Breaking News

Monthly Archives: ಏಪ್ರಿಲ್ 2023

ವಿಶೇಷ ವಿಮಾನದಲ್ಲಿ ಕಾಂಗ್ರೆಸ್ ಸೇರಲು ಪ್ರಯಾಣ ಬೆಳೆಸಿದ ಶೆಟ್ಟರ್

ಹುಬ್ಬಳ್ಳಿ: ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ 6 ಸೀಟರ್ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿದ್ದು, ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದೇ ಕಾಂಗ್ರೆಸ್ ಸೇರಲಿದ್ದಾರೆ ಎಂದು ಗೊತ್ತಾಗಿದೆ. ಹುಬ್ಬಳ್ಳಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಶೆಟ್ಟರ್ ಅವರಿಗೆ ಹುಬ್ಬಳ್ಳಿ – ಧಾರವಾಡ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಜತ್ ಉಳ್ಳಾಗಡ್ಡಿಮಠ ಮತ್ತು ಇನ್ನಿತರ ಕೆಲವು ಕಾಂಗ್ರೆಸ್ …

Read More »

ಬೆಳಗಾವಿ ಗ್ರಾಮೀಣ ,ಅಥಣಿ ಕಾಗವಾಡ ಎಲ್ಲಾಕಡೆ ಬಿಜೆಪಿ ಪಕ್ಷದ ಬಾವುಟ ಹಾರಿಸುತ್ತವೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಇಂದು ಎಲ್ಲ ಬಿಜೆಪಿ ಕಾರ್ಯ ಕರ್ತರ ಸಮ್ಮಿಲನ ವಾಗಿ ಒಂದು ಕಾರ್ಯಕ್ರಮ ನಡೆಯಿತು. ಅಲ್ಲಿ ಪಕ್ಷದ ಎಲ್ಲ ಕಾರ್ಯಕರ್ತರು ಹಾಗೂ ಬಿಜೆಪಿಯ ಪ್ರಮುಖರಾದ ಎಲ್ಲರೂ ಭಾಗ ವಹಿಸಿದ್ದರು. ಹಾಗೂ ಟಿಕೆಟ್ ವಂಚಿತರಾದ ಧನಂಜಯ ಜಾಧವ ಹಾಗೂ ಸಂಜಯ್ ಪಾಟೀಲ ಕೂಡ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆಲ್ಲಿಸುದುವು ನಮ್ಮ ಗುರಿ ಯಾಗಿರಲಿ ಗ್ರಾಮೀಣ ಭಾಗದಲ್ಲಿ ಪ್ರಮುಖ ರಾದ ಧನಂಜಯ್ …

Read More »

ಸಿಎಂ ಹುದ್ದೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರಿಗೂ ಪರೋಕ್ಷ ವಾರ್ನಿಂಗ್ ಕೊಟ್ಟ ಖರ್ಗೆ

ಕೋಲಾರ: ರಾಜ್ಯದಲ್ಲಿ ಯಾರು ಬೇಕಾದರೂ ಸಿಎಂ ಆಗಲಿ, ಅದು ನನಗೆ ಬೇಡ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಹುದ್ದೆ ರೇಸ್ ನಲ್ಲಿ ನಾನಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್ ನಲ್ಲಿ ಕೆಲ ದಿನಗಳಿಂದ ಸಿಎಂ ಹುದ್ದೆಗೆ ಯಾರೆಲ್ಲ ಸಮರ್ಥರಿದ್ದಾರೆ ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಕೋಲಾರದಲ್ಲಿ ನಡೆಯುತ್ತಿರುವ ಜೈ ಭಾರತ್ ಸಮಾವೇಶದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಪರೋಕ್ಷ ವಾರ್ನಿಂಗ್ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಯಾರಾಗಬೇಕು ಎಂಬ …

Read More »

ರಾಮದುರ್ಗ ರಾಜ್ಯಭಾರಕ್ಕಾಗಿ ಹಣಾಹಣಿ

ಬೆಳಗಾವಿ: ರಾಮದುರ್ಗ ಕ್ಷೇತ್ರ ಜಿಲ್ಲೆಯ ಪ್ರತಿಷ್ಠಿತ ಕ್ಷೇತ್ರಗಳಲ್ಲಿ‌ ಒಂದು. ಸದ್ಯ ವಿಧಾನಸಭೆ ಚುನಾವಣೆಗೆ ಅಖಾಡ ಸಿದ್ಧವಾಗಿದೆ. ಕ್ಷೇತ್ರದಲ್ಲಿ ಮತ್ತೆ ಪಾರುಪತ್ಯ ಮುಂದುವರಿಸಲು ಅಶೋಕ ಪಟ್ಟಣ ಕಸರತ್ತು ನಡೆಸಿದ್ದರೆ, ಬಿಜೆಪಿಯಿಂದ ಅಚ್ಚರಿ ಅಭ್ಯರ್ಥಿ ಚಿಕ್ಕರೇವಣ್ಣ ಸ್ಪರ್ಧೆಗೆ ಅಣಿಯಾಗಿದ್ದಾರೆ. ಇನ್ನು ಬಿಜೆಪಿ ಟಿಕೆಟ್​ ವಂಚಿತ ಮಹಾದೇವಪ್ಪ ಯಾದವಾಡ ನಡೆ ನಿಗೂಢವಾಗಿದೆ. ಸದ್ಯ ಕ್ಷೇತ್ರದಲ್ಲಿ ಅಶೋಕ ಪಟ್ಟಣ ವರ್ಸಸ್ ಚಿಕ್ಕರೇವಣ್ಣ ಎಂಬ ಸ್ಥಿತಿಯಿದ್ದು, ಹೇಗಾದರೂ ಮಾಡಿ ಕ್ಷೇತ್ರವನ್ನು ಮತ್ತೆ ಕಮಲದ ತೆಕ್ಕೆಗೆ ತೆಗೆದುಕೊಳ್ಳಲು ಕೇಸರಿ‌ ಕಲಿಗಳು …

Read More »

ಬಿಜೆಪಿ ಶಾಸಕ ಅವಿನಾಶ್ ಜಾಧವ್, ಬೆಂಬಲಿಗರ ಕಾರಿನ ಮೇಲೆ‌ ಕಲ್ಲು‌ ತೂರಾಟ

ಕಲಬುರಗಿ: ಚಿಂಚೋಳಿ ತಾಲೂಕಿನ ಚಂದನಕೇರಾ ಗ್ರಾಮದಲ್ಲಿ‌ ಶಾಸಕ‌ ಅವಿನಾಶ್ ಜಾಧವ್​ ಹಾಗೂ ಅವರ ಬೆಂಬಲಿಗರ ಕಾರು‌ಗಳ ಮೇಲೆ ಕಲ್ಲು ತೂರಾಟ ನಡೆ​ದಿ​ದೆ. ಘಟನೆಯಲ್ಲಿ ಐದು ವಾಹನಗಳು ಜಖಂಗೊಂಡಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಶನಿವಾರ ಸಂಜೆ ಸಂಸದ ಉಮೇಶ ಜಾಧವ್​ ಅವರ ಪುತ್ರ ಚಿಂಚೋಳಿ ಮೀಸಲು ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಹಾಗೂ ಬಿಜೆಪಿ‌ ಅಭ್ಯರ್ಥಿ ಡಾ. ಅವಿನಾಶ್ ಜಾಧವ್​ ಹಾಗೂ ಅವರ ಸಂಗಡಿಗರು ಚಂದನಕೇರಾ ಗ್ರಾಮದ ದಲಿತರ ಓಣಿಯಲ್ಲಿ ಪ್ರಚಾರಕ್ಕೆ ತೆರಳಿದ್ದರು. ಪ್ರಚಾರ‌ …

Read More »

ಗ್ಯಾಂಗ್​ಸ್ಟರ್​ ಅತೀಕ್​ ಅಹ್ಮದ್​ ಹತ್ಯೆಯ ಭಯಾನಕ ವಿಡಿಯೋ

ಗ್ಯಾಂಗ್​ಸ್ಟರ್​, ರಾಜಕಾರಣಿಯಾಗಿದ್ದ ಅತೀಕ್​ ಅಹ್ಮದ್​ನನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯುವಾಗ ನಡೆದ ಹತ್ಯೆ ಘಟನೆಯ ವಿಡಿಯೋ ವೈರಲ್​​ ಆಗಿದೆ.’ ಇದನ್ನು ರಾಷ್ಟ್ರೀಯ ಸುದ್ದಿವಾಹಿನಿಯೊಂದು ಸೆರೆಹಿಡಿದಿದೆ. ಗ್ಯಾಂಗ್​ಸ್ಟರ್​ ಅತೀಕ್​ ಅಹ್ಮದ್​ ಹತ್ಯೆಯ ಭಯಾನಕ ವಿಡಿಯೋಪ್ರಯಾಗ್‌ರಾಜ್ (ಉತ್ತರಪ್ರದೇಶ): ಗ್ಯಾಂಗ್‌ಸ್ಟರ್, ರಾಜಕಾರಣಿಯಾಗಿದ್ದ ಅತೀಕ್ ಅಹ್ಮದ್ ಮತ್ತು ಅವರ ಸಹೋದರನ ಕೊಲೆ ಉತ್ತರಪ್ರದೇಶದಲ್ಲಿ ಸಂಚಲನ ಉಂಟು ಮಾಡಿದೆ. ಮಾಧ್ಯಮಗಳ ಕ್ಯಾಮರಾ ಎದುರೇ ಇಬ್ಬರ ಹತ್ಯೆಯಾಗಿದೆ. ವೈದ್ಯಕೀಯ ತಪಾಸಣೆಗಾಗಿ ಇಬ್ಬರನ್ನೂ ಆಸ್ಪತ್ರೆಗೆ ಕರೆತರುವಾಗಿನ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಹತ್ಯೆ …

Read More »

ಜಗದೀಶ್ ಶೆಟ್ಟರ್ ರಾಜೀನಾಮೆ ನೋವು ತಂದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈ ಭಾಗದ ಹಿರಿಯ ನಾಯಕರು, ಉತ್ತರ ಕರ್ನಾಟಕ ಭಾಗದಲ್ಲಿ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆಯಾಗಿದೆ. ಹೀಗಿರುವಾಗ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿರುವುದು ನೋವು ತಂದಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರಿಗೆ ದೊಡ್ಡ ಹುದ್ದೆ ಕೊಡುತ್ತೇವೆ ಎಂದು ಹೇಳಲಾಯಿತು. ದೆಹಲಿ ಮಟ್ಟದಲ್ಲಿ ಹುದ್ದೆ ನೀಡುವುದಾಗಿಯೂ ಕೇಂದ್ರ ಗೃಹ ಸಚಿವ ಅಮಿತ್ ಶಾ, …

Read More »

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್​ ಕ್ಷೇತ್ರದ ಬಿಜೆಪಿ ಟಿಕೆಟ್​ಗಾಗಿ ಫೈಟ್: ಟೆಂಗಿನಕಾಯಿ ಸೇರಿ ಆಕಾಂಕ್ಷಿಗಳ ಹಾದಿ ಸುಗಮ? ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್ ಬಿಜೆಪಿ ತೊರೆಯುವ ನಿರ್ಧಾರ ಹಿನ್ನೆಲೆಯಲ್ಲಿ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಬಿಜೆಟಿ ಟಿಕೆಟ್​ ಮೇಲೆ ಹಲವು ನಾಯಕರು ಕಣ್ಣಿಟ್ಟಿದ್ದು, ಯಾರಿಗೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷದ ವಿರುದ್ಧ ಅಸಮಾಧಾನಗೊಂಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಾಸಕ …

Read More »

ಹಿರಿಯ ನಾಯಕರನ್ನು ಕಡೆಗಣಿಸಿದ ಬಿಜೆಪಿ , ಶೆಟ್ಟರ್ ಕಾಂಗ್ರೆಸ್‌ಗೆ ಬಂದರೆ ಸ್ವಾಗತ : ಸಿದ್ದರಾಮಯ್ಯ

ಬೆಳಗಾವಿ: ‘ಹಿರಿಯ ನಾಯಕರನ್ನು ಬಿಜೆಪಿ ಸರಿಯಾಗಿ ನಡೆಸಿಕೊಂಡಿಲ್ಲ. ಸದಾ ಪಕ್ಷದ ಸಿದ್ಧಾಂತ ಎನ್ನುತ್ತಿದ್ದ ಕೆ.ಎಸ್‌.ಈಶ್ವರಪ್ಪ, ಈಗ ಎಲ್ಲಿ ಹೋದರು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದರು. ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜಗದೀಶ ಶೆಟ್ಟರ್ ನನ್ನೊಂದಿಗೆ ಮಾತನಾಡಿಲ್ಲ. ನಮ್ಮ ಪಕ್ಷಕ್ಕೆ ಬರುವುದಾದರೆ ಅವರಿಗೆ ಸ್ವಾಗತಿಸುತ್ತೇನೆ. ಲಕ್ಷ್ಮಣ ಸವದಿ ಆಗಮನದಿಂದ ಕಾಂಗ್ರೆಸ್‌ಗೆ ಲಾಭವಾಗಲಿದೆ. ಸವದಿ ಅವರು ಕೇಳಿದ ಕಡೆ ಪ್ರಚಾರ ಮಾಡಲು ಜವಾಬ್ದಾರಿ …

Read More »

ರಾಜಶೇಖರ ಕಾರದಗಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ

ಬೆಳಗಾವಿ: ಸವದತ್ತಿ ಪುರಸಭೆಯ ಅಧ್ಯಕ್ಷ ರಾಜಶೇಖರ ಕಾರದಗಿ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. ಬಿಜೆಪಿ ಗ್ರಾಮೀಣ ಅಧ್ಯಕ್ಷ ಸಂಜ ಪಾಟೀಲ ಈ ಕುರಿತು ಪ್ರಕಟಣೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯಲ್ಲಿ ಬರುವ ಸವದತ್ತಿ ಪುರಸಭೆಯ ಅಧ್ಯಕ್ಷ ರಾಜಶೇಖರ ಕಾರದಗಿ ಇವರು ಪಕ್ಷದಿಂದ ಆಯೋಜಿಸಿದ ಸಭೆಗಳಿಗೆ ಆವ್ಹಾನ ನೀಡಿದರೂ ಸಭೆಗಳಿಗೆ ಗೈರಾಗಿದ್ದು ಕಂಡುಬಂದಿದೆ. ಸುಮಾರು ೨ ತಿಂಗಳ ಕಾಲದಿಂದ ಕಾಂಗ್ರೆಸ್ ಪಕ್ಷದಲ್ಲಿ ಅವರು ಕಾರ್ಯಚಟುವಟಿಕೆಗಳಲ್ಲಿ ಭಾಗವಹಿಸಿತ್ತದ್ದರು ಎಂದು ಮಂಡಲ ಅಧ್ಯಕ್ಷರು …

Read More »