Breaking News

Daily Archives: ಏಪ್ರಿಲ್ 21, 2023

ಮಹದಾಯಿಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಆಗಬೇಕಾಗಿದ್ದ ಯೋಜನೆಯೊಂದು 47 ವರ್ಷಗಳಿಂದಲೂ ಕಡತಗಳಲ್ಲಿಯೇ ಉಸಿರಾಡುತ್ತಿದೆ.

ಹುಬ್ಬಳ್ಳಿ: ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಆಗಬೇಕಾಗಿದ್ದ ಯೋಜನೆಯೊಂದು 47 ವರ್ಷಗಳಿಂದಲೂ ಕಡತಗಳಲ್ಲಿಯೇ ಉಸಿರಾಡುತ್ತಿದೆ. ಧಾರವಾಡ, ಬೆಳಗಾವಿ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ನೂರಾರು ಗ್ರಾಮಗಳಲ್ಲಿ ಎರಡು ತಲೆಮಾರುಗಳೇ ದಾಟಿ ಹೋಗಿವೆ. ಆದರೂ ಮಹದಾಯಿಯ ನೀರು ಸಿಕ್ಕಿಯೇ ಇಲ್ಲ. 2002ರಲ್ಲಿ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಯ ಹೆಸರಿನಲ್ಲಿ ಆಗಿನ ನೀರಾವರಿ ಸಚಿವ ಎಚ್‌.ಕೆ. ಪಾಟೀಲರು ಈ ಯೋಜನೆಗೆ ಮರುಜೀವ ಕೊಟ್ಟರು. ಆ ಬಳಿಕ ಕುಡಿಯುವ ನೀರಿನ ಸಮಸ್ಯೆಯೊಂದು ರಾಜಕೀಯ ಪಕ್ಷಗಳಿಗೆ ಮತ …

Read More »

ಟಿಕೆಟ್‌ ವಂಚಿತರಿಗೆ ಸರ್ಕಾರದಲ್ಲಿ ಸ್ಥಾನಮಾನ: ಸುರ್ಜೇವಾಲಾ

ಸಿಂಧನೂರು (ರಾಯಚೂರು ಜಿಲ್ಲೆ): ‘ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ವಂಚಿತರಿಗೆ ಮುಂದಿನ ಲೋಕಸಭಾ ಚುನಾವಣೆ ಹಾಗೂ ಸರ್ಕಾರದಲ್ಲಿ ಮಹತ್ವದ ಸ್ಥಾನಗಳು ಸಿಗಲಿವೆ’ ಎಂದು ಕಾಂಗ್ರೆಸ್‌ ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್‍ಸಿಂಗ್ ಸುರ್ಜೇವಾಲಾ ತಿಳಿಸಿದರು.   ಸಿಂಧನೂರು ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ ಕೆಪಿಸಿಸಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸನಗೌಡ ಬಾದರ್ಲಿ ಅವರ ಮನವೊಲಿಕೆ ಮಾಡಿದ ಬಳಿಕ ಮಾತನಾಡಿದ ಅವರು, ‘ಬಾದರ್ಲಿ ಅವರಿಗೆ ಇನ್ನೂ 8 ತಿಂಗಳಲ್ಲಿ ಬರುವ ಲೋಕಸಭೆ …

Read More »

ನನ್ನ ಆಸ್ತಿ ಪಟ್ಟಿ 5 ಸಾವಿರ ಜನರಿಂದ ಡೌನ್‌ಲೋಡ್‌: ಡಿಕೆಶಿ

ಮಂಡ್ಯ: ‘ನಾನು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಆಸ್ತಿ ಪಟ್ಟಿಯನ್ನು 5 ಸಾವಿರ ಜನರು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಇದರಲ್ಲಿ ಬಿಜೆಪಿ ಮುಖಂಡರ ಕುತಂತ್ರ ರಾಜಕಾರಣ ಅಡಗಿದೆ. ರಾಜಕೀಯ ಲೆಕ್ಕಾಚಾರದ ಕಾರಣಕ್ಕೆ ಕನಕಪುರ ವಿಧಾನಸಭಾ ಕ್ಷೇತ್ರಕ್ಕೆ ಡಿ.ಕೆ.ಸುರೇಶ್‌ ಅವರೂ ನಾಮಪತ್ರ ಸಲ್ಲಿಸಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಗುರುವಾರ ಹೇಳಿದರು.   ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಸುರೇಶ್‌ ನಾಮಪತ್ರ ಸಲ್ಲಿಕೆ ಆತುರದ ನಿರ್ಧಾರವಲ್ಲ, ಇಲ್ಲಿ ನಮ್ಮ ತಂತ್ರವೂ ಇದೆ. ಈಗಲೇ ನಾನು ಆ …

Read More »