Breaking News

Daily Archives: ಜೂನ್ 21, 2023

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಇಬ್ಬರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ!

ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಮತ್ತೆ ಇಬ್ಬರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ! ಕಣ್ಣಿನ ದೋಷವಿರುವ ಸಾರ್ವಜನಿಕರಿಗೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ನಗರದ ನೇತ್ರ ದರ್ಶನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮತ್ತೆ ಇಬ್ಬರಿಗೆ ಉಚಿತ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡಿಸಿದ್ದಾರೆ. ಈ ಸಂದರ್ಭದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ತಂಡದ ಜುಬೇರ್ ಮಿರ್ಜಾಬಾಯಿ ಹಾಗೂ ಆಸ್ಪತ್ರೆಯ ವೈದ್ಯರು …

Read More »

ಬೆಳಗಾವಿ ಜಿಲ್ಲೆಯ ರಕ್ಕಸಕೊಪ್ಪ, ಘಟಪ್ರಭಾ, ಮಲಪ್ರಭಾ ಜಲಾಶಯಗಳು ಖಾಲಿ

ಮಹಾರಾಷ್ಟ್ರ ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಜೀವಜಲ‌ ಮೂಲವಾದ ಡ್ಯಾಮ್ ಗಳೂ ಖಾಲಿ ಖಾಲಿ ಆಗ್ತಿವೆ. ಮಳೆಗಾಗಿ ದೇವರ ಮೊರೆ ಹೋದ್ರು ಪ್ರಯೋಜನವಾಗಿಲ್ಲ. ಇನ್ನೊಂದು ವಾರದಲ್ಲಿ ಮಳೆ ಬಾರದಿದ್ದರೆ, ಮಳೆಗಾಗಿ ಮೊಡ ಬಿತ್ತನೆಗೆ ಸರ್ಕಾರ ಚಿಂತನೆ ನಡೆಸಲಿದೆ ಅಂತಾ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮುನ್ಸೂಚನೆ ನೀಡಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಕಳೆದ 19 ದಿನಗಳಿಂದ ಮುಂಗಾರು ಮಳೆಯ ಸುಳಿವಿಲ್ಲ. ಇದರಿಂದ ಮಹಾರಾಷ್ಟ್ರದ ಮತ್ತು ಕರ್ನಾಟಕದಲ್ಲಿ ಬರಗಾಲದ …

Read More »

ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಅನಾರೋಗ್ಯದ ಕಾರಣದಿಂದ ಮಹಿಳೆಯೊಬ್ಬಳು ಮನನೊಂದು ಕೆರೆಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿಯಲ್ಲಿ ನಡೆದಿದೆ. ಬಸವ್ವ ಚಿಕ್ಕನೇರ್ತಿ ಎಂಬುವ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ನೆರೆಗಲ್ಲನಿಂದ ತವರು ಮನೆಯಾಗಿರುವ ಶಿರಗುಪ್ಪಿಗೆ ಬಂದಿದ್ದ ಬಸವ್ವ ಆತ್ಮಹತ್ಯೆ ಮಾಡಿಕೊಂಡಿದ್ದು, ಪೊಲೀಸ್ ತನಿಖೆಯ ನಂತರವೇ ಆತ್ಮಹತ್ಯೆಗೆ …

Read More »

ವಿಧಾನಸೌಧದ ಮುಂಭಾಗ ಹಮ್ಮಿಕೊಳ್ಳಲಾಗಿದ್ದ ಯೋಗ ಕಾರ್ಯಕ್ರಮ

ಬೆಂಗಳೂರು : 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಆಯುಷ್ಯ ಇಲಾಖೆಯಿಂದ ಇಂದು ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ “ಯೋಗ-ವಸುದೈವ ಕುಟುಂಬಕ್ಕಾಗಿ” ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.   ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾತನಾಡಿದ ರಾಜ್ಯಪಾಲರು ಯೋಗದ ಮಹತ್ವವನ್ನ ತಿಳಿಸಿದರು. ” ನಮ್ಮ ಸಂಸ್ಕೃತಿಯಲ್ಲಿ ಯೋಗಕ್ಕೆ ತನ್ನದೇ ಆದ ಹೆಸರಿದೆ. ಯೋಗದ ಮಹತ್ವ ಕುರಿತು ನಮ್ಮ ಹಳೆ ಗ್ರಂಥಗಳಲ್ಲಿ ಉಲ್ಲೇಖವಿದೆ. ಯೋಗಭ್ಯಾಸದಿಂದ ಭೌತಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆ ಆಗುತ್ತದೆ. …

Read More »

ಪಿಎಸ್‌ಐ ನೇಮಕಾತಿ ಅಕ್ರಮದ 52 ಆರೋಪಿ ಅಭ್ಯರ್ಥಿಗಳು ಡಿಬಾರ್ : ಉಳಿದ ಅಭ್ಯರ್ಥಿಗಳಿಗೆ ಹೊಸ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಹಗರಣದ 52 ಜನ ಆರೋಪಿತ ಅಭ್ಯರ್ಥಿಗಳನ್ನು ಪರೀಕ್ಷೆಯಿಂದ ಶಾಶ್ವತವಾಗಿ ಡಿಬಾರ್ ಮಾಡಿ ಪೊಲೀಸ್ ನೇಮಕಾತಿ ವಿಭಾಗ ಮಂಗಳವಾರ ಆದೇಶ ಪ್ರಕಟಿಸಿದೆ. ಆದ್ದರಿಂದ ಉಳಿದ ಅಭ್ಯರ್ಥಿಗಳಿಗೆ ನೌಕರಿ ಸಿಗುವ ವಿಶ್ವಾಸ ಮೂಡಿದ್ದು, ಪ್ರಕರಣದ ತೀರ್ಪಿನ ಮೇಲೆ ಅವಲಂಬನೆಯಾಗಲಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು 52 …

Read More »

ಬೈಕ್ ಪಕ್ಕಕ್ಕೆ ಸರಿಸು ಎಂದಿದ್ದಕ್ಕೆ ಹಲ್ಲೆ ಮಾಡಿದ್ದ ನಾಲ್ವರ ಬಂಧನ

ಬೆಂಗಳೂರು: ಬೈಕ್​ಅನ್ನು ಪಕ್ಕಕ್ಕೆ ಸರಿಸಲು ಹೇಳಿದ್ದಕ್ಕೆ ಚಾಕುವಿಂದ ಹಲ್ಲೆ ಮಾಡಿದ್ದ ರೌಡಿಶೀಟರ್ ಸಹಿತ ನಾಲ್ವರು ಆರೋಪಿಗಳನ್ನ ಬನಶಂಕರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ರೌಡಿ ಶೀಟರ್​ ಸಂದೀಪ್ ಮತ್ತು ಶಶಾಂಕ್, ಕಿರಣ್, ಶ್ರೀಧರ್ ಬಂಧಿತ ಆರೋಪಿಗಳು. ಇದೇ ತಿಂಗಳ 18ರಂದು ರಾತ್ರಿ ಪದ್ಮನಾಭ ನಗರದ ರಾಘವೇಂದ್ರ ಕಾಲೋನಿಯಲ್ಲಿ ಈ ಘಟನೆ ನಡೆದಿತ್ತು. ಪ್ರದೀಪ್ ಎಂಬಾತನ ಮೇಲೆ ಆರೋಪಿಗಳ ಸಹಿತ ಏಳು ಜನರ ತಂಡ ಹಲ್ಲೆ ಮಾಡಿರುವುದಾಗಿ ಬನಶಂಕರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಫ್ಲೆಕ್ಸ್​ಗಳನ್ನ …

Read More »

ಆಸ್ಪತ್ರೆಯಲ್ಲಿರುವ ಪತ್ನಿ ಆರೋಗ್ಯ ವಿಚಾರಿಸಿ, ದಿಲ್ಲಿಗೆ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪತ್ನಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಹಿನ್ನೆಲೆ ಅವರ ಆರೋಗ್ಯ ವಿಚಾರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ಬೆಳೆಸಿದ್ದಾರೆ. ಪಕ್ಷದ ಹೈಕಮಾಂಡ್‌ ನಾಯಕರ ಭೇಟಿಗಾಗಿ ಸಿದ್ದರಾಮಯ್ಯ ನಿನ್ನೆಯೇ ತೆರಳಬೇಕಿತ್ತು. ಆದರೆ ನಿನ್ನೆ ವಿವಿಧ ಕಾರ್ಯಕ್ರಮ ಎದುರಾದ ಹಿನ್ನೆಲೆ ಇಂದಿಗೆ ಮುಂದೂಡಿದ್ದರು. ಬೆಳಗ್ಗೆ ಪ್ರಯಾಣ ಬೆಳೆಸಬೇಕಿತ್ತು. ಆದರೆ ತೀವ್ರ ಜ್ವರದ ಕಾರಣ ನಿನ್ನೆ ರಾತ್ರಿ ಸಿಎಂ ಪತ್ನಿ ಪಾರ್ವತಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾರ್ವತಿ ಸಿದ್ದರಾಮಯ್ಯ …

Read More »

ಯೋಗದಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ಈ ಯೋಗಪಟು ಪಕ್ಕಾ ಹಳ್ಳಿ ಹೈದ.

ಬೆಳಗಾವಿ: ಇಂದು ವಿಶ್ವ ಯೋಗ ದಿನ. ಈ ದಿನ ಓರ್ವ ಅಪರೂಪದ ಯೋಗ ಸಾಧಕಈ ಯೋಗಪಟು ಪಕ್ಕಾ ಹಳ್ಳಿ ಹೈದ. ಇವರು 85ಕ್ಕೂ‌ ಅಧಿಕ ಆಸನಗಳನ್ನು ಹಾಕುವ ಮೂಲಕ ಯೋಗದಲ್ಲಿ ಸಾಧನೆ ಮೆರೆಯುತ್ತಿದ್ದಾರೆ. ಯೋಗಕ್ಕೆ ಯಾವುದೇ ಜಾತಿ – ಧರ್ಮದ ಬಂಧನವಿಲ್ಲ. ಸತತ ಪರಿಶ್ರ ಮ, ತಾಳ್ಮೆ, ಆಸಕ್ತಿ ಮತ್ತು ಶ್ರದ್ಧೆಯಿದ್ದರೆ ಸಾಕು. ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದ ಬುಡನ್ ಮಲ್ಲಿಕ್ ಹೊಸಮನಿ (31) ಅವರು ಯಾವುದೇ ಗುರುವಿನ ಸಹಾಯ ಇಲ್ಲದೇ …

Read More »

ಕಾಂಗ್ರೆಸ್​ನವರು ಹತ್ತಲ್ಲ 15 ಕೆ.ಜಿ ಅಕ್ಕಿ ಕೊಡಬೇಕು: ಶಶಿಕಲಾ ಜೊಲ್ಲೆ

ಚಿಕ್ಕೋಡಿ (ಬೆಳಗಾವಿ): ಕಾಂಗ್ರೆಸ್ ನಾಯಕರು ಚುನಾವಣೆಯ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್​ದಾರರ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿಯನ್ನು ವಿತರಣೆ ಮಾಡಲಾಗುವುದೆಂದು ಗ್ಯಾರಂಟಿ ಕಾರ್ಡ್​ಗಳನ್ನು ನೀಡಿದ್ದಾರೆ. ಆದರೆ ಆ ಭರವಸೆಗಳನ್ನು ಅವರಿಗೆ ಈಡೇರಿಸಲು ಆಗುತ್ತಿಲ್ಲ. ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಹಾಕಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್​ ಪಕ್ಷದ ಈ ಪ್ರತಿಭಟನೆ ಖಂಡಿಸುತ್ತೇವೆ ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು. ಬೆಳಗಾವಿ ಜಿಲ್ಲೆಯ …

Read More »

ಹೆಂಡತಿಗೆ ಫ್ರೀ ಕೊಟ್ಟು ಗಂಡನ ಕಿಸೆಯಿಂದ‌ ಕಾಂಗ್ರೆಸ್ ಕಸಿದುಕೊಳ್ಳುತ್ತಿದೆ:ಈರಣ್ಣ ಕಡಾಡಿ

ಬೆಳಗಾವಿ : ಚುನಾವಣೆ ಕಾರಣದಿಂದ ನೀವು ಏನೇನು ಘೋಷಣೆ ಮಾಡಿದ್ದೀರೋ ಅವುಗಳನ್ನು ಜಾರಿಗೆ ತರುವುದು ನಿಮ್ಮ ಜವಾಬ್ದಾರಿ. ನೀವು ಕೂಡ ಅಕ್ಕಿ ಖರೀದಿ ಮಾಡಲು ಮುಕ್ತ ಮಾರುಕಟ್ಟೆಯಲ್ಲಿ ಅವಕಾಶವಿದೆ. ಉಪಯೋಗ ಮಾಡಿಕೊಳ್ಳಬೇಕೆ ಹೊರತು, ಕೇಂದ್ರದ ಮೇಲೆ ಆರೋಪ ಮಾಡಬಾರದು. ದೇಶದ ಎಲ್ಲಾ ರಾಜ್ಯಗಳನ್ನು ಕೇಂದ್ರ ಸರ್ಕಾರ‌ ಗಮನದಲ್ಲಿ ಇಟ್ಟುಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿರುಗೇಟು ನೀಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಪೂರ್ವ ತಯಾರಿ …

Read More »