Breaking News

Daily Archives: ಜೂನ್ 1, 2023

ಲೈಂಗಿಕ ಕಿರುಕುಳ ಆರೋಪ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧಿಸುವಂತೆ ಆಗ್ರಹ

ಬೆಳಗಾವಿ: ದೇಶದ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಹೊತ್ತ ಭಾರತದ ಕುಸ್ತಿ ಫೆಡರೇಷನ್ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ ಸಿಂಗ್ ಅವರನ್ನು ತಕ್ಷಣವೇ ಬಂಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿದವು. ಬೆಳಗಾವಿ, ಶಿವಮೊಗ್ಗ, ಮೈಸೂರು ಸೇರಿದಂತೆ ಹಲವಡೆ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು, ಬ್ರಿಜ್ ಭೂಷಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಬ್ರಿಜ್ ಭೂಷಣ್ ಶರಣ್ …

Read More »

21 ಸಾವಿರ ಸರಕಾರಿ ನೌಕರರಿಂದ ಸರಕಾರಿ ಸೌಲಭ್ಯಗಳ ದುರ್ಬಳಕೆಯ ಕಳ್ಳಾಟ

ಬೆಂಗಳೂರು: ಸರಕಾರಿ ನೌಕರರ ನೆರವಿನಿಂದ ಸರಕಾರಿ ಸೌಲಭ್ಯಗಳ ದುರ್ಬಳಕೆಯ ಕಳ್ಳಾಟಗಳು ಸಾಮಾನ್ಯ. ಆದರೆ ಸರಕಾರದ ಸೌಲಭ್ಯವೊಂದನ್ನು ಸಾವಿರಾರು ಸಂಖ್ಯೆಯ ಸರಕಾರಿ ನೌಕರರೇ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣ ಪ್ರಜ್ಞಾವಂತರನ್ನು ಬೆಚ್ಚಿ ಬೀಳಿಸಿದೆ. ರಾಜ್ಯದಲ್ಲಿ ನಕಲಿ ಬಿಪಿಎಲ್ ಕಾರ್ಡ್ ಹೊಂದಿದ 4.6 ಲಕ್ಷ ಜನರಿಂದ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ 13.5 ಕೋಟಿ ರೂ. ದಂಡ ಸಂಗ್ರಹಿಸಿದೆ. ಈ ಪೈಕಿ  21,232 ಸಾವಿರ ಜನ ಸರಕಾರಿ ನೌಕರರು ಎಂಬ ವಿಷಯವನ್ನು ಇಲಾಖೆ ದೃಢಪಡಿಸಿದೆ. …

Read More »

ಕರ್ನಾಟಕದಲ್ಲಿ ಒಂದೇ ವಾರದಲ್ಲಿಲಘು ವಿಮಾನ ಪತನ;

ಚಾಮರಾಜನಗರ: ಇಲ್ಲಿನ ಭೋಗಪುರ ಬಳಿ ಲಘು ವಿಮಾನವೊಂದು ಪತನವಾಗಿದ್ದು ಇಬ್ಬರು ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ. ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಅಪಾಯದ ಮುನ್ಸೂಚನೆ ಲಭಿಸುತ್ತಿದ್ದಂತೆ ಇಬ್ಬರೂ ಪೈಲಟ್ ಗಳು ಪ್ಯಾರಾಚೂಟ್ ಮೂಲಕ ಕೆಳಗೊಇಳಿದಿದ್ದಾರೆ. ವಿಮಾನ ವೇಗದಲ್ಲಿ ಬಂದು ನೆಲಕ್ಕಪ್ಪಳಿಸುತ್ತಿದ್ದಂತೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು ಈ ಕುರಿತು ತನಿಖೆ ಕೈಗೊಳ್ಳಲಾಗುತ್ತಿದೆ. ಕಳೆದ ಮಂಗಳವಾರವಷ್ಟೇ ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ಸಾಂಬ್ರಾ ನಿಲ್ದಾಣದಿಂದ ಹೊರಟಿದ್ದ …

Read More »

ಜೂನ್ 9 ರಿಂದ 11 ರವರೆಗೆ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ

ಬೆಳಗಾವಿ: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ ಜೂನ್ 9 ರಿಂದ 11 ರವರೆಗೆ ನೆಹರು ನಗರದ ಕೆ.ಎಲ್.ಇ ಡಾ. ಹೆಚ್.ಬಿ ರಾಜಶೇಖರ ಸಭಾ ಭವನದಲ್ಲಿ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಪಾಲ್ಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿಲೀಪ್ ಕುರಂದವಾಡೆ ಅವರು ತಿಳಿಸಿದರು.   ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಪತ್ರಕರ್ತರು, ಸಂಪಾದಕರು ಹಾಗೂ ಸಾಧಕರು …

Read More »

ಲೋಕಾಯುಕ್ತ ದಾಳಿ: ಏಳು ಕೋಟಿ ಮೌಲ್ಯದ ಬಂಗಲೆ ಒಡೆಯ ಪಿಡಿಒ!

ದೊಡ್ಡಬಳ್ಳಾಪುರ: ಬೆಂಗಳೂರಿನ ರಾಜಾನುಕುಂಟೆಯ ಕಾಕೋಳು ರಸ್ತೆಯಲ್ಲಿ ಅಂದಾಜು ₹7 ಕೋಟಿ ಬೆಲೆ ಬಾಳುವ ಭವ್ಯ ಬಂಗಲೆ, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಸೋತೇನಹಳ್ಳಿ ಗ್ರಾಮದಲ್ಲಿ ಮನೆ, ಗುಂಜೂರು ಗ್ರಾಮದ ಸಮೀಪದ ಕೃಷಿ ಜಮೀನು, ದೊಡ್ಡಬಳ್ಳಾಪುರದ ಟಿ.ಬಿ.ನಾರಾಯಣಪ್ಪ ಬಡಾವಣೆಯಲ್ಲಿ ವಾಣಿಜ್ಯ ಸಂಕೀರ್ಣ…   ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಂಗಸ್ವಾಮಿ ಮನೆಯಲ್ಲಿ ದಾಖಲೆ ಪರಿಶೀಲನೆಯಲ್ಲಿ ದೊರೆತ ಆಸ್ತಿಗಳ ದಾಖಲೆ ಕಂಡು ಖುದ್ದು …

Read More »

ಕಾಮಗಾರಿ ಮುಗಿದು ಐದು ವರ್ಷ ಕಳೆದರೂ ಸಾರ್ವಜನಿಕ ಬಳಕೆಗೆ ಮುಕ್ತವಾಗಿಲ್ಲ.

ಬೆಳಗಾವಿ: ರಾಜ್ಯದಲ್ಲಿ ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅಧಿಕಾರವಧಿಯಲ್ಲಿ ಇಲ್ಲಿನ ಅಶೋಕ ನಗರದಲ್ಲಿ ನಿರ್ಮಾಣಗೊಂಡಿದ್ದ ಕ್ರೀಡಾ ಸಂಕೀರ್ಣಕ್ಕೆ ಹಿಡಿದ ಗ್ರಹಣ ಇನ್ನೂ ಬಿಟ್ಟಿಲ್ಲ. ಕಾಮಗಾರಿ ಮುಗಿದು ಐದು ವರ್ಷ ಕಳೆದರೂ ಸಾರ್ವಜನಿಕ ಬಳಕೆಗೆ ಮುಕ್ತವಾಗಿಲ್ಲ.   ಈಗ ಸಿದ್ದರಾಮಯ್ಯ ಅವರೇ ಮತ್ತೆ ಮುಖ್ಯಮಂತ್ರಿಯಾಗಿದ್ದು, ಈಗಲಾದರೂ ಅದು ಬಳಕೆಯಾಗುವುದೇ? ಅಥವಾ ನಿಷ್ಪ್ರಯೋಜಕವಾಗಿಯೇ ಉಳಿಯುವುದೇ? ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಕಾಂಗ್ರೆಸ್‌ನ ಫಿರೋಜ್‌ ಸೇಠ್‌ ಉತ್ತರ ಕ್ಷೇತ್ರದ ಶಾಸಕರಾಗಿದ್ದಾಗ ಮಹಾನಗರ ಪಾಲಿಕೆ …

Read More »

ಮನಬಂದಂತೆ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು

ಬೆಳಗಾವಿ: ಇಲ್ಲಿನ ಸರ್ಕಾರಿ ಸರ್ದಾರ್ಸ್‌ ಪ್ರೌಢಶಾಲೆಯಿಂದ ಲಿಂಗರಾಜ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ರಸ್ತೆಯಲ್ಲಿ ಜನರು ಬೇಕಾಬಿಟ್ಟಿಯಾಗಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ.ಇದೇ ರಸ್ತೆಯಲ್ಲಿ ಆಟದ ಮೈದಾನವಿದೆ. ಅಕ್ಕ-ಪಕ್ಕದಲ್ಲೇ ಶಿಕ್ಷಣ ಸಂಸ್ಥೆಗಳಿವೆ. ಈ ರಸ್ತೆ ಸದಾ ಜನದಟ್ಟಣೆಯಿಂದ ಕೂಡಿರುತ್ತದೆ. ಆದರೆ, ಕೆಲವರು ದ್ವಿಚಕ್ರ ವಾಹನ ಮತ್ತು ಕಾರುಗಳನ್ನು ರಸ್ತೆಬದಿ ಬೇಕಾಬಿಟ್ಟಿಯಾಗಿ ನಿಲ್ಲಿಸುತ್ತಿರುವುದರಿಂದ ಸಂಚಾರ ಸಮಸ್ಯೆ ತಲೆದೋರುತ್ತಿದೆ. ಸಂಬಂಧಿತ ಅಧಿಕಾರಿಗಳು ಇತ್ತ ಗಮನಹರಿಸಿ, ಮನಬಂದಂತೆ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಬೇಕು. …

Read More »

ಗುಣಮಟ್ಟದ ಶಿಕ್ಷಣ ಪಡೆದು ಮಕ್ಕಳು ಸಾಧನೆಯ ಶಿಖರ ಏರಬೇಕೆಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ

ಎಂ.ಕೆ.ಹುಬ್ಬಳ್ಳಿ: ಮಕ್ಕಳಲ್ಲಿ ಉತ್ತಮ ಆಚಾರ-ವಿಚಾರಗಳನ್ನು ಬೆಳೆಸಬೇಕು. ಗುಣಮಟ್ಟದ ಶಿಕ್ಷಣ ಪಡೆದು ಮಕ್ಕಳು ಸಾಧನೆಯ ಶಿಖರ ಏರಬೇಕೆಂದು ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಸಮೀಪದ ದಾಸ್ತಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಬುಧವಾರ ನಡೆದ 2023-24ನೇ ಸಾಲಿನ ಶಾಲಾ ಪ್ರಾರಂಭೋತ್ಸವದಲ್ಲಿ ಮಾತನಾಡಿದರು. ಸ ಶಾಲೆಗಳ ಅಭಿವೃದ್ಧಿಗೆ ಸರ್ಕಾರದ ಅನುದಾನದ ಜೊತೆಗೆ ಸಾರ್ವಜನಿಕರ ಸಹಾಯ, ಸಹಕಾರವು ಮುಖ್ಯ ಎಂದರು. ಶಾಸಕ ಬಾಬಾಸಾಹೇಬ ಪಾಟೀಲ ಹೂ ಕೊಟ್ಟು, ಸಿಹಿ ತಿನ್ನಿಸಿ ವಿದ್ಯಾರ್ಥಿಗಳನ್ನು …

Read More »

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿದರೆ ಮಾತ್ರ ನನಗೆ ಹೆಚ್ಚಿನ ನೆಮ್ಮದಿಯೆಂದು ಶಾಸಕ ವಿಶ್ವಾಸ್ ವೈದ್ಯ

ಸವದತ್ತಿ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿದರೆ ಮಾತ್ರ ನನಗೆ ಹೆಚ್ಚಿನ ನೆಮ್ಮದಿಯೆಂದು ಶಾಸಕ ವಿಶ್ವಾಸ್ ವೈದ್ಯ ಹೇಳಿದರು. ಇಲ್ಲಿನ ಯಲ್ಲಮ್ಮ ಪುರಸಭೆ ಸಭಾಂಗಣದಲ್ಲಿ ಜರುಗಿದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ಅವರು, ನಗರದಲ್ಲಿ ಮನೆಗಳಿಗೆ ಪ್ರತಿದಿನ ನೀರು ಪೂರೈಕೆಯಾಗಬೇಕಿದೆ. ಆ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಸಹಕರಿಸಿರಿ. ಜನರ ಮೂಲ ಸೌಕರ್ಯಗಳಿಗೆ ಹೆಚ್ಚು ಆಧ್ಯತೆ ನೀಡಬೇಕಿರುವುದು ಆಧ್ಯ ಕರ್ತವ್ಯವಾಗಿದೆ. 18 ಸಾವಿರ ಜನತೆಗಾಗಿ 1997ರಲ್ಲಿ ಜಾಕ್ವೆಲ್ ಸ್ಥಾಪನೆಯಾಗಿತ್ತು. ಸಧ್ಯ …

Read More »

ಕುಡಚಿ: ಇನ್ನೂ ಕಾಡುತ್ತಿದೆ ಮೂಲಸೌಕರ್ಯ ಕೊರತೆ

ಕುಡಚಿ: ಪರಿಶಿಷ್ಟ ಜಾತಿಗೆ ಮೀಸಲಾದ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಕುಡಚಿ ಕೂಡ ಒಂದು. ಹಿಂದುಳಿದ, ಪರಿಶಿಷ್ಟ ಹಾಗೂ ತುಳಿತಕ್ಕೊಳಗಾದ ಸಮುದಾಯಗಳ ಜನ ಇಲ್ಲಿ ಹೆಚ್ಚಾಗಿದ್ದಾರೆ. ನೂತನ ಶಾಸಕ ಮಹೇಂದ್ರ ತಮ್ಮಣ್ಣವರ ಅವರು ಈ ಎಲ್ಲ ಸಮುದಾಯಗಳನ್ನು ಹೇಗೆ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಮತ್ತು ಅವರ ಬೇಡಿಕೆಗೆ ಹೇಗೆ ಸ್ಪಂದಿಸುತ್ತಾರೆ ಎಂಬುದರ ಮೇಲೆ ಅವರ ಯಶಸ್ಸು ನಿಂತಿದೆ.   ಕುಡಚಿಯು ಬೆಳಗಾವಿ ಜಿಲ್ಲಾ ಕೇಂದ್ರದಿಂದ 104 ಕಿ.ಮೀ ದೂರವಿದೆ. ಕ್ಷೇತ್ರದ ಜನ …

Read More »