Breaking News

Daily Archives: ಏಪ್ರಿಲ್ 21, 2023

ಕಾಂಗ್ರೆಸ್ ಸಮುದ್ರ ಇದ್ದಂತೆ ಬಿಜೆಪಿಯಿಂದ ಹೊರ ಬಂದವರು ಕಾಂಗ್ರೆಸ್ ಸಮುದ್ರಕ್ಕೆ ಎಲ್ಲರೂ ಬಂದು ಸೇರಬೇಕು

ಬೆಂಗಳೂರು: ಕಾಂಗ್ರೆಸ್ ಸಮುದ್ರವಿದ್ದಂತೆ. ಬಿಜೆಪಿಯ ಅಣೆಕಟ್ಟು ಒಡೆದು ಹೋಗಿದ್ದು, ನದಿಯಾಗಿ ಹರಿಯುತ್ತಿರುವ ನೀರು ಕಾಂಗ್ರೆಸ್ ಎಂಬ ಸಮುದ್ರ ಸೇರಲೇಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟಾಂಗ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ ಅವರ ನಿವಾಸದಲ್ಲಿ ಲಿಂಗಾಯತ ನಾಯಕರ ಸಭೆ ಹಾಗೂ ಲಿಂಗಾಯತ ಸಿಎಂ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಆಣೆಕಟ್ಟು ಒಡೆದ ನಂತರ ನೀರನ್ನು ನಿಲ್ಲಿಸಲು ಸಾಧ್ಯವಿಲ್ಲ. ಈ ನೀರು ಸಮುದ್ರ ಸೇರಬೇಕು. ಕಾಂಗ್ರೆಸ್ ಸಮುದ್ರ ಇದ್ದಂತೆ …

Read More »

90 ಲಕ್ಷ ರೂ. ಖರ್ಚು ಮಾಡಿ ಕೊಂಡಿದ್ದಾರಂತೆ ! ಒಂದು ಹೊಂಡಾ ಆ್ಯಕ್ಟಿವಾ ಸ್ಕೂಟರ್

ಮಂಡ್ಯ: ಮಾರುಕಟ್ಟೆಯಲ್ಲಿ ಒಂದು ಹೊಂಡಾ ಆ್ಯಕ್ಟಿವಾ ಸ್ಕೂಟರ್ ಬೆಲೆ ಹೆಚ್ಚೆಂದರೆ 70- 80 ಸಾವಿರ ಇರಬಹುದು. ಆದರೆ ಇಲ್ಲೊಬ್ಬ ಕಾಂಗ್ರೆಸ್ ಅಭ್ಯರ್ಥಿ ಇದಕ್ಕೆ 90 ಲಕ್ಷ ರೂ. ಖರ್ಚು ಮಾಡಿ ಕೊಂಡಿದ್ದಾರಂತೆ ! “ಅದೆಂಥ ಸ್ಕೂಟರ್ ಇರಬಹುದು?, ಬೆಳ್ಳಿ ಬಂಗಾರದ ಲೇಪನವೇನಾದರೂ ಇದೆಯಾ?” ಅಂತ ಪ್ರತಿಯೊಬ್ಬರೂ ಪ್ರಶ್ನಿಸುವುದು ಸಾಮಾನ್ಯ. ಆದರೆ ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕದಲೂರು ಉದಯ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ವೇಳೆ ನೀಡಿದ …

Read More »

ರಂಜಾನ್‌ ಹಬ್ಬದ ಮೇಲೆ ʻಆರ್ಥಿಕತೆʼಯ ಕರಿನೆರಳು

ಇನ್ನೇನು ಕೆಲವೇ ದಿನಗಳಲ್ಲಿ ರಂಜಾನ್​​ ಹಬ್ಬ (Ramadan Festival) ಬರುತ್ತೆ. ಈ ಸಂದರ್ಭದಲ್ಲಿ ಮುಸ್ಲಿಂ (Muslim) ಬಾಂಧವರು ಸೇರಿಕೊಳಡು ಈ ಹಬ್ಬವನ್ನು ಆಚರಿಸುತ್ತಾರೆ. ಆದರೆ ಸಾಲದ ಸುಳಿ, ಆರ್ಥಿಕತೆಯಿಂದ ಕಂಗೆಟ್ಟಿರುವ ಪಾಕಿಸ್ತಾನದಲ್ಲಿ ರಂಜಾನ್‌ ಹಬ್ಬದ ಸಡಗರವೇ ಕಂಡು ಬರುತ್ತಿಲ್ಲ. ವಿಶ್ವದಾದ್ಯಂತ ಮುಸ್ಲಿಮರು ಪವಿತ್ರ ರಂಜಾನ್ ಮಾಸವನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ, ಪಾಪ ಪಾಕಿಸ್ತಾನ (Pakistan) ಮಾತ್ರ ಹಬ್ಬದ ಖುಷಿಯೇ ಇಲ್ಲದೇ ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸುತ್ತಿದೆ. ರಂಜಾನ್‌ ಹಬ್ಬದ ಮೇಲೆ ʻಆರ್ಥಿಕತೆʼಯ …

Read More »

ಬೆಂಗಳೂರು-ಸೇಲಂ ಮಾರ್ಗದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: 12 ರೈಲುಗಳ ಓಡಾಟದಲ್ಲಿ ವ್ಯತ್ಯಯ

ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವಂತೆ ಮಾಡಿದೆ. ಬೆಂಗಳೂರು: ಮಧುರೈ ವಿಭಾಗದ ಮಲವಿಟ್ಟನ್ ರೈಲು ನಿಲ್ದಾಣದಿಂದ ಹಾವೇರಿ ನಿಲ್ದಾಣದವರೆಗೆ 2408 ಟನ್ ರಸಗೊಬ್ಬರದ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಲೋಡ್ ಗೂಡ್ಸ್ ರೈಲಿನ 6 ಬೋಗಿಗಳು ಹಳಿ ತಪ್ಪಿದ್ದು, ಪರಿಣಾಮ 12 ರೈಲುಗಳ ಓಡಾಟದಲ್ಲಿ …

Read More »

ಈ ಬಾರಿ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಸಮವಾಗಲಿದೆ:B.S.Y.

ಬೆಂಗಳೂರು: ಈ ಬಾರಿ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಸಮವಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಈ ಚುನಾವಣೆಯಲ್ಲಿ ಬಿಜೆಪಿ 135-140 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು. ನಾಳೆ ಅಥವಾ ನಾಡಿದ್ದು ನಮ್ಮ ಪ್ರಚಾರ ಕಾರ್ಯ ಆರಂಭವಾಗಲಿದೆ. ರಾಜ್ಯದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ ಚುನಾವಣ ಅಪ್ರಚಾರ ನಡೆಸಲಿದ್ದಾರೆ. ಪಕ್ಷದ ಸಿದ್ಧಾಂತ ಒಪ್ಪಿ ಬಂದವರಿಗೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದರು.

Read More »

ಅಕ್ರಮವಾಗಿ ಸಾಗಾಟವಾಗುತ್ತಿದ್ದ6.93 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ, ಪೂಜಾ ಪರಿಕರಗಳು ವಶ

ಹಾವೇರಿ: ನಗರ ಹೊರವಲಯದ ಅಜ್ಜಯ್ಯನ ಪ್ರದೇಶದ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಆಭರಣಗಳು, ಪೂಜಾ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಹುಬ್ಬಳ್ಳಿಯಿಂದ ದಾವಣಗೆರೆಯತ್ತ ಸಾಗುತ್ತಿದ್ದ ವಾಹನ ತಡೆದು ಪರಿಶೀಲಿಸಿದಾಗ 11 ಕೆಜಿ ಚಿನ್ನ, 74 ಕೆಜಿ ಬೆಳ್ಳಿ ಹಾಗೂ ತಟ್ಟೆ, ಲೋಟ, ಪೂಜಾ ಪರಿಕರಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ಇವುಗಳ ಮೊತ್ತ 6.93 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಇವುಗಳ ಸಾಗಾಟ ಮಾಡುತ್ತಿದ್ದವರು ಯಾವುದೇ ಪರವಾನಗಿ …

Read More »

ಕೋರ್ಟ್ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಶುಕ್ರವಾರ ಗುಂಡಿನ ದಾಳಿ ನಡೆದಿದೆ.

ಹೊಸದಿಲ್ಲಿ: ದೆಹಲಿಯ ಸಾಕೇತ್ ಕೋರ್ಟ್ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಶುಕ್ರವಾರ ಗುಂಡಿನ ದಾಳಿ ನಡೆದಿದೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆಗೆ ಆಗಮಿಸಿದ್ದ ಮಹಿಳೆ ಮೇಲೆ ವಕಿಲರ ದಿರಿಸಿನಲ್ಲಿ ಬಂದ ವ್ಯಕ್ತಿಯೊಬ್ಬ ನಾಲ್ಕು ಸುತ್ತು ಗುಂಡು ಹಾರಿಸಿದ್ದಾನೆ. ಅಪಾರ ಸಂಖ್ಯೆಯಲ್ಲಿದ್ದ ವಕಿಲರು, ಕಕ್ಷಿದಾರರ ಸಮ್ಮುಖದಲ್ಲೇ ಈ ಘಟನೆ ನಡೆದಿದೆ. ಹೊಟ್ಟೆಗೆ ಗುಂಡು ತಗುಲಿ ನರಳುತ್ತಿದ್ದ ಮಹಿಳೆಯನ್ನು ಕೋರ್ಟ್ ಆವರಣದಲ್ಲಿದ್ದ ಜನರು ಹಾಗೂ ಪೊಲೀಸರು ಸೇರಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಸಾಗಿಸಿದರು. ಕೌಟುಂಬಿಕ …

Read More »

ಕೆಎಲ್ಎಸ್ ಜಿಐಟಿಯ  17 ಪ್ರಾಜೆಕ್ಟ್ ಗಳಿಗೆ ಕರ್ನಾಟಕ ಸರಕಾರದಿಂದ ಸುಮಾರು 85,000 ರೂ ಗಳ ಸಹಾಯ ಧನ ದೊರಕಿದೆ.

ಬೆಳಗಾವಿ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ (ಕೆಎಸ್ ಸಿಎಸ್ ಟಿ) 46 ನೆಯ ಸರಣಿಯ ವಿದ್ಯಾರ್ಥಿ ಪ್ರಾಜೆಕ್ಟ್ ಪ್ರೋಗ್ರಾಮ್ 2022-23 ಅಡಿಯಲ್ಲಿ,  ಕೆಎಲ್ಎಸ್ ಜಿಐಟಿಯ  17 ಪ್ರಾಜೆಕ್ಟ್ ಗಳಿಗೆ ಕರ್ನಾಟಕ ಸರಕಾರದಿಂದ ಸುಮಾರು 85,000 ರೂ ಗಳ ಸಹಾಯ ಧನ ದೊರಕಿದೆ. ಸಿವಿಲ್ ವಿಭಾಗದ  ಡಾ. ನಿತೇಂದ್ರ ಪಾಲನಕರ್ ಮಾರ್ಗದರ್ಶನದಲ್ಲಿ ನೆಲದ ಹಾಸು ತಯಾರಿಕೆಯಲ್ಲಿ ಮಿಶ್ರಣ ಕಾಂಕ್ರೀಟ್ ಬಳಕೆ , ಪ್ರೊ. ಶಶಾಂಕ್ ಸಿ. ಬಂಗಿ ಮತ್ತು ಡಾ. …

Read More »

ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ ಹೈಕೋರ್ಟ್

ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬೆಂಗಳೂರು: ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ಬಿ) ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಿಜೆಪಿ …

Read More »

ವಾಹನ ಖರೀದಿಯಲ್ಲಿ ಅವ್ಯವಹಾರ: ತನಿಖೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಆಪ್ ಆಗ್ರಹ

ಬಿಬಿಎಂಪಿಯ 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್ ಆದ್ಮಿ ಪಕ್ಷ ಗುರುವಾರ ಆಗ್ರಹಿಸಿದೆ. ಬೆಂಗಳೂರು: ಬಿಬಿಎಂಪಿಯ 166 ಹುದ್ದೆಗಳ ವಾಹನ ಖರೀದಿಯಲ್ಲಿ ಅಕ್ರಮವಾಗಿದ್ದು, ಈ ಬಗ್ಗೆ ಚುನಾವಣಾ ಆಯೋಗ ಸೂಕ್ತ ತನಿಖೆ ನಡೆಸಬೇಕೆಂದು ಆಮ್ ಆದ್ಮಿ ಪಕ್ಷ ಗುರುವಾರ ಆಗ್ರಹಿಸಿದೆ. ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್ …

Read More »