Breaking News

Daily Archives: ಆಗಷ್ಟ್ 21, 2023

ಜಿಲ್ಲಾ ಆರೋಗ್ಯ ಅಧಿಕಾರಿಗಳ ಒಂದೇ ಹುದ್ದೆಗಾಗಿ ಪರಸ್ಪರ ಹಗ್ಗಜಗ್ಗಾಟ

ಬಾಗಲಕೋಟೆ: ಜಿಲ್ಲಾ ಮಟ್ಟದ ಅಧಿಕಾರಿ‌ಗಳಿಬ್ಬರು ಒಂದೇ ಹುದ್ದೆಗಾಗಿ ಪರಸ್ಪರ ಹಗ್ಗಜಗ್ಗಾಟ ನಡೆಸಿದ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹಾಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಯಶ್ರೀ ಎಮ್ಮಿ ಅವರು ತಮ್ಮ ವರ್ಗಾವಣೆ ಆದೇಶ ಪ್ರಶ್ನಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿಯಿಂದ ತಡೆಯಾಜ್ಞೆ ತಂದಿದ್ದರು. ಈ ಮಧ್ಯೆ ಡಾ.ಜಯಶ್ರೀ ಎಮ್ಮಿ ರಜೆಯಲ್ಲಿ ತೆರಳಿದ್ದಾಗ ಸರ್ಕಾರದ ಆದೇಶ ತಂದು ಡಾ.ರಾಜಕುಮಾರ್ ಯರಗಲ್ ಅಧಿಕಾರ ವಹಿಸಿಕೊಂಡಿದ್ದಾರೆ. ಹೀಗಾಗಿ ಒಂದೇ ಹುದ್ದೆಗೆ ಒಬ್ಬರ ನಡುವೆ ಕಿತ್ತಾಟ ನಡೆಯಿತು. ”ವಿಜಯಪುರ ಜಿಲ್ಲೆಯಲ್ಲಿ …

Read More »

ಗುಜರಾತ್​ನಲ್ಲಿ ಹಾವು ಕಡಿತ: ಉತ್ತರ ಪ್ರದೇಶದಲ್ಲಿ ಚಿಕಿತ್ಸೆ… 1300ಕಿ.ಮೀ ಕ್ರಮಿಸಿ ಬದುಕುಳಿದ ಧೀರ

ಕಾನ್ಪುರ(ಉತ್ತರ ಪ್ರದೇಶ): ಗುಜರಾತಿನಲ್ಲಿ ಹಾವು ಕಡಿತಕ್ಕೊಳಗಾದ ಯುವಕನೊಬ್ಬ ಚಿಕಿತ್ಸೆಗಾಗಿ ಸುಮಾರು 1,300 ಕಿ.ಮೀ ಕ್ರಮಿಸಿ ಉತ್ತರ ಪ್ರದೇಶದ ಕಾನ್ಪುರ ತಲುಪಿ ಬದುಕುಳಿದಿರುವ ಅಚ್ಚರಿಯ ಘಟನೆ ನಡೆದಿದೆ. ಕಿಶನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮ ಫತೇಪುರದ ಸುನಿಲ್​ ಕುಮಾರ್​ (20) ನೇ ಹೀಗೆ ಬದುಕುಳಿದ ಯುವಕನಾಗಿದ್ದಾನೆ. ಈತ ಗುಜರಾತ್​ನ ರಾಜ್​ಕೋಟ್​ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಗಸ್ಟ್ 15ರಂದು ಆತನಿಗೆ ಹಾವು ಕಚ್ಚಿದೆ. ತಕ್ಷಣವೇ ಅವನನ್ನು ಸ್ಥಳೀಯ ಆರೋಗ್ಯ ಕೇಂದ್ರಕ್ಕೆ …

Read More »

ನಂಬಿಕೆ ದ್ರೋಹ ಮಾಡಿದನೆಂದು ಸ್ನೇಹಿತನನ್ನೇ ದುಷ್ಕರ್ಮಿಗಳ ಕೊಲೆ

ಚಿಕ್ಕೋಡಿ : ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಹಾರುಗೇರಿ ಗ್ರಾಮದ ಅಕ್ಬರ್ ಶಬ್ಬೀರ್ ಜಮಾದಾರ್ (22) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಕಳ್ಳತನದ ವ್ಯವಹಾರದಲ್ಲಿ ನಂಬಿಕೆ ದ್ರೋಹ ಎಸಗಿದ್ದಾನೆಂದು ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಮೃತನ ತಾಯಿ ಕೈರುಣ ಜಮಾದಾರ ಆರೋಪಿಸಿದರು. ಬಸ್ತವಾಡ ಗ್ರಾಮದ ಹೊರವಲಯದಲ್ಲಿ ಜಮಾದಾರ್​ನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದು, ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕಳೆದ ಎರಡು …

Read More »

ತುಂಗಭದ್ರಾ ಎಡದಂಡೆ ಕಾಲುವೆಗೆ ಅಕ್ರಮವಾಗಿ ಅಳವಡಿಸಿದ್ದ ಪೈಪ್​ಲೈನ್​ಗಳನ್ನು ವಿವಿಧ ಇಲಾಖೆಯ ಅಧಿಕಾರಿಗಳ ತಂಡ ತೆರವು ಮಾಡಿದೆ

ಗಂಗಾವತಿ(ಕೊಪ್ಪಳ): ತುಂಗಭದ್ರಾ ಎಡದಂಡೆ ಕಾಲುವೆ ವ್ಯಾಪ್ತಿಯಲ್ಲಿನ ವಿತರಣಾ ಕಾಲುವೆಗಳ ಸಮೀಪ ಅನಧಿಕೃತವಾಗಿ ಪೈಪ್​ಲೈನ್​ ಅಳವಡಿಸಿ, ನೀರು ಕಳ್ಳತನವಾಗುತ್ತಿರುವ ಪ್ರದೇಶಗಳನ್ನು ಪತ್ತೆ ಹಚ್ಚಿದ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಇಂದು ಪೈಪ್​ಲೈನ್​​​ಗಳ ತೆರವು ಕಾರ್ಯಾಚರಣೆ ನಡೆಸಿತು. ನೀರು ಕಳ್ಳತನ ತಡೆಯುವ ಉದ್ದೇಶಕ್ಕೆ ಕೊಪ್ಪಳ ಜಿಲ್ಲಾಧಿಕಾರಿ, ತುಂಗಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಮುಖ್ಯ ಅಭಿಯಂತರರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳಿಂದ ಕೂಡಿದ ಕಾರ್ಯಾಚರಣೆ ಪಡೆ ರಚಿಸಿದ್ದಾರೆ. ಈ ಹಿನ್ನೆಲೆ ಇಲ್ಲಿನ ವಡ್ಡರಹಟ್ಟಿ ನಂಬರ್-2 ವಿಭಾಗದ ವ್ಯಾಪ್ತಿಗೆ …

Read More »

ಈರುಳ್ಳಿ ಬೆಲೆ ಏರಿಕೆ ತಡೆಗೆ ಮುಂದಾದ ಕೇಂದ್ರ ಸರ್ಕಾರ

ನವದೆಹಲಿ : ಪ್ರತಿ ವರ್ಷ ಒಂದಲ್ಲ ಒಂದು ಕಾರಣದಿಂದ ದಿನಬಳಕೆಯ ವಸ್ತುಗಳ ದರ ಸ್ವಲ್ಪ ಸಮಯದವರೆಗೆ ಏರಿಕೆ ಕಾಣುತ್ತಲೇ ಇರುತ್ತದೆ. ಇತ್ತೀಚೆಗೆ ಟೊಮೆಟೊ ಬೆಲೆ ಗಗನಕ್ಕೇರಿತ್ತು. ಈ ಬೆನ್ನಲ್ಲೇ ಇದೀಗ ಈರುಳ್ಳಿ ದರದಲ್ಲಿ ಹೆಚ್ಚಳ ಕಂಡುಬಂದಿದೆ. ಈಗಾಗಲೇ ಬೆಲೆ ಏರಿಕೆ ತಡೆಗೆ ಸರ್ಕಾರ ಕ್ರಮಕೈಗೊಂಡಿದ್ದು, ಗ್ರಾಹಕರಿಗೆ ಮಾತ್ರ ಇನ್ನೂ ಪ್ರಯೋಜನ ತಲುಪಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಹೌದು, ದೇಶೀಯ ಮಾರುಕಟ್ಟೆಯಲ್ಲಿ ಲಭ್ಯತೆ ಹೆಚ್ಚಿಸಲು ಈರುಳ್ಳಿ ರಫ್ತಿನ ಮೇಲೆ ಶೇ.40 ರಷ್ಟು …

Read More »

ಪಾಟ್ನಾ-ಕೋಟಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಇಬ್ಬರು ಪ್ರಯಾಣಿಕರ ಸಾವು: 6 ಮಂದಿ ಅಸ್ವಸ್ಥ

ಆಗ್ರಾ(ಉತ್ತರ ಪ್ರದೇಶ): ಭಾನುವಾರ ವಾರಣಸಿಯಿಂದ ಮಥುರಾಗೆ ಪ್ರಯಾಣಿಸುತ್ತಿದ್ದ ಪಾಟ್ನಾ-ಕೋಟಾ ಎಕ್ಸ್‌ಪ್ರೆಸ್ (13237) ರೈಲಿನಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, ಆರು ಮಂದಿ ಅಸ್ವಸ್ಥರಾಗಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಪ್ರಯಾಣಿಕರು ಹವಾನಿಯಂತ್ರಿತವಲ್ಲದ ಸ್ಲೀಪರ್ ಕೋಚ್ ಸಂಖ್ಯೆ ಎಸ್-2ರಲ್ಲಿ ಪ್ರಯಾಣಿಸುತ್ತಿದ್ದರು. ಪ್ರಯಾಣಿಕರ ಆರೋಗ್ಯ ಹದಗೆಟ್ಟಿರುವ ಕುರಿತು ಆಗ್ರಾದ ರೈಲ್ವೆ ಅಧಿಕಾರಿಗಳಿಗೆ ತುರ್ತು ಕರೆ ಬಂದಿದೆ. ಭಾನುವಾರ ಸಂಜೆ ರೈಲು ಆಗ್ರಾ ಕ್ಯಾಂಟ್ ನಿಲ್ದಾಣಕ್ಕೆ ಆಗಮಿಸಿದ ಬಳಿಕ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು. ಆದರೆ, …

Read More »

ಐರ್ಲೆಂಡ್​ ವಿರುದ್ಧ ಮಿಂಚಿದ ರಿಂಕು.. ‘ನನ್ನೆಲ್ಲ ಪ್ರಯತ್ನಕ್ಕೆ ಸಿಕ್ಕ ಫಲ’ ಎಂದ ಯುವ ಬ್ಯಾಟರ್​

ಡಬ್ಲಿನ್‌: ಡಬ್ಲಿನ್‌ನಲ್ಲಿ ಭಾನುವಾರ ನಡೆದ ಐರ್ಲೆಂಡ್‌ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡ 33 ರನ್​ಗಳ ಜಯ ದಾಖಲಿಸಿ, ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದೆ. ಈ ಪಂದ್ಯದಲ್ಲಿ ಬ್ಯಾಟಿಂಗ್​ಗಿಳಿದ ಯುವ ಬ್ಯಾಟರ್​​ ರಿಂಕು ಸಿಂಗ್‌ ಅಂತಿಮ ಓವರ್​ಗಳಲ್ಲಿ ಸಿಡಿಲಬ್ಬರದ ಪ್ರದರ್ಶನ ತೋರುವ ಮೂಲಕ ಸಿಕ್ಕ ಅವಕಾಶ ಸದ್ಭಳಕೆ ಮಾಡಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಅದ್ಭುತ ಎಂಟ್ರಿ ಕೊಟ್ಟಿದ್ದಾರೆ.     ಐಪಿಎಲ್​ನಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ಪರ ಆಡುತ್ತಿರುವ ರಿಂಕು 2023ರ …

Read More »

ನಾವು ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಯಾರೆಂಬುದು ಚುನಾಯಿತ ಸಂಸದರು ನಿರ್ಧರಿಸುತ್ತಾರೆ: ಪಿಎಲ್ ಪುನಿಯಾ

ಲಖನೌ, ಉತ್ತರ ಪ್ರದೇಶ : ನಾವು ಅಧಿಕಾರಕ್ಕೆ ಬಂದ ನಂತರ ಪ್ರಧಾನಿ ಯಾರೆಂಬುದು ನಿರ್ಧರಿಸಲಾಗುವುದು ಎಂದು ಕಾಂಗ್ರೆಸ್ ನಾಯಕ ಪಿಎಲ್ ಪುನಿಯಾ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಸಮ್ಮಿಶ್ರದಿಂದ ಚುನಾಯಿತ ಸಂಸದರು ಪ್ರಧಾನಿಯನ್ನು ಆಯ್ಕೆ ಮಾಡುತ್ತಾರೆ ಎಂದು ಪಿಎಲ್ ಪುನಿಯಾ ಹೇಳಿದರು. 2024 ರ ಲೋಕಸಭೆ ಚುನಾವಣೆಗೆ ಮುನ್ನ ಬಿಜೆಪಿಯನ್ನು ಎದುರಿಸಲು ಒಗ್ಗಟ್ಟಿನ ತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ಸಭೆ ಸೇರಿದ್ದವು. ಇಂಡಿಯಾ ಅಥವಾ ‘ಭಾರತೀಯ ರಾಷ್ಟ್ರೀಯ ಅಭಿವೃದ್ಧಿ …

Read More »

ಬೆಳಗಾವಿ ಬಿಜೆಪಿ ಲೋಕಸಭಾ ಟಿಕೆಟ್ ಯಾರಿಗೆ?

ಲೋಕಸಭಾ ಟಿಕೆಟ್ ಗಾಗಿ ಬೆಳೆಗಾವಿ ಬಿಜೆಪಿಯಲ್ಲಿ ಪೈಪೋಟಿ ಹೇಗಿದೆ ಬನ್ನಿ ನೋಡಣ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಪೈಪೋಟಿ ಆರಂಭವಾಗಿದೆ ಈಗಾಗಲೇ ಮಾಜಿ ಶಾಸಕರಾದ ಸಂಜಯ ಪಾಟೀಲ್, ಅನಿಲ್ ಬೆನಕೆ, ಮಾಜಿ ಎಂಎಲಸಿ ಮಹಾಂತೇಶ ಕವಟಗಿಮಠ, ಬಿಎಸವೈ ಆಪ್ತ ಶಂಕರಗೌಡ ಪಾಟೀಲ್ ಲಾಬಿ ನಡೆಸಿದ್ದಾರೆ ಇನ್ನೂ ಗೋಕಾಕ, ಅರಬಾವಿ, ರಾಮದುರ್ಗ, ಸವದತ್ತಿ, ಬೈಲಹೊಂಗಲ ತಾಲ್ಲೂಕಿನಲ್ಲಿ ಲಿಂಗಾಯತ ಮತಗಳೇ ಪ್ರಾಬಲ್ಯ ಇರುವುದರಿಂದ ರಾಜ್ಯಸಭಾ …

Read More »

ಎರಡು ತಿಂಗಳಿನಿಂದ ಆಭರಣದ ಸುಪರ್ದಿಗಾಗಿ ನಡುವೆ ನಡೆದಿದ್ದ ತಿಕ್ಕಾಟಕ್ಕೆ ಕೊನೆಗೂ ಗೋಕಾಕ ತಾಲೂಕಾಡಳಿತದಿಂದ ಅಂತ್ಯ

ಎರಡು ತಿಂಗಳಿನಿಂದ ಆಭರಣದ ಸುಪರ್ದಿಗಾಗಿ ನಡುವೆ ನಡೆದಿದ್ದ ತಿಕ್ಕಾಟಕ್ಕೆ ಕೊನೆಗೂ ಗೋಕಾಕ ತಾಲೂಕಾಡಳಿತದಿಂದ ಅಂತ್ಯ ಕಾಣಿತು ಬೆಳಗಾವಿ ಜಿಲ್ಲೆ ಗೋಕಾಕ ತಾಲೂಕಿನ ಮುಜರಾಯಿ ಇಲಾಖೆಯ ಆಧಿನದಲ್ಲಿರುವ ಕೊಣ್ಣೂರಿನ ಶ್ರೀಲಕ್ಷ್ಮೀ ದೇವಸ್ಥಾನದ ಅರ್ಚಕರ ಕುಟುಂಬ ಮತ್ತು ಕಮಿಟಿಯವರ ನಡುವೆ ದೇವಸ್ಥಾನದ ಆಭರಣಗಳನ್ನು ತಮ್ಮ ಸುಪರ್ದಿಗೆ ತೆಗೆದುಕೊಳ್ಳಲು ನಡೆದಿದ್ದ ಜಗಳವನ್ನು ಸಂಧಾನ ಮಾಡಲು ಹಲವಾರು ಬಾರಿ ಗೋಕಾಕ ತಹಸಿಲ್ದಾರ ಕೆ, ಮಂಜುನಾಥ ಮತ್ತು ಪೋಲಿಸ್ ಅಧಿಕಾರಿಗಳು ಪ್ರಯತ್ನ ಪಟ್ಟರು ಸಹ ಹೊಂದಾಣಿಕೆ ಆಗದೆ …

Read More »