Breaking News

Daily Archives: ಜುಲೈ 8, 2023

ಹಾಲಿನ ದರ ಏರಿಕೆಯ ಸುಳಿವು ನೀಡಿದ ಸಚಿವ K.N ರಾಜಣ್ಣ

ಮೈಸೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಸಹಕಾರ ಸಚಿವ K. N ರಾಜಣ್ಣ ಹಾಲಿನ ದರ ಏರಿಕೆಯ ಸುಳಿವು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸಲು ಚಿಂತನೆ ನಡೆಸಲಾಗುತ್ತಿದೆ. ಹಾಲಿನ ದರ ಎಂದ ಕೂಡಲೇ ಎಲ್ಲರೂ ಗಾಬರಿಯಾಗುತ್ತಾರೆ ಎಂದರು. ಹಾಲು ಉತ್ಪಾದಕರಿಗೆ ಸಹಾಯಧನ ಹೆಚ್ಚಿಸುವ ಅನಿವಾರ್ಯತೆ ಇದೆ. ಈ ಬಗ್ಗೆ ಸದ್ಯದಲ್ಲೇ ಅಧಿಕೃತವಾಗಿ ಮಾಹಿತಿ ನೀಡಲಿದ್ದೇವೆ ಎಂದರು. ಇನ್ನೂ,. ನಂದಿನಿ ಹಾಲಿನ ದರವನ್ನು …

Read More »

ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27 ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥ

ಯಾದಗಿರಿ : ಹಲ್ಲಿಬಿದ್ದ ಬಿಸಿಯೂಟ ಸೇವಿಸಿ 27 ಕ್ಕೂ ಹೆಚ್ಚು ಬಾಲಕಿಯರು ಅಸ್ವಸ್ಥಗೊಂಡ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯಲ್ಲಿ ಬೆಳಗ್ಗೆ ಮಾಡಿದ್ದ ಉಪ್ಪಿಟ್ಟು ತಿಂದ ಮಕ್ಕಳಿಗೆ ಹೊಟ್ಟೆನೋವು ವಾಂತಿಭೇದಿ ಕಾಣಿಸಿಕೊಂಡಿದೆ. ನಂತರ ಕೆಂಭಾವಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಘಟನೆ ಹಿನ್ನೆಲೆ ಪೋಷಕರು ಶಾಲೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More »

ರಾಜ್ಯಾದ್ಯಂತ ಮಳೆ 21 ಜನರು ಸಾವನ್ನಪ್ಪಿದ್ದಾರೆ ಎಂದ ಕೃಷ್ಣಬೈರೇಗೌಡ

ಕುಮಟಾ: ರಾಜ್ಯಾದ್ಯಂತ ಮಳೆಯ ಅವಾಂತರದಲ್ಲಿ ಈವರೆಗೆ 21 ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಮಳೆ ಅವಾಂತರದಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಈ ವೇಳೆ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಮಾತನಾಡಿದ ಸಚಿವರು, ಮಳೆಯಿಂದಾಗಿ ರಾಜ್ಯದಲ್ಲಿ ಈವರೆಗೆ 21 ಜನ ಮೃತಪಟ್ಟಿದ್ದು, 40 ಜಾನುವಾರುಗಳು ಮೃತಪಟ್ಟಿವೆ ಎಂದರು.

Read More »

ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ :C.M.

ಬೆಂಗಳೂರು : ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು ಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ನುಡಿದಂತೆ ನಡೆಯುತ್ತೇವೆ, ಗ್ಯಾರಂಟಿಗಳ ಜೊತೆ ಎಲ್ಲಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.   ರಾಜ್ಯದ ಹಲವು ಕಡೆ ನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದೆ. ನೈತಿಕ ಪೊಲೀಸ್ ಗಿರಿ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, …

Read More »

ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ನವದೆಹಲಿ : ರೈಲ್ವೇ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಂದೇ ಭಾರತ್ ಸೇರಿ ಎಲ್ಲಾ ರೈಲುಗಳ ಎಸಿ ಕೋಚ್ ಟೆಕೆಟ್ ದರವನ್ನು 25 % ಕ್ಕೆ ಇಳಿಕೆ ಮಾಡಿದೆ. ವಂದೇ ಭಾರತ್ ಮತ್ತು ಅನುಭೂತಿ ಮತ್ತು ವಿಸ್ಟಾಡೋಮ್ ಬೋಗಿಗಳು ಸೇರಿದಂತೆ ಎಲ್ಲಾ ರೈಲುಗಳ ಟಿಕೆಟ್ ಬೆಲೆಯನ್ನು ಶೇಕಡಾ 25 ರವರೆಗೆ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ. ದರಗಳು ಸ್ಪರ್ಧಾತ್ಮಕ ಸಾರಿಗೆ ವಿಧಾನಗಳ ಮೇಲೂ ಅವಲಂಬಿತವಾಗಿರುತ್ತದೆ ಎಂದು …

Read More »

ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ: ಹೆಚ್.ವಿಶ್ವನಾಥ್,

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್, ಹೆಚ್.ಡಿ.ಕುಮಾರಸ್ವಾಮಿ ಪೆನ್ ಡ್ರೈವ್ ತೋರಿಸಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಪೆನ್ ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಂಡು ಬ್ಲ್ಯಾಕ್ ಮೇಲಿಂಗ್ ಮಾಡ್ತಿದ್ದಾರೆ. ಇದು ಶೋಭೆ ತರಲ್ಲ ಎಂದು ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ, ಮಾಜಿ ಸಿಎಂ, ಮಾಜಿ ಪ್ರಧಾನಿಗಳ ಮಗ. ಅವರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಕಿಡಿಕಾರಿದರು.

Read More »

ಸಿಎಂ ಸಿದ್ದರಾಮಯ್ಯ ಬಜೆಟ್​ ಕೊಂಡಾಡಿದ ಲಕ್ಷ್ಮಿ ಹೆಬ್ಬಾಳಕರ್, ಈಶ್ವರ ಖಂಡ್ರೆ !

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿರುವ ಬಜೆಟ್ ಬಗ್ಗೆ ಅವರ ಸಂಪುಟ ಸಚಿವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಚಿವರಾದ ಎಂ ಬಿ ಪಾಟೀಲ್, ಲಕ್ಷ್ಮಿ ಹೆಬ್ಬಾಳ್ಕರ್, ಈಶ್ವರ್ ಖಂಡ್ರೆ, ಶಿವರಾಜ್ ತಂಗಡಗಿ ಸೇರಿದಂತೆ ಹಲವು ಸಚಿವರು ತಮ್ಮ ಮೆಚ್ಚುಗೆಯನ್ನು ಮಾಧ್ಯಮ ಪ್ರಕಟಣೆ ಮೂಲಕ ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಜನಪರ ಬಜೆಟ್‌ – ಎಂ ಬಿ ಪಾಟೀಲ್: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಾಖಲೆಯ 14ನೇ ಬಾರಿಗೆ ಮಂಡಿಸಿರುವ ಬಜೆಟ್‌ ಮಹಿಳೆಯರು, ದಲಿತರು, ರೈತರು ಅಲ್ಪಸಂಖ್ಯಾತರು, ಬಹುಸಂಖ್ಯಾತರು ಮತ್ತು …

Read More »

ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಜೊತೆ ಕಾಂಗ್ರೆಸ್ ಸಭೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳ ಜೊತೆ ಶುಕ್ರವಾರ ಕಾಂಗ್ರೆಸ್ ಮಹತ್ವದ ಸಭೆ ನಡೆಸಿತು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸಂಪುಟ ಸದಸ್ಯರು ಹಾಗೂ ಶಾಸಕರು ಭಾಗಿಯಾಗಿದ್ದರು.   ಸಭೆಯ ಬಳಿಕ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪರಾಜಿತ ಅಭ್ಯರ್ಥಿಗಳನ್ನು ಕರೆಸಿ ಅವರಿಗೆ ಆದ ಸಮಸ್ಯೆಯನ್ನ ಕೇಳಿದ್ದೇವೆ. ಮುಂಬರುವ ದಿನಗಳಲ್ಲಿ ಇವರಿಗೆ ಶಕ್ತಿ ತುಂಬುವ …

Read More »

ನಾಪತ್ತೆಯಾಗಿದ್ದ ಚಿಕ್ಕೋಡಿಯ ಜೈನಮುನಿ ಹತ್ಯೆ.. ವೈಯಕ್ತಿಕ ಕಾರಣಕ್ಕೆ ಕೊಲೆ : S.P.

ಚಿಕ್ಕೋಡಿ (ಬೆಳಗಾವಿ): ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹಿರೇಕೋಡಿ ಆಶ್ರಮದ ಜೈನ ಮುನಿ ಕೊಲೆಗೀಡಾಗಿದ್ದಾರೆ. ಕಳೆದ ಬುಧವಾರ ಹಿರೇಕೋಡಿ ಆಶ್ರಮದ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾಗಿದ್ದರು. ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದಲ್ಲಿ ಮಹಾರಾಜರು ಹತ್ಯೆಗೀಡಾಗಿರುವುದು ಪೊಲೀಸರಿಗೆ ತಿಳಿದಿದೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಸಂಜೀವ್ ಪಾಟೀಲ್, ಬುಧವಾರ ರಾತ್ರಿಯಿಂದ ಸ್ವಾಮೀಜಿ ಕಾಣೆಯಾಗಿರುವ ಬಗ್ಗೆ ಶುಕ್ರವಾರ ಭಕ್ತರು …

Read More »

ವಿಶೇಷ ವ್ಯಕ್ತಿ ವಿಪಕ್ಷ ನಾಯಕ ಆಗ್ತಾರೆ: ನಿರಾಣಿ

ಬೆಳಗಾವಿ : ವಿರೋಧ ಪಕ್ಷದ ನಾಯಕನನ್ನಾಗಿ ವಿಶೇಷ ವ್ಯಕ್ತಿಯನ್ನು ಆಯ್ಕೆ ಮಾಡುವ ಹಿನ್ನೆಲೆಯಲ್ಲಿ ವಿಳಂಬವಾಗಿದೆ. ಹೀಗಾಗಿ ಕಾದು ನೋಡಿ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷ ನಾಯಕನ ಆಯ್ಕೆ ಕುರಿತು ಮಾತನಾಡಿ, ವಿರೋಧ ಪಕ್ಷ ನಾಯಕನ ಸ್ಥಾನ ಯಾರಿಗೆ ಕೊಟ್ಟರೂ ಅವರು ನಮ್ಮ ಪಕ್ಷದವರೇ. ನಮ್ಮ ಪಕ್ಷದ ಹಿರಿಯರು, ರಾಜ್ಯ, ರಾಷ್ಟ್ರ ನಾಯಕರು ಸೇರಿ ಯಾರನ್ನು ವಿಪಕ್ಷ ನಾಯಕನಾಗಿ …

Read More »