Breaking News

Monthly Archives: ಆಗಷ್ಟ್ 2023

ಗುದ್ದಲಿಯಿಂದ ಹೊಡೆದು ಅಣ್ಣ, ಅತ್ತಿಗೆಯನ್ನೇ ಕೊಂದು ಪೊಲೀಸ್​ ಠಾಣೆಗೆ ಬಂದ ತಮ್ಮ

ಮೈಸೂರು : ಗೋಮಾಳದ ಜಾಗದಲ್ಲಿ ತನಗೂ ಪಾಲು ಬೇಕು ಎಂದು ಜಗಳ ತೆಗೆದು, ಸಹೋದರನೊಬ್ಬ ಜಮೀನಿನಲ್ಲೇ ಅಣ್ಣ, ಅತ್ತಿಗೆಯನ್ನು ಗುದ್ದಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಟಿ ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೊಲೆ ಬಳಿಕ ಆರೋಪಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಟಿ. ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದ ಸಮೀಪದ ಜೀನುಗುಡ್ಡ ಬಳಿ ಸುಮಾರು 170 ಎಕರೆ ಗೋಮಾಳವಿದೆ. …

Read More »

ಶ್ರೀರಾಘವೇಂದ್ರಸ್ವಾಮಿಗಳ 352ನೇ ಆರಾಧನ ಮಹೋತ್ಸವಕ್ಕೆ ಶ್ರೀ ಸುಬುಧೇಂದ್ರ ತೀರ್ಥರು ಚಾಲನೆ ನೀಡಿದರು.

ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರಸ್ವಾಮಿ‌ಗಳ 352ನೇ ಆರಾಧನೆ ಮಹೋತ್ಸವಕ್ಕೆ ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಂಗಳವಾರ ಚಾಲನೆ ನೀಡಿದರು. ಶ್ರೀಮಠದ ಮುಂಭಾಗದಲ್ಲಿ ಗೋ ಪೂಜೆ, ಧಾನ್ಯ ಪೂಜೆ, ಆಶ್ವ, ಒಂಟೆ ಪೂಜೆ ಹಾಗೂ ಧ್ವಜಾರೋಹಣ ನೆರವೇರಿಸಿ ಏಳು ದಿನಗಳ ಸಪ್ತ ಮಹೋತ್ಸವಕ್ಕೆ ಅದ್ಧೂರಿಯಾಗಿ ಚಾಲನೆ ನೀಡಲಾಯಿತು. ಬೆಳಗ್ಗೆ ರಾಯರ ಮೂಲ‌ ಬೃಂದಾವನಕ್ಕೆ ಅಭಿಷೇಕ ಹಾಗೂ ವಿಶೇಷ ಪೂಜೆ ಕೈಂಕರ್ಯಗಳು ಜರುಗಿದವು. ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರಿಂದ ಮೂಲ ರಾಮದೇವರ ಪೂಜೆ ನೆರವೇರಿಸಲಾಯಿತು. …

Read More »

ಮನೆಯ ಯಜಮಾನಿಯರ ಖಾತೆಗೆ ಒಂದೇ ಸಮಯಕ್ಕೆ ಬರಲಿದೆ 2000 ರೂಪಾಯಿ

ಬೆಂಗಳೂರು: ಬುಧವಾರ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಯಾಗಲಿದೆ. ಮೈಸೂರಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಹತ್ವಾಕಾಂಕ್ಷೆಯ ಯೋಜನೆಗೆ ಚಾಲನೆ ನೀಡಲಿದ್ದಾರೆ. ಕೊನೆಗೂ ಹಲವು ದಿನಾಂಕಗಳ ಬಳಿಕ ಬೆಳಗ್ಗೆ ಮೈಸೂರಿನಲ್ಲಿ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಜಾರಿಯಾಗಲಿದೆ. ಸಮಾವೇಶದಲ್ಲಿ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನ‌ ಸೇರಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಐದು …

Read More »

ಮೈಸೂರು ಮಣಿಸಿ ಮಹಾರಾಜ ಟ್ರೋಫಿ ಚಾಂಪಿಯನ್ ಪಟ್ಟ ಅಲಂಕರಿಸಿದ ಹುಬ್ಬಳ್ಳಿ

ಬೆಂಗಳೂರು : ರೋಚಕ ಫೈನಲ್ ಕಾದಾಟದಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು 8 ರನ್‌ಗಳಿಂದ ಸೋಲಿಸಿದ ಹುಬ್ಬಳ್ಳಿ ಟೈಗರ್ಸ್ ಮಹಾರಾಜ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಮೈಸೂರು ಬೌಲರ್‌ಗಳ ವಿರುದ್ಧ ಬ್ಯಾಟಿಂಗ್​ನಲ್ಲಿ ಮೇಲುಗೈ ಸಾಧಿಸಿದ ಮೊಹಮ್ಮದ್ ತಾಹಾ, ಮನೀಶ್ ಪಾಂಡೆ ಹಾಗೂ ಮನ್ವಂತ್ ಕುಮಾರ್ ಉತ್ತಮ ಬೌಲಿಂಗ್ ನೆರವಿನಿಂದ ಹುಬ್ಬಳ್ಳಿ ಗೆದ್ದು ಬೀಗಿತು. ಮಹಾರಾಜ ಟ್ರೋಫಿ ಫೈನಲ್​ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತ ಹುಬ್ಬಳ್ಳಿ ಟೈಗರ್ಸ್ ಮೊದಲು ಬ್ಯಾಟ್ ಮಾಡಿತು. ಎರಡನೇ …

Read More »

ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದೆ

ಮೈಸೂರು: ಬುಧವಾರ (ಆ.30) ನಗರದಲ್ಲಿ ನಡೆಯಲಿರುವ ಗೃಹ ಲಕ್ಷ್ಮಿ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧವಾಗಿದೆ. ಹಲವಾರು ರೀತಿಯ ವೈಶಿಷ್ಟ್ಯತೆಗಳಿಂದ ಕೂಡಿರುವ ಈ ಬೃಹತ್ ವೇದಿಕೆಯ ಸಿದ್ಧತೆಯ ಕಾರ್ಯ ಮಹಾರಾಜ ಕಾಲೇಜು ಮೈದಾನದಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೇಲ್ವಿಚಾರಣೆಯಲ್ಲಿ ನಡೆದಿದೆ. ಡಿಸಿಎಂ ನಿನ್ನೆ ಸಂಜೆ ಮೈದಾನದಲ್ಲಿ ಸಿದ್ಧವಾಗುತ್ತಿರುವ ವೇದಿಕೆ ನಿರ್ಮಾಣ ಕಾರ್ಯವನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದ್ದರು. ವೇದಿಕೆಯ ವಿಶೇಷತೆಗಳೇನು: ಗೃಹ ಲಕ್ಷ್ಮಿ ಯೋಜನೆ ಜಾರಿಗೆ …

Read More »

ಮಾದಪ್ಪನ ಬೆಟ್ಟದಲ್ಲಿ ಸಾಮೂಹಿಕ ವಿವಾಹಕ್ಕೆ ಕೂಡಿ ಬರದ ಮುಹೂರ್ತ: ಬೇಸತ್ತು ಹಸೆಮಣೆ ಏರಿದ 7 ಜೋಡಿ

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಯಾತ್ರಾ ಸ್ಥಳವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸಾಮೂಹಿಕ ವಿವಾಹಕ್ಕೆ ಇನ್ನೂ ಮುಹೂರ್ತ ಕೂಡಿ ಬಾರದ ಕಾರಣ ಬೇಸತ್ತ 7 ಜೋಡಿಗಳು ಸ್ವಂತ ಹಣದಲ್ಲಿ ವಿವಾಹ ಮಾಡಿಕೊಂಡಿದ್ದಾರೆ. ಸಾಲೂರು ಮಠದಲ್ಲಿ ಹಸೆಮಣೆ ಏರಿದ ಜೋಡಿಗಳು ಹೌದು. ಮಲೆಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ಸಾಮೂಹಿಕ ವಿವಾಹ ಎರಡು ಬಾರಿ ಮುಂದೂಡಿಕೆಯಾಗಿದೆ. ಹೀಗಾಗಿ ಕ್ಷೇತ್ರದಲ್ಲಿರುವ ಸಾಲೂರು ಮಠದಲ್ಲಿ 7 ಜೋಡಿಗಳು ಹಸೆಮಣೆ ಏರಿ ನೂತನ ಜೀವನಕ್ಕೆ ಕಾಲಿಟ್ಟಿದ್ದಾರೆ. ಆ. 23 ರಂದು …

Read More »

ದೊಡ್ಡ ಮಟ್ಟದಲ್ಲಿ ಅನಾವರಣಗೊಳ್ಳಲಿದೆ ಬಹುನಿರೀಕ್ಷಿತ ‘ಜವಾನ್’​ ಟ್ರೇಲರ್

ಬಹುನಿರೀಕ್ಷಿತ ‘ಜವಾನ್’ ಚಿತ್ರದ ಟ್ರೇಲರ್​ಗೆ ಮುಹೂರ್ತ ನಿಗದಿಯಾಗಿದ್ದು, ದೊಡ್ಡ ಮಟ್ಟದಲ್ಲೇ ರಿಲೀಸ್​ ಆಗಲಿದೆ. ಎಲ್ಲಿ? ಯಾವಾಗ? ತಿಳಿಯಲು ಮುಂದೆ ಓದಿ.. ‘ಜವಾನ್​’.. ಭಾರತೀಯ ಚಿತ್ರರಂಗ ಎದುರು ನೋಡುತ್ತಿರುವ ಬಹುನಿರೀಕ್ಷಿತ ಚಿತ್ರ. ಬಾಲಿವುಡ್​ ಸೂಪರ್​ಸ್ಟಾರ್​ ಶಾರುಖ್​ ಖಾನ್​ ನಟನೆಯನ್ನು ಕಣ್ತುಂಬಿಕೊಳ್ಳಲು ಸಿನಿ ಪ್ರೇಮಿಗಳು ಕಾತರರಾಗಿದ್ದಾರೆ. ‘ಪಠಾಣ್​’ ಬಳಿಕ ಈ ಸಿನಿಮಾದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದ್ದು, ‘ಜವಾನ್​’ನಲ್ಲಿ ನಟ ವಿಭಿನ್ನ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರದ ಪ್ರಿವ್ಯೂ ಕುತೂಹಲ ಹೆಚ್ಚಿಸಿದ್ದು, ಟ್ರೇಲರ್​ಗಾಗಿ ಪ್ರೇಕ್ಷಕರು …

Read More »

ಗಂಡ ಆಟೋ ಡ್ರೈವರ್,​ ಹೆಂಡತಿ ಪಿಎಚ್​ಡಿ ಪದವೀಧರೆ; ಓದಿನ ಉತ್ಸಾಹಕ್ಕೆ ಕುಟುಂಬದ ಬೆಂಬಲ

ಹೈದರಾಬಾದ್​: ಪ್ರತಿಯೊಬ್ಬ ಯಶಸ್ವಿ ಪುರುಷನ ಹಿಂದೆ ಹೆಣ್ಣು ಒಬ್ಬಳು ಇರುತ್ತಾಳೆ ಎಂಬ ಮಾತಿಗೆ ತತ್ವಿರುದ್ಧದ ಘಟನೆಗಳು ನಮ್ಮ ಮುಂದೆ ನಡೆಯುತ್ತಿರುತ್ತದೆ. ಅದೇ ರೀತಿಯ ಘಟನೆ ಇದೀಗ ಆಂಧ್ರದಲ್ಲಿ ನಡೆದಿದೆ. ಓದಿನ ಹಂಬಲದ ಹಸಿವನ್ನು ಹೊಂದಿದ್ದ ಹೆಂಡತಿ ಕನಸಿಗೆ ಆಟೋ ಡ್ರೈವರ್​​ ನಿರೇರದು ಪೋಷಿಸಿದ್ದಾರೆ. ಇದರ ಫಲವಾಗಿ ಇಂದು ಆಕೆ ಎಎನ್​ಯುನಲ್ಲಿ ಪಿಎಚ್​ಡಿ ಪೂರ್ಣಗೊಳಿಸುವಂತಾಗಿದೆ. ಇವರ ಹೆಸರು ಈಪುರಿ ಶೀಲ​. ತಮ್ಮ ಈ ಸಾಧನೆ ಮತ್ತು ಕುಟುಂಬದ ಪ್ರೋತ್ಸಾಹ ಕುರಿತು ಅವರು ಈಟಿವಿ …

Read More »

ಚಾಮುಂಡಿ ಬೆಟ್ಟದಲ್ಲಿ ಹರಕೆ ತೀರಿಸಿದ ಸಿಎಂ, ಡಿಸಿಎಂ

ಮೈಸೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದು ಮತದಾನದ ಹಿಂದಿನ ದಿನ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಹರಕೆ ಹೊತ್ತಿದ್ದರು. ಆ ಹರಕೆಯನ್ನು ಇಂದು ಇಬ್ಬರು ಚಾಮುಂಡೇಶ್ವರಿ ತಾಯಿಯ ದೇವಾಲಯದ ಮುಂಭಾಗದಲ್ಲಿ ಈಡುಗಾಯಿ ಒಡೆಯುವ ಮೂಲಕ ತೀರಿಸಿದರು. ಇಂದು ಚಾಮುಂಡಿ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಆಗಮಿಸಿ ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ದೇವಾಲಯದ …

Read More »

ಗಿನ್ನೆಸ್ ಬುಕ್​ ಸೇರಲು ಸಜ್ಜಾದ ಮಧ್ಯಪ್ರದೇಶದ ಬೃಹತ್​ ರಾಖಿ

ಬಿಂಡಿ(ಮಧ್ಯಪ್ರದೇಶ): ಪ್ರೀತಿ ಮತ್ತು ರಕ್ಷಣೆಯ ಬಂಧವಾಗಿರುವ ರಾಖಿ ಸಹೋದರ ಮತ್ತು ಸಹೋದರಿಯರ ನಡುವಿನ ಮುರಿಯಾಲಾಗದ ಸಂಬಂಧವನ್ನು ಮತ್ತಷ್ಟು ಗಟ್ಟಿ ಮಾಡುವುದು ಸುಳ್ಳಲ್ಲ. ಇಂತಹ ಹಬ್ಬವನ್ನು ಮತ್ತಷ್ಟು ಸ್ಮರಣಿಯವಾಗಿಸಲು ಭಾರತೀಯ ಜನತಾ ಪಕ್ಷದ ನಾಯಕ ಮತ್ತು ಸಾಮಾಜಿಕ ಕಾರ್ಯಕರ್ತ ಅಶೋಕ್​ ಭಾರಧ್ವಾಜ್​ ಮುಂದಾಗಿದ್ದಾರೆ. ಇದಕ್ಕಾಗಿ ಅವರು ವಿಶ್ವದ ಬೃಹತ್​ ಗಾತ್ರದ ರಾಖಿ ತಯಾರಿಸಲು ಮುಂದಾಗಿದ್ದಾರೆ. ಈಗಾಗಲೇ ಭಾರಧ್ವಾಜ್​ ಹೆಸರು ಗಿನ್ನೆಸ್​ ಸೇರಿದಂತೆ ಅನೇಕ ದಾಖಲೆಗಳನ್ನು ಅಚ್ಚೊತ್ತಿದ್ದು, ಇದೀಗ ಒಎಂಜಿ ಬುಕ್​ ಆಫ್​ …

Read More »