Breaking News

Daily Archives: ಆಗಷ್ಟ್ 17, 2023

ಲೋಕಸಭೆಯ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಬುಧವಾರ ನಾಮನಿರ್ದೇಶನ ಮಾಡಲಾಗಿದೆ.

ನವದೆಹಲಿ: ಲೋಕಸಭೆಯ ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಬುಧವಾರ ನಾಮನಿರ್ದೇಶನ ಮಾಡಲಾಗಿದೆ. ಮತ್ತೊಬ್ಬ ಕಾಂಗ್ರೆಸ್ ಸಂಸದ ಅಮರ್ ಸಿಂಗ್ ಅವರನ್ನೂ ಇದೇ ಸಮಿತಿಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಲೋಕಸಭೆಯ ಬುಲೆಟಿನ್ ತಿಳಿಸಿದೆ. ಹೊಸದಾಗಿ ಚುನಾಯಿತರಾದ ಲೋಕಸಭೆಯ ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಕುಮಾರ್ ರಿಂಕು ಅವರನ್ನು ಕೃಷಿ, ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆ ಸಮಿತಿಗೆ ನಾಮನಿರ್ದೇಶನ ಮಾಡಲಾಗಿದೆ. ಇತ್ತೀಚೆಗೆ ಜಲಂಧರ್ ಲೋಕಸಭಾ ಕ್ಷೇತ್ರದ …

Read More »

ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಶಕ್ತಿ ಯೋಜನೆಯನ್ನು ಸ್ಥಗಿತಗೊಳಿಸುವುದಿಲ್ಲ ಎಂದ ಸಿಎಂ

ಬೆಂಗಳೂರು: ಶಕ್ತಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮೊದಲು ಗ್ಯಾರಂಟಿ ಯೋಜನೆಗಳು ಜಾರಿಯಾಗುವುದಿಲ್ಲ ಎಂದು ಅಪಪ್ರಚಾರ ಮಾಡಿದರು. ಈಗ ಈ ಯೋಜನೆಗಳು ಹೆಚ್ಚು ಕಾಲ ಚಾಲನೆಯಲ್ಲಿ ಇರುವುದಿಲ್ಲ ಎಂದು ಅಪಪ್ರಚಾರ ಆರಂಭಿಸಿದ್ದಾರೆ. ಇಂಥ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ. ಇದಕ್ಕೆ ನಾನೇ ಗ್ಯಾರಂಟಿ ಎಂದು ಭರವಸೆ ನೀಡಿದ್ದಾರೆ.       ಶಕ್ತಿ ಯೋಜನೆ …

Read More »

1 ಗಂಟೆ ಪೊಲೀಸ್ ಆದ 8 ವರ್ಷದ ಪೋರ… ಆಜಾನ್​ ಖಾನ್​

ಶಿವಮೊಗ್ಗ: ಎಂಟೂವರೆ ವರ್ಷದ ಪುಟ್ಟ ಬಾಲಕ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಪೊಲೀಸ್ ಆಗಿ ಒಂದು ಗಂಟೆ ಕರ್ತವ್ಯ ನಿರ್ವಹಿಸಿ ಗಮನ ಸೆಳೆದಿದ್ದಾನೆ. ಪುಟ್ಟ ಬಾಲಕನ ಆದೇಶಕ್ಕೆ ಎಲ್ಲ ಪೊಲೀಸರು ಸೆಲ್ಯೂಟ್ ಹೊಡೆದು ಎಸ್ ಸಾರ್‌ ಅಂದ್ರು. ಹೌದು ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಗೆ ಬುಧವಾರ ಒಂದು ಗಂಟೆಯ ಮಟ್ಟಿಗೆ ಎಂಟೂವರೆ ವರ್ಷದ ಬಾಲಕ ಪೊಲೀಸ್​ ಇನ್ಸ್​ಪೆಕ್ಟ್​​ರ್​ ಆಗಿ ಕರ್ತವ್ಯ ನಿರ್ವಹಿಸಿದ್ದು ವಿಶೇಷವಾಗಿತ್ತು. ಈ ಬಾಲಕನ ಹೆಸರು ಆಜಾನ್ ಖಾನ್. ಈತ …

Read More »

ಬಾಗಲಕೋಟೆಯಲ್ಲಿ 17ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ

ಬಾಗಲಕೋಟೆ: ನಗರದ ಸೋನಾರ ಬಡಾವಣೆಯಲ್ಲಿ ಕಳೆದ ಎರಡು ದಿನಗಳ‌ ಹಿಂದೆ ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ಶಿವಾಜಿ ಮೂರ್ತಿಯನ್ನು ಪೊಲೀಸರು ಸೂಕ್ತ ಭದ್ರತೆ ನಡುವೆ ತೆರವುಗೊಳಿಸಿದ್ದಾರೆ. ಈ ಮೂರ್ತಿಯನ್ನು ಪ್ರತಿಷ್ಠಾಪನೆ ಕಾರಣ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಮೂರ್ತಿ ತೆರವುಗೊಳಿಸುವ ಮಾಹಿತಿ ಹರಡುತ್ತಿದ್ದಂತೆ ಕೆಲ ಸಂಘಟನೆ ಹಾಗೂ ಕೆಲವು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಸ್ಥಳದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸಿದರು. ಈ ವೇಳೆ, ಸ್ಥಳಕ್ಕಾಗಮಿಸಿದ ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್ ಪ್ರತಿಭಟನಾನಿರತರನ್ನು ಮನವೊಲಿಸುವ ಪ್ರಯತ್ನ …

Read More »

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ದಾವಣಗೆರೆ/ಕೊಡಗು/ ಕೊಪ್ಪಳ : ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಸರ್ಕಾರಿ ಹುದ್ದೆಯಲ್ಲಿರುವ ದಂಪತಿ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಅವರ ಪತ್ನಿ ಬಿಬಿಎಂಪಿ ಎಇ ಹೆಚ್. ಭಾರತಿ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಚಿತ್ರದುರ್ಗ ಲೊಕಾಯುಕ್ತ ಎಸ್​ಪಿ ವಾಸುದೇವ್ ರಾಮ್ ಹಾಗೂ ಡಿವೈಎಸ್​ಪಿ ಮೃಂತುಂಜಯ್ಯ ನೇತೃತ್ವದ ತಂಡದಿಂದ ದಾವಣಗೆರೆ …

Read More »