Breaking News

Monthly Archives: ಜೂನ್ 2023

ಅಸಭ್ಯವಾಗಿ ವರ್ತಿಸಿದ ಮೂವರು ಮಂಗಳಮುಖಿಯರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ರಾಜಧಾನಿಯಲ್ಲಿ ಮಂಗಳಮುಖಿಯರ ಆಟಾಟೋಪ ಹೆಚ್ಚಾಗುತ್ತಿದೆ. ಕನಸಿನ ಮ‌ನೆ ಕಟ್ಟಿ ಗೃಹ ಪ್ರವೇಶ ಮಾಡುವಾಗಲೇ ಪ್ರವೇಶಿಸಿದ್ದ ಮೂವರು ಮಂಗಳಮುಖಿಯರು ಹೆಚ್ಚು ಹಣ ನೀಡುವಂತೆ‌ ಪೀಡಿಸಿ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಸಂಬಂಧ ಮೂವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕನಸಿನ ಮ‌ನೆ ಕಟ್ಟಿ ಗೃಹ ಪ್ರವೇಶ ಮಾಡುವಾಗಲೇ ಪ್ರವೇಶಿಸಿದ್ದ ಮೂವರು ಮಂಗಳಮುಖಿಯರು ಹೆಚ್ಚು ಹಣ ನೀಡುವಂತೆ‌ ಪೀಡಿಸಿ ಅಸಭ್ಯವಾಗಿ ವರ್ತಿಸಿರುವ ಪ್ರಕರಣ ಸಂಬಂಧ ಮೂವರನ್ನು ವೈಯಾಲಿಕಾವಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೃತಿಕಾ, …

Read More »

ಚುನಾವಣೆಯ ಫಲಿತಾಂಶ ಬಂದು 47 ದಿನಗಳಾದರೂ ವಿರೋಧ‌ ಪಕ್ಷದ ನಾಯಕ ನೇಮಕ ಮಾಡಲು ಬಿಜೆಪಿಯವರಿಗೆ ಆಗಿಲ್ಲ: ಕೃಷ್ಣ ಭೈರೇಗೌಡ

ಬೆಳಗಾವಿ: ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದು 47 ದಿನಗಳಾದರೂ ವಿರೋಧ‌ ಪಕ್ಷದ ನಾಯಕನನ್ನು ನೇಮಕ ಮಾಡಲು ಬಿಜೆಪಿಯವರಿಗೆ ಆಗಿಲ್ಲ ಎಂದರೆ, ಇದಕ್ಕಿಂತ ರಾಜಕೀಯ ನಾಯಕತ್ವದ ವೈಫಲ್ಯ ಇನ್ಯಾವುದಾದರೂ ಕರ್ನಾಟಕದಲ್ಲಿ ಇದೆಯೇ? ಎಂದು ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಟೀಕಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದು ಕಂದಾಯ ಇಲಾಖೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಬೀದಿಗಿಳಿದು, ಒಬ್ಬರಿಗೊಬ್ಬರು ಕೆಸರೆರಚಾಟ ಮಾಡಿಕೊಳ್ಳುತ್ತಿದ್ದಾರೆ. ಅವರು ಆಡುತ್ತಿರುವ ಮಾತುಗಳನ್ನು …

Read More »

ರಾಷ್ಟ್ರೀಯ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ: ಸಚಿವ ಡಾ‌.ಎಂ.ಸಿ.ಸುಧಾಕರ್​

ಬೆಳಗಾವಿ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊಸ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ‌.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.​ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ವರ್ಷದ ಹಿಂದೆ ನಮ್ಮ ರಾಜ್ಯದಲ್ಲಿ ಮಾತ್ರ ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ತರಲಾಗಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ‌ ಆಗಬೇಕಿತ್ತು ಮತ್ತು …

Read More »

ಕಾನೂನು ಸುವ್ಯವಸ್ಥೆ ಪೊಲೀಸ್ ಇನ್ಸ್​ಪೆಕ್ಟರ್​ಗಳಿಗೂ ಬಾಡಿವೋರ್ನ್ ಕ್ಯಾಮರಾ

ಬೆಂಗಳೂರು: ಪೊಲೀಸ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಹಾಗೂ ನಗರದಲ್ಲಿ ಜನಸ್ನೇಹಿ ಪೊಲೀಸ್ ವಾತಾವರಣ ಬಲಪಡಿಸಲು ಟ್ರಾಫಿಕ್ ಹಾಗೂ ಹೊಯ್ಸಳ‌ ಪೊಲೀಸ್ ಸಿಬ್ಬಂದಿಗೆ ನೀಡಲಾಗಿದ್ದ ಬಾಡಿವೋರ್ನ್ ಕ್ಯಾಮರಾವನ್ನು ಇನ್ನು ಮುಂದೆ ಕಾನೂನು‌ ಸುವ್ಯವಸ್ಥೆ ವಿಭಾಗದ ಪೊಲೀಸ್ ಇನ್ಸ್​ಪೆಕ್ಟರ್​ಗಳಿಗೂ ನೀಡಲು ನಗರ ಪೊಲೀಸ್ ಇಲಾಖೆ ನಿರ್ಧರಿಸಿದೆ. ನಗರದಲ್ಲಿರುವ 111 ಕಾನೂನು‌ ಸುವ್ಯವಸ್ಥೆ ವಿಭಾಗದ ಪೊಲೀಸ್ ಇನ್ಸ್​ಪೆಕ್ಟರ್​ಗಳಿಗೆ ತಲಾ ಒಂದು ಬಾಡಿವೋರ್ನ್ ಕ್ಯಾಮರಾವನ್ನು ಸೂಕ್ತ ತರಬೇತಿ ನೀಡಿ ಇನ್ನೊಂದು ವಾರದಲ್ಲಿ ವಿತರಿಸಲು ನಗರ ಪೊಲೀಸ್ ಆಯುಕ್ತ …

Read More »

SSLC ಪೂರಕ ಪರೀಕ್ಷಾ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

ಬೆಂಗಳೂರು : ಜೂನ್ ತಿಂಗಳಿನಲ್ಲಿ ನಡೆದಿದ್ದ ಎಸ್‌ಎಸ್‌ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಇಲಾಖೆಯ ಅಧಿಕೃತ ವೆಬ್​ಸೈಟ್ ಮೂಲಕ ತಾತ್ಕಾಲಿಕ ಅಂಕಪಟ್ಟಿ ಮುದ್ರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 1,11,781 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 46,270 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಶೇ. 41.39ರಷ್ಟು ಫಲಿತಾಂಶ ಬಂದಿದೆ. ಮಂಡಳಿಯ ಅಧಿಕೃತ ವೆಬ್​ಸೈಟ್​ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಎಸ್‌ಎಂಎಸ್ ಮೂಲಕವೂ ವಿದ್ಯಾರ್ಥಿಗಳಿಗೆ ಫಲಿತಾಂಶ ಕಳುಹಿಸಿಕೊಡಲಾಗುತ್ತದೆ …

Read More »

ಕರ್ನಾಟಕದ ನೀರಾವರಿ ಯೋಜನೆಗಳಿಗೆ ತ್ವರಿತ ಮಂಜೂರಾತಿ ನೀಡಲು ಕೇಂದ್ರಕ್ಕೆ ಮನವಿ: ಡಿಸಿಎಂ ಡಿಕೆಶಿ

ನವದೆಹಲಿ/ಬೆಂಗಳೂರು: ಕರ್ನಾಟಕದ ನೀರಾವರಿ ಯೋಜನೆಗಳಿಗೆ ತ್ವರಿತ ಮಂಜೂರಾತಿಗಳನ್ನು ನೀಡುವಂತೆ ಕೇಂದ್ರ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೇಂದ್ರ ಸಚಿವರ ಭೇಟಿ ಬಳಿಕ ದೆಹಲಿಯಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು, ದಕ್ಷಿಣ ಪೆನ್ನಾರ್ ಜಲಾನಯನ ನೀರು ಶುದ್ಧೀಕರಣ ಯೋಜನೆ ಮತ್ತು ಕರ್ನಾಟಕದ ವಿರುದ್ಧ ತಮಿಳುನಾಡು ರಾಜ್ಯ ಎತ್ತಿರುವ ಜಲ ವಿವಾದಕ್ಕೆ ಸಂಬಂಧಿಸಿದ ಮಹತ್ವದ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದರು. ತಮಿಳುನಾಡು ಮಾಡಿರುವ ಆರೋಪಗಳ ಬಗ್ಗೆ ಚರ್ಚಿಸಿ ನ್ಯಾಯಾಧಿಕರಣ …

Read More »

12 ವರ್ಷಗಳ ನಂತರ ಗೋಚರಿಸಿದ ಪುರಾತನ ದೇವಾಲಯ

ಚಿಕ್ಕೋಡಿ (ಬೆಳಗಾವಿ): ಜೂನ್ ತಿಂಗಳು ಮುಗಿದರೂ ಮಳೆ ಮಾತ್ರ ಆಗುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ಬರದ ಛಾಯೆ ಆವರಿಸಿ ಹಲವು ಜಿಲ್ಲೆಯಲ್ಲಿ ಬಹುತೇಕ ನದಿಗಳು ಬತ್ತಿ ಹೋಗಿವೆ. ಮಳೆಯಾಗದೇ ಇರುವುದರಿಂದ ಉತ್ತರ ಕರ್ನಾಟಕದ ಬಹುತೇಕ ಡ್ಯಾಂಗಳು ಖಾಲಿಖಾಲಿಯಾಗಿ ಗೋಚರಿಸುತ್ತಿವೆ. ಹಾಗೇ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ನೀರು ಖಾಲಿಯಾಗಿದ್ದು, ಬರೋಬ್ಬರಿ 12 ವರ್ಷಗಳ ನಂತರ ಪುರಾತನ ದೇವಸ್ಥಾನವೊಂದು ದರ್ಶನಕ್ಕೆ ಮುಕ್ತವಾಗಿದೆ. ವಿಠ್ಠಲ ದೇವಾಲಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ …

Read More »

ಮೊಬೈಲ್‌ ಕಳ್ಳರ ಕರಾಮತ್ತಿಗೆ ಕೇಂದ್ರದ CEIR ಕಡಿವಾಣ:

ಬೆಂಗಳೂರು: ದೇಶದಲ್ಲಿ ದಿನೇ ದಿನೆ ಹೆಚ್ಚಾಗುತ್ತಿರುವ ಮೊಬೈಲ್ ಕಳ್ಳತನ ಪ್ರಕರಣಗಳ ನಿಯಂತ್ರಣಕ್ಕೆ ಹಾಗೂ ಕದ್ದ ಮೊಬೈಲ್‌ಗಳ ದುರ್ಬಳಕೆ ತಪ್ಪಿಸಲು ಕೇಂದ್ರ ಗೃಹ ಇಲಾಖೆ ಹಾಗೂ ದೂರ ಸಂಪರ್ಕ ಇಲಾಖೆಗಳ ಸಹಭಾಗಿತ್ವದಲ್ಲಿ ಜಾರಿಗೆ ತಂದಿದ್ದ ಸೆಂಟ್ರಲ್ ಎಕ್ವಿಟ್‌ಮೆಂಟ್ ಐಡೆಂಟಿಟಿ ರಿಜಿಸ್ಟ್ರರ್ (ಸಿಇಐಆರ್) ಯೋಜನೆ ಫಲಪ್ರದವಾಗುತ್ತಿದೆ.   ಇಂದಿನ ಹೈಟೆಕ್ ಜಮಾನದಲ್ಲಿ ಸ್ಮಾರ್ಟ್‌ಪೋನ್ ಬಳಸುವುದು ಸಾಮಾನ್ಯ. ಇದನ್ನೇ ತಮ್ಮ ದುಷ್ಕೃತ್ಯಕ್ಕೆ ಗುರಿಯಾಗಿಸಿಕೊಳ್ಳುತ್ತಿರುವ ಖದೀಮರು ಮೊಬೈಲ್ ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಕಳುವಾದ ಮೊಬೈಲ್ ದೊರೆತರೂ ದುರ್ಬಳಕೆ …

Read More »

ಹೊಸಪೇಟೆ ಸಮೀಪ ಭೀಕರ ರಸ್ತೆ ಅಪಘಾತ: 7 ಜನ ಸ್ಥಳದಲ್ಲೇ ಸಾವು

ವಿಜಯನಗರ: ಎರಡು ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ರೈಲ್ವೆ ಬ್ರಿಡ್ಜ್ ಬಳಿ ಇಂದು ನಡೆದಿದೆ. ಮೃತರಲ್ಲಿ ಖಾಸಿಂ, ಯಾಸ್ಮಿನ್, ಉಮೇಶ್, ಜಹೀರಾ, ಮತ್ತು ಶ್ಯಾಮ, ಸೇರಿದಂತೆ ಒಟ್ಟು ಐವರ ಹೆಸರು ಗುರುತಿಸಲಾಗಿದ್ದು, ಇನ್ನಿಬ್ಬರ ಹೆಸರು ಪತ್ತೆಯಾಗಿಲ್ಲ. ವಿಷಯ ತಿಳಿಯುತ್ತಿದ್ದಂತೆ ಹೊಸಪೇಟೆ ಗ್ರಾಮೀಣ ಠಾಣೆ ಪೊಲೀಸರು ಸೇರಿದಂತೆ ಸ್ಥಳೀಯರು ಕಂದಕದಲ್ಲಿ ಬಿದ್ದ ಎರಡು ಆಟೋಗಳನ್ನು ಮೇಲೆತ್ತಿ ಗಾಯಾಳುಗಳನ್ನು ಹೊಸಪೇಟೆ …

Read More »

ಬೆಂಗಳೂರು- ಮೈಸೂರು ಹೆದ್ದಾರಿ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್

ಮಂಡ್ಯ: ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳನ್ನು ನಿಯಂತ್ರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಂಡ್ಯ ಜಿಲ್ಲೆಯಲ್ಲಿ ಶುಕ್ರವಾರ ಎಡಿಜಿಪಿ ಅಲೋಕ್‌ ಕುಮಾರ್‌ ಪರಿಶೀಲನೆ ನಡೆಸಿದರು. ದಶಪಥ ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಪಘಾತ ಪ್ರಕರಣಗಳು ಹೆಚ್ಚಾಗಿವೆ. ಕಳೆದ ವಾರ ರಾಮನಗರ ವ್ಯಾಪ್ತಿಯಲ್ಲಿ ಅಲೋಕ್ ಕುಮಾರ್ ಪರಿಶೀಲನೆ ನಡೆಸಿದ್ದರು. ಇದೀಗ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗಡಿಭಾಗ ನಿಡಘಟ್ಟದಿಂದ ಮೈಸೂರು ಗಡಿಯವರೆಗೆ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಎಸ್ಪಿ ಎನ್.ಯತೀಶ್ ಜೊತೆಗಿದ್ದರು. ಹೆದ್ದಾರಿಯಲ್ಲಿ ಕಂಡುಬರುತ್ತಿರುವ ಸಮಸ್ಯೆಗಳು …

Read More »