ಬೆಂಗಳೂರು ಆಮ್ ಆದ್ಮ ಪಕ್ಷದಿಂದ ಮೂರನೇ ಪಟ್ಟಿ ಬಿಡುಗಡೆಯಾಗಿದ್ದು ರಾಜ್ಯ 28 ಕ್ಷೇತ್ರಗಳಿಗೆ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದೆ. ಬೆಳಗಾವಿ ನಿಪ್ಪಾಣಿ ಮತಕ್ಷೇತ್ರದಿಂದ ರಾಜೇಶ ಅಣ್ಣಾಸಾಹೇಬ ಬಸವಣ್ಣ, ಬೆಳಗಾವಿ ಉತ್ತರ ಮತಕ್ಷೇತ್ರದಿಂದ ರಾಜಕುಮಾರ ಟೋಪಣ್ಣವರ ಹಾಗೂ ಸವದತ್ತಿ ಮತಕ್ಷೇತ್ರದಿಂದ ಬಾಪುಗೌಡ ಪಾಟೀಲ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ.
Read More »Daily Archives: ಏಪ್ರಿಲ್ 10, 2023
ಈ ಬಾರಿ ಹುಕ್ಕೇರಿ ಮತಕ್ಷೇತ್ರದ ಶಾಸಕ ಯಾರಾಗ್ತಾರೆ?
ಈ ಬಾರಿ ಹುಕ್ಕೇರಿ ಮತಕ್ಷೇತ್ರದ ಶಾಸಕ ಯಾರಾಗ್ತಾರೆ ಎಂದು ಜನ ಎದುರು ನೋಡುತ್ತಿದ್ದಾರೆ, ಉತ್ತರ ಕರ್ನಾಟಕದ ಬಲಿಷ್ಟ ನಾಯಕ ಉಮೇಶ್ ಕತ್ತಿ ನಿಧನದಿಂದ ಹುಕ್ಕೇರಿ ಕ್ಷೇತ್ರದಲ್ಲಿ ಚುನಾವಣೆ ಈ ಬಾರಿ ಕುತುಹಲ ಕೇರಳಿಸಿದೆ. ಹುಕ್ಕೇರಿ ಮತಕ್ಷೇತ್ರದಲ್ಲಿ ಯಾವದೇ ಪಕ್ಷದ ಮೇಲಿನ ಚುನಾವಣೆ ಜರುಗಿದ ಉದಾಹರಣೆಗಳಿಲ್ಲಾ, ಉಮೇಶ್ ಕತ್ತಿ ಯಾವಪಕ್ಷದಿಂದ ಸ್ಪರ್ಧೆ ಮಾಡುತ್ತಾರೋ ಅದೆ ಗೆಲವು ಪಡೆಯುತ್ತಿತ್ತು ಆದರೆ ಉಮೇಶ್ ಕತ್ತಿ ನಿಧನದಿಂದ ಕ್ಷೇತ್ರದಲ್ಲಿ ವಿವಿಧ ಪಕ್ಷಗಳ ಚಟುವಟುಕೆಗಳು ಗದಿಗೇರಿವೆ ಈಗಾಗಲೇ …
Read More »ಒಂದು ನಿಂಬೆ ಹಣ್ಣಿಗೆ 10 ರೂಪಾಯಿ .!
ಬೇಸಿಗೆಯ ಸೆಖೆಯಲ್ಲಿ ತಣ್ಣನೆಯ ಲೆಮನ್ ಸಿರಪ್ ಕುಡಿದರೆ ಮನಸ್ಸು ಪ್ರಶಾಂತವಾಗುತ್ತದೆ. ಆದರೆ ಈಗ ನಿಂಬೆ ಹಣ್ಣಿನ ಬೆಲೆ ಏರಿಕೆಯಿಂದ ನೆಮ್ಮದಿಯೂ ಹೋಗಿದೆ. ಹೌದು, ಬಾಗಲಕೋಟೆ, ವಿಜಯಪುರದಲ್ಲಿ ಈಗ ನಿಂಬೆಹಣ್ಣು ಉತ್ಪಾದನೆ ಕಡಿಮೆ ಆಗಿದೆ. ಇದರಿಂದ ಬೆಳಗಾವಿ ಮಾರುಕಟ್ಟೆ ಮೇಲೆ ಪರಿಣಾಮ ಬೀರಿದ್ದು, ಮಾರುಕಟ್ಟೆಯಲ್ಲಿ ನಿಂಬೆ ಹಣ್ಣಿನ ಬೆಲೆ ಜನಸಾಮಾನ್ಯರಿಗೆ ಕೈಗೆಟುಕದಂತಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಒಂದು ನಿಂಬೆ ಹಣ್ಣಿಗೆ 10 ರೂಪಾಯಿ ಇದೆ. ಇದರಿಂದ ಬೇಸಿಗೆಯಲ್ಲಿ ತಂಪು ನಿಂಬೆ ಪಾನಕವೂ ದುಬಾರಿಯಾಗಿದೆ. …
Read More »ಗೋವಾದಲ್ಲಿ ಹುಲಿಗಳ ಸಂಖ್ಯೆ ಇಳಿಮುಖ; ಕಾರಣವೇನು..?
ಪಣಜಿ: ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ದೇಶದಲ್ಲಿ ಹುಲಿ ಗಣತಿ ಘೋಷಿಸಿದರು. 2022 ರ ಹುಲಿ ಗಣತಿ ವರದಿಯ ಪ್ರಕಾರ, ಭಾರತದಲ್ಲಿನ ಹುಲಿಗಳ ಸಂಖ್ಯೆ 3,167 ಕ್ಕೆ ಏರಿದೆ. ದೇಶದಲ್ಲಿ ಹುಲಿಗಳ ಸಂಖ್ಯೆಯ ಪರಿಸ್ಥಿತಿ ಉತ್ತಮವಾಗಿದ್ದರೂ ಗೋವಾದಲ್ಲಿ ಹುಲಿಗಳ ಸಂಖ್ಯೆ ಇಳಿಮುಖವಾಗಿದ್ದು,ಇಲ್ಲಿನ ಮಹದಾಯಿ ಮತ್ತು ಮೋಲೆಮ್ ಅಭಯಾರಣ್ಯಗಳಲ್ಲಿ ಹುಲಿಗಳ ಸಂಖ್ಯೆ ಇಳಿಮುಖವಾಗಿದೆ. ಕಳೆದ ಕೆಲ ವರ್ಷಗಳ ಹಿಂದೆ ಗೋವಾದಲ್ಲಿ ಹುಲಿಗಳ ಇರುವಿಕೆಯನ್ನು ದೃಢಪಡಿಸಲು ಅಭಯಾರಣ್ಯಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಿ ಹುಲಿಗಳ …
Read More »ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ, ಹಣ ಹಾಗೂ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ
ಬೆಳಗಾವಿ: ಚುನಾವಣೆ ಕರ್ತವ್ಯ ನಿರತ ಅಧಿಕಾರಿಗಳು ಮತ್ತು ಪೊಲೀಸರು ದಾಖಲೆಗಳಿಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ, ಹಣ ಹಾಗೂ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಸವದತ್ತಿ ಚೆಕ್ ಪೊಸ್ಟ್ ನಲ್ಲಿ 1.95 ಲಕ್ಷ ರೂ. ಗಳನ್ನು ವಶಪಡಿಸಿಕೊಳ್ಳಲಾಗಿದೆ. ಕುಲಗೋಡಲ್ಲಿ 52 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಳ್ಳಲಾಗಿದೆ. ಸಂಕೇಶ್ವರ ಚೆಕ್ ಪೊಸ್ಟ್ ನಲ್ಲಿ 2.31 ಲಕ್ಷ ರೂ. ಮೌಲ್ಯದ 10 ಟನ್ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.
Read More »ಹುನ್ನೂರು ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 2.10 ಕೋಟಿ ರೂಪಾಯಿ ಹಣ ಜಪ್ತಿ
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ಬರೋಬ್ಬರಿ 2.10 ಕೋಟಿ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ. ಹುನ್ನೂರು ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಮುಧೋಳದಿಂದ ಅಥಣಿ ಕಡೆಗೆ ತೆರಳುತ್ತಿದ್ದ ಬೊಲೆರೊ ವಾಹನವನ್ನು ತಪಾಸಣೆ ನಡೆಸಿದಾಗ 2.10 ಕೋಟಿ ನಗದು ಹಣ ಪತ್ತೆಯಾಗಿದೆ. ಇಬ್ಬರನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಸಹಕಾರಿ ಬ್ಯಾಂಕ್ ಶಾಖೆಗೆ ಹಣ ಸಾಗಿಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ಆದರೆ ಹಣದ …
Read More »18 ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಕಾರ್ಯಕ್ಕೆ ಬಳಸಿಕೊಂಡಿದ್ದಲ್ಲಿ ಮೊಕದ್ದಮೆ
ಬೆಳಗಾವಿ: 2023-24ನೇ ಸಾಲೀನ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ. ಚುನಾವಣಾಧಿಕಾರಿಗಳ ನಿರ್ದೇಶನದ ಮೇರೆಗೆ ಬಾಲಕಾರ್ಮಿಕ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ 2016ರ ಅನ್ವಯ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷದವರು 18 ವರ್ಷದೊಳಗಿನ ಮಕ್ಕಳನ್ನು ಚುನಾವಣೆ ಕಾರ್ಯಕ್ಕೆ ಬಳಸಿಕೊಂಡಿದ್ದಲ್ಲಿ ಕಾಯ್ದೆಯ ಪ್ರಾವಧಾನಗಳಂತೆ ಸಕ್ಷಮ ಪ್ರಾಧಿಕಾರದಲ್ಲಿ ಮೊಕದ್ದಮೆಯನ್ನು ಹೂಡಿ ಶಿಕ್ಷೆಗೆ ಒಳಪಡಿಸಲಾಗುವುದು. ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮತ್ತು …
Read More »ಒಂದು ಕಡೆ ಸಫಾರಿ ಇನ್ನೊಂದು ಕಡೆ ಸುಪಾರಿ! ಇದು ಬಿಜೆಪಿಯ (ಭರ)ವರಸೆ ಎಂದು ಎಚ್ಡಿಕೆ ಆಕ್ರೋಶ
ಬೆಂಗಳೂರು: ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷ ಬಿಜೆಪಿಯ ಕೇಂದ್ರ ಮತ್ತು ರಾಜ್ಯ ರಾಜಕಾರಣವೇ ಅನುಮಾನಾಸ್ಪದವಾಗಿದೆ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು. ಇದು ಬಿಜೆಪಿಯ (ಭರ)ವರಸೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಕೆಂಡಕಾರಿದ್ದಾರೆ. ಇದೇ ನೋಡಿ ಅಸಲಿ ವರಸೆ ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ! ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ …
Read More »ಕೇಂದ್ರ ಬಿಜೆಪಿ ಸರ್ಕಾರದಿಂದ ಮತ್ತೆ ಕನ್ನಡಿಗರಿಗೆ ಉಂಡೆನಾಮ: ಮಾಜಿ ಸಿಎಂ ಎಚ್ಡಿಕೆ ಕಿಡಿ
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಮತ್ತೆ ಕನ್ನಡಿಗರಿಗೆ ಉಂಡೆನಾಮ ಹಾಕಿದೆ. ಭಾನುವಾರ ನಡೆದ ಕೇಂದ್ರೀಯ ಮೀಸಲು ಪಡೆ (ಸಿಆರ್ಪಿಎಫ್) ನೇಮಕದ ಕಂಪ್ಯೂಟರ್ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶವನ್ನೇ ಕೊಟ್ಟಿಲ್ಲ. ಹಿಂದಿ, ಇಂಗ್ಲಿಷ್ ಭಾಷೆಯಲ್ಲಷ್ಟೇ ಪರೀಕ್ಷೆಗೆ ಅವಕಾಶ ಕೊಡಲಾಗಿದೆ. ಇದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಸಂವಿಧಾನಕ್ಕೆ ಎಸಗಿದ ಅಪಚಾರ ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 9212 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ …
Read More »ಕಾಂಗ್ರೆಸ್ನ ಮೂರನೇ ಪಟ್ಟಿ ನಿರ್ಧಾರ ಮಾಡೋದು ಯಾರು? ಇಂದು ಸಂಜೆ ತಯಾರಿ
ಬೆಂಗಳೂರು: ಚುನಾವಣಾ ಕಣ ಇನ್ನಷ್ಟು ರಂಗೇರುತ್ತಿದ್ದು ಆಮ್ ಆದ್ಮಿ ಪಕ್ಷ ಇಂದು ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡಗಡೆ ಮಾಡಿದ್ದಾರೆ. ಅದಲ್ಲದೇ ಇಂದೇ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಲಿದೆ. ಇಂದು ಸಂಜೆ ದೆಹಲಿಯಲ್ಲಿ ಸಿಇಸಿ ಸಬ್ ಕಮಿಟಿ ಮೀಟಿಂಗ್ ನಡೆಸಲಿದ್ದು ಈ ಸಂದರ್ಭ ಕಾಂಗ್ರೆಸ್ನ ಮೂರನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಲಾಗುವುದು ಎನ್ನಲಾಗಿದೆ. ಈ ಬಾರಿ ಕಾಂಗ್ರೆಸ್ ಹೈಕಮಾಂಡ್ ಸಿಇಸಿ ಬಿಟ್ಟು ಸಬ್ ಕಮಿಟಿ ಮಾಡಿದೆ. ಸಿಇಸಿಯಲ್ಲಿ ಸದಸ್ಯರು …
Read More »