Breaking News

Daily Archives: ಜೂನ್ 12, 2023

ಗುಜರಾತ್​: ಬಿಪೊರ್‌ಜಾಯ್‌ ತೀವ್ರಗೊಂಡಿ ಚಂಡಮಾರುತ

ಮಹಾರಾಷ್ಟ್ರ/ಗುಜರಾತ್​: ಬಿಪೊರ್‌ಜಾಯ್‌ ಚಂಡಮಾರುತ ಇಂದು ತೀವ್ರಗೊಂಡಿದೆ. ಇದರಿಂದ ಮುಂಬೈ ಮತ್ತು ಗುಜರಾತ್ ಕರಾವಳಿಯಲ್ಲಿ ಅಲೆಗಳ ಉಬ್ಬರವಿಳಿತ ಹೆಚ್ಚಾಗಿದೆ. ಚಂಡಮಾರುತದ ಆರ್ಭಟಕ್ಕೆ ಕಡಲಿನ ಅಲೆಗಳು ದಡಕ್ಕೆ ಬಂದು ಅಪ್ಪಳಿಸುತ್ತಿವೆ. ಚಂಡಮಾರುತ ಮುಂದಿನ ದಿನಗಳಲ್ಲಿ ಗುಜರಾತ್ ಮತ್ತು ಪಾಕಿಸ್ತಾನದ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ. ಸೌರಾಷ್ಟ್ರ ಮತ್ತು ಗುಜರಾತ್‌ನ ಕಚ್ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್​ ಅಲರ್ಟ್ ನೀಡಿದೆ. ಈ ವಾರಾಂತ್ಯದಲ್ಲಿ ಮತ್ತು ಸೋಮವಾರ ಬೆಳಗ್ಗೆ ಕರಾವಳಿ ನಗರಗಳಾದ ಮುಂಬೈ ಮತ್ತು …

Read More »

ಕಲುಷಿತ ನೀರು ಸೇವಿಸಿ ಸಾವು: ಪ್ರಕರಣ ಮರುಕಳಿಸಿದರೆ ಜಿ.ಪಂ ಸಿಇಒ ಹೊಣೆ ಮಾಡಿ ಅಮಾನತ್ತಿಗೆ ಸೂಚಿಸಿ: ಸಿಎಂ ಎಚ್ಚರಿಕೆ

ಬೆಂಗಳೂರು: ರಾಜ್ಯದ 8 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಲಜೀವನ್‌ ಮಿಷನ್ ಯೋಜನೆಯ ಪ್ರಗತಿಯ ಕುರಿತಂತೆ ಮತ್ತು ಇಂದಿರಾ ಕ್ಯಾಂಟೀನ್‌ ನಿರ್ವಹಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯ ಮುಖ್ಯಾಂಶ ಇಂತಿದ್ದು, ರಾಜ್ಯದ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಲಾಯಿತು. ರಾಜ್ಯದಲ್ಲಿ ಮುಂಗಾರು ಜೂನ್‌ 10ರಂದು ಪ್ರಾರಂಭವಾಗಿದೆ. ಜೂನ್‌ 1ರಿಂದ 11ರವರೆಗಿನ ಮಾಹಿತಿ …

Read More »

ಹಾವೇರಿ : ಸರ್ಕಾರಿ ಬಸ್​​ನಿಂದ ಬಿದ್ದು ಶಾಲಾ ಬಾಲಕಿ ಸಾವು

ಹಾವೇರಿ : ಸರ್ಕಾರಿ ಸಾರಿಗೆ ಬಸ್​​ನಿಂದ ಬಿದ್ದು ಶಾಲಾ ಬಾಲಕಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮಧು ಕುಂಬಾರ(14) ಎಂದು ಗುರುತಿಸಲಾಗಿದೆ. ಬಾಲಕಿಯು ವಾಸನ ಗ್ರಾಮದಿಂದ ಕುಸನೂರು ಗ್ರಾಮದಲ್ಲಿರುವ ಪ್ರೌಢಶಾಲೆಗೆ ಆಗಮಿಸುವ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಬಸ್​ ಜನರಿಂದ ತುಂಬಿದ್ದ ಕಾರಣಕ್ಕಾಗಿ ಬಾಲಕಿ ಬಾಗಿಲ ಬಳಿಯೇ ಬಾಲಕಿ ನಿಂತಿದ್ದಳು. ಅಲ್ಲದೆ ರಸ್ತೆ ಕೂಡ ಹದಗೆಟ್ಟಿತ್ತು ಎಂದು ಹೇಳಲಾಗಿದೆ. …

Read More »

ಕೈಗಾರಿಕೆಗಳ ವಿದ್ಯುತ್ ದರ ಇಳಿಸಿ – ಸರ್ಕಾರಕ್ಕೆ ಏಳು‌ ದಿನಗಳ‌ ಗಡುವು ಕೊಟ್ಟ ಬೆಳಗಾವಿ ಉದ್ಯಮಿಗಳು

ಬೆಳಗಾವಿ: ರಾಜ್ಯ ಸರ್ಕಾರ ಏಕಾಏಕಿ ವಿದ್ಯುತ್ ದರ ಹೆಚ್ಚಳ ಮಾಡಿರುವುದಕ್ಕೆ ಕೈಗಾರಿಕೋದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಳು ದಿನಗಳೊಳಗೆ ಹೆಚ್ಚಿಸಿರುವ ವಿದ್ಯುತ್ ದರ ಕಡಿಮೆ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬೆಳಗಾವಿ ಚೇಂಬರ್ ಆಫ್ ಕಾಮರ್ಸ್ ಮಾಜಿ ಅಧ್ಯಕ್ಷ ರೋಹನ್ ಜುವಳಿ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಳಗಾವಿಯಲ್ಲಿ “ಈಟಿವಿ ಭಾರತ” ಜೊತೆಗೆ ಅವರು ಮಾತನಾಡಿದರು. ನಾಳೆ ಬೆಳಗ್ಗೆ ಚನ್ನಮ್ಮ ವೃತ್ತದಿಂದ ಮೌನ ರ್‍ಯಾಲಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ …

Read More »

ತಿಲಾರಿ ಡ್ಯಾಂ​ನ ಹಿನ್ನೀರಿನಲ್ಲಿ ಮುಳುಗಿ ಬೆಳಗಾವಿಯ ಸಹೋದರರು ಸಾವು

ಬೆಳಗಾವಿ: ಪಕ್ಕದ ಮಹಾರಾಷ್ಟ್ರ ರಾಜ್ಯದ ಚಂದಗಡ ತಾಲೂಕಿನ ತಿಲಾರಿ ಡ್ಯಾಂನ ಹಿನ್ನೀರಿನಲ್ಲಿ ಮುಳುಗಿ ಬೆಳಗಾವಿ ನಗರದ ಇಬ್ಬರು ಸಹೋದರರು‌ ಮೃತಪಟ್ಟಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ಮೃತರು ಕುಂದಾನಗರಿಯ ಕ್ಯಾಂಪ್​ ಪ್ರದೇಶದ ರೀಹಾನ್ ಅಲ್ತಾಫ್ ಖಾನ್ (15) ಹಾಗೂ ಮುಸ್ತಫಾ ಅಲ್ತಾಫ್ ಖಾನ್ (12) ಎಂದು ಗುರುತಿಸಲಾಗಿದೆ. ವೀಕೆಂಡ್​ ಹಿನ್ನೆಲೆಯಲ್ಲಿ ಶನಿವಾರ ಸಂಜೆ ಕುಟುಂಬಸ್ಥರೊಂದಿಗೆ ಅಲ್ತಾಪ್ ಖಾನ್ ಹಾಜಗೋಳಿ ಗ್ರಾಮದ ಬಳಿ ಇರುವ ತಿಲಾರಿ ಡ್ಯಾಮ್ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ತಿಲಾರಿ …

Read More »

ಮಹಾರಾಷ್ಟ್ರದ ನಾಸಿಕ್​ನಲ್ಲಿ ಭೀಕರ ರಸ್ತೆ ಅಪಘಾತ

ನಾಸಿಕ್​​: ಮಹಾರಾಷ್ಟ್ರದ ನಾಸಿಕ್​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಲ್ಲಿಯ ಶಿರಡಿ- ಭರವೀರ್ ಹೆದ್ದಾರಿಯಲ್ಲಿ ಭಾನುವಾರ ಮಧ್ಯರಾತ್ರಿ ಕಾರು ದುರಂತದಲ್ಲಿ ನಾಲ್ವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ. ರಜಾಕ್ ಅಹ್ಮದ್ ಶೇಖ್, ಸತ್ತಾರ್ ಶೇಖ್ ಲಾಲ್ ಶೇಖ್, ಸುಲ್ತಾನ್​ ಸತ್ತಾರ್ ಶೇಖ್, ಫಿಯಾಜ್ ದಗುಭಾಯಿ ಶೇಖ್ ಮೃತರು ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋವಾ ಕಾರಿನಲ್ಲಿದ್ದ ಪ್ರಯಾಣಿಕರು ಹಜ್ ಯಾತ್ರೆಗೆಂದು ಮುಂಬೈನಿಂದ ಹೊರಟು ಶಿರಡಿಗೆ ವಾಪಸಾಗುತ್ತಿದ್ದರು. ಭಾನುವಾರ ಮಧ್ಯರಾತ್ರಿ …

Read More »

ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ.. ಖಾಸಗಿ ಬಸ್​ಗಳಲ್ಲಿ ಪ್ರಯಾಣಿಕರ ಕೊರತೆ

ಮಂಗಳೂರು: ಸರ್ಕಾರಿ ಬಸ್​ನಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಓಡಾಡುವ ಮಾರ್ಗದಲ್ಲಿ ಖಾಸಗಿ ಬಸ್​ಗಳಿಗೆ ಮಹಿಳಾ ಪ್ರಯಾಣಿಕರ ಕೊರತೆಯನ್ನು ಸೃಷ್ಟಿಸಿದೆ.   ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಗರ ಮತ್ತು ಜಿಲ್ಲೆಯಾದ್ಯಂತ ಸಂಚಾರಕ್ಕೆ ಹೆಚ್ಚಿನ ಜನರು ಖಾಸಗಿ ಬಸ್​ಗಳನ್ನು ಅವಲಂಬಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್​ಗಳ ಪ್ರಭಾವವೇ ಅಧಿಕ. ಇಲ್ಲಿನ‌ ಜನರು ನಗರದಲ್ಲಿ ಪ್ರಯಾಣಿಸಲು, ಜಿಲ್ಲೆಯಾದ್ಯಂತ ಪ್ರಯಾಣಿಸಲು ಮತ್ತು ಉಡುಪಿ …

Read More »

ರಾಜ್ಯಾದ್ಯಂತ ಮೊದಲ ದಿನವೇ 5.71 ಲಕ್ಷ ಮಹಿಳಾ ಪ್ರಯಾಣಿಕರ ಸಂಚಾರ

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಮಹಾತ್ವಾಕಾಂಕ್ಷೆ ಶಕ್ತಿ ಯೋಜನೆಗೆ ಮೊದಲ ದಿನವೇ ಮಹಿಳೆಯರಿಂದ ಭರ್ಜರಿ ಸ್ಪಂದನೆ ಸಿಕ್ಕಿದೆ. ಭಾನುವಾರ ವಿಧಾನಸೌಧದಲ್ಲಿ ಚಾಲನೆ ಸಿಕ್ಕ ಶಕ್ತಿ ಗ್ಯಾರಂಟಿ ಯೋಜನೆಯನ್ನು ರಾಜ್ಯದ ಮಹಿಳೆಯರು ಖುಷಿ ಖುಷಿಯಾಗಿ ಸ್ವೀಕಾರ ಮಾಡಿದ್ದಾರೆ. ನಿನ್ನೆ ಮಧ್ಯಾಹ್ನ 1 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಶಕ್ತಿ ಯೋಜನೆಯಡಿ ಸುಮಾರು 5 ಲಕ್ಷದ 71 ಸಾವಿರಕ್ಕೂ ಹೆಚ್ಚು ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಯೋಜನೆ ಜಾರಿಗೊಂಡ ಬೆನ್ನಲ್ಲೇ ಸಾಕಷ್ಟು ಮಹಿಳೆಯರು ಉಚಿತ …

Read More »

ಭೀಕರ ರಸ್ತೆ ಅಪಘಾತ : ಗ್ರಾ.ಪಂ.ಸದಸ್ಯ ಸಾವು, ಮೂವರು ಗಂಭೀರ.!

ಮೈಸೂರು : ಮೈಸೂರಿನ ಹುಣಸೂರು-ಮೈಸೂರು ಹೆದ್ದಾರಿಯ ಬನ್ನಿಕುಪ್ಪೆ ಸಮೀಪ ಸಾರಿಗೆ ಸಂಸ್ಥೆ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಸಾವಿಗೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟವರು ಹುಣಸೂರು ತಾಲೂಕಿನ ತಟ್ಟೆಕೆರೆ ಗ್ರಾ.ಪಂ.ವ್ಯಾಪ್ತಿಯ ನಿಲುವಾಗಿಲು ಗ್ರಾಮದ ಗ್ರಾ.ಪಂ.ಸದಸ್ಯ ಭಾಸ್ಕರ್ (42) ಎಂದು ತಿಳಿದುಬಂದಿದೆ. ಪತ್ನಿ ರಮ್ಯಾ, ತಾಯಿ ಸಾವಿತ್ರಮ್ಮ, ಪುತ್ರ ಚರಿತ್ ಗಾಯಗೊಂಡಿದ್ದು, ಮೈಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಸ್ಕರ್ ಅವರು ತಮ್ಮ …

Read More »

ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯ ಬರ್ಬರ ಹತ್ಯೆ

ಧಾರವಾಡ : ಧಾರವಾಡ ತಾಲೂಕಿನ ಗೋವನಕೊಪ್ಪ ಗ್ರಾಮದ ಹೊರವಲಯದಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹತ್ಯೆಗೀಡಾದ ಮಹಿಳೆ ರೂಪಾ ಸವದತ್ತಿ ಎಂದು ತಿಳಿದುಬಂದಿದೆ. ನಿನ್ನೆ ಮನೆಯಿಂದ ಹೊರಗಡೆ ಹೋಗಿದ್ದ ರೂಪಾ ರಾತ್ರಿಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅವರಿಗಾಗಿ ಮನೆಯವರು ಹುಡುಕಾಟ ನಡೆಸಿದ್ದರು. ಆದರೆ, ಇಂದು ಬೆಳಿಗ್ಗೆ ರೂಪಾ ಅವರ ಶವ ಗ್ರಾಮದ ಹೊರವಲಯದಲ್ಲಿ ಪತ್ತೆಯಾಗಿದೆ. ಯಾರು ಕೊಲೆ ಮಾಡಿದವರು ಹಾಗೂ ಏತಕ್ಕಾಗಿ ಕೊಲೆ …

Read More »