Breaking News

Monthly Archives: ಏಪ್ರಿಲ್ 2023

ಚುನಾವಣಾ ಕಣ: ಬದಲಾದ ಚಿತ್ರಣ

ಬೆಂಗಳೂರು: ಮೇ 10ರಂದು ನಡೆಯ ಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆದಿನ ವಾಗಿದ್ದು, ಬುಧವಾರ 1,110 ನಾಮ ಪತ್ರಗಳು ಸಲ್ಲಿಕೆಯಾಗಿವೆ. 935 ಅಭ್ಯರ್ಥಿಗಳು ತಮ್ಮ ಶಕ್ತಿಪ್ರದರ್ಶನಕ್ಕೆ ಸಾವಿರಾರು ಜನರನ್ನು ಸೇರಿಸಿದ್ದರಿಂದಾಗಿ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು.   ಚುನಾವಣೆಯಲ್ಲಿ ಗೆಲ್ಲುವುದೊಂದನ್ನೇ ಎಲ್ಲ ರಾಜಕೀಯ ಪಕ್ಷಗಳು ಮಾನದಂಡವಾಗಿ ಇಟ್ಟುಕೊಂಡಿದ್ದ ರಿಂದಾಗಿ ನಾಮಪತ್ರ ಸಲ್ಲಿಕೆಗೆ ಒಂದು ದಿನ ಬಾಕಿ ಇರುವವರೆಗೂ ಆಕಾಂಕ್ಷಿಗಳು ಅಲ್ಲಿಂದಿಲ್ಲಿಗೆ ಜಿಗಿತವನ್ನು ನಡೆಸುತ್ತಲೇ ಇದ್ದರು. ಕೊನೆವರೆಗೂ …

Read More »

ಹೈಕೋರ್ಟ್‌ಗೆ ಬೇಸಿಗೆ ರಜೆ 24ರಿಂದ

ಬೆಂಗಳೂರು: ಹೈಕೋರ್ಟ್‌ಗೆ ಇದೇ 24ರಿಂದ ಮೇ 20ರವರೆಗೆ ಬೇಸಿಗೆ ರಜೆ ಇರಲಿದೆ. ತುರ್ತು ಪ್ರಕರಣಗಳ ವಿಚಾರಣೆ ನಡೆಸಲು ಬೆಂಗಳೂರಿನ ಪ್ರಧಾನ ಪೀಠ, ಧಾರವಾಡ ಮತ್ತು ಕಲಬುರಗಿಯಲ್ಲಿ ವಿಭಾಗೀಯ ಮತ್ತು ಏಕಸದಸ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ರಜಾಕಾಲೀನ ಪೀಠಗಳನ್ನು ರಚಿಸಲಾಗಿದೆ.   ‘ತಡೆಯಾಜ್ಞೆ, ಮಧ್ಯಂತರ ನಿರ್ದೇ ಶನ ಮತ್ತು ತಾತ್ಕಾಲಿಕ ಪ್ರತಿಬಂಧಕ ಆದೇಶ ಸೇರಿದಂತೆ ತುರ್ತು ಪ್ರಕರಣಗಳ ವಿಚಾರಣೆಯನ್ನು ಮಾತ್ರ ರಜಾಕಾಲೀನ ಅವಧಿಯಲ್ಲಿ ನಡೆಸಲಾಗುತ್ತದೆ. ಮೇಲ್ಮನವಿ, ಕ್ರಿಮಿನಲ್ ಮೇಲ್ಮನವಿ, ಕ್ರಿಮಿನಲ್ ಅರ್ಜಿ, ಸಿವಿಲ್ …

Read More »

ಪಂಚಾಯತಿಗೆ ಬೇಲಿ ಹಚ್ಚಿ ಪ್ರತಿಭಟಿಸಿದಸುರೇಬಾನ ಗ್ರಾಮಸ್ಥರು

ಸುರೇಬಾನ: ನಮ್ಮ ಮನೆಗಳಿಗೆ ಹೋಗಿ ಬರಲು ದಾರಿ ಇಲ್ಲ ಎಂದು ಕಿತ್ತೂರ ಗ್ರಾಮದ ಪ್ಲಾಟ್ ನಿವಾಸಿಗಳು ಗ್ರಾಮ ಪಂಚಾಯತಿಗೆ ಬೇಲಿ ಹಚ್ಚಿ ಪ್ರತಿಭಟನೆ ಮಾಡಿದ ಘಟನೆ ಬುಧವಾರ ನಡೆದಿದೆ. ಕಳೆದ ಹಲವಾರು ದಿನಗಳಿಂದ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ, ಸದಸ್ಯರಿಗೆ ಹಾಗೂ ಪಿಡಿಓಗೆ ನಮಗಾಗುವ ತೊಂದರೆಗಳ ಕುರಿತು ಮನವಿ ಮಾಡಿಕೊಂಡರು ಅವರು ಕ್ಯಾರೆ ಎನ್ನುತ್ತಿಲ್ಲ ಎಂದು ರೊಚ್ಚಿಗೆದ್ದ ಗ್ರಾಮಸ್ಥರು ಗ್ರಾಮ ಪಂಚಾಯತಿಗೆ ಬೇಲಿ ಹಚ್ಚಿ ಪ್ರತಿಭಟಿಸಿದರು. ತಮ್ಮ ನಿತ್ಯದ ಕಾರ್ಯ ಕಲಾಪಗಳಿಗೆ ಹೋಗಿ …

Read More »

ಬಿಜೆಪಿ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಿಸಿದೆ.

ಬೆಂಗಳೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ನಾಯಕರ ಅಬ್ಬರದ ಪ್ರಚಾರ ಆರಂಭವಾಗಿದ್ದು, ಬಿಜೆಪಿ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಕೂಡ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಿಸಿದೆ. ಕಾಂಗ್ರೆಸ್ ನ 40 ನಾಯಕರ ಹೆಸರನ್ನು ತಾರಾ ಪ್ರಚಾರಕರನ್ನಾಗಿ ಘೋಷಿಸಲಾಗಿದೆ. ಕೆಲ ವರ್ಷಗಳಿಂದ ರಾಜಕೀಯದಿಂದಲೇ ದೂರ ಉಳಿದಿದ್ದ ನಟಿ ರಮ್ಯಾ ಅವರಿಗೂ ಸ್ಟಾರ್ ಪ್ರಚಾರಕರ ಸ್ಥಾನ ನೀಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ …

Read More »

ತನ್ನ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ B.J.P.

ನವದೆಹಲಿ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ತನ್ನ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಗುರುವಾರ ನಾಮಪತ್ರ ಸಲ್ಲಿಸುವ ಕೊನೆಯ ದಿನ. ಹಾಗಾಗಿ ಬುಧವಾರ ರಾತ್ರಿ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗಕ್ಕೆ ಚನ್ನಬಸಪ್ಪ ಮತ್ತು ಮಾನ್ವಿಗೆ ಮಾಜಿ ಸಂಸದ ಬಿ.ವಿ.ನಾಯಕ ಅವರನ್ನು ಕಣಕ್ಕಿಳಿಸಲಾಗಿದೆ. ಶಿವಮೊಗ್ಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಕ್ಷೇತ್ರ. ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಅವರು ಚುನಾವಣೆ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದರು.

Read More »

ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಡೆಲ್​ಗಳು ಸಿಕ್ಕಿ ಬಿದ್ದಿದ್ದಾರೆ.

 ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಕಿರುತೆರೆ ನಟಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಆರತಿ ಹರೀಶ್​ಚಂದ್ರ ಮಿತ್ತಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆರತಿ ಹರೀಶ್​ಚಂದ್ರ ಮಿತ್ತಲ್ ಮಾಡೆಲ್​​ಗಳನ್ನು ಬಳಕೆ ಮಾಡಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದು, ಈ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಅಪ್ನಾಪನ್’ ಸೇರಿ ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದ ಆರತಿ ಮುಂಬೈನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದಾರೆ ಎಂಬ ಆರೋಪವಿತ್ತು. ಹೀಗಾಗಿ ಮಾರುವೇಷದಲ್ಲಿ ಹೋದ ಪೊಲೀಸರು ತಾವು ಗ್ರಾಹಕರು ಎಂದು …

Read More »

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ …

Read More »

ಸವದತ್ತಿ ಜೆಡಿಎಸ್ ಅಭ್ಯರ್ಥಿ ಹೆಸರಿನಲ್ಲಿರುವ 42.92 ಲಕ್ಷ ರೂ. ಮೊತ್ತದ ಪರಿಕರಗಳು ವಶಕ್ಕೆ

ಸವದತ್ತಿ: ಗೋದಾಮೊಂದರ ಮೇಲೆ ದಾಳಿ ನಡೆಸಿರುವ ಎಫ್‌ಎಸ್‌ಟಿ ಪೊಲೀಸ್ ಮತ್ತು ಜಿಎಸ್‌ಟಿ ಅಧಿಕಾರಿ ತಂಡ ಸವದತ್ತಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೌರಭ ಆನಂದ ಚೋಪ್ರಾ ಅವರ ಹೆಸರಿನಲ್ಲಿ ಮತದಾರರಿಗೆ ಹಂಚಲು ದಾಸ್ತಾನು ಮಾಡಿದ್ದ ಅಪಾರ ಪ್ರಮಾಣದ ಹೊಲಿಗೆ ಯಂತ್ರಗಳು, ಕಬ್ಬಿಣದ ಸ್ಟ್ಯಾಂಡ್ ಹಾಗೂ ಟಿಫಿನ್ ಬಾಕ್ಸ್ ಗಳನ್ನು ವಶಪಡಿಸಿಕೊಂಡಿದೆ.                     ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ …

Read More »

ಅರಭಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು

ಗೋಕಾಕ: ಗೋಕಾಕ ನಲ್ಲಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಾಮ ನಿರ್ದೇಶನ ಮಾಡಿದ್ದಾರೆ. ವಿಧಾನಸಭಾ ಚುನಾವಣೆ 2023ರ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿ ಬಾಲಚಂದ್ರ ಜಾರಕಿಹೊಳಿ ಅವರು ಇಂದು ನಾಮ ಪತ್ರ ಸಲ್ಲಿಸಿ ಚುನಾವಣೆ ಅಖಾಡಕ್ಕೆ ತಯಾರಾಗಿದ್ದಾರೆ [ಅರಭಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಗಿ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು

Read More »

ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಆಯನೂರು ಮಂಜುನಾಥ್ ರಾಜೀನಾಮೆ

ಶಿವಮೊಗ್ಗ: ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಆಯನೂರು ಮಂಜುನಾಥ್ ರಾಜೀನಾಮೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆಯನೂರು ಮಂಜುನಾಥ್, ಪರಿಷ ಸದಸ್ಯ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ತಿಳಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದು, ವಿಧಾನಸಭೆಗೆ ಹೋಗಬೇಕು ಎಂದಿದ್ದೇನೆ. ಆದರೆ ಯಾವಪಕ್ಷದಿಂದ ಸ್ಪರ್ಧೆ ಎಂಬುದನ್ನು ನಾಳೆ ಹೆಳುತ್ತೆನೆ ಎಂದರು. ಇದೇ ವೇಳೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ವಾಗ್ದಾಳಿ ನದೆಸಿದ ಆಯನೂರು ಮಂಜುನಾಥ್, ಮನಸ್ಸಿಗೆ ಬಂದಂತೆ ಮಾತನಾಡುವ ಬಾಯಿಗೆ ಹೊಲಿಗೆ ಬೀಳಲಿ. ಈಗಾಗಲೇ …

Read More »