Breaking News

Daily Archives: ಮೇ 4, 2023

ಎಂಇಎಸ್‌ ವಿರುದ್ಧ ಪ್ರಚಾರ: ಸಂಜಯ್‌ ರಾವುತ್‌ ಆಕ್ಷೇಪ

ಬೆಳಗಾವಿ: ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್‌)ಯಿಂದ ಕಣಕ್ಕಿಳಿದ ಅಭ್ಯರ್ಥಿಗಳ ವಿರುದ್ಧ ಮಹಾರಾಷ್ಟ್ರದ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ಪ್ರಚಾರ ಮಾಡುತ್ತಿರುವುದಕ್ಕೆ ಶಿವಸೇನಾ(ಉದ್ಧವ್‌ ಠಾಕ್ರೆ ಬಣ) ಮುಖ್ಯಸ್ಥ ಸಂಜಯ್‌ ರಾವುತ್‌ ಆಕ್ಷೇಪ ವ್ಯಕ್ತಪಡಿಸಿದರು.   ಬೆಳಗಾವಿ ದಕ್ಷಿಣ ಕ್ಷೇತ್ರ ವ್ಯಾಪ್ತಿಯ ವಡಗಾವಿಯಲ್ಲಿ ಬುಧವಾರ ನಡೆದ ಎಂಇಎಸ್‌ ಅಭ್ಯರ್ಥಿ ರಮಾಕಾಂತ್‌ ಕೊಂಡೂಸ್ಕರ್‌ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ‘ಗಡಿಭಾಗದ ಮರಾಠಿ ಭಾಷಿಕರು ತಮ್ಮನ್ನು ಮಹಾರಾಷ್ಟ್ರಕ್ಕೆ ಸೇರಿಸುವಂತೆ ಕಳೆದ 60 …

Read More »

ಸಂದರ್ಶನ | ವೃದ್ಧಿಯೇ ನನ್ನ ಗೆಲುವಿಗೆ ಸಾಧನ : ಬಾಲಚಂದ್ರ ಜಾರಕಿಹೊಳಿ

ಯಾಾವ ಅಂಶ ಇಟ್ಟುಕೊಂಡು ಮತ ಕೇಳುತ್ತಿದ್ದೀರಿ? ಸತತ ಐದು ಚುನಾವಣೆಗಳಲ್ಲಿ ನಾನು ಗೆದ್ದಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಅವುಗಳನ್ನೇ ಮುಂದಿಟ್ಟುಕೊಂಡು ನಾನು ಹಾಗೂ ಪಕ್ಷದ ಬೆಂಬಲಿಗರು ಮತಯಾಚಿಸುತ್ತಿದ್ದೇವೆ.   lಈ ಬಾರಿಯೂ ಗೆಲ್ಲುತ್ತೇನೆ ಎಂಬ ವಿಶ್ವಾಸ ಮೂಡಿದೆಯೇ? ವಿಶ್ವಾಸ ಮೂಡಲು ಕಾರಣವೇನು? ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು, ಕ್ಷೇತ್ರದಲ್ಲಿ ವಿವಿಧ ಕಾಮಗಾರಿ ಕೈಗೊಂಡಿದ್ದೇನೆ. ಪ್ರತಿ ಸಮುದಾಯದ ಶೇ 80ರಷ್ಟು ಮತದಾರರು ನನ್ನೊಂದಿಗೆ ಇದ್ದಾರೆ. ನಾನು ಅವರ …

Read More »

ನಿಪ್ಪಾಣಿ ನಗರಕ್ಕೆ ಇಂದುನಿತಿನ್ ಗಡ್ಕರಿ

ನಿಪ್ಪಾಣಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು ನಿಪ್ಪಾಣಿ ನಗರಕ್ಕೆ ಆಗಮಿಸಲಿದ್ದಾರೆ. ಅವರು ಮುಜರಾಯಿ ಮತ್ತು ವಕ್ಫ್ ಸಚಿವೆ ಹಾಗೂ ನಿಪ್ಪಾಣಿ ಕ್ಷೇತ್ರದ ಶಾಸಕಿ ಶಶಿಕಲಾ ಜೊಲ್ಲೆ ಅವರ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಲ್ಲಿನ ಸರಕಾರಿ ಕನ್ನಡ ಪ್ರಾಥಮಿಕ ಶಾಲಾ ಮೈದಾನದಲ್ಲಿ ಮಧ್ಯಾಹ್ನ 1 ಗಂಟೆಗೆ ಪ್ರಚಾರ ಸಭೆ ಆಯೋಜನೆಗೊಂಡಿದೆ.

Read More »

ಬಿಜೆಪಿ ಹಾಗೂ ಕಾಂಗ್ರೆಸ್ ನವರು ಜನರ ಹಣ ತಿಂದು ಅದೇ ಹಣದಲ್ಲಿ ಚುನಾವಣೆಯಲ್ಲಿ ಹಂಚಲು ಮುಂದಾಗಿದ್ದಾರೆ

ರಾಯಬಾಗ: “ಬಿಜೆಪಿ ಹಾಗೂ ಕಾಂಗ್ರೆಸ್ ನವರು ಜನರ ಹಣ ತಿಂದು ಅದೇ ಹಣದಲ್ಲಿ ಚುನಾವಣೆಯಲ್ಲಿ ಹಂಚಲು ಮುಂದಾಗಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮೀ‌ ಅಕ್ರೋಶ ವ್ಯಕ್ತಪಡಿಸಿದ್ದಾರೆ. ರಾಯಬಾಗ ಪಟ್ಟಣದಲ್ಲಿ ರಾಯಬಾಗ, ಕುಡಚಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ‌ ಸಮಾವೇಶ ಉದ್ಘಾಟಿಸಿ ಮಾತನಾಡಿ, “ಸ್ವಾತಂತ್ರ್ಯ ಬಂದು 75 ವರ್ಷವಾದರೂ ಜನರ ಬಡತನ ಹೋಗಲಾಡಿಸಲು ಆಗಿಲ್ಲ. ಹಣ ನೀಡಿ ಚುನಾವಣೆ ಮಾತ್ರ ಮಾಡುತ್ತಿದ್ದಾರೆ. ಇದಕ್ಕೆಲ್ಲ ಬ್ರೇಕ್ ಹಾಕಲು ನಾನು ಬಂದಿದ್ದೇನೆ. ಜನರು ನಿರಾಳವಾಗಿ …

Read More »

ಚುನಾವಣೆ ಹೊಸ್ತಿಲಲ್ಲೇ ಬೆಂಗಳೂರಿನಲ್ಲಿ ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ಪೊಲೀಸ್ ವಶಕ್ಕೆ

ವಿಧಾನಸಭೆ ಚುನಾವಣೆ(Karnataka Assembly Elections 2023)ಗೆ ಇನ್ನೇನು ಆರು ದಿನಗಳು ಬಾಕಿಯಿರುವಾಗಲೇ ಇದೀಗ ವೋಟರ್​ ಐಡಿ ಸಂಗ್ರಹಿಸುತ್ತಿದ್ದ ನಾಲ್ವರನ್ನ ಫ್ಲೈಯಿಂಗ್ ಸ್ಕ್ವಾಡ್​​​, ಭಾರತಿನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರ ಬಳಿ ಹೋಗಿ ನಿಮ್ಮ ಒಂದು ವೋಟರ್​ ಐಡಿಗೆ 2 ಸಾವಿರ ರೂ. ಹಣ ಕೊಡುತ್ತೆವೆ ಎಂದು ಹೇಳಿ ವೋಟರ್ ಐಡಿ ಸಂಗ್ರಹಿಸುತ್ತಿದ್ದರು. ಈ ಸಂಬಂಧ ಶಿವಾಜಿನಗರ ಕಾಂಗ್ರೆಸ್ ಕಾರ್ಯಕರ್ತ ದೂರು ನೀಡಿದ್ದು, ದೂರಿನ ಮೇರೆಗೆ ನಾಲ್ವರನ್ನ ವಶಕ್ಕೆ …

Read More »

ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕೊಪ್ಪಳ ಜಿಲ್ಲಾಧಿಕಾರಿ ಷೋಕಾಸ್ ನೋಟಿಸ್ ನೀಡಿದ್ದಾರೆ.

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಅವಹೇಳನಕಾರಿ ಮತ್ತು ನಿಂದನಾತ್ಮಕವಾಗಿ ಹೇಳಿಕೆ ನೀಡಿದ ಬಿಜೆಪಿಯ ಸ್ಟಾರ್ ಕ್ಯಾಂಪೇನರ್ ಸಹ ಆದ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಕಾಂಗ್ರೆಸ್ ಮಾಜಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೆ ಚುನಾವಣಾ ಆಯೋಗ ಬಿಸಿ ಮುಟ್ಟಿಸಿದ್ದು, ಇಬ್ಬರಿಗೂ ಷೋಕಾಸ್ ನೋಟಿಸ್ ಜಾರಿ ಮಾಡಿದೆ.   ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಟೀಕಿಸಿದ ಕಲಬುರಗಿ ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ …

Read More »

ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡ, ತುಳಸಿ ಗೌಡರಿಂದ ಆಶೀರ್ವಾದ ಪಡೆದ ಪ್ರಧಾನಿ ಮೋದಿ

ಕಾರವಾರ(ಉತ್ತರಕನ್ನಡ) : ಜನರ ವಿಶ್ವಾಸವನ್ನು ಕಳೆದುಕೊಂಡಿರುವ ಕಾಂಗ್ರೆಸ್ ಇದೀಗ ಸುಳ್ಳು ಭರವಸೆ ನೀಡುತ್ತಿದೆ. ಇದನ್ನು ಜನ ನಂಬದೆ ಮತ್ತೊಮ್ಮೆ ಡಬಲ್ ಎಂಜಿನ್ ಸರ್ಕಾರ ಬೆಂಬಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ಬಳಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾನು ಜನರ ಸೇವಕನಾಗಿದ್ದೇನೆ. ನೀವು ಹೇಳಿದ್ದನ್ನು ನಿಮ್ಮ ಸೇವಕನಾಗಿ ಮಾಡುತ್ತಿದ್ದೇನೆ. ನನಗೆ ದೇಶದ 140 ಕೋಟಿ ಜನರು ಯಜಮಾನರು. …

Read More »

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಾದಾಯಿ ಯೋಜನೆ ಅನುಷ್ಠಾನ: ಪ್ರಿಯಾಂಕಾ ಗಾಂಧಿ

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮಹಾದಾಯಿ ಯೋಜನೆಯನ್ನು ಅನುಷ್ಠಾನಗೊಳಿಸುವುದಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದರು. ಜಿಲ್ಲೆಯ ಇಂಡಿ ವಿಧಾನಸಭೆ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಶವಂತರಾಯಗೌಡ ಪಾಟೀಲ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರುವರೆ ವರ್ಷದಿಂದ ಬಿಜೆಪಿ ಸರ್ಕಾರ ಶ್ರೀಮಂತರ ಪರ ಕೆಲಸ ಮಾಡಿದೆ ಎಂದು ಆರೋಪಿಸಿದರು. ಸಿಲಿಂಡರ್ ಸೇರಿದಂತೆ ದಿನ ಬಳಕೆ ವಸ್ತುಗಳು ಗಗನಕ್ಕೆ ಏರಿವೆ, ಇದರ ಜೊತೆಗೆ 40 ಪರ್ಸ್‌ಂಟ್ …

Read More »

ಪಕ್ಷ ಬದಲಾದರೂ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಒಂದೇ ನಾಣ್ಯದ ಎರಡು ಮುಖಗಳು.

ಬೆಳಗಾವಿ : ಕಾಂಗ್ರೆಸ್ ಮತ್ತು ಜೆಡಿಎಸ್ ಶಾರ್ಟ್ ಕಟ್ ಆಡಳಿತದ ಬಗ್ಗೆ ಎಚ್ಚರಿಕೆ ಇರಬೇಕು. ಪಕ್ಷ ಬದಲಾದರೂ ಎರಡೂ ಒಂದೇ ನಾಣ್ಯದ ಎರಡು ಮುಖಗಳು.   ಕಾಂಗ್ರೆಸ್ ನಂತೆ ಜೆಡಿಎಸ್ ಕೂಡ ಒಡೆದು ಆಳುವ ನೀತಿ ಹೊಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ವಾಗ್ದಾಳಿ ಮಾಡಿದರು. ಬೈಲಹೊಂಗಲ ಮತಕ್ಷೇತ್ರದ‌ ಬೈಲವಾಡದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಕಿತ್ತೂರು, ಸವದತ್ತಿ, ರಾಮದುರ್ಗ, ಖಾನಾಪುರ, ಗೋಕಾಕ್, ಅರಭಾವಿ, ಯಮಕನಮರಡಿ, ಬೆಳಗಾವಿ ಉತ್ತರ, ದಕ್ಷಿಣ, ಗ್ರಾಮೀಣ, ಧಾರವಾಡ …

Read More »

ಖಾನಾಪುರ, ದಕ್ಷಿಣ, ಉತ್ತರ ಮತಕ್ಷೇತ್ರದಲ್ಲಿ ಎಂಇಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದೇನೆ: ಸಂಜಯ ರಾವತ್

‘ಬೆಳಗಾವಿ: ”ಮಹಾರಾಷ್ಟ್ರ ಏಕೀಕರಣ ಸಮಿತಿ ಸಮಸ್ಯೆಗಳು ಯಾವಗಲೂ ನ್ಯಾಯಾಲಯದಿಂದ ಪ್ರಾರಂಭವಾಗುತ್ತವೆ. ನಮ್ಮ ಪ್ರಕರಣ ಇದ್ದಿದ್ದರಿಂದ ನಾನು ಕೋರ್ಟ್​ಗೆ ಹಾಜರಾಗಿದ್ದೇನೆ” ಎಂದು ಶಿವಸೇನಾ ಸಂಸದ ಸಂಜಯ ರಾವತ್ ಹೇಳಿದರು. ಇಂದು ಬೆಳಗಾವಿಯ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಸಮಾಜಕ್ಕಾಗಿ ಹೋರಾಟ ನಡೆಸುವ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಂಘಟನೆಯ ಸಮಸ್ಯೆಗಳು ಯಾವಾಗಲೂ ನ್ಯಾಯಾಲಯದಲ್ಲಿ ಇರುತ್ತದೆ. ಅದರ ವಿಚಾರವಾಗಿ ನಾನು ಜಾಮೀನಿಗಾಗಿ ಬಂದಿದ್ದೆ. ವಿಚಾರಣೆ ನಡೆದಿದೆ” ಎಂದರು. ”ಅಲ್ಲದೆ, ಚುನಾವಣೆಯ …

Read More »