ಬೆಳಗಾವಿ : ಕಳೆದ ಎರಡು ದಿನಗಳಿಂದ ಸುರಿದ ಮಳೆ ರಾಜ್ಯದೆಲ್ಲೆಡೆ ಸಾಕಷ್ಟು ಹಾನಿಯುಂಟು ಮಾಡಿದೆ. ಅದರಂತೆ ಬೆಳಗಾವಿಯಲ್ಲಿ ಸೋಮವಾರ ಮತ್ತು ಮಂಗಳವಾರ ನಗರದಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಅನೇಕ ಕಡೆಗಳಲ್ಲಿ ಮರಗಳು ಬಿದ್ದಿದ್ದರಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಇದರ ಪರಿಣಾಮ ನಗರದ ಬಹಳಷ್ಟು ಪ್ರದೇಶಗಳಲ್ಲಿನ ವಿದ್ಯುತ್ ವ್ಯತ್ಯಯದಿಂದ ಜನರು ಪರದಾಡುವಂತಾಯಿತು. ವಿಶ್ವೇಶ್ವರಯ್ಯ ನಗರ, ಹನುಮಾನ್ ನಗರ, ಸದಾಶಿವ ನಗರ, ರಾಮತೀರ್ಥ ನಗರ, ಸರ್ಕಾರಿ ಸರ್ದಾರ್ಸ್ ಪ್ರೌಢಶಾಲೆ …
Read More »Monthly Archives: ಮೇ 2023
ದೆಹಲಿಯಲ್ಲಿ ಸಿಎಂ, ಡಿಸಿಎಂ: ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ಜೊತೆ ಚರ್ಚೆ
ನವದೆಹಲಿ: ವಿಶೇಷ ಅಧಿವೇಶನದಲ್ಲಿ ಎಲ್ಲಾ ಶಾಸಕರ ಪ್ರಮಾಣ ವಚನ ಸ್ವೀಕಾರವಾಗುತ್ತಿದ್ದಂತೆ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದೆ. ಮಧ್ಯಾಹ್ನ 3 ಗಂಟೆಯಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಸಂಜೆ ಆರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ರಾಜಧಾನಿಗೆ ಪ್ರಯಾಣ ಬೆಳೆಸಿದ್ದರು. ಶಿವಕುಮಾರ್ ಮೊದಲೇ ದೆಹಲಿ ತಲುಪಿದ್ದರು. ಸಿದ್ದರಾಮಯ್ಯ ಈಗ ದೆಹಲಿ ತಲುಪಿದ್ದು, ಕಾಂಗ್ರೆಸ್ ಉನ್ನತ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಈ ನಾಯಕರ ಜೊತೆ ಬೆಂಬಲಿಗರು ಸಹ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಮಂತ್ರಿಗಿರಿಗಾಗಿ …
Read More »ಬೆಂಗಳೂರಿನ ಅಂಡರ್ಪಾಸ್ಗಳನ್ನು ಮುಚ್ಚುವ ಪರಿಸ್ಥಿತಿ ಬಂದಿಲ್ಲ: ತುಷಾರ್ ಗಿರಿನಾಥ್
ಬೆಂಗಳೂರು : “ಕೆ.ಆರ್.ಸರ್ಕಲ್ನಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಂಡರ್ಪಾಸ್ಗಳ ಸುರಕ್ಷತೆಯ ಕುರಿತಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಯಾವ ಅಂಡರ್ಪಾಸ್ಗಳೂ ಸದ್ಯಕ್ಕೆ ಮುಚ್ಚುವಂತ ಸ್ಥಿತಿಯಲ್ಲಿ ಇಲ್ಲ. ಕೆ.ಆರ್.ಸರ್ಕಲ್ ಹತ್ತಿರ ಕೆಲಸ ಶುರು ಮಾಡಿದ್ದೇವೆ. ಇತರೆ ಕಡೆಗಳಲ್ಲಿಯೂ ಅಗತ್ಯ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು. ಪಾಲಿಕೆ ಮುಖ್ಯ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸೈರನ್ ಅಳವಡಿಸುವ ಕ್ರಮದ ಕುರಿತು ಸರ್ಕಾರದಿಂದ ವರದಿ …
Read More »ಉದ್ಯೋಗದಾತರು – ಉದ್ಯೋಗಿಗಳು ರಾಜಿ ಸಂಧಾನದ ನಿರ್ಧಾರಕ್ಕೆ ಬದ್ಧರಾಗಿರಬೇಕು: ಹೈಕೋರ್ಟ್
ಬೆಂಗಳೂರು: ಉದ್ಯೋಗದಾತರು ಮತ್ತು ಉದ್ಯೋಗಿಗಳು ರಾಜಿ ಸಂಧಾನದ ಮೂಲಕ ಕೈಗೊಂಡ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದು ಹೈಕೋರ್ಟ್ ಆದೇಶ ನೀಡಿದೆ. ಇಂಡಿಯನ್ ಟೆಲಿಫೋನ್ ಲಿಮಿಟೆಡ್ನಲ್ಲಿ (ಐಟಿಐ) ಹಲವು ವರ್ಷಗಳ ಕಾಲ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿದ್ದ 80 ನೌಕರರ ಮರು ನೇಮಕಾತಿಗೆ ಸಂಬಂಧಿಸಿದಂತೆ ಮತ್ತೊಂದು ಬಾರಿ ರಾಜಿ ಸಂಧಾನ ನಡೆಸಲು ಕೋರ್ಟ್ ಸೂಚನೆ ನೀಡಿದೆ. ಕರ್ನಾಟಕ ಜನರಲ್ ಲೇಬರ್ ಯೂನಿಯನ್ನ ಐಟಿಐ ಘಟಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರಿದ್ದ ನ್ಯಾಯಪೀಠ ವಿಚಾರಣೆ …
Read More »ಸತೀಶ್ ಜಾರಕಿಹೊಳಿ ಅವರನ್ನು ಆಶೀರ್ವದಿಸಿದ ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ
ಬೆಂಗಳೂರು: ನೂತನ ಸಚಿವರಾಗಿ ಆಯ್ಕೆಯಾದ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರನ್ನು ಪಂಚಮಸಾಲಿ ಗುರುಪೀಠದ ಪ್ರಥಮ ಜಗದ್ಗುರುಗಳಾದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಬೆಂಗಳೂರಿನಲ್ಲಿ ಸತ್ಕರಿಸಿ ಆಶೀರ್ವದಿಸಿದ್ದಾರೆ. ಇದೇ ವೇಳೆ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತುಂಜ್ಯಯ ಮಹಾಸ್ವಾಮೀಜಿ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಸತ್ಕರಿಸಿ ಆಶೀರ್ವಾದ ಪಡೆದರು. ಈ ಸಂಧರ್ಭದಲ್ಲಿ ಹುಕ್ಕೇರಿ ತಾಲೂಕು ಪಂಚಮಸಾಲಿ ಕಾರ್ಯಾಧ್ಯಕ್ಷ ರವೀಂದ್ರ ಜಿಂಡ್ರಾಲಿ, ಹುಕ್ಕೇರಿ ತಾಲೂಕಿನ ಯುವ ಘಟಕದ …
Read More »ಯಾದಗಿರಿ: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ. ಯಾದಗಿರಿ: ಸಾಲಬಾಧೆ ತಾಳಲಾರದೆ 65 ವರ್ಷದ ರೈತನೋರ್ವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕಿನ ಉಡುವೆಪುರ ಗ್ರಾಮದಲ್ಲಿ ನಡೆದಿದೆ. ಯಲ್ಲಕಿ ಗೌಡ (65) ಆತ್ಮಹತ್ಯೆಗೆ ಶರಣಾದ ರೈತ. ಯಲ್ಲಕಿ ಗೌಡ ಪಿರಿಯಾಪಟ್ಟಣದ ಬ್ಯಾಂಕ್ನಲ್ಲಿ ರೂ.15 ಲಕ್ಷ ಸಾಲ ಪಡೆದಿದ್ದಲ್ಲದೆ, ಸಹ ಗ್ರಾಮಸ್ಥರಿಂದಲೂ ರೂ.6 …
Read More »ಪಂಚಮಸಾಲಿ ಲಿಂಗಾಯತ ಸಮುದಾಯದ ಐವರಿಗೆ ಸಚಿವ ಸ್ಥಾನ ನೀಡಬೇಕು: ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯ 3 ಪ್ರಮುಖ ನಿರ್ಣಯ ಕೈಗೊಂಡಿದೆ. ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ಕೂಡಲಸಂಗಮ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯ 3 ಪ್ರಮುಖ ನಿರ್ಣಗಳನ್ನು ಕೈಗೊಂಡಿದೆ. ಲಿಂಗಾಯತ ಪಂಚಮಸಾಲಿ ಸಮುದಾಯದ ನೂತನ ಶಾಸಕರುಗಳ ಅಭಿನಂದನಾ ಸಮಾರಂಭ ಕುರಿತು ಚರ್ಚಿಸುವ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಪೂರ್ವಭಾವಿ …
Read More »ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರಿಂದ ಸೋಲಿನ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ ನೀಡಿದ್ದಾರೆ. ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದ್ದರಿಂದ ಸೋಲಿನ ಹೊಣೆಹೊತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜಿನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಸಲ್ಲಿಸಿದ್ದು ರಾಜೀನಾಮೆ ಪತ್ರವನ್ನು ದೇವೇಗೌಡರು ಇನ್ನೂ ಅಂಗೀಕರಿಸಿಲ್ಲ. ರಾಜೀನಾಮೆ ನೀಡಿದ ಬಳಿಕ ಮಾತನಾಡಿದ …
Read More »ಬಂಟ್ವಾಳ: ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಮಾರಣಾಂತಿಕ ಹಲ್ಲೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮೇ.24 ರಂದು ಮಾರಕಾಸ್ತ್ರ (ಖಡ್ಗಗಳಿಂದ) ಮಾರಣಾಂತಿಕ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ, ಬಜರಂಗದಳ ಕಾರ್ಯಕರ್ತರ ಮೇಲೆ ಅನಾಮಿಕ ದುಷ್ಕರ್ಮಿಗಳು ಮೇ.24 ರಂದು ಮಾರಕಾಸ್ತ್ರ (ಖಡ್ಗಗಳಿಂದ) ಮಾರಣಾಂತಿಕ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ, ಬಜರಂಗದಳದ ಸ್ಥಳೀಯ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ …
Read More »ಇದು ಸಮ್ಮಿಶ್ರ ಸರ್ಕಾರ, ತುಂಬಾ ದಿನ ಇರಲ್ಲ: ಆರ್. ಅಶೋಕ್ ಸ್ಫೋಟಕ ಭವಿಷ್ಯ
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಡಿಕೆ ಶಿವಕುಮಾರ್ ಗರಂ ಆಗಿದ್ದಕ್ಕೆ ಬಿಜೆಪಿ ಶಾಸಕ ಆರ್. ಅಶೋಕ್ ವಿರೋಧ ವ್ಯಕ್ತಪಡಿಸಿದ್ದಾರೆ. ಸಭೆ ಕರೆದು ಅಧಿಕಾರಿಗಳಿಗೆ ಆ ರೀತಿ ಮಾತನಾಡಿದ್ದು ಸರಿಯಲ್ಲ ಎಂದು ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಡಿಕೆ ಶಿವಕುಮಾರ್ ಮೊದಲ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಅಂದ್ರ ಗೂಂಡಾಗಿರಿ, ಗೂಂಡಾಗಿರಿ ಅಂದ್ರೆ ಕಾಂಗ್ರೆಸ್ ಅನ್ನುವಂತಾಗಿದೆ. ಬಿಜೆಪಿ, ಕಾಂಗ್ರೆಸ್, …
Read More »