Breaking News

Monthly Archives: ಏಪ್ರಿಲ್ 2023

ತಮ್ಮ ಕ್ಷೇತ್ರದ ಜನರಿಗೆ ಬಾಂಡ್‌ ಪೇಪರ್ ವಿತರಿಸಿದ ಅಭ್ಯರ್ಥಿ

ಬೆಂಗಳೂರು : ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾದ ಅಶ್ವತ್‌ ಕುಮಾರ್‌ ತಮ್ಮ ಕ್ಷೇತ್ರದ ಮತದಾರರಿಗೆ ಪ್ರಚಾರದ ಕರಪತ್ರ ಹಂಚುವ ಬದಲು ಬಾಂಡ್‌ ಪೇಪರ್‌ ಹಂಚುತ್ತಿದ್ದಾರೆ. ಈ ಮೂಲಕ ತಮ್ಮನ್ನ ಆಯ್ಕೆ ಮಾಡಿದ್ರೆ ನಿಮಗೆ ನಾನೇನು ಮಾಡಿಕೊಡ್ತೇನೆ ಅನ್ನೋದನ್ನ ಬಾಂಡ್‌ ಪೇಪರ್‌ನಲ್ಲಿ ಮುದ್ರಿಸಿ ಅದ್ರಲ್ಲಿ ತಮ್ಮ ಸಹಿ ಹಾಕಿ ಎಲ್ಲರಿಗೂ ವಿತರಿಸುತ್ತಿದ್ದಾರೆ. ಅಲ್ಲದೇ ಇದಕ್ಕೆ ತಪ್ಪಿ ನಡೆದ್ರೆ ಮತದಾರರು ಪಕ್ಷದ ವರಿಷ್ಠರಿಗೆ ದೂರು ನೀಡಬಹುದು. ಶಿಸ್ತುಕ್ರಮಕ್ಕೆ ಬದ್ಧನಾಗಿದ್ದು, …

Read More »

65 ಲಕ್ಷ ರೂಪಾಯಿ ವಶಪಡಿಸಿಕೊಂಡ ಪೊಲೀಸ್​​​​ ಅಧಿಕಾರಿಗಳು

ಗೋಕಾಕ : ಕೆಎಸ್‌ಆರ್​ಟಿಸಿ ಬಸ್​ನಲ್ಲಿ ಯಾವುದೇ ದಾಖಲೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಹಣವನ್ನು ಪೊಲೀಸ್​​​​ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ರಾತ್ರಿ ನಡೆದಿದೆ   ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಪರಾನಟ್ಟಿ ಚಕ್ ಪೋಸ್ಟ್​ನಲ್ಲಿ ದಾಖಲೆ ಇಲ್ಲದ 65 ಲಕ್ಷ ರೂಪಾಯಿ ಹಣವನ್ನು ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕೆಎಸ್‌ಆರ್​ಟಿಸಿ ಬಸ್ ಬೆಳಗಾವಿಯಿಂದ ಔರಾದಗೆ ತೆರಳುತ್ತಿದ್ದ ಬಸ್ಸಿನಲ್ಲಿ ಈ ಹಣ ಪತ್ತೆಯಾಗಿದೆ.ಚುನಾವಣಾ ಪೊಲೀಸ್​ ಅಧಿಕಾರಿಗಳು ಬಸ್ ತಪಾಸಣೆ …

Read More »

ಕೊಲೆ ಮಾಡಿದ್ದ ವಿಧಾನಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿ ಅರೆಸ್ಟ್

ತುಮಕೂರು: ವಿಧಾನಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರಿತ್ತಿದ್ದು,ಪಕ್ಷೇತರ ಅಭ್ಯರ್ಥಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ತುರುವೆಕೆರೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಾರಾಯಣ ಅಲಿಯಾಸ್ ಕರಿಯಾನನ್ನು ಕೊಲೆ ಪ್ರಕರಣದಡಿ ಪೊಲೀಸರು ಬಂಧಿಸಿದ್ದಾರೆ. ಲಗ್ಗೆರೆಯಲ್ಲಿ ಕೊಡವತ್ತಿ ಮೂಲದ ಭೂಮಿಕಾ ಎಂಬಾಕೆಯನ್ನು ಪ್ರೀತಿಸಿ ಮದುವೆಯಾಗಿದ್ದ ಚೇತನ್ ಎಂಬಾತನ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ನಾರಾಯಣ ಎ6 ಆರೋಪಿಯಾಗಿದ್ದ. ಭೂಮಿಕಾ ಸಹೋದರ ಮತ್ತು ಇತರರು ಸೇರಿ ಚೇತನ್ ನನ್ನು 2021ರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ …

Read More »

ನಾಮಪತ್ರ ವಾಪಸ್ ಪಡೆದವರು ಪಕ್ಷೇತರ ಅಭ್ಯರ್ಥಿ ಲಕ್ಷ್ಮೀ ಮನೋಹರ್ ಹೆಬ್ಬಾಳಕರ್

ಬೆಳಗಾವಿ  ಗ್ರಾಮೀಣ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳಕರ್ ನಾಮಪತ್ರ ವಾಪಸ್ ಪಡೆದಿದ್ದಾರೆ ಎನ್ನುವ ಸುದ್ದಿ ಹರಡಲಾಗುತ್ತಿದೆ. ಆದರೆ ಇಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಲಕ್ಷ್ಮೀ ಮನೋಹರ ಹೆಬ್ಬಾಳಕರ್ ಎನ್ನುವವರು ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ರವೀಂದ್ರ ಹೆಬ್ಬಾಳಕರ್ ಕಣದಿಂದ ಹಿಂದೆ ಸರಿದಿಲ್ಲ. ಜನರ ದಿಕ್ಕು ತಪ್ಪಿಸಲೆಂದೇ ಕೆಲವರು ಕಂಗ್ರಾಳಿಯ ಲಕ್ಷ್ಮೀ ಮನೋಹರ ಹೆಬ್ಬಾಳಕರ್ ಎನ್ನುವವರಿಂದ ನಾಮಪತ್ರ ಹಾಕಿಸಿದ್ದರು. ಆದರೆ ನಾಮಪತ್ರ ವಾಪಸ್ ಪಡೆಯುವ ಕೊನೆಯ ದಿನ ಅವರು ನಾಮಪತ್ರ ವಾಪಸ್ …

Read More »

ಸವದಿ, ಶೆಟ್ಟರ್ ಕಾಂಗ್ರೆಸ್ ಗೆ ಹೋಗಿರೋದು ಬಿಜೆಪಿ ಗೆ ಒಳಿತಾಗಲಿದೆ

ದಾವಣಗೆರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿರುವುದಕ್ಕೆ ಧನ್ಯವಾದಗಳನ್ನು ಹೇಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌. ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು ತಾರಾ ಪ್ರಚಾರಕರಾಗಿ ಆಗಮಿಸುತ್ತಿದ್ದಾರೆ ಎಂದರು. ಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ‌. ಹಿಂದೆಯೂ ಹೈಕಮಾಂಡ್ ತೀರ್ಮಾನ ಮಾಡಿದ್ದು, ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು. ವರಿಷ್ಠರು …

Read More »

18 ಕ್ಷೇತ್ರಕ್ಕೆ 185 ಅಭ್ಯರ್ಥಿಗಳು; ಬೆಳಗಾವಿ ಉತ್ತರದಲ್ಲಿ ಹೆಚ್ಚು, ಯಮಕನಮರಡಿಯಲ್ಲಿ ಕಡಿಮೆ

ಬೆಳಗಾವಿ: ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ನಾಮಪತ್ರಗಳನ್ನು ಹಿಂದಕ್ಕೆ ಪಡೆಯುವ ಸಮಯ ಮುಕ್ತಾಯವಾಗಿದ್ದು ಅಂತಿಮ ಕಣ ಸ್ಪಷ್ಟವಾಗಿದೆ. ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳಿಗೆ 185 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟೂ 47 ಜನರು ತಮ್ಮ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಎಲ್ಲ 18 ಕ್ಷೇತ್ರಗಳಿಗೂ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಆಪ್ 15 ಹಾಗೂ ಜೆಡಿಎಸ್ 16 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿವೆ. ಇತರ ರಾಜಕೀಯ ಪಕ್ಷಗಳು 43 ಹಾಗೂ …

Read More »

ಫುಟ್‌ಪಾತ್‌ನಲ್ಲಿ ಮಲಗಿರುವ ಕುಸ್ತಿಪಟುಗಳು

ಹೊಸದಿಲ್ಲಿ: ಭಾರತದ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಸಿಡಿದೆದ್ದು ಪ್ರತಿಭಟನೆಗಿಳಿದಿರುವ ಕುಸ್ತಿಪಟುಗಳು ದೆಹಲಿಯ ಫುಟ್‌ಪಾತ್‌ನಲ್ಲಿ ಮಲಗಿರುವ ದೃಷ್ಯ ಎಲ್ಲೆಡೆ ಗಮನ ಸೆಳೆದಿದೆ. ಪ್ರತಿಭಟನಾಕಾರ ಕುಸ್ತಿಪಟುಗಳು ಚಾದರ ಹೊದ್ದುಕೊಂಡು ಫುಟ್‌ಪಾತ್‌ನಲ್ಲಿ ಮಲಗಿರುವ ಫೋಟೊಗಳನ್ನು ಭಾರತದ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ವಿನೇಶ್ ಫೋಗಟ್ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪ್ರತಿಭಟನಾನಿರತ ಕುಸ್ತಿಪಟುಗಳು ಬ್ರಿಜ್ ಭೂಷಣ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪಗಳ ತನಿಖೆಯ ವಿವರಗಳನ್ನು ಕೇಳುತ್ತಿದ್ದಾರೆ. ಇದಕ್ಕಾಗಿ ಪ್ರತಿಭಟನೆಗಿಳಿದಿರುವ ಕುಸ್ತಿಪಟುಗಳು ಅನಿರ್ದಿಷ್ಟಾವಧಿ …

Read More »

ಕಣ್ಮುಚ್ಚಿ ಕುಳಿತ ಅಧಿಕಾರಿಗಳು : ತುಮ್ಮರಗುದ್ದಿಯಲ್ಲಿ ರಾರಾಜಿಸುತ್ತಿದೆ ಹೆಬ್ಬಾಳ್ಕರ್ ಭಾವಚಿತ್ರ !

ಬೆಳಗಾವಿ :ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇದೀಗ ತುಸು ಜೋರಾಗಿದೆ. ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಬಿಗು ಚುನಾವಣೆ ನೀತಿ ಸಂಹಿತೆಯನ್ನು ಜಾರಿಗೊಳಿಸಿದೆ. ಆದರೆ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಚುನಾವಣೆಯ ನೀತಿ ಸಂಹಿತೆ ಅನ್ವಯವಾಗುವುದಿಲ್ಲವೋ ಎಂಬ ಪ್ರಶ್ನೆ ಮೂಡಿದೆ. ಯಾಕೆಂದರೆ ಲೋಕೋಪಯೋಗಿ ಇಲಾಖೆ ವತಿಯಿಂದ ತುಮ್ಮರಗುದ್ದಿ ಗ್ರಾಮದಲ್ಲಿ ಕೈಗೊಂಡಿರುವ ಕಾಮಗಾರಿಯ ಒಟ್ಟು ಖರ್ಚು ವೆಚ್ಚ ಕುರಿತ ಬೃಹತ್ ಫಲಕ ಇನ್ನೂ ತೆರವುಗೊಳಿಸಿಲ್ಲ. …

Read More »

ನಾಳೆ, ನಾಡಿದ್ದು ರಾಜ್ಯಕ್ಕೆ 98 ರಾಷ್ಟ್ರೀಯ ನಾಯಕರು

ಬೆಳಗಾವಿ: ಬಿಜೆಪಿ ಕಾರ್ಯಕರ್ತರಿಂದಲೇ ಕಟ್ಟಿರುವ ದೊಡ್ಡ ಪಕ್ಷ. ಕರ್ನಾಟಕ ರಾಜ್ಯದ 224 ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ನಡೆಸುತ್ತಿದ್ದಾರೆ. ಏ.25 ಮತ್ತು 26 ರಂದು ವಿಶೇಷ ಮಹಾ ಅಭಿಯಾನವನ್ನು ಬಿಜೆಪಿ ಕೈಗೊಂಡಿದೆ ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಜೀರಲಿ ಹೇಳಿದರು. ಸೋಮವಾರ ಬಿಜೆಪಿ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವಿಶೇಷ ಮಹಾ ಅಭಿಯಾನವು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್ ಕಟೀಲ ನೇತೃತ್ವದಲ್ಲಿ …

Read More »

ಗೋಕಾಕ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್

ಗೋಕಾಕ: ಗೋಕಾಕ ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಚಂದನಕುಮಾರ ಗಿಡ್ನವರ್ ಹಾಗೂ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ಪ್ರಕಾಶ ಮಹಾದೇವ ಭಾಗೋಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಸೋಮವಾರ ಅವರು ಚುನಾವಣಾಧಿಕಾರಿಗೆ ನಾಮಪತ್ರ ವಾಪಸ್ ಪಡೆಯುವ ಪತ್ರ ಸಲ್ಲಿಸಿದ್ದಾರೆ. ಇದರಿಂದಾಗಿ ಗೋಕಾಕ ಕ್ಷೇತ್ರ ಮತ್ತಷ್ಟು ಕುತೂಹಲಕರ ಕಣವಾಗಿ ಮಾರ್ಪಟ್ಟಿದೆ. ಬಿಜೆಪಿಯ ರಮೇಶ ಜಾರಕಿಹೊಳಿ ಮತ್ತು ಕಾಂಗ್ರೆಸ್ ನ ಮಹಾಂತೇಶ …

Read More »