Breaking News

Monthly Archives: ಮೇ 2023

ಪೂರ್ಣ ಪ್ರಮಾಣದ ಸಂಪುಟ ರಚನೆಗೊಳ್ಳದ ಹೊರತು, ಸಚಿವರಿಗೆ ಖಾತೆ ಹಂಚಿಕೆಗೆ ಒಪ್ಪದ ಕಾಂಗ್ರೆಸ್ ಹೈಕಮಾಂಡ್

ಬೆಂಗಳೂರು: ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗದ ಹೊರತು ಈಗಾಗಲೇ ಪ್ರಮಾಣ ವಚನ ಸ್ವೀಕರಿಸಿರುವ ಸಿಎಂ ಮತ್ತು ಡಿಸಿಎಂ ಸೇರಿದಂತೆ ಹಾಲಿ ಎಂಟು ಜನ ಸಚಿವರುಗಳಿಗೆ ಯಾವುದೇ ಖಾತೆ ಹಂಚಿಕೆ ಮಾಡಲು ತನ್ನ ಒಪ್ಪಿಗೆ ನೀಡದಿರುವ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಂಡಿದೆ.   ದೆಹಲಿಯಲ್ಲಿ ಬುಧವಾರದಿಂದ ಮಂತ್ರಿಮಂಡಲ ವಿಸ್ತರಣೆ ಸಂಬಂಧ ಸರಣಿ ಸಭೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿ ಪಕ್ಷದ ಹೈಕಮಾಂಡ್ ನಡೆಸುತ್ತಿದ್ದಾರೆ. ಪೂರ್ಣ ಪ್ರಮಾಣದ ಮಂತ್ರಿ …

Read More »

ಅಶ್ವತ್ಥನಾರಾಯಣ ವಿರುದ್ಧ ಮತ್ತೊಮ್ಮೆ F.I.R.

ಮೈಸೂರು : ಟಿಪ್ಪು ಸುಲ್ತಾನ್ ಹೊಡೆದು ಹಾಕಿದ ರೀತಿಯಲ್ಲೇ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂದು ಸಾರ್ವಜನಿಕ ಸಭೆಯಲ್ಲಿ ಹೇಳಿಕೆ ನೀಡಿದ್ದ ಅಂದಿನ ಸಚಿವ ಅಶ್ವತ್ಥನಾರಾಯಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಳೆದ ಫೆಬ್ರವರಿ 12ರಂದು ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ಅಶ್ವತ್ಥನಾರಾಯಣ ಇಂತಹ ಹೇಳಿಕೆ ನೀಡಿದ್ದರು. ಫೆ.17ರಂದು ಸ್ಥಳೀಯ ಕಾಂಗ್ರೆಸ್ ಮುಖಂಡರು ಅವರ ವಿರುದ್ಧ ದೂರು ನೀಡಿದ್ದರೂ ಕ್ರಮವಾಗಿರಲಿಲ್ಲ. ಹಾಗಾಗಿ ಬುಧವಾರ ದೇವರಾಜ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ವಕ್ತಾರ ಲಕ್ಷ್ಮಣ ಮತ್ತೊಮ್ಮೆ ದೂರು …

Read More »

ನಿತಿನ್​ ಗಡ್ಕರಿಗೆ ಕೊಲೆ ಬೆದರಿಕೆ: ಹಿಂಡಲಗಾ ಜೈಲಿನ ಕೈದಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಎನ್‌ಐಎ

ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಎನ್‌ಐಎ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ. ಜಯೇಶ್ ಪೂಜಾರಿ ಎಂಬ ಆರೋಪಿ ಕೊಲೆ ಪ್ರಕರಣವೊಂದರಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಬಂಧಿಯಾಗಿದ್ದ. ಮೊದಲಿಗೆ ಜ.14ರಂದು ಮಹಾರಾಷ್ಟ್ರದ ನಾಗ್ಪುರದಲ್ಲಿರುವ ಸಚಿವರ ಕಚೇರಿಗೆ ಕರೆ ಮಾಡಿ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕುವುದರ ಜೊತೆಗೆ 10 ಕೋಟಿ ರೂ. ಹಣಕ್ಕೆ ಬೇಡಿಕೆ ಹಾಕಿದ್ದ. ಇದಾದ ಬಳಿಕ ಮಾರ್ಚ್​ …

Read More »

ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ

ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಯಕ್ಕಂಚಿ ಗ್ರಾಮದಲ್ಲಿ ಯುವಕ ತೋಟದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತ ಯುವಕ ಶಿವಪ್ಪಾ ಬಾಬು ಕಿವಡಿ (28) ಎಂದು ತಿಳಿದುಬಂದಿದೆ. ಈತ ತಮ್ಮ ತೋಟದಲ್ಲಿ ಸಂಶಯಾಸ್ಪದ ರೀತಿಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಐಗಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕಾಗಮಿಸಿದ ಅಥಣಿ ಸಿಪಿಐ, ಐಗಳಿ ಪೊಲೀಸ್‌ ಠಾಣೆಯ ಪಿಎಸ್​ಐ ಪರಿಶೀಲನೆ ನಡೆಸಿದರು. …

Read More »

ಇಂದು ಸಂಜೆ ವೇಳೆಗೆ ಸಚಿವ ಸಂಪುಟ ವಿಸ್ತರಣೆ ಅಂತಿಮವಾಗುವ ಸಾಧ್ಯತೆ?

ನವದೆಹಲಿ: ದೆಹಲಿಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆ ಕಸರತ್ತು ಗರಿಗೆದರಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಈಗಾಗಲೇ 8 ಸಚಿವರು ಮಾತ್ರ ಪ್ರಮಾಣವಚನ ಸ್ವೀಕರಿಸಿದ್ದು, ಇನ್ನುಳಿದ ಸಚಿವರ ಆಯ್ಕೆ ಹಾಗೂ ನೂತನ ಸಚಿವರಿಗೆ ಖಾತೆ ಹಂಚಿಕೆ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಸರಣಿ ಸಭೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಪ್ರತ್ಯೇಕವಾಗಿ …

Read More »

ಇದು ರಿವರ್ಸ್ ಗೇರ್ ಸರ್ಕಾರ: ಬೊಮ್ಮಾಯಿ

ಹುಬ್ಬಳ್ಳಿ: ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ಕಾಂಗ್ರೆಸ್ ಗೆ ಅಧಿಕಾರವಿದೆ. ಏನು ಮಾಡುತ್ತಾರೆ ನೋಡೋಣ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಬಸವರಾಜ್ ಬೊಮ್ಮಾಯಿ, ನಾವು ಎಲ್ಲವನ್ನು ಬದಲಾಯಿಸುತ್ತೇವೆ ಎಂಬುದು ದುರಂಹಂಕಾರದ ಮಾತು. ಇದು ರಿವರ್ಸ್ ಗೇರ್ ಸರ್ಕಾರ. ಕಾಂಗ್ರೆಸ್ ಗ್ಯಾರಂಟಿಗಳಲ್ಲೂ ರಿವರ್ಸ್ ಹೊಡೆಯುತ್ತಿದೆ ಎಂದು ಕಿಡಿಕಾರಿದರು. ನಾವು ಮಾಡಿದ ಜನಪರ ಕಾನೂನಿನಲ್ಲೂ ರಿವರ್ಸ್ ಹೋಗುತ್ತಿದ್ದಾರೆ. ಇದರ ಪರಿಣಾಮಗಳು ಜನರಿಗೆ ಅರ್ಥವಾಗುತ್ತದೆ. ಇದೊಂದು ರಿವರ್ಸ್ ಗೇರ್ ಸರ್ಕಾರ, ಸೇಡಿನ …

Read More »

ಭೀಕರ ಅಪಘಾತ; ಪಿಡಿಒ ಸ್ಥಳದಲ್ಲೇ ದುರ್ಮರಣ

ಧಾರವಾಡ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯರಿಕೊಪ್ಪ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಕಣ್ಣೂರು ನಿವಾಸಿ ಶಿವಾನಂದ ಹಡಪದ ಮೃತ ಪಿಡಿಒ. ಹಾವೇರಿ ಜಿಲ್ಲೆಯ ಶಿರಬಡಗಿ ಗ್ರಾಮ ಪಂಚಾಯತ್ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಧಾರವಾಡ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಬಿಸಿಲಿನಿಂದ ರಕ್ಷಿಸಲು ಪಾರ್ಕಿಂಗ್ ಸ್ಥಳದಲ್ಲಿ ಮಗು ಮಲಗಿಸಿದ ತಾಯಿ: ಕಾರು ಹರಿದು ಪ್ರಾಣಬಿಟ್ಟ ಬಾಲಕಿ

ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್​ನಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಅಪಾರ್ಟ್‌ಮೆಂಟ್​ನ ಪಾರ್ಕಿಂಗ್ ಪ್ರದೇಶದಲ್ಲಿ ಮಲಗಿದ್ದ ಮೂರು ವರ್ಷದ ಪುಟ್ಟ ಬಾಲಕಿಯ ಮೇಲೆ ಕಾರು ಹರಿದಿದ್ದು, ಮಗು ಸ್ಥಳದಲ್ಲೇ ಪ್ರಾಣ ಬಿಟ್ಟಿದೆ. ದಾರುಣ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಯತ್‌ನಗರದ ಟೀಚರ್ಸ್ ಕಾಲೋನಿಯಲ್ಲಿರುವ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ಬುಧವಾರ ಘಟನೆ ನಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ವ್ಯಕ್ತಿಯನ್ನು ಹರಿರಾಮ ಕೃಷ್ಣ ಎಂದು ಗುರುತಿಸಲಾಗಿದೆ. ಪಾರ್ಕಿಂಗ್ ಮಾಡುವಾಗ ನೆಲದ ಮೇಲೆ …

Read More »

ಪಾಲಿಕೆ ಸ್ಮಾರ್ಟ್ ಸಿಟಿ ನಡುವೆ ಹಗ್ಗಜಗ್ಗಾಟ: ಕಾಮಗಾರಿ ಮುಗಿದರೂ ಇನ್ನೂ ಹಸ್ತಾಂತರವಾಗದೇ ಉಳಿದ ಪ್ರಾಜೆಕ್ಟ್​ಗಳು

ಹುಬ್ಬಳ್ಳಿ: ಅದು ಹುಬ್ಬಳ್ಳಿ-ಧಾರವಾಡ ಅವಳಿನಗರದ ಮಹತ್ವದ ಯೋಜನೆ. ಈ ಯೋಜನೆ ಪ್ರಾರಂಭವಾದಾಗಿನಿಂದಲೂ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಯೋಜನೆ ಕಾಮಗಾರಿ ವಿಳಂಬ ಒಂದು ಕಡೆಯಾದರೆ ಮತ್ತೊಂದು ಕಡೆಯಲ್ಲಿ ಪೂರ್ಣಗೊಂಡಿದ್ದರೂ ಪಾಲಿಕೆಗೆ ಹಸ್ತಾಂತರ ಮಾಡಿಲ್ಲ. ಇದು ಮಹಾನಗರ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. 2018ರಲ್ಲಿ ಅಸ್ತಿತ್ವಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಸ್ಮಾರ್ಟ್‌ಸಿಟಿ ಯೋಜನೆಗಳಲ್ಲಿ ಪೂರ್ಣಗೊಂಡ ಕಾಮಗಾರಿಗಳ ಹಸ್ತಾಂತರ ವಿಚಾರ ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್‌ಸಿಟಿ ಮಧ್ಯೆ ಮುಸುಕಿನ …

Read More »

ಕಾಂಗ್ರೆಸ್​ ಗ್ಯಾರಂಟಿ ಯೋಜನೆ ಪ್ರತಿ ಮನೆಗೂ ತಲುಪಿಸಲು ವಿನೂತನ ಪ್ಲಾನ್

ಬಾಗಲಕೋಟೆ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮ್ಯಾಜಿಕ್​ ನಂಬರ್​ಗಿಂತಲೂ ಅಧಿಕ ಸ್ಥಾನಗಳನ್ನು ಗೆದ್ದು ಕಾಂಗ್ರೆಸ್​ ಅಧಿಕಾರ ಗದ್ದುಗೆ ಏರಿದೆ. ತನ್ನ ಗೆಲುವಿಗೆ ತಾನು ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳೇ ಪ್ರಮುಖ ಕಾರಣ ಎನ್ನುವುದು ಕಾಂಗ್ರೆಸ್​ ನಂಬಿಕೆ. ಹಾಗಾಗಿ ಕಾಂಗ್ರೆಸ್ ಪಕ್ಷದ ಸರ್ಕಾರ ಜಾರಿಗೆ ತರುವ ಗ್ಯಾರಂಟಿ ಯೋಜನೆಯನ್ನು ಜನರಿಗೆ ತಲುಪಿಸುವ ಬಗ್ಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ವಿನೂತ ಯೋಜನೆ ರೂಪಿಸಿಕೊಂಡು ಗಮನ ಸೆಳೆಯಲು ಮುಂದಾಗಿದೆ. ಕಾಂಗ್ರೆಸ್ ಪಕ್ಷದ ಐದು …

Read More »