ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿದಿರುವ ಚಂದ್ರಯಾನ-3ರ ಬಗ್ಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗುರುವಾರ ಹೊಸ ಮಾಹಿತಿ ನೀಡಿದೆ. ವಿಕ್ರಮ ಲ್ಯಾಂಡರ್ ಚಂದ್ರನನ್ನು ಸ್ಪರ್ಶಿಸುವ ಮುಂಚೆ ಸೆರೆಹಿಡಿದ ಅಂತಿಮ ಕ್ಷಣಗಳ ಚಿತ್ರಗಳ ವಿಡಿಯೋವನ್ನು ಇಸ್ರೋ ಹಂಚಿಕೊಂಡಿದೆ. ”ಚಂದ್ರಯಾನ -3 ಮಿಷನ್ನ ಎಲ್ಲ ಚಟುವಟಿಕೆಗಳು ಸರಿಯಾಗಿ ಸಾಗುತ್ತಿವೆ” ಎಂದು ಇಸ್ರೋ ಟ್ವೀಟ್ ಮಾಡಿದೆ. ಲ್ಯಾಂಡರ್ ಮಾಡ್ಯೂಲ್ ಉಪಕರಣಗಳಾದ ಎಲ್ಐಎಸ್ಎ (ILSA), ರಂಭಾ (RAMBHA) ಮತ್ತು ಚೇಸ್ಟ್ …
Read More »Daily Archives: ಆಗಷ್ಟ್ 25, 2023
ಹುಬ್ಬಳ್ಳಿ ಅಂಕೋಲಾ ರೈಲು ಯೋಜನೆ ಪ್ರಶ್ನಿಸಿ ಪರಿಸರವಾದಿಗಳು ಸಲ್ಲಿಸಿದ್ದ ಅರ್ಜಿ ವಿಲೇವಾರಿ
ಬೆಂಗಳೂರು: ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಅಭಿಪ್ರಾಯದಂತೆ ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗದ ಕುರಿತು ಪರಿಷ್ಕೃತ ಯೋಜನೆಯನ್ನು ಸಲ್ಲಿಸುವುದಾಗಿ ನೈಋತ್ಯ ರೈಲ್ವೆ ವಲಯ ಸಲ್ಲಿಸಿದ ಪ್ರಮಾಣ ಪರಿಗಣಿಸಿರುವ ಹೈಕೋರ್ಟ್, ಹುಬ್ಬಳ್ಳಿ – ಅಂಕೋಲಾ ನಡುವಿನ ಬ್ರಾಡ್ ಗೇಜ್ ರೈಲು ಮಾರ್ಗ ಯೋಜನೆಗೆ ಮುಂದಾಗಿದ್ದ ಕ್ರಮವನ್ನು ಪ್ರಶ್ನಿಸಿ ಪರಿಸರವಾದಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಲೇವಾರಿ ಮಾಡಿದೆ. ಹುಬ್ಬಳ್ಳಿ- ಅಂಕೋಲಾ ನಡುವೆ 164.44 ಕಿ.ಮೀ ಉದ್ದದ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಇದಾಗಿದೆ. ಈ …
Read More »ಬ್ರಿಕ್ಸ್ ಶೃಂಗ ಮುಗಿಸಿ ಅಥೆನ್ಸ್ಗೆ ಪ್ರಧಾನಿ… ಭರ್ಜರಿ ಸ್ವಾಗತ ಕೋರಲು ಗ್ರೀಸ್ ಸನ್ನದ್ಧ
ಅಥೆನ್ಸ್( ಗ್ರೀಸ್): ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಥೆನ್ಸ್ಗೆ ಭೇಟಿ ನೀಡಲಿದ್ದಾರೆ. 40 ವರ್ಷಗಳ ಬಳಿಕ ಭಾರತೀಯ ಪ್ರಧಾನಿಯೊಬ್ಬರು ಗ್ರೀಸ್ಗೆ ಮೊದಲ ಭೇಟಿ ನೀಡುತ್ತಿದ್ದಾರೆ. ಇದಕ್ಕಾಗಿ ಅಥೆನ್ಸ್ನಲ್ಲಿ ಮೋದಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆದಿದೆ. ಯುರೋಪಿನ ಐತಿಹಾಸಿಕ ಭೂಮಿಗೆ ಇದು ನನ್ನ ಮೊದಲ ಭೇಟಿಯಾಗಿದೆ. 40 ವರ್ಷಗಳ ನಂತರ ಗ್ರೀಸ್ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಎಂಬ ಗೌರವ ನನಗೆ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ …
Read More »ಬಿಜೆಪಿ ಬಿಡುವ ಸ್ಥಿತಿ ಬಂದಲ್ಲಿ ರಾಜಕೀಯ ನಿವೃತ್ತಿ ಪಡೆಯುತ್ತೇನೆಯೇ ಹೊರತು ಕಾಂಗ್ರೆಸ್ ಸೇರಲ್ಲ: ಬೈರತಿ ಬಸವರಾಜ್
ಬೆಂಗಳೂರು: ಬಿಜೆಪಿ ಬಿಡುವ ಸ್ಥಿತಿ ಬಂದ್ರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆಯೇ ಹೊರತು ಮರಳಿ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಎಂದು ಶಾಸಕ ಬೈರತಿ ಬಸವರಾಜ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಬಿಟ್ಟು ಹೋಗಲ್ಲ. ಯಾರೋ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಯಾವ ಕಾರಣಕ್ಕೂ ನಾನು ಪಕ್ಷ ಬಿಡಲ್ಲ. ಪಕ್ಷ ಬಿಡುವ ಸಂದರ್ಭ ಬಂದರೆ ನಾನು ನಿವೃತ್ತಿ ಆಗಿ ಮನೆಯಲ್ಲಿ ಇರುತ್ತೇನೆಯೇ ಹೊರತು ಕಾಂಗ್ರೆಸ್ ಪಕ್ಷ …
Read More »ಸುಗಮ ಸಂಚಾರಕ್ಕೆ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ಸ್ ಅಡ್ಡಿ: ವಾಹನ ಸವಾರರಿಗೆ ಕಿರಿಕಿರಿ
ಚಿತ್ರದುರ್ಗ, ಆಗಸ್ಟ್ 24: ಸುಗಮ ಸಂಚಾರಕ್ಕಾಗಿ ನಗರ ಪ್ರದೇಶದಲ್ಲಿ ಟ್ರಾಫಿಕ್ ಸಿಗ್ನಲ್ಸ್(traffic signals)ಅಳವಡಿಸಲಾಗುತ್ತದೆ. ಅಂತೆಯೇ ವಾಹನ ಸವಾರರಿಗೆ ಟ್ರಾಫಿಕ್ ಸಿಗ್ನಲ್ಸ್ ಸಹಕಾರಿ ಆಗಿರುತ್ತದೆ. ಆದರೆ ಅದೊಂದು ನಗರದಲ್ಲಿ ಅವೈಜ್ಞಾನಿಕ ಟ್ರಾಫಿಕ್ ಸಿಗ್ನಲ್ ಅಳವಡಿಸಿದ್ದು ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ವರದಿ ಇಲ್ಲಿದೆ. ಕೋಟೆನಾಡು ಚಿತ್ರದುರ್ಗ ನಗರದಲ್ಲಿ ವಾರದ ಹಿಂದಷ್ಟೇ ಹೊಸದಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ. ಗಾಂಧಿವೃತ್ತದಲ್ಲಿ ಸಿಗ್ನಲ್ ಅಳವಡಿಸಲಾಗಿದೆ. ಅರ್ಧ ಕಿ.ಮೀಟರ್ …
Read More »ತಮಿಳುನಾಡಿಗೆ KRS ನೀರು ಹರಿಸುತ್ತಿರೋ ರಾಜ್ಯ ಸರ್ಕಾರ ಒತ್ತಡಕ್ಕೆ ಮಣಿಯಿತಾ?
ಅಲ್ಲ ಬೆಂಗಳೂರು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಕುಡಿಯುವ ನೀರನ್ನ ಓದಗಿಸುವ ಜಲಾಶಯ. ಕೆಆರ್ ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆ ಇದೆ. ಆದರೆ ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದಿರೋ ರಾಜ್ಯ ಸರ್ಕಾರ ನಾಲೆಗಳಿಗೆ ನೀರು ಹರಿಸುವುದನ್ನ ನಿಲ್ಲಿಸಿ, ಇದೀಗ ಕಾವೇರಿ ನದಿಯ ಮೂಲಕ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದು ಜಿಲ್ಲೆಯ ರೈತರ ಆಕ್ರೋಶಕ್ಕೂ ಕೂಡ ಕಾರಣವಾಗಿದೆ. ಹೌದು ತಮಿಳುನಾಡು (Tamil Nadu) ಸರ್ಕಾರದ ಒತ್ತಡಕ್ಕೆ ರಾಜ್ಯ ಸರ್ಕಾರ (Karnataka government) ಮಣಿಯಿತಾ …
Read More »NIA: ಬೆಳ್ಳಂದೂರಿನಲ್ಲಿ ಪತ್ತೆಯಾಗಿರುವುದು 43 ಅಕ್ರಮ ಬಾಂಗ್ಲಾ ವಲಸಿಗರು,
ಬೆಂಗಳೂರು, ಆಗಸ್ಟ್ 11: ಇತ್ತೀಚೆಗೆ ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು (illegal Bangladeshi immigrants) ಪತ್ತೆಯಾಗಿದ್ದು, ಆ ಪ್ರಕರಣದ ಪರಿಶೀಲನೆ ವೇಳೆ ಪತ್ತೆಯಾಗಿದ್ದು ಮೂವರಲ್ಲ 43 ಬಾಂಗ್ಲಾ ವಲಸಿಗರು ಎಂದು ತಿಳಿದುಬಂದಿದೆ. ಬೆಳ್ಳಂದೂರಿನಲ್ಲಿ ಒಟ್ಟು 43 ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿರುವ ಬಗ್ಗೆ ಎನ್ಐಎ(National Investigation Agency -NIA) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಮೊದಲು ಕೇವಲ ಮೂವರು ಬಾಂಗ್ಲಾದೇಶಿ ಅಕ್ರಮ ವಲಸಿಗರು ಇದ್ದಾರೆ ಎಂಬ ಮಾಹಿತಿ ಇತ್ತು. ಬಾಂಗ್ಲಾ ಪ್ರಜೆಗಳು ದೇಶದಲ್ಲಿ …
Read More »21 ನಾಯಕರನ್ನೊಳಗೊಂಡ ಜೆಡಿಎಸ್ ಕೋರ್ ಕಮಿಟಿ ರಚನೆ, ಜಿಟಿ ದೇವೇಗೌಡ ಅಧ್ಯಕ್ಷ
ಬೆಂಗಳೂರು, (ಆಗಸ್ಟ್ 18): ವಿಧಾನಸಭೆ ಚುನಾವಣೆಯಲ್ಲಿ (Karnataka Assembly Elections 2023) ಮುಗ್ಗರಿಸಿರುವ ಜೆಡಿಎಸ್ ಇದೀಗ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಸ್ಥಳೀಯ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿದೆ. ಹೀಗಾಗಿ ಪಕ್ಷವನ್ನು ಬಲಪಡಿಸಲು ಇಂದು ಜೆಡಿಎಸ್ ಕೋರ್ ಕಮಿಟಿ(jds core committee) ರಚನೆ ಮಾಡಲಾಗಿದೆ. ಒಟ್ಟು 21 ಜೆಡಿಎಸ್ (JDS) ನಾಯಕರನ್ನೊಳಗೊಂಡ ಕೋರ್ ಕಮಿಟಿಗೆ ಚಾಮುಂಡೇಶ್ವರಿ ಶಾಸಕ ಜಿಟಿ ದೇವೇಗೌಡ ಅವರು ಜೆಡಿಎಸ್ ಕೋರ್ ಕಮಿಟಿಯ …
Read More »ಕರ್ನಾಟಕ, ಮಹಾರಾಷ್ಟ್ರದ ಹಲವೆಡೆ ಬೈಕ್ಗಳ ಕಳ್ಳತನ ಮಾಡಿದ್ದ ಆರೋಪಿಗಳನ್ನು ಬೆಳಗಾವಿ ಅಂಕಲಗಿ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ವಿವಿಧೆಡೆ ಬೈಕ್ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಗೋಕಾಕ್ ತಾಲೂಕಿನ ಅಂಕಲಗಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ 8.25 ಲಕ್ಷ ರೂ ಮೌಲ್ಯದ ಬೈಕ್ಗಳನ್ನು ವಶಕ್ಕೆ ಪಡೆದಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ತಾಲ್ಲಕಿನ ಕಳಂಭದ ನಿವಾಸಿ ಸಂತೋಷ ರಾಮಚಂದ್ರ ನಿಶಾನೆ (30) ಹಾಗೂ ಗೋಕಾಕ ತಾಲ್ಲೂಕಿನ ತೆಳಗಿನಹಟ್ಟಿಯ ಭರಮಪ್ಪ ಯಲ್ಲಪ್ಪ ಕೊಪ್ಪದ (21) ಬಂಧಿತರು. ಇವರಿಂದ ವಿವಿಧ ಕಂಪನಿಗಳ 23 ಬೈಕ್ಗಳನ್ನು ಜಪ್ತಿ ಮಾಡಲಾಗಿದೆ. ಗೋಕಾಕ …
Read More »