ಕಲಬುರಗಿ: ಪ್ರಸಿದ್ಧ ಮಹಾಕಾವ್ಯಮಹಾಭಾರತದ ಧೃತರಾಷ್ಟ್ರ- ಗಾಂಧಾರಿ ಬಗ್ಗೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ?. ತನ್ನ ಗಂಡನಿಗಿಲ್ಲದ ದೃಷ್ಟಿ ನನಗೇಕೆ? ಎಂದು ಗಾಂಧಾರಿ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕುರುಡಾಗಿ ಗಂಡನ ಜೊತೆಗಿದ್ದು ಸೇವೆ ಮಾಡುತ್ತಿದ್ದರು. ಇದು ಮುಂದೆ ಗಾಂಧಾರಿ ವಿದ್ಯೆಯಾಗಿ ಲೋಕ ಪ್ರಸಿದ್ಧಿ ಪಡೆಯಿತು. ಏನಿದು ಗಾಂಧಾರಿ ವಿದ್ಯೆ?: ಎರಡೂ ಕಣ್ಣುಗಳ ದೃಷ್ಟಿ ಸರಿಯಿದ್ದರೂ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಎಲ್ಲವನ್ನೂ ನೋಡುವ, ತಿಳಿಯುವ, ಪಟಪಟನೆ ಓದುವ ವಿದ್ಯೆಯನ್ನು ಗಾಂಧಾರಿ ವಿದ್ಯೆ ಎಂದು ಕರೆಯುತ್ತಾರೆ. ಬಿಸಿಲೂರೆಂದು …
Read More »Monthly Archives: ಜುಲೈ 2023
ಬೆಳಗಾವಿ: ಜಮೀನು ವಿವಾದ ಹಿನ್ನೆಲೆ ಗೂಂಡಾಗಳಿಂದ ಹಲ್ಲೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಧರಣಿ
ಬೆಳಗಾವಿ: ತಾಲೂಕಿನ ಬೆಕ್ಕಿನಕೇರಿ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಹಲ್ಲೆ ಮಾಡಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ರೈತರು ಮತ್ತು ಗ್ರಾಮಸ್ಥರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬೃಹತ್ ಧರಣಿ ನಡೆಸಿದರು. ಗೂಂಡಾಗಳಿಂದ ತಮ್ಮ ತಲೆ, ಭುಜ, ಬೆನ್ನು ಮತ್ತು ಹೊಟ್ಟೆ ಮೇಲೆ ಆಗಿರುವ ಗಾಯಗಳನ್ನು ತೋರಿಸಿ, ಕಣ್ಣೀರು ಸುರಿಸಿದರು. ತಮ್ಮ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಯಾವುದೇ ಕಾರಣಕ್ಕೂ ಬಿಡಬಾರದು. ನಮಗಾದ ಅನ್ಯಾಯಕ್ಕೆ …
Read More »ಉರಗ ಪ್ರೇಮಿಯೊಬ್ಬರು ಹಾವಿನ ಮೊಟ್ಟಗೆ ಕೃತಕ ಕಾವು ಕೊಟ್ಟು 12 ಮರಿ ಹಾವುಗಳ ಸುರಕ್ಷಿತ ಜನನ ಮಾಡಿಸಿದ್ದಾರೆ.
ಬೆಳಗಾವಿ: ಕಂದಾನಗರಿಯ ಉರಗಪ್ರೇಮಿಯೊಬ್ಬರು ಹಾವಿನ ಮೊಟ್ಟೆಗೆ ಕೃತಕವಾಗಿ ಕಾವು ಕೊಟ್ಟು ಸುರಕ್ಷಿತ ಜನನ ಮಾಡಿಸುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಬೆಳಗಾವಿ ತಾಲೂಕಿನ ಹಲಗಾ ಬಸ್ತವಾಡ ಗ್ರಾಮದ ರಾಮಾ ಪಾಟೀಲ್ ಎಂಬ ಉರಗ ಪ್ರೇಮಿ ಹಾವಿನ ಮರಿಗಳ ಸುರಕ್ಷಿತ ಜನನಕ್ಕೆ ಕಾರಣರಾಗಿದ್ದಾರೆ. ಹಾವು ಕಂಡ ತಕ್ಷಣ ಭಯದಿಂದ ಮಾರುದ್ದ ಓಡುವ ಜನರ ಮಧ್ಯೆ ಅವುಗಳನ್ನು ತಮ್ಮ ಮನೆಯಲ್ಲೇ ಇಟ್ಟುಕೊಂಡು ಕಾಪಾಡುವ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ. ಈ ಬಗ್ಗೆಜೊತೆಗೆ ಮಾತನಾಡಿದ ರಾಮಾ ಪಾಟೀಲ, …
Read More »ಸ್ಕೂಟರ್ಗೆ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಸಾವು,
ಸ್ಕೂಟರ್ಗೆ ಬಸ್ ಡಿಕ್ಕಿ; ವಿದ್ಯಾರ್ಥಿನಿ ಸಾವು: ಸ್ಕೂಟರ್ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಪೀಣ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ. ಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ 18 ವರ್ಷದ ದಿಶಾ ಸಾವನ್ನಪ್ಪಿದರೆ, ತಂದೆ ಸುರೇಶ್ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಲ್ಲೇಶ್ವರದ ಎಂಇಎಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಪಿಸಿಎಂ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ …
Read More »ದುಷ್ಕರ್ಮಿಗಳ ಹಲ್ಲೆಯಿಂದ ವಿದ್ಯಾರ್ಥಿ ಸಾವು
ಬೆಂಗಳೂರು: ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ ಕಾಲೇಜು ವಿದ್ಯಾರ್ಥಿಯೊಬ್ಬ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಪ್ರಕರಣ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಸೋಮವಾರ ನಡೆದಿದೆ. ಸೊಹೇಲ್ (17) ಮೃತಪಟ್ಟ ವಿದ್ಯಾರ್ಥಿ. ಮಂಜುನಾಥ ನಗರದ ಗೌತಮ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ಸೋಮವಾರ ಮಧ್ಯಾಹ್ನ 2.30ರ ಸಮಯಲ್ಲಿ ಕಾಲೇಜು ಸಮೀಪ ವಿದ್ಯಾರ್ಥಿ ನಿಂತಾಗ ವಾಹನದಲ್ಲಿ ಬಂದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಸೊಹೇಲ್ ಎಡಗೈ ಮತ್ತು ತೊಡೆಗೆ ಗಂಭೀರವಾದ …
Read More »ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಪತಿ ಕತ್ತುಹಿಸುಕಿ ಕೊಲೆ
ಹುಬ್ಬಳ್ಳಿ: ಅವರಿಬ್ಬರು ಪರಸ್ಪರ ಪ್ರೀತಿಸಿ ಮದುವೆಯಾಗಿದ್ರು. ಅವರಿಬ್ಬರ ಮದುವೆಗೆ ಜಾತಿಯೂ ಅಡ್ಡ ಬಂದಿರಲಿಲ್ಲ. ಅವರಿಬ್ಬರಿಗೆ ಮುದ್ದಾದ ಗಂಡು ಮಗು ಕೂಡಾ ಇದೆ. ಆದ್ರೆ ಪ್ರೀತಿಸಿ ಕೈ ಹಿಡಿದವಳನ್ನೇ ಗಂಡನೆ ಕತ್ತು ಹಿಸುಕಿ ಕೊಲೆ ಮಾಡಿ ಬಾಗಿಲು ಹಾಕಿಕೊಂಡು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ನೇಕಾರನಗರದಲ್ಲಿ ನಡೆದಿದೆ. ನೇಕಾರ ನಗರದ ಜನ ಇವತ್ತು ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದಿದ್ದಾರೆ. ಅದಕ್ಕೆ ಕಾರಣ ಪ್ರೀತಿಸಿ ಮದುವೆಯಾದ ಗಂಡನೇ ತನ್ನ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಸುಧಾ …
Read More »ಬಿಜೆಪಿ ಸಭೆಗೆ ಬಂದ ಬಳ್ಳಾರಿ ಜಿಲ್ಲಾ ಪ್ರಭಾರಿ ಸಿದ್ದೇಶ್ ಹೃದಯಾಘಾತದಿಂದ ನಿಧನ
ಬೆಂಗಳೂರು: ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷದ ಮುಖಂಡ ಸಿದ್ದೇಶ್ ಯಾದವ್ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಪಕ್ಷದ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಯಾದವ್, ಸಭೆ ಮುಗಿಸಿ ಹೊರಗೆ ಬಂದಾಗ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿತಾದರೂ ಅಷ್ಟರಲ್ಲಿ ನಿಧನರಾಗಿದ್ದಾರೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ …
Read More »ಬತ್ತಿದ ಕಬಿನಿ : ಹಿನ್ನೀರಿನಲ್ಲಿ ಕಾಣಿಸುತ್ತಿವೆ ಐತಿಹಾಸಿಕ ಪುರಾತನ ದೇವಾಲಯ
ಮೈಸೂರು : ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದು. ಬಹುತೇಕ ಜಲಾಶಯಗಳು 10 ವರ್ಷಗಳ ನಂತರ ಖಾಲಿಯಾಗಿವೆ. ಮತ್ತೊಂದೆಡೆ ಜಲಾಶಯಗಳ ಹಿನ್ನೀರಿನಲ್ಲಿ ಇರುವ ದೇವಾಲಯಗಳು ಈಗ ಗೋಚರಿಸುತ್ತಿವೆ. ಇದಕ್ಕೆ ನಿದರ್ಶನ ಎಂಬಂತೆ 10 ವರ್ಷಗಳ ನಂತರ ಮೈಸೂರು ಜಿಲ್ಲೆಯ ಬೀಚನಹಳ್ಳಿ ಸಮೀಪದಲ್ಲಿರುವ, ಕಬಿನಿ ಡ್ಯಾಂನಲ್ಲಿ ನೀರು ಸಂಪೂರ್ಣ ಕಡಿಮೆ ಆಗಿದ್ದು, ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ, ಐತಿಹಾಸಿಕ, ಪುರಾಣ ಪ್ರಸಿದ್ಧ ದೇವಾಲಯಗಳ ಕುರುಹುಗಳು ಪತ್ತೆಯಾಗಿವೆ. ಕೀರ್ತಿಪುರ ಗ್ರಾಮದ ಅರಳಿ ಮರದ ಬುಡಈ ಕುರುಹುಗಳು ಇತಿಹಾಸದ ಪುನ್ನಾಟ …
Read More »ಮಂಗಳೂರ ಮಳೆಗೆ ಪಂಪ್ವೆಲ್ ಜಲಾವೃತ:
ಮಂಗಳೂರು: ನಗರದಲ್ಲಿ ಮಧ್ಯಾಹ್ನದ ಬಳಿಕ ಸುರಿದ ಭಾರೀ ಮಳೆಗೆ ಪಂಪ್ ವೆಲ್ ಸಂಪೂರ್ಣ ಜಲಾವೃತಗೊಂಡಿದೆ. ಮಧ್ಯಾಹ್ನ 3 ಗಂಟೆಯ ಬಳಿಕ ಮಂಗಳೂರಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದೆ. 2 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಗೆ ಪಂಪ್ವೆಲ್ ಫ್ಲೈಓವರ್ ಅಡಿಭಾಗ ಸಂಪೂರ್ಣ ಜಲಾವೃತಗೊಂಡಿದೆ. ಎಡ ಬಿಡದೇ ಮಳೆ ಸುರಿಯುತ್ತಿದ್ದು, ಫ್ಲೈಓವರ್ ಅಡಿ ನಿಂತ ನೀರಿನಿಂದಾಗಿ ವಾಹನ ಸಂಚಾರಕ್ಕೆ ಭಾರೀ ತೊಂದರೆಯುಂಟಾಗಿದೆ. ಪರಿಣಾಮ ರಸ್ತೆ ಉದ್ದಕ್ಕೂ ವಾಹನಗಳು ನಿಲುಗಡೆಯಾಗಿ ಟ್ರಾಫಿಕ್ ಜಾಮ್ ಆಗಿದೆ. ಮಂಗಳೂರಿನ ಪ್ರಮುಖ …
Read More »ಕ್ಷುಲ್ಲಕ ಕಾರಣಕ್ಕೆ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಕಲಬುರಗಿ: ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಕೊರಿಕೋಟಾ ಗ್ರಾಮದಲ್ಲಿ ನಡೆದಿದೆ. ಕೆಲ ಯುವಕರು ಸೇರಿ ವಿನಾಃಕಾರಣ ಕಿರುಕುಳ ನೀಡಿ, ಹಲ್ಲೆ ಮಾಡಿದ್ದಕ್ಕೆ ಮನನೊಂದ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಕುರಿಕೋಟಾ ಗ್ರಾಮದ ಪ್ರಶಾಂತ ಅಷ್ಟಗಿ (16) ಆತ್ಮಹತ್ಯೆಗೆ ಮಾಡಿಕೊಂಡ ಬಾಲಕ. ಈತ ಅವರಾದ (ಬಿ) ಪ್ರೌಢ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ಎಂದು ತಿಳಿದು ಬಂದಿದೆ. ‘ಕುರಿಕೋಟಾ ಗ್ರಾಮದ …
Read More »