ಬೆಂಗಳೂರು : ಎಸ್ಸಿಎಸ್ಪಿ/ಟಿಎಸ್ಪಿ ಅಧಿನಿಯಮ, 2013ರಡಿ ಹಂಚಿಕೆಯಾಗುವ ಅನುದಾನ ಆ ಸಮುದಾಯಗಳ ಒಳಿತಿಗಾಗೇ ಬಳಕೆಯಾಗಬೇಕೆಂಬುದು ಬಹಳ ವರ್ಷಗಳ ಬೇಡಿಕೆ. ಕಾಯ್ದೆಯಲ್ಲಿನ ಸಣ್ಣ ಲೋಪವನ್ನು ಬಳಸಿಕೊಂಡು ಅನ್ಯ ಉದ್ದೇಶಕ್ಕೆ ಬಳಸಿಕೊಳ್ಳಲಾಗುತ್ತಿತ್ತು. ಇದೀಗ ಕಾಯ್ದೆ ಸೆಕ್ಷನ್ 7(ಡಿ) ಕೈಬಿಡುವ ಮೂಲಕ ಅನುದಾನವನ್ನು ಆ ಸಮುದಾಯಗಳಿಗೆ ಖರ್ಚು ಮಾಡಬೇಕೆಂಬ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆ ನಡೆದಿದೆ ಎಂದು ಸಮಾಜ ಕಲ್ಯಾಣ ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ …
Read More »Monthly Archives: ಜುಲೈ 2023
ರಾಜ್ಯದಲ್ಲಿ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟ ಮತ್ತು ಹಲವು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ಕಾನೂನು ವಿದ್ಯಾರ್ಥಿಗಳಿಂದ ಪಿಐಎಲ್
ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರಿಗೆ ಕಲ್ಪಿಸಿರುವ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯಿಂದ ಆರ್ಥಿಕ ಸಂಕಷ್ಟದ ಜೊತೆಗೆ ದಿನನಿತ್ಯ ಆವಾಂತರಗಳಿಗೆ ಕಾರಣವಾಗುತ್ತಿದೆ ಎಂದು ಆಕ್ಷೇಪಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ. ಬೆಂಗಳೂರಿನ ವಿವಿಧ ಕಾನೂನು ಕಾಲೇಜುಗಳ ಕಾನೂನು ವಿದ್ಯಾರ್ಥಿಗಳಾದ ಅಶ್ವಿನ್ ಶಂಕರ್ ಭಟ್, ನೇಹಾ ವೆಂಕಟೇಶ್ ಹಾಗೂ ಯಾಶಿಕಾ ಸರವಣ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಸಾರಿಗೆ ಇಲಾಖೆ, ಕೆಎಸ್ಆರ್ಟಿ, ಬಿಎಂಟಿಸಿ, ಎನ್ಡಬ್ಲ್ಯೂ ಕೆಎಸ್ಆರ್ಟಿ, ಕೆಕೆಆರ್ಟಿಸಿ ಈ ನಾಲ್ಕು …
Read More »ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ: ಗ್ರಾಮ ಒನ್ ಕೇಂದ್ರ ಆಪರೇಟರ್ಗಳ ಎಚ್ಚರಿಕೆ
ಬೆಳಗಾವಿ: ಗ್ರಾಮ ಒನ್ ಕೇಂದ್ರಗಳನ್ನು ಬಂದ್ ಮಾಡಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದು ಗ್ರಾಮ ಒನ್ ಕೇಂದ್ರದ ಆಪರೇಟರ್ಗಳು ಪ್ರತಿಭಟನೆ ನಡೆಸಿದರು. ತಮ್ಮ ಬೇಡಿಕೆ ಈಡೇರುವವರೆಗೆ ಕೇಂದ್ರ ತೆರೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಲ್ಲದೇ ಬೇಡಿಕೆ ಈಡೇರದಿದ್ದರೆ ಸಾಮೂಹಿಕ ರಾಜೀನಾಮೆ ನೀಡುವುದಾಗಿ ಎಚ್ಚರಿಕೆ ರವಾನಿಸಿದ್ದಾರೆ. ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಸಲ್ಲಿಕೆಯಲ್ಲಿ ಹಣ ವಸೂಲಿ ಆರೋಪದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸೀಜ್ ಮಾಡಿ ಕೇಸ್ ದಾಖಲಿಸಲಾಗುತ್ತಿದೆ. ಹಾಗಾಗಿ ಜಿಲ್ಲೆಯ ಗ್ರಾಮ ಒನ್ …
Read More »ಅರ್ಥಪೂರ್ಣ, ಅದ್ಧೂರಿ ದಸರಾ ಆಚರಣೆಗೆ ನಿರ್ಧಾರ,:CM
ಬೆಂಗಳೂರು : 2023ನೇ ಸಾಲಿನ ಮೈಸೂರು ದಸರಾ ಹಬ್ಬವನ್ನು ಅರ್ಥಪೂರ್ಣವಾಗಿ, ಅದ್ಧೂರಿಯಾಗಿ ಆಚರಣೆ ಮಾಡಲು ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ನಾಡಹಬ್ಬ ಮೈಸೂರು ದಸರಾ 2023 ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ದಸರಾ ಮಹೋತ್ಸವ ಚಾಮುಂಡೇಶ್ವರಿ ಬೆಟ್ಟದಲ್ಲಿ 15.10.2023ರಂದು ಬೆಳಗ್ಗೆ 10.15-10.36 ಶುಭ ಲಗ್ನದಲ್ಲಿ ಉದ್ಘಾಟನೆ ಆಗಲಿದೆ. ದಸರಾ ಪಾರಂಪರಿಕ ಉತ್ಸವವಾಗಿದೆ. ದಸರಾ ಮಹೋತ್ಸವ ಹೆಚ್ಚು …
Read More »ನಾಳೆಯಿಂದ ನಂದಿನಿ ಹಾಲು ಹಾಗೂ ಮೊಸರಿನ ದರದಲ್ಲಿ ಏರಿಕೆ: K.M.F.
ಬೆಂಗಳೂರು: ನಂದಿನಿ ಹಾಲು ಪ್ರತಿ ಲೀಟರ್ಗೆ ಹಾಗೂ ಮೊಸರಿನ ದರ ಪ್ರತಿ ಕೆಜಿಗೆ 3 ರೂಪಾಯಿ ಹಚ್ಚಳ ಮಾಡಲಾಗಿದೆ. ನಾಳೆಯಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ. ಕೆಎಂಎಫ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಭೀಮಾನಾಯ್ಕ ಕೆಎಂಎಫ್ ಹಾಲಿನ ದರವನ್ನು ಕನಿಷ್ಠ 5 ರೂ. ಏರಿಕೆ ಮಾಡುವುದಾಗಿ ಸುಳಿವು ನೀಡಿದ್ದರು. ಜುಲೈ 21ರಂದು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಾಲಿನ ದರವನ್ನು 3 …
Read More »ತಂದೆಯೇ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿರುವ ಪ್ರಕರಣ ಬೀದರ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.
ಬೀದರ್: ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಮನುಕುಲವೇ ತಲೆ ತಗ್ಗಿಸುವಂಥ ದುಷ್ಕೃತ್ಯ ಬೆಳಕಿಗೆ ಬಂದಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ. ರಾತ್ರಿ ಹೊತ್ತಿನಲ್ಲಿ ಮನೆಯಲ್ಲಿ ಎಲ್ಲರೂ ಮಲಗಿದ್ದಾಗ ಆರೋಪಿ ಮಗಳ ಬಾಯಿ ಮುಚ್ಚಿ ನಿರಂತರವಾಗಿ ಅತ್ಯಾಚಾರ ಮಾಡುತ್ತಿದ್ದ. ಬಾಲಕಿ ಈ ವಿಷಯವನ್ನು ತನ್ನ ತಾಯಿಗೆ ತಿಳಿಸಿದ್ದು ಕೇಳಲು ಬಂದ …
Read More »ಬೆಳಗಾವಿ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ನಿರಂಜನ ಪಾಟೀಲ ಕೆನಡಾದಲ್ಲಿ ನಡೆದ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಕ್ರೀಡಾ ಸ್ಪರ್ಧೆಯಲ್ಲಿ
ಬೆಳಗಾವಿ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ನಿರಂಜನ ಪಾಟೀಲ ಕೆನಡಾದಲ್ಲಿ ನಡೆದ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ದಳದ ಕ್ರೀಡಾ ಸ್ಪರ್ಧೆಯಲ್ಲಿ 45 ವರ್ಷ ಮೇಲ್ಪಟ್ಟವರ 21 ಕಿ.ಮೀ ಹಾಫ್ ಮ್ಯಾರಥಾನ್ ನಲ್ಲಿ ಭಾಗವಹಿಸಿ ವಿಜೇತರಾದರು. : ವರ್ಲ್ಡ್ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡೆಗಳ ಮೂಲಕ ಆಧುನಿಕ ಜಾಗತಿಕ ಪೊಲೀಸ್ ವ್ಯವಸ್ಥೆಗಳನ್ನು ಒಟ್ಟುಗೂಡಿಸುವ ಕಾರ್ಯವಿಧಾನವಾಗಿದೆ. ಈ ವರ್ಷ ಜುಲೈ 28 ರಿಂದ ಆಗಸ್ಟ್ 6 ರವರೆಗೆ ಕೆನಡಾದ ವಿನ್ನಿಪೆಗ್ನಲ್ಲಿ ಈ …
Read More »ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ZP CEO ಹರ್ಷಲ್ ಭೋಯರ್ ರನ್ನು ಸನ್ಮಾನಿಸಲಾಯಿತು
ಬೆಳಗಾವಿ ಜಿಲ್ಲೆಯಲ್ಲಿ ದಲಿತ ಸಮುದಾಯಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉತ್ತೇಜನ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ ಹರ್ಷಲ್ ಭೋಯರ್ ಅವರನ್ನು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಸನ್ಮಾನಿಸಲಾಯಿತು. ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾರ್ಡ್ ಪದಾಧಿಕಾರಿಗಳು ಇತ್ತೀಚೆಗೆ ಜಿಲ್ಲಾ ಪಂಚಾಯತ್ ಸಿಇಒ ಹರ್ಷಲ್ ಭೋಯರ್ ಅವರನ್ನು ಭೇಟಿ ಮಾಡಿ ಬೆಳಗಾವಿ ಜಿಲ್ಲೆಯ ದಲಿತ ಸಮುದಾಯದ ಬಡಾವಣೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದಕ್ಕಾಗಿ ಅಭಿನಂದಿಸಿದರು. …
Read More »ಕಾರ್ಪೊರೇಟರ್ ಶಂಕರ ಪಾಟೀಲ ಅವರ ನೇತೃತ್ವದಲ್ಲಿ ಗಣಾಚಾರಿ ಗಲ್ಲಿಯ ನಾಗರಿಕರ ವತಿಯಿಂದ ಇಂದು ಗಂಗಾಪೂಜೆ ಕಾರ್ಯಕ್ರಮ ನಡೆಯಿತು.
ಬೆಳಗಾವಿ ನಗರಕ್ಕೆ ನೀರು ಪೂರೈಸುವ ರಕಸಕೊಪ್ಪ ಜಲಾಶಯ ತುಂಬಿರುವ ಹಿನ್ನೆಲೆಯಲ್ಲಿ ಕಾರ್ಪೊರೇಟರ್ ಶಂಕರ ಪಾಟೀಲ ಅವರ ನೇತೃತ್ವದಲ್ಲಿ ಗಣಾಚಾರಿ ಗಲ್ಲಿಯ ನಾಗರಿಕರ ವತಿಯಿಂದ ಇಂದು ಗಂಗಾಪೂಜೆ ಕಾರ್ಯಕ್ರಮ ನಡೆಯಿತು. ಹೌದು, ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಬೆಳಗಾವಿ ನಗರದ ಕುಡಿಯುವ ನೀರಿನ ಮೂಲವಾದ ಜಲಾಶಯ ಇದೀಗ ಭರ್ತಿಯಾಗಿದೆ. ಹಾಗಾಗಿ ಸಂಪ್ರದಾಯದಂತೆ ಕಾರ್ಪೋರೇಟರ್ ಶಂಕರ ಪಾಟೀಲರವರ ನೇತೃತ್ವದಲ್ಲಿ ಗಣಾಚಾರಿ ಗಲ್ಲಿಯ ನಾಗರಿಕರ ವತಿಯಿಂದ ಇಂದು ಜಲಾಶಯ ಗಂಗಾಪೂಜೆ ಕಾರ್ಯಕ್ರಮ …
Read More »ನಾಲ್ಕು ಎಕರೆಯಲ್ಲಿ ಟೊಮೆಟೊ ಬೆಳೆದು 50 ಲಕ್ಷ ಗಳಿಸಿದ ರೈತ
ಕೆಂಪುಚಿನ್ನ ಟೊಮೆಟೊಗೆ ನಿಜಕ್ಕೂ ಚಿನ್ನದ ಬೆಲೆ ಬಂದು ಬಿಟ್ಟಿದೆ. ನಾಲ್ಕು ಎಕರೆಯಲ್ಲಿ ಟೊಮೆಟೊ ಬೆಳೆದ ರೈತನೋರ್ವ ಕಳೆದ ಒಂದೂವರೆ ತಿಂಗಳಿನಲ್ಲಿ 50 ಲಕ್ಷಕ್ಕೂ ಅಧಿಕ ಆದಾಯ ಗಳಿಸಿದ್ದಾನೆ. ದ್ರಾಕ್ಷಿ ಬೆಳೆದು, ಕಬ್ಬು ಬೆಳೆದು ನಷ್ಟದಲ್ಲಿದ್ದ ಅನ್ನದಾತನಿಗೆ ಟೊಮೆಟೊ ಕೈ ಹಿಡಿದಿದ್ದು, ಅರ್ಧಕೋಟಿ ಒಡೆಯನಾಗಿದ್ದಾನೆ. ಟೊಮೆಟೊ ಬೆಳೆದು ಸಿರಿವಂತನಾದ ರೈತನ ಕುರಿತಾದ ಒಂದು ವರದಿ ಇಲ್ಲಿದೆ ನೋಡಿ… ಕೆಂಗುಲಾಬಿಯಂತೆ ಹೊಳೆಯುವ ಟೊಮೆಟೊ ಹಣ್ಣಿಗೆ ಇದೀಗ ಚಿನ್ನದ ಬೆಲೆ ಬಂದಿದೆ. ಹೀಗಾಗಿಯೇ ಟೊಮೆಟೊ …
Read More »