ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ನಡೆದಿದ್ದು, ಪ್ರಕರಣ ಸಂಬಂಧ ತಾಯಿ ಮತ್ತು ಬಾಲಾಪರಾಧಿ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಚಿಕ್ಕೋಡಿ: ತಾಯಿಗಿಂತ ಮಿಗಿಲಾದ ದೇವರಿಲ್ಲ ಅಂತಾರೆ. ಆದರೆ, ಇಲ್ಲಿ ತಾಯಿಯೇ ಬೆಳೆದು ನಿಂತ ಮಗನ ಜೀವ ತೆಗೆದು ಇದೀಗ ಜೈಲುಪಾಲಾಗಿರುವ ವಿಲಕ್ಷಣ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದ ನಿವಾಸಿ ಹರಿಪ್ರಸಾದ್ ಬೋಸ್ಲೆ (21) ಕೊಲೆಯಾದ ಯುವಕ. ಸುಧಾ ಬೋಸ್ಲೆ ಜೈಲುಪಾಲಾದ ತಾಯಿ. ಕೊಲೆಗೆ ಸಹಕರಿಸಿದ …
Read More »Monthly Archives: ಜೂನ್ 2023
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಮುಂಗಾರು ಮಳೆಯ ಅಭಾವ ಹಾಗೂ ಬರಗಾಲದಿಂದ ರೈತರ ಬದುಕು ತತ್ತರಿಸಿ ಹೋಗಿದೆ. ಬರ ಪರಿಹಾರದ ಮೊತ್ತ ಒಂದು ಎಕರೆಗೆ 50 ಸಾವಿರ ರೂ. ದಂತೆ ಪರಿಹಾರ ಧನ ಕೊಡಬೇಕು ಎಂದು ಒತ್ತಾಯಿಸಿದರು. ಜಿಲ್ಲೆಯಲ್ಲಿರುವ ಪ್ರತಿಯೊಂದು ಗ್ರಾಮಕ್ಕೆ ಕುಡಿಯಲು ಸಾರ್ವಜನಿಕರಿಗೆ ಹಾಗೂ ಜಾನುವಾರುಗಳಿಗೆ ನೀರಿನ ವ್ಯವಸ್ಥೆಯನ್ನು …
Read More »ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ
ಮದುವೆಯಾಗಿದ್ದರೂ ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಗೆಳೆಯನೊಂದಿಗೆ ಸೇರಿಕೊಂಡು ಪತಿಯನ್ನು ಕೊಲೆ ಮಾಡಿ ಕಳೆದ ಮೂರು ತಿಂಗಳ ಹಿಂದೆ ನನ್ನ ಪತಿ ಕಾಣೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿ ಈಗ ಖಾಕಿಗೆ ಲಾಕ್ ಆದ ಘಟನೆ ನಡೆದಿದೆ. ಅನೈತಿಕ ಸಂಬಂಧ ಪ್ರಶ್ನೆ ಮಾಡಿದ ಪತಿಯನ್ನೇ ಗೆಳೆಯನೊಂದಿಗೆ ಸೇರಿಕೊಂಡು ಕೊಲೆ ಮಾಡಿ ಕಳೆದ ಮೂರು ತಿಂಗಳು ಹಿಂದೆ ನನ್ನ ಪತಿ ರಮೇಶ ಕಾಂಬಳೆ ಕಾಣೆಯಾಗಿದ್ದಾನೆ ಎಂದು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ …
Read More »ಶಾಲಾ ಮಕ್ಕಳಿಗೆ ಕುಡಿಯುವ ನೀರಿನ ಬಿಸಿ ಮುಟ್ಟಿದೆ
ಬೆಳಗಾವಿಯ ಅಥಣಿ ಕಾಗವಾಡ ತಾಲೂಕಿನಲ್ಲಿ ರೈತರು ಕಬ್ಬಿನ ಜೊತೆ ದಾಕ್ಷಿ ಬೆಳೆಯು ಹೆಚ್ಚಾಗಿ ಬೆೆಳೆಯಲಾಗುತ್ತಿದೆ ದ್ರಾಕ್ಷಿ ಬೆಳೆಗಾರರು ತಮ್ಮ ದ್ರಾಕ್ಷಿ ಬಳ್ಳಿಯಲ್ಲಿ ಸೂಕ್ಷ್ಮ ಘಡ ನಿರ್ಮಾಣ ಕಂಡು ಬರುತ್ತಿಲ್ಲ ಎಂದು ಆತಂಕಕೆ ಒಳಗಾಗಿದ್ದಾರೆ ಅತಿಯಾಗಿ ಬಿಸಿಲಿನ ಪ್ರಭಾವ ಇರುವುದರಿಂದ ದ್ರಾಕ್ಷಿ ಬಳ್ಳಿಯ ಎಲೆಗಳು ಬಾಡಿ ಉದುರುತ್ತಿವೆ ಜೊತೆಗೆ ನೀರಿನ ಕೊರತೆಯೂ ಇರುವುದರಿಂದ ದ್ರಾಕ್ಷಿಬಳ್ಳಿ ಬಾಡಿ ನೆಲಕಚ್ಚುತಿವೆ ರಾಜ್ಯದಲ್ಲಿ ಬರದ ಛಾಯೆ ಮುಂದುವರದಿದೆ ಕುಡಿಯುವ ನೀರಿನ ಆಹಾಕಾರ ಮುಗಿಲೆತ್ತರಕ್ಕೆ ಹೋಗಿದೆ ಶಾಲಾ …
Read More »ಕತ್ತೆ ಮದುವೆ ಮಾಡಿಸಿ ಮಳೆ ಯಾಗಲಿ ಎಂದು ಕೇಳಿ ಕೊಂಡ ಗೋಕಾಕ ಜನತೆ
ಗೋಕಾಕ: ವರುಣ ರಾಜ ಮುನಿಸಿ ಕೊಂಡಂತೆ ಇದೆ ರಾಜ್ಯ ದಲ್ಲಿ ಮುಂಗಾರು ಬಿತ್ತನೆ ಪ್ರಾರಂಭ ವಾದರು ಕೂಡ್ ಮಳೆ ಇನ್ನು ರೈತ ನಿಗೆ ಸಾಥ್ ಕೊಡುತ್ತಿಲ್ಲ ನಮ್ಮಲ್ಲಿ ಮಳೆ ಬರಬೇಕು ಎಂ ದು ಚಿತ್ರ ವಿಚಿತ್ರ ಸಂಪ್ರ ದಾಯ ಗಳನ್ನ ಮಾಡುತ್ತಾರೆ. ಅದೇರೀತಿ ಇಂದು ಗೋಕಾಕ ನಲ್ಲಿ ಕತ್ತೆ ಗಳಿಗೆ ಮದುವೆ ಮಾಡಿಸಿ ಮಳೆ ಯಾಗಲಿ ಎಂದು ಕೇಳಿ ಕೊಂಡಿ ದ್ವಿಾರೆ ಗೋಕಾಕ ನಗರ್ ದ ಅರಾದ್ಯ ದೇವತೆ ಗುಡಿಯಲ್ಲಿ …
Read More »‘ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ?’: ವಿದ್ಯುತ್ ತೆರಿಗೆ ಶೇ.3ರಿಂದ 4ರಷ್ಟು ಕಡಿತಗೊಳಿಸಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಬೆಂಗಳೂರು : ಈಗಾಗಲೇ ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳವಾಗಿರುವ ಬಗ್ಗೆ ಪ್ರತಿಭಟನೆಗಳು ನಡೆಯುತ್ತಿವೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತ ಮಾಡಬೇಕು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ವೇಳೆ ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ, ಬಿಕ್ಕಟ್ಟಿಗೆ ಸಿಲುಕಿರುವ ಐಟಿ ಮತ್ತು ಇಎಸ್ಡಿಎಂ ವಲಯಗಳ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಿದ …
Read More »ಮಂತ್ರಾಲಯದಿಂದ ವಾಪಸಾಗುತ್ತಿದ್ದ ಖಾಸಗಿ ಬಸ್ ಅಪಘಾತ: 25ಕ್ಕೂ ಹೆಚ್ಚು ಮಂದಿಗೆ ಗಾಯ
ರಾಯಚೂರು : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಬೈಕ್ಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಹೊಲಕ್ಕೆ ನುಗ್ಗಿರುವ ಘಟನೆ ಜಿಲ್ಲೆಯ ಮಾನವಿ ಪಟ್ಟಣ ಹೊರವಲಯದ ಸಿಂಧನೂರು ರಸ್ತೆಯ ನಂದಿಹಾಳ ಗ್ರಾಮದಲ್ಲಿ ಇಂದು ನಡೆದಿದೆ. ಅಪಘಾತದಲ್ಲಿ ಸುಮಾರು 25ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನಕ್ಕಾಗಿ ಕುರುಬರಹಳ್ಳಿಯ ಚಾಲಕರ ಸಂಘದವರು ಖಾಸಗಿ ಬಸ್ನಲ್ಲಿ ಆಗಮಿಸಿದ್ದರು. ಇಂದು ಗುರುರಾಯರ ದರ್ಶನ ಪಡೆದು ಬೆಂಗಳೂರಿಗೆ ಮರಳುತ್ತಿದ್ದರು. ನಂದಿಹಾಳ ಗ್ರಾಮದಲ್ಲಿ …
Read More »ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದ ಪತಿ
ಚಿಕ್ಕೋಡಿ: ಪತಿಯು ತನ್ನ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಹಾರೂಗೇರಿ ಪಟ್ಟಣದಲ್ಲಿ ಗುರುವಾರ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ರುಕ್ಮವ್ವ ಉಪ್ಪಾರ (29) ಗಂಡನಿಂದಲೇ ಕೊಲೆಯಾಗಿದ್ದಾರೆ. ಆರೋಪಿಯ ಹೆಸರು ಮಲ್ಲಪ್ಪ ಉಪ್ಪಾರ. ಕೊಲೆಗೆ ಸಾಂಸಾರಿಕ ವೈಮನಸ್ಸು ಕಾರಣವೆಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮಲ್ಲಪ್ಪ ಸದಾಶಿವ ಉಪ್ಪಾರನನ್ನು ಬಂಧಿಸಲಾಗಿದೆ. ಹಾರೂಗೇರಿ ಪೊಲೀಸ್ ಠಾಣೆಯಲ್ಲಿ …
Read More »ಭತ್ತ ಬಿತ್ತಿದ ಗಂಡ ಹೆಂಡತಿ: ಮಳೆಗಾಗಿ ರೈತರ ಪ್ರಾರ್ಥನೆ!
ಬೆಳಗಾವಿ: ಜಿಲ್ಲೆಯ ವಿವಿಧೆಡೆ ಮಳೆಗಾಗಿ ನಾನಾ ರೀತಿಯ ಪೂಜೆ ಮಾಡಿದರೂ ಜನರ ಪ್ರಾರ್ಥನೆಗೆ ಮಳೆರಾಯ ಮಾತ್ರ ಜಪ್ಪಯ್ಯ ಎನ್ನುತ್ತಿಲ್ಲ. ಆದರೂ ನಂಬಿಕೆ ಕಳೆದುಕೊಳ್ಳದ ರೈತರು ತಮ್ಮ ಕೃಷಿ ಚಟುವಟಿಕೆ ಮುಂದುವರಿಸಿದ್ದಾರೆ. ಒಣ ಹೊಲದಲ್ಲಿ ಕೈಯಿಂದಲೇ ಸಾಲು ಬಿಡುತ್ತಾ ಭತ್ತದ ಬಿತ್ತನೆ ಮಾಡುತ್ತಿದ್ದಾರೆ. ಖಾನಾಪುರ ತಾಲೂಕಿನ ಅರಣ್ಯ ಪ್ರದೇಶದ ಮಾಣಿಕವಾಡಿ ಗ್ರಾಮದ ಕೃಷ್ಣಾ ಗಾವಡಾ ಎಂಬುವವರ ಅರ್ಧ ಎಕರೆ ಜಮೀನು ಹೊಂದಿದ್ದು, ತಮ್ಮ ಪತ್ನಿ ಅನುರಾಧಾ ಜೊತೆಗೆ ಭತ್ತದ ಬಿತ್ತನೆಯಲ್ಲಿ ತೊಡಗಿದ್ದಾರೆ. ಈ …
Read More »ಬೆಳಗಾವಿಯಲ್ಲಿ ಕೈಗಾರಿಕೆಗಳು ಬಂದ್,
ಬೆಳಗಾವಿ: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಖಂಡಿಸಿ ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ನೀಡಿರುವ ಬಂದ್ಗೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೈಗಾರಿಕೆಗಳನ್ನು ಬಂದ್ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕೈಗಾರಿಕೋದ್ಯಮಿಗಳು ಎಲೆಕ್ಟ್ರಿಕಲ್ ಬೈಕ್ ಹೊತ್ತುಕೊಂಡು ಅಣಕು ಶವಯಾತ್ರೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆದಿದ್ದಾರೆ. ಇಂದು ಬೆಳಗ್ಗೆ ಇಲ್ಲಿನ ಧರ್ಮವೀರ ಸಂಭಾಜಿ ವೃತ್ತ ಬಳಿ ಚೇಂಬರ್ ಆಫ್ ಕಾಮರ್ಸ್ ಮತ್ತು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸೇರಿದ ಜಿಲ್ಲೆಯ ಕೈಗಾರಿಕೋದ್ಯಮಿಗಳು …
Read More »
Laxmi News 24×7