Breaking News

Daily Archives: ಆಗಷ್ಟ್ 3, 2023

ಖಾಸಗಿ ಕಂಪೆನಿಯ ಕ್ರಿಮಿನಾಶಕ ಸಿಂಪಡಣೆಯಿಂದ ರೈತರೊಬ್ಬರ ಟೊಮೆಟೊ ಬೆಳೆ ಸಂಪೂರ್ಣ ನಾಶ

ದೊಡ್ಡಬಳ್ಳಾಪುರ : ಟೊಮೆಟೊಗೆ ಇವತ್ತು ಚಿನ್ನದ ಬೆಲೆ. ಉತ್ತಮ ಬೆಲೆ ಸಿಗುವ ಸಮಯಕ್ಕೆ ಟೊಮೆಟೊ ಬೆಳೆಯ ಭರ್ಜರಿ ಫಸಲು ಬಂದಿತ್ತು. ಆದರೆ, ಕಂಪನಿಯೊಂದರ ಕ್ರಿಮಿನಾಶಕ ಔಷಧಿ ಸಿಂಪಡಣೆ ಮಾಡಿದ್ದರಿಂದ ತಾಲೂಕಿನಲ್ಲಿ ಇಡೀ ಟೊಮೆಟೊ ಬೆಳೆ ಒಣಗಿನಿಂತಿದೆ ಎಂದು ರೈತರು ಆರೋಪಿಸಿದ್ದಾರೆ. ರೈತನ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಅಡುಗೆ ಮನೆಯ ರಾಣಿ, ಕೆಂಪು ಸುಂದರಿ ಎಂದೇ ಟೊಮೆಟೊ ಪ್ರಸಿದ್ಧಿ ಪಡೆದಿದೆ. ಮಾರುಕಟ್ಟೆಯಲ್ಲಿ ಟೊಮೆಟೊ ಬೆಲೆಗೆ ಬಂಗಾರದ ಬೆಲೆ ಇದೆ. ಇವತ್ತು …

Read More »

ಎರಡು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಅಪರಾಧಿಗೆ ಸೂರತ್ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿ

ಸೂರತ್​(ಗುಜರಾತ್​) : ಎರಡು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮಾಡಿ ಕೊಲೆಗೈದ ಅಪರಾಧಿಗೆ ಗುಜರಾತ್​ನ ಸೂರತ್​ ನ್ಯಾಯಾಲಯವು ಮರಣ ದಂಡನೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಕಳೆದ ಫೆಬ್ರವರಿ ತಿಂಗಳಿನಲ್ಲಿ 23 ವರ್ಷದ ಅಪರಾಧಿಯು ಪುಟ್ಟ ಮಗುವನ್ನು ಅತ್ಯಾಚಾರ ಎಸಗಿ ಹತ್ಯೆಗೈದಿದ್ದ. ಈ ಬಗ್ಗೆ ವಿಚಾರಣೆ ನಡೆಸಿದ ಸೂರತ್​ ನ್ಯಾಯಾಲಯವು ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಿದೆ. ಅಪರಾಧಿಯನ್ನು ಸೂರತ್​ನ ಸಚಿನ್ ಪ್ರದೇಶದ ನಿವಾಸಿ ಇಸ್ಮಾಯಿಲ್​ ಯೂಸುಫ್​(23) ಎಂದು ಗುರುತಿಸಲಾಗಿದೆ. ಅತ್ಯಾಚಾರ ಆರೋಪಿಗೆ …

Read More »

ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತನಿಖೆಗೆ ಆದೇಶಿಸಿದ್ದಾರೆ.

ಬೆಂಗಳೂರು: ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ನೀಡಿದ್ದಾರೆ.‌ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆಯೂ ಸಿಎಂ ಸೂಚನೆ ಕೊಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಘಟನೆಗೆ ಯಾರೇ ಕಾರಣರಾಗಿದ್ದರೂ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್​ ಖಾತೆಯಿಂದ …

Read More »

ಸ್ವಿಚ್​ ​​ಬೋರ್ಡ್​ಗೆ ಹಾಕಿದ್ದ ಮೊಬೈಲ್ ಚಾರ್ಜರ್ ವಯರ್​ನ್ನು ಬಾಯಿ ಹಾಕಿದ ಪರಿಣಾಮ ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವನ್ನಪ್ಪಿದ

ಕಾರವಾರ(ಉತ್ತರಕನ್ನಡ):ಸ್ವಿಚ್​ ​​ಬೋರ್ಡ್​ಗೆ ಹಾಕಿದ್ದ ಮೊಬೈಲ್ ಚಾರ್ಜರ್ ವಯರ್​ನ್ನು ಬಾಯಿ ಹಾಕಿದ ಪರಿಣಾಮ ವಿದ್ಯುತ್ ಪ್ರವಹಿಸಿ 8 ತಿಂಗಳ ಮಗು ಸಾವನ್ನಪ್ಪಿದ ಘಟನೆ ಕಾರವಾರ ತಾಲೂಕಿನ ಸಿದ್ದರದಲ್ಲಿ ಇಂದು ನಡೆದಿದೆ. ಸಿದ್ದರದ ಸಂತೋಷ ಕಲ್ಗುಟಕರ್, ಸಂಜನಾ ಕಲ್ಗುಟಕರ್ ದಂಪತಿಗೆ ಸೇರಿದ 8 ತಿಂಗಳ ಹೆಣ್ಣು ಮಗು ಸಾನಿಧ್ಯ ಕಲ್ಗುಟಕರ್ ಮೃತಪಟ್ಟಿದೆ. 14 ವರ್ಷದ ಬಳಿಕ ದಂಪತಿಗೆ ಈ ಮಗು ಜನಿಸಿತ್ತು. ಕರುಳ‌ ಕುಡಿ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಬೆಳಗ್ಗೆ …

Read More »

ಬಿಸಿಲಿನ ತಾಪಕ್ಕೆ ಹೆಸರುವಾಸಿಯಾದ ಕಲಬುರಗಿ ಜಿಲ್ಲೆ ಈಗ‌ ಅಕ್ಷರಶಃ ಮಲೆ‌ನಾಡಿನ ವಾತಾವರಣದಂತೆ

ಕಲಬುರಗಿ: ಬಿಸಿಲಿನ ತಾಪಕ್ಕೆ ಹೆಸರುವಾಸಿಯಾದ ಕಲಬುರಗಿ ಜಿಲ್ಲೆ ಈಗ‌ ಅಕ್ಷರಶಃ ಮಲೆ‌ನಾಡಿನ ವಾತಾವರಣದಂತೆ ಭಾಸವಾಗುತ್ತಿದೆ. ಕಳೆದೊಂದು ವಾರದಿಂದ‌ ಅಬ್ಬರದ ಮಳೆಯಾಗಿದೆ. ಜೊತೆಗೆ ಮಹಾರಾಷ್ಟ್ರ, ತೆಲಂಗಾಣದಲ್ಲಿ ಸುರಿದಿದ್ದ ಭಾರಿ ಮಳೆ ಹಿನ್ನೆಲೆ ಜಿಲ್ಲೆಯಲ್ಲಿ ತಂಪಿನ ವಾತಾವರಣ ಕಂಡುಬರುತ್ತಿದೆ. ಚಿಂಚೋಳಿ ತಾಲೂಕಿನ‌ ಎತ್ತಿಪೋತಾ ಜಲಪಾತ ಮೈದುಂಬಿ‌ ಹರಿಯುತ್ತಿದೆ. ಜಲಪಾತದ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳಲು ನೂರಾರು ಪ್ರವಾಸಿಗರು ಇಲ್ಲಿಗೆ ಬರುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೆರಳೆಣಿಕೆಯಷ್ಟು ಚಿಕ್ಕಪುಟ್ಟ ಜಲಪಾತಗಳು ಇವೆ. ಬೆಸಿಗೆಯಲ್ಲಿ ಇವು‌ ಸೊರಗಿ ಹೋಗುತ್ತವೆ. …

Read More »