Breaking News

Daily Archives: ಮೇ 28, 2023

ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ: ಸಚಿವ ಸತೀಶ್​ ಜಾರಕಿಹೊಳಿ

ಬೆಳಗಾವಿ : ಚುನಾವಣೆಯಲ್ಲಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್ ಎಸೆದ ಹಾಗೆ ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ. ನಿರ್ಗತಿಕರು, ಬಡವರನ್ನು ಗುರುತಿಸಿ ಯೋಜನೆಗಳನ್ನು ತಲುಪಿಸುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಚಿವರಾದ ಬಳಿಕ ಕಿತ್ತೂರು ತಾಲೂಕಿನ ಬೈಲೂರು ಗ್ರಾಮದ ನಿಷ್ಕಲ ಮಂಟಪಕ್ಕೆ ಮೊದಲ ಬಾರಿ ಭೇಟಿ ನೀಡಿದ ಅವರು ಶ್ರೀಮಠದ ನಿಜಗುಣಾನಂದ ಶ್ರೀಗಳ ಆಶೀರ್ವಾದ ಪಡೆದು ಕಾರ್ಯಕ್ರಮದಲ್ಲಿ ಮಾತನಾಡಿದರು. ಚುನಾವಣೆಯಲ್ಲಿ ನಾವು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ. …

Read More »

ಅಥಣಿ ಸಬ್ ರಿಜಿಸ್ಟ್ರಾರ್​ ಕಚೇರಿಯಲ್ಲಿ ಲಂಚ ಆರೋಪ; ಅಧಿಕಾರಿಗೆ ತರಾಟೆ

ಚಿಕ್ಕೋಡಿ (ಬೆಳಗಾವಿ): ಪ್ರತಿಯೊಂದು ಕೆಲಸಕ್ಕೂ ರೈತರು ಹಾಗೂ ಇತರೆ ಕೆಲಸ ಕಾರ್ಯಗಳಿಗೆ ಬರುವ ಜನಸಾಮಾನ್ಯರಿಂದ ಲಂಚ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ರೈತರು ಅಧಿಕಾರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಂದು ನಡೆಯಿತು. ಸಬ್ ರಿಜಿಸ್ಟ್ರಾರ್ ಅವರು ಕಚೇರಿಗೆ ಬರುವ ರೈತರಿಂದ ಹೆಚ್ಚುವರಿ ಹಣ ಪಡೆದು ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ರೈತರು ಆಕ್ರೋಶ ಹೊರಹಾಕಿದರು. ಪ್ರತಿ ನೋಂದಣಿಗೂ 15 ಸಾವಿರ ರೂ. ಹೆಚ್ಚುವರಿಯಾಗಿ ಪಾವತಿ ಮಾಡಬೇಕಾಗಿದೆ. …

Read More »

ಸಾಮಾನ್ಯ ಪಾಸ್‌ಪೋರ್ಟ್​ಗೆ ಅನುಮತಿ… ನಾಳೆ ಸಂಜೆ ಅಮೆರಿಕಕ್ಕೆ ರಾಹುಲ್ ಗಾಂಧಿ ಪಯಣ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಸಾಮಾನ್ಯ ಪಾಸ್​ಪೋರ್ಟ್​ ಸ್ವೀಕರಿಸಿದ್ದಾರೆ. ಶುಕ್ರವಾರ ದೆಹಲಿಯ ನ್ಯಾಯಾಲಯವು ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡಿ ಮೂರು ವರ್ಷಗಳ ಅವಧಿಗೆ ಪಾಸ್‌ಪೋರ್ಟ್​ಗೆ ಒಪ್ಪಿಗೆ ನೀಡಿತ್ತು. ರಾಹುಲ್​ ಗಾಂಧಿ ಹತ್ತು ವರ್ಷಗಳ ಅವಧಿಯ ಪಾಸ್​ಪೋರ್ಟ್​ಗೆ ಮನವಿ ಮಾಡಿದ್ದರು. ಆದರೆ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಮೂರು ವರ್ಷದ ಅವಧಿಗೆ ಪಾಸ್​ಪೋರ್ಟ್ ಲಭ್ಯವಾದ ಹಿನ್ನೆಲೆ ಸೋಮವಾರ ಸಂಜೆ ರಾಹುಲ್ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋಗೆ ಪ್ರಯಾಣ …

Read More »

ಸತೀಶ್ ಜಾರಕಿಹೊಳಿ, ಭರ್ಜರಿ ಮೆರವಣಿಗೆ

ಬೆಳಗಾವಿ: ಸಚಿವರಾಗಿ ಮೊದಲಬಾರಿಗೆ ಬೆಳಗಾವಿಗೆ ಆಗಮಿಸಿದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸತೀಶ್ ಜಾರಕಿಹೊಳಿ ಅವರನ್ನು ಭಾನುವಾರ ಸಂಜೆ ಬೆಳಗಾವಿಯಲ್ಲಿ ಅಭಿಮಾನಿಗಳು ಭರ್ಜರಿ ಮೆರವಣಿಗೆಯಲ್ಲಿ ಕರೆದೊಯ್ದರು. ತನ್ಮೂಲಕ ನಗರದ ವಿವಿಧ ಭಾಗಗಳಲ್ಲಿರುವ ಮಹಾನ್ ಐತಿಹಾಸಿಕ ವ್ಯಕ್ತಿಗಳ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ಕಾಂಗ್ರೆಸ್‌ ಭವನದಿಂದ ತೆರದ ವಾಹನದಲ್ಲಿ ನಗರಾದ್ಯಂತ  ನೂತನ ಸಚಿವರಾದ ಸತೀಶ್‌ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು.  ಶಾಸಕರಾದ ರಾಜು ಸೇಠ್‌, ಬಾಬಾ ಸಾಹೇಬ್‌ ಪಾಟೀಲ, ವಿಶ್ವಾಸ …

Read More »

ಬಿರುಬಿಸಿಲಿಗೆ 10 ಸಾವಿರ ಎಕರೆಗೂ ಹೆಚ್ಚು ಕಬ್ಬು ನಾಶ

ಕಾಗವಾಡ: ತಾಲ್ಲೂಕಿನ ಉತ್ತರ ಭಾಗದಲ್ಲಿ ಹಳ್ಳಿಗಳಲ್ಲಿ ಬೇಸಿಗೆಯಿಂದ ನೀರಿನ ಅಭಾವ ಉಂಟಾಗಿ, ಹಲವು ಬೆಳೆಗಳು ಒಣಗುತ್ತಿವೆ. ಅದರಲ್ಲೂ ಸಾಕಷ್ಟು ಕಬ್ಬು ಬೆಳೆಗಾರರು ಕೈ ಸುಟ್ಟುಕೊಳ್ಳುವ ಆತಂಕ ಎದುರಾಗಿದೆ.   ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿರುವ ಹಳ್ಳಿಗಳಾದ ಕಿರಣಗಿ, ಸಂಬರಗಿ, ಕಲ್ಲೂತಿ, ಪಾಂಡೇಗಾಂವ, ಜಂಬಗಿ… ಹಲವು ಗ್ರಾಮಗಳಲ್ಲಿ ಬೆಳೆದ ಕಬ್ಬಿನ ಬೆಳೆ ನೀರು ಇಲ್ಲದೆ ನಾಶವಾಗಿದೆ. ರೈತರಿಗೆ ಆತಂಕ ಎದುರಾಗಿದೆ. ಈ ಎಲ್ಲ ಗ್ರಾಮಗಳು ಸೇರಿ ಸಂದಾಜು 40 ಸಾವಿರಕ್ಕೂ ಹೆಚ್ಚು ಎಕರೆಯಲ್ಲಿ ರೈತರು …

Read More »

ಸುವರ್ಣ ವಿಧಾನಸೌಧಕ್ಕೆ ಕಚೇರಿಗಳ ಸ್ಥಳಾಂತರ: ಹೊಸ ಸರ್ಕಾರದತ್ತ ನಿರೀಕ್ಷೆಯ ನೋಟ

ಬೆಳಗಾವಿ: ದಶಕದ ಹಿಂದೆ ಉದ್ಘಾಟನೆಯಾದ ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಬೆಂಗಳೂರಿನಲ್ಲಿರುವ ಪ್ರಮುಖ ಇಲಾಖೆಗಳ ಕಚೇರಿಗಳನ್ನು ಸ್ಥಳಾಂತರ ವಿಚಾರವಾಗಿ, ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಯಾವ ನಿಲುವು ತಳೆಯಲಿದೆ ಎಂಬ ಜಿಜ್ಞಾಸೆ ಈಗ ಗಡಿಭಾಗದ ಕನ್ನಡಿಗರಲ್ಲಿ ಉಂಟಾಗಿದೆ.   2013ರಲ್ಲಿ ಅಧಿಕಾರಕ್ಕೇರಿದ್ದ ಕಾಂಗ್ರೆಸ್‌ ಸರ್ಕಾರದಲ್ಲಿ ಸಿದ್ದರಾಮಯ್ಯ ಐದು ವರ್ಷಗಳ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿದ್ದರು. ಆದರೆ, ಸೌಧಕ್ಕೆ ಕಚೇರಿಗಳ ಸ್ಥಳಾಂತರಕ್ಕೆ ಸಕಾರಾತ್ಮಕ ನಿಲುವು ತಳೆಯಲಿಲ್ಲ ಎಂಬುದು ಗಡಿ ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿತ್ತು. ಅವರನ್ನು ಐದು …

Read More »

ಉದ್ಯೋಗ ಅರಸಿ ವಲಸೆ ಹೋಗುವವರ ಸಮಸ್ಯೆ ನೀಗಿಸುರುವರೇ ಶಾಸಕ ಮಹಾಂತೇಶ ಕೌಜಲಗಿ?

ಬೈಲಹೊಂಗಲ: ಬೈಲಹೊಂಗಲ ಮತಕ್ಷೇತ್ರದ ಹೆಸರಲ್ಲೇ ಒಂದು ಐತಿಹಾಸಿಕ, ಕ್ರಾಂತಿಕಾರಕ ಶಕ್ತಿ ಅಡಗಿದೆ. ಎರಡನೇ ಬಾರಿ ಆಯ್ಕೆಯಾದ ಶಾಸಕ ಮಹಾಂತೇಶ ಕೌಜಲಗಿ ಅವರು ಹಳೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಜೊತೆಗೆ ಕ್ಷೇತ್ರದ ಜನರ ಹೊಸ ನಿರೀಕ್ಷೆಗಳನ್ನು ಈಡೇರಿಸುವ ಸವಾಲು ಎದುರಿಸಬೇಕಾಗಿದೆ.‌ ಈ ಕ್ಷೇತ್ರದಲ್ಲಿ ಅವರ ಎರಡೂ ಗೆಲುವುಗಳಿಗೆ ಅವರಿಗಿಂತ ಹೆಚ್ಚಾಗಿ ಬಿಜೆಪಿ ನಾಯಕರ ಒಳಜಗಳವೇ ಕಾರಣ ಎಂಬುದು ಈಗ ಜನಜನಿತ. ಈ ಅವಕಾಶವು ಮಹಾಂತೇಶ ಅವರಿಗೆ ಎರಡು ಬಾರಿ ಒಲಿದಿದೆ. ಆದರೆ, ಇದು …

Read More »

ಕಾಳಮ್ಮವಾಡಿ ಜಲಾಶಯದಿಂದ ದೂಧಗಂಗೆಗೆ ನೀರು

ಚಿಕ್ಕೋಡಿ: ಮಹಾರಾಷ್ಟ್ರದ ಕಾಳಮ್ಮವಾಡಿ ಜಲಾಶಯದಿಂದ ಎರಡನೇ ಬಾರಿಗೆ ತಾಲ್ಲೂಕಿನ ದೂಧಗಂಗಾ ನದಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.   ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 18ರಂದು ಮಹಾರಾಷ್ಟ್ರದ ಕೊಲ್ಹಾಪುರದ ನೀರಾವರಿ ಇಲಾಖೆಯ ಸೂಪರಿಟೆಂಡೆಂಟ್ ಎಂಜಿನಿಯರ್ ಸುರವೆ ಹಾಗೂ ಎಇ ಎಬಾಂದಿವಾಡೇಕರ ಅವರನ್ನು ಭೇಟಿ ಮಾಡಿ ನೀರಿನ ಸಮಸ್ಯೆ ಕುರಿತು ಮನವರಿಕೆ ಮಾಡಿ ದೂಧಗಂಗಾ ನದಿಗೆ …

Read More »

ಯಾರ ಒತ್ತಡಕ್ಕೂ ಮಣಿಯದೆ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ಕೆಲಸ ಮಾಡಬೇಕು: ಬಾಬಾಸಾಹೇಬ ಪಾಟೀಲ

ಕಿತ್ತೂರು: ‘ಯಾರ ಒತ್ತಡಕ್ಕೂ ಮಣಿಯದೆ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ಕೆಲಸ ಮಾಡಬೇಕು. ಕಚೇರಿಗೆ ಬರುವ ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತ ನೀಡಬೇಕು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಇಲ್ಲಿಯ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮನ್ವಯತೆಯಿಂದ ಕೆಲಸ ಮಾಡೋಣ. ಸಾರ್ವಜನಿಕರಿಗೆ ಒಳ್ಳೆಯ ಆಡಳಿತ ನೀಡುವ ಸಂದೇಶ ಕೊಡೋಣ’ ಎಂದರು. ‘ಎಲ್ಲ ಕೆಲಸಗಳಲ್ಲೂ ಉತ್ತಮ ಗುಣಮಟ್ಟವಿರಲಿ. ಚುನಾವಣೆ ಪ್ರಚಾರದ ವೇಳೆ …

Read More »

ರಾಯಬಾಗ: ಹಣ ಕೇಳಿದ ಅಧಿಕಾರಿ ವಿರುದ್ಧ ಪ್ರತಿಭಟನೆ

ರಾಯಬಾಗ: ‘ಭ್ರಷ್ಟರೇ ಅಧಿಕಾರ ಬಿಟ್ಟು ತೊಲಗಿ, ಇಲ್ಲವೇ ಬಡ ಜನರ ಕೆಲಸಗಳನ್ನು ಮಾಡಿ ಕೊಡಿ’ ಎಂದು ತಾಲ್ಲೂಕಿನ ಬಸ್ತವಾಡ ಗ್ರಾಮದ ರೈತ ಅನಿಲ ಕಾಂಬಳೆ ಶುಕ್ರವಾರ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.   ತಮ್ಮ ಜಮೀನು ಸರ್ವೆ ಮಾಡಲು ರಾಯಬಾಗ ಸರ್ವೇಯರ್ ಹಣದ ಬೇಡಿಕೆ ಇಟ್ಟಿದ್ದು, ಅವರ ವಿರುದ್ಧ ಮೇಲಧಿಕಾರಿಗಳು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಿದರು. ತಮ್ಮ ಜಮೀನನ್ನು ಸರ್ವೆ ಮಾಡಿ ಕೊಡಿ …

Read More »