Breaking News

Monthly Archives: ಜುಲೈ 2023

ಹಿಂದೂ ಸಮಾಜ ಉಳಿಸುತ್ತಿರುವವರು ಮೇಲ್ಜಾತಿ ಹುಡುಗರಲ್ಲ : ಯತ್ನಾಳ್‌

ಮೈಸೂರು : ಹಿಂದೂ ಸಮಾಜ ಉಳಿಸುತ್ತಿರುವವರು ಮೇಲ್ಜಾತಿ ಹುಡುಗರಲ್ಲ. ದಲಿತರು, ನಾಯಕರು, ಹಿಂದುಳಿದ ಸಮಾಜದ ಯುವಕರು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದರು. ತಿ.‌ ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ನಾಯಕ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗೂಂಡಾಗಿರಿ ವಾತಾವರಣವಿದೆ. ಹಿಂದೂಗಳು ಜೀವನ ಮಾಡದ ಸ್ಥಿತಿ ನಿರ್ಮಾಣವಾಗಿದೆ. ಹನುಮ ಜಯಂತಿ ಮಾಡುವುದು ಕೆಲವು ಜನರಿಗೆ ಭಯ ಹುಟ್ಟಿಸಿದೆ. ಕೇಸರಿ ಶಾಲು, ತಿಲಕ ಹಾಕಿಕೊಂಡರೆ ಹುಷಾರ್ ಅಂತ ರಾಜ್ಯದ …

Read More »

ಸೂತಕದ ಬಾಣಂತಿ ಊರಿಗೆ ಬಂದರೆ ಕೇಡು’: ಊರ ಹೊರಗಿನ ಗುಡಿಸಲೊಳಗಿಂದ ಯಾರಿಗೂ ಕೇಳಿಸದ ಬಾಣಂತಿ, ಕಂದಮ್ಮನ ಪಾಡು!

ತುಮಕೂರು: ಊರ ಹೊರಗಿನ ಗುಡಿಸಲಿನಲ್ಲಿ ಬಾಣಂತಿ ಮತ್ತು ಆಗ ತಾನೆ ಹುಟ್ಟಿದ ಅವಳಿ ಮಕ್ಕಳು ವಾಸ ಮಾಡುತ್ತಿದ್ದಾರೆ. ಇದು ಕಾಡುಗೊಲ್ಲ ಸಮುದಾಯದ ಆಚರಣೆ. ಇಂಥ ಆಚರಣೆಯನ್ನು ಇಂದಿಗೂ ಈ ಸಮುದಾಯ ನಡೆಸಿಕೊಂಡು ಬರುತ್ತಿದೆ. ತುಮಕೂರು ಸಮೀಪದ ಮಲ್ಲೇನಹಳ್ಳಿ ಗೊಲ್ಲರಹಟ್ಟಿಯಲ್ಲಿ ಇದಕ್ಕೊಂದು ಉದಾಹರಣೆ ದೊರೆಯಿತು. ಊರ ಹೊರಗಿರುವ ಗುಡಿಸಲಿನಲ್ಲಿ ವಾಸಿಸುತ್ತಿರುವ ವಸಂತ ಎಂಬ ಬಾಣಂತಿಯದ್ದು ನರಕಯಾತನೆಯಾಗಿದೆ. ತುಂತುರು ಮಳೆ, ಚಳಿ, ಗಾಳಿಯ ನಡುವೆ ಗುಡಿಸಲಿನಲ್ಲಿ ಈಕೆ ಇದ್ದಾರೆ. ಐದು ದಿನಗಳ ಹಿಂದೆ ತುಮಕೂರು …

Read More »

ಎನ್‌ಡಿಎ ಮೈತ್ರಿಕೂಟವು ಶೇಕಡಾ 50ಕ್ಕಿಂತಲೂ ಹೆಚ್ಚು ಮತಗಳನ್ನು ಪಡೆಯಲಿದೆ ಎಂದ ಪ್ರಧಾನಿ ನರೇಂದ್ರ ಮೋದಿ

  ನವದೆಹಲಿ: ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಚಲಾವಣೆಯಾದ ಒಟ್ಟು ಮತಗಳಲ್ಲಿ ಶೇಕಡಾ 50ಕ್ಕಿಂತಲೂ ಹೆಚ್ಚು ಮತಗಳನ್ನು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಪಡೆದುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಮಂಗಳವಾರ ಬೆಂಗಳೂರಿನಲ್ಲಿ 26 ವಿರೋಧ ಪಕ್ಷಗಳು ಸೇರಿ ತಮ್ಮ ಎರಡನೇ ಏಕತಾ ಸಭೆಯನ್ನು ನಡೆಸಿದ ಕೆಲವೇ ಗಂಟೆಗಳ ಬಳಿಕ ಸಂಜೆ, ರಾಷ್ಟ್ರ ರಾಜಧಾನಿಯಲ್ಲಿ ನಡೆದ ಎನ್‌ಡಿಎ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ನಮ್ಮ ಎಲ್ಲ ಮೈತ್ರಿ ಪಾಲುದಾರರು …

Read More »

ಹುಕ್ಕೇರಿ ರೈತನ ಅದೃಷ್ಟ ಬದಲಿಸಿದ ಕಿಚನ್​ ಕ್ವೀನ್​!

ಚಿಕ್ಕೋಡಿ(ಬೆಳಗಾವಿ): ಒಂದು ಕಾಲದಲ್ಲಿ ರೈತರು ನ್ಯಾಯಯುತ ಬೆಲೆ ಸಿಗದೆ ಕ್ವಿಂಟಾಲ್‌ಗಟ್ಟಲೆ ಟೊಮೆಟೊವನ್ನು ರಸ್ತೆಗೆ ಎಸೆಯುವ ಅನಿವಾರ್ಯ ಪರಿಸ್ಥಿತಿ ಇತ್ತು. ಲಕ್ಷಾಂತರ ದುಡ್ಡು ಹಾಕಿ ಕಷ್ಟ ಪಟ್ಟು ದುಡಿದ ಬೆಳೆ ಫಸಲು ಕೊಟ್ಟು ರೈತ ನಿಟ್ಟುಸಿರು ಬಿಡೋ ಅಷ್ಟ್ರಲ್ಲಿ ಬೆಳೆ ಕುಸಿತ ರೈತನಿಗೆ ಅಘಾತ ನಿಡಿತ್ತು. ಆದರೆ ಈ ಬಾರಿ ದುಬಾರಿ ಟೊಮೆಟೊದಿಂದಾಗಿ ಅನೇಕ ರೈತರ ಭವಿಷ್ಯ ಬದಲಾಗಿದೆ. ಟೊಮೆಟೊ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದರೆ, ಅನ್ನದಾತರು ಮಾತ್ರ ಖುಷಿಯಾಗಿದ್ದಾರೆ. ಟೊಮೆಟೊ ಬೆಳೆದ …

Read More »

ವಿಧಾನಸಭೆಯಲ್ಲಿಂದು ಸಚಿವರು ಕರ್ನಾಟಕ ಸಹಕಾರ ಸಂಘಗಳ ಹಾಗೂ ಕರ್ನಾಟಕ ಭೂ ಕಂದಾಯ ಸೇರಿದಂತೆ ಹಲವು ವಿಧೇಯಕಗಳನ್ನು ಮಂಡಿಸಿದ್ದಾರೆ.

ಬೆಂಗಳೂರು: ನ್ಯಾಯಾಲಯಗಳಲ್ಲಿ ದೀರ್ಘಕಾಲಿಕ ವ್ಯಾಜ್ಯವನ್ನು ಎದುರಿಸಲು ಸುಸ್ಥಿರ ಸಾಮರ್ಥ್ಯ ಹೊಂದಿರದ ವ್ಯಕ್ತಿಗಳನ್ನು ಒಳಗೊಂಡಿರುವ ಪ್ರಕರಣಗಳ ಶೀಘ್ರ ವಿಲೇವಾರಿಗಾಗಿ 2023ನೇ ಸಾಲಿನ ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ವಿಧೇಯಕ, ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ವಿಧಾನಸಭೆಯಲ್ಲಿ ಇಂದು ಮಂಡಿಸಲಾಯಿತು. ರೈತರು, ಬಡವರಿಗೆ ತ್ವರಿತ ನ್ಯಾಯದಾನ ಕಲ್ಪಿಸಿಕೊಡುವ ಹಾಗೂ ಸರ್ಕಾರಿ ವ್ಯಾಜ್ಯಗಳಲ್ಲಿ ಪರಾಜಯ ತಪ್ಪಿಸಲು ಪೂರಕವಾಗಲಿರುವ ಎರಡು ಹೊಸ ಕಾನೂನುಗಳು ಜಾರಿಗೆ ಬರಲಿವೆ. ಸಣ್ಣ, ಅತೀ ಸಣ್ಣ …

Read More »

ಚಲಿಸುತ್ತಿದ್ದ ಬಸ್​ ಮುಂದೆ ಮಹಿಳೆ ಆತ್ಮಹತ್ಯೆ.. ಮಗನ ಕಾಲೇಜು ಶುಲ್ಕಕ್ಕಾಗಿ ಹೆತ್ತಮ್ಮಳ ದಾರುಣ ಅಂತ್ಯ!

ಸೇಲಂ (ತಮಿಳುನಾಡು): ಮಕ್ಕಳಿಗಾಗಿ ಹೆತ್ತವರು ಎಂತಹ ತ್ಯಾಗಕ್ಕೂ ಸಿದ್ಧರಾಗಿರುತ್ತಾರೆ. ತಮ್ಮ ಆಸೆ, ನಿರೀಕ್ಷೆಗಳನ್ನೆಲ್ಲ ಬಚ್ಚಿಟ್ಟುಕೊಳ್ಳುತ್ತಾರೆ. ಆದರೆ ಇಲ್ಲೊಬ್ಬ ಮಹಾ ತಾಯಿ ಮಗನ ಕಾಲೇಜು ಶುಲ್ಕ ಕಟ್ಟುವ ಹಣ ಹೊಂದಿಸಲು ಪರಿಹಾರ ಸಿಗುತ್ತದೆ ಎಂದು ಚಲಿಸುತ್ತಿರುವ ಬಸ್ ಎದುರು ಬಂದು ಪ್ರಾಣ ತ್ಯಾಗ ಮಾಡಿದ್ದಾರೆ.ತನ್ನ ಮಗನ ಭವಿಷ್ಯ ಉಜ್ವಲಗೊಳಿಸುವ ಆಸೆಯಿಂದ ತಾಯಿ ತನ್ನ ಪ್ರಾಣವನ್ನೇ ಬಲಿ ಕೊಟ್ಟ ದಾರುಣ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.ಪಾಪತಿ (46) ಮೃತ ಮಹಿಳೆ. ಕಳೆದ ಜೂ.28ರಂದು ಬೆಳಗ್ಗೆ …

Read More »

ನಕಲಿ ಜಾತಿ ಪ್ರಮಾಣಪತ್ರಗಳ ವಿರುದ್ಧ ಕ್ರಮಕ್ಕೆ ಆಗ್ರಹ: ಎಸ್​ಸಿ/ಎಸ್​ಟಿ ಯುವಕರಿಂದ ನಗ್ನ ಪ್ರತಿಭಟನಾ ಮೆರವಣಿಗೆ

ರಾಯಪುರ (ಚತ್ತೀಸ್​ಗಢ): ನಕಲಿ ಜಾತಿ ಪ್ರಮಾಣಪತ್ರಗಳ ಮೇಲೆ ಸರ್ಕಾರಿ ಉದ್ಯೋಗ ಪಡೆದು ವಂಚಿಸಲಾಗುತ್ತಿದೆ ಎಂದು ಆರೋಪಿಸಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ಎಸ್​ಸಿ-ಎಸ್​ಟಿ)ದ ಸುಮಾರು 50 ಯುವಕರು ನಗ್ನ ಪ್ರತಿಭಟನಾ ಮೆರವಣಿಗೆ ನಡೆಸಿರುವ ಘಟನೆ ಛತ್ತೀಸ್​ಗಢದ ರಾಜಧಾನಿ ರಾಯಪುರದಲ್ಲಿ ಮಂಗಳವಾರ ನಡೆದಿದೆ. ಸಂಪೂರ್ಣ ಬೆತ್ತಲಾಗಿ ರಸ್ತೆಯಲ್ಲಿ ಘೋಷಣೆಗಳನ್ನು ಕೂಗುತ್ತಾ ತಮ್ಮ ಆಕ್ರೋಶವನ್ನು ಯುವಕರು ಹೊರ ಹಾಕಿದ್ದಾರೆ. ಜಾತಿ ಪ್ರಮಾಣ ಪತ್ರ ನೀಡಿಕೆ ಕುರಿತು ಘೋಷಣಾ ಫಲಕಗಳನ್ನು ಹಿಡಿದುಕೊಂಡು ಯುವಕರು ಮುಖ್ಯ …

Read More »

ಎಪಿಎಂಸಿ ತಿದ್ದುಪಡಿ ವಿಧೇಯಕ ಸೆಲೆಕ್ಟ್ ಕಮಿಟಿಗೆ ವಹಿಸುವ ನಿರ್ಣಯ ಅಂಗೀಕರಿಸಿದ ಪರಿಷತ್: ಸರ್ಕಾರಕ್ಕೆ ಹಿನ್ನಡೆ..!

ಬೆಂಗಳೂರು: ವಿಧಾನಸಭೆಯಿಂದ ಅಂಗೀಕೃತ ರೂಪದಲ್ಲಿದ್ದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ಮತದಾನದ ಮೂಲಕ ಸೆಲೆಕ್ಟ್ ಕಮಿಟಿಗೆ ವಹಿಸುವ ಪ್ರಸ್ತಾವವನ್ನು ವಿಧಾನ ಪರಿಷತ್ ಅಂಗೀಕರಿಸಿದ್ದು, ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮುಂದಾಗಿದ್ದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ವಿಧಾನ ಪರಿಷತ್ ಕಲಾಪದಲ್ಲಿ ವಿಧೇಯಕ ಮಂಡಿಸಿ ಮಾತನಾಡಿದ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ”ಎಪಿಎಂಸಿ ಕಾಯ್ದೆ ಕೇಂದ್ರ ವಾಪಸ್ ಪಡೆದರೂ ಕರ್ನಾಟಕ ವಾಪಸ್ ಪಡೆದಿಲ್ಲ. ಹಿಂದೆ ಕಾಯ್ದೆ ತಿದ್ದುಪಡಿ …

Read More »

ವಿಜಯಪುರ ಜಿಲ್ಲೆಯಲ್ಲಿ ಇಂದು ಕೊನೆಗೂ ಮುಂಗಾರು ಆರಂಭ

ವಿಜಯಪುರ: ಕೊನೆಗೂ ಒಂದೂವರೆ ತಿಂಗಳ ನಂತರ ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದೆ. ಸೋಮವಾರ ರಾತ್ರಿಯಿಂದಲೇ ಜಿಟಿ ಜಿಟಿ ಮಳೆ ಆರಂಭವಾಗಿದ್ದು, ಮಂಗಳವಾರ ದಿನವಿಡಿ ಜಿಟಿ ಜಿಟಿ ಮಳೆಯಾಗಿದೆ. ಸದ್ಯ ಹವಾಮಾನ ಇಲಾಖೆಯ ಮಾಹಿತಿಯಂತೆ ಇಂದು ಮಂಗಳವಾರ ಬೆಳಗ್ಗೆ 8-30ರಿಂದ ಸಂಜೆ 5-30ರವರೆಗೆ 5.2 ಮಿ,ಮೀ ಮಳೆ ದಾಖಲಾಗಿದೆ. ಇನ್ನೂ ಐದು ದಿನ ಇದೇ ರೀತಿ ಮಳೆ ಮುಂದುವರೆಯಲಿದೆ. ಭಾರತದ ಹವಾಮಾನ ವಿಭಾಗದ ಮಾಹಿತಿಜು.19 ರಿಂದ 23ರವರೆಗೆ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಲಿದೆ. ವಿಜಯಪುರ …

Read More »

ವಿಶ್ವಕಪ್​ನಲ್ಲಿ ಬುಮ್ರಾ.. ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ.

ನವದೆಹಲಿ: ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನಿಂದಾಗಿ ದೀರ್ಘಕಾಲದವರೆಗೆ ಕ್ರಿಕೆಟ್‌ನಿಂದ ದೂರವಿದ್ದಾರೆ. ಅವರು ಈ ವರ್ಷ ನ್ಯೂಜಿಲ್ಯಾಂಡ್​ಗೆ ಹೋಗಿ ಅಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅದರ ನಂತರ, ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಚೇತರಿಸಿಕೊಳ್ಳುತ್ತಿದ್ದಾರೆ. ಬುಮ್ರಾ ಈಗಾಗಲೇ ಸಾಕಷ್ಟು ಚೇತರಿಸಿಕೊಂಡಿರುವಂತೆ ತೋರುತ್ತಿದೆ. ಇನ್ನೂ ಕೆಲವೇ ದಿನಗಳಲ್ಲಿ ಮತ್ತೆ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಡುವ ಸಾಧ್ಯತೆ ಹೆಚ್ಚಿದೆ. ನ್ಯೂಜಿಲ್ಯಾಂಡ್​​​​ನಲ್ಲಿ ಜಸ್ಪ್ರಿತ್ ಬುಮ್ರಾಗೆ ಸರ್ಜರಿ: ಈ ಕ್ರಮದಲ್ಲಿ ಟೀಂ ಇಂಡಿಯಾಗೆ ಶೀಘ್ರದಲ್ಲೇ …

Read More »