ ಮಿಷನ್ 150 ಹೊತ್ತಿರುವ ಬಿಜೆಪಿ, ತನ್ನ ಟಾರ್ಗೆಟ್ ರೀಚ್‌ಗಾಗಿ ಸಮರಾಭ್ಯಾಸ ನಡೆಸುತ್ತಿದೆ. ಇತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಹಲವು ಯಾತ್ರೆಗಳ ಮೂಲಕ ರಾಜ್ಯಾದ್ಯಂತ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಈ ಬಾರಿಯ 2023ರ ವಿಧಾನಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಇನ್ನೊಂದು ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತವಾಗಿದ್ದು, ಇನ್ನೂ ಕೆಲ ರಾಜಕೀಯ ಪಕ್ಷಗಳು ಚುನಾವಣಾ ತಯಾರಿಯನ್ನು ಚುರುಕುಗೊಳಿಸಿದೆ.   ಹೌದು, ಈಗಾಗಲೇ ಗೆಲ್ಲುವ …

Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇ ಉದ್ಘಾಟಿಸಿದ ಪ್ರಧಾನಿ ಮೋದಿ

ಮಂಡ್ಯ: ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇಯನ್ನು ಪ್ರಧಾನಿ ಮೋದಿ ಅಧಿಕೃತವಾಗಿ ಉದ್ಘಾಟನೆ ಮಾಡಿದ್ದಾರೆ. 8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್‌ ಹೈವೇ ನಿರ್ಮಾಣವಾಗಿದೆ. ಹೈವೇ ಉದ್ಘಾಟನೆ ವೇಳೆ ಪ್ರಧಾನಿ ಮೋದಿಗೆ ಕಲಾತಂಡಗಳಿಂದ ಸ್ವಾಗತ ಕೋರಲಾಯಿತು. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ಮೋದಿಯವನ್ನು ಸನ್ಮಾನಿಸಿದ್ದಾರೆ. ಇನ್ನು ಪ್ರಧಾನಮಂತ್ರಿಯವರು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು ದೇಶಕ್ಕೆ ಸಮರ್ಪಿಸುವರು. ಈ ಯೋಜನೆಯು ರಾಷ್ಟ್ರೀಯ …

Read More »

ಚುನಾವಣೆಗೆ ಸಿದ್ಧತೆ; ಈ ಬಾರಿ ಹಿರಿಯ ನಾಗರಿಕರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ

ಬೆಂಗಳೂರು: ಕರ್ನಾಟಕದಲ್ಲಿ ಸುಮಾರು 17,000 ಮಂದಿ ಶತಾಯುಷಿಗಳಿದ್ದು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ 80 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮನೆಯಲ್ಲಿಯೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಚುನಾವಣಾ ಆಯೋಗ ಶನಿವಾರ (ಮಾರ್ಚ್ 11) ಘೋಷಿಸಿದೆ.     ರಾಜ್ಯದಲ್ಲಿ ಈ ಬಾರಿ ಯುವ ಮತದಾರರ ಸಂಖ್ಯೆಯೂ ಹೆಚ್ಚಳವಾಗಿದೆ ಎಂದು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯ ಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಚುನಾವಣಾ ಆಯುಕ್ತ ಅನುಪ್ …

Read More »

ಮಠದಲ್ಲಿ ಬೈಬಲ್‌ ಕೃತಿ, ಮೊಹರಂ ಪಂಜಾ!

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನಲ್ಲಿ 19ನೆಯ ಶತಮಾನದಲ್ಲಿ ಶ್ರೀನಾಗಲಿಂಗಸ್ವಾಮಿ ಗಳೆಂಬ ಸಾಧುಗಳಿಂದ ಪ್ರವರ್ತಿತವಾದ ಮಠವಿದೆ. ನಾಗಲಿಂಗಸ್ವಾಮಿಗಳು ಜನಿಸಿದ್ದು ರಾಯ ಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಿ ಗ್ರಾಮದ ಮೌನಾಚಾರ್ಯ ಮತ್ತು ನಾಗಮ್ಮ ದಂಪತಿಗೆ. ಇವರು ವಿಶ್ವಕರ್ಮ ಸಮುದಾಯದವರಾಗಿ ಕಮ್ಮಾರ ವೃತ್ತಿ ನಡೆಸು ತ್ತಿದ್ದರು. ಮೈಸೂರು ಪ್ರಾಂತದಲ್ಲಿದ್ದ ಕರಸ್ಥಲ ನಾಗ ಲಿಂಗಸ್ವಾಮಿ ಎಂಬ ಮಹಾಪುರುಷರ ಕಥೆಗಳನ್ನು ಮೌನಾಚಾರ್ಯರು ಹೇಳುತ್ತಿರುವಾಗ “ಪುತ್ರ ನೆಂದರೆ ನಿನ್ನಂತಿರಬೇಕು ಕರಸ್ಥಲಸ್ವಾಮಿಯೇ’ ಎಂದು ನಾಗಮ್ಮ ಬಯಸುತ್ತಿದ್ದರಂತೆ. ಅವರು ಸ್ವಪ್ನದಲ್ಲಿ …

Read More »

ವಿಶ್ವದ ಅತೀ ಉದ್ದನೆಯ ರೈಲು ಪ್ಲಾಟ್‌ಫಾರಂ ಗರಿ

ಹುಬ್ಬಳ್ಳಿ: ವಿಶ್ವದ ಅತೀ ಉದ್ದನೆಯ ರೈಲ್ವೆ ಪ್ಲಾಟ್‌ಫಾರಂ ಹೊಂದಿರುವ ಕೀರ್ತಿ ನಗರದ ಶ್ರೀಸಿದ್ಧಾರೂಢ ಸ್ವಾಮೀಜಿ ರೈಲು ನಿಲ್ದಾಣದ್ದಾಗಿದೆ. ಭಾನುವಾರ ಇದನ್ನು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆಗೊಳಿಸಲಿದ್ದಾರೆ. ಮುಂದಿನ 20-30 ವರ್ಷಗಳ ರೈಲ್ವೆ ಬೆಳವಣಿಗೆಯನ್ನು ಗಮನದಲ್ಲಿರಿಸಿಕೊಂಡು 20.01 ಕೋಟಿ ರೂ.ವೆಚ್ಚದಲ್ಲಿ 1,507 ಮೀಟರ್‌(4938 ಅಡಿ)ಉದ್ದದ ಈ ಪ್ಲಾಟ್‌ಫಾರಂ ನಿರ್ಮಿಸಲಾಗಿದೆ. ಇದರಿಂದ ಏಕಕಾಲಕ್ಕೆ ಎರಡು ರೈಲುಗಳು ವಿರುದ್ಧ ದಿಕ್ಕಿನಲ್ಲಿ ಸಂಚಾರ ಮಾಡಬಹುದಾಗಿದೆ. ಹುಬ್ಬಳ್ಳಿ ರೈಲ್ವೆ ಜಂಕ್ಷನ್‌ ದೇಶದ ಪ್ರಮುಖ ಜಂಕ್ಷನ್‌ಗಳಲ್ಲೊಂದು. ರಾಜ್ಯ-ದೇಶದ ವಿವಿಧೆಡೆ ಸಂಪರ್ಕ …

Read More »