Breaking News

Monthly Archives: ಆಗಷ್ಟ್ 2023

ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ದಾವಣಗೆರೆ/ಕೊಡಗು/ ಕೊಪ್ಪಳ : ರಾಜ್ಯದ ವಿವಿಧೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಿಸಿ ಮುಟ್ಟಿಸಿದ್ದಾರೆ. ಸರ್ಕಾರಿ ಹುದ್ದೆಯಲ್ಲಿರುವ ದಂಪತಿ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಹೊಳಲ್ಕೆರೆ ಸಣ್ಣ ನೀರಾವರಿ‌ ಇಲಾಖೆ ಇಂಜಿನಿಯರ್ ಕೆ.ಮಹೇಶ್ ಹಾಗೂ ಅವರ ಪತ್ನಿ ಬಿಬಿಎಂಪಿ ಎಇ ಹೆಚ್. ಭಾರತಿ ಮನೆ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಚಿತ್ರದುರ್ಗ ಲೊಕಾಯುಕ್ತ ಎಸ್​ಪಿ ವಾಸುದೇವ್ ರಾಮ್ ಹಾಗೂ ಡಿವೈಎಸ್​ಪಿ ಮೃಂತುಂಜಯ್ಯ ನೇತೃತ್ವದ ತಂಡದಿಂದ ದಾವಣಗೆರೆ …

Read More »

ಸಮುದಾಯದ ಬಗ್ಗೆ ಕೀಳು ಮಾತು ಸಹಿಸಲ್ಲ, ಕಾನೂನು ಪ್ರಕಾರ ಕ್ರಮ- ಸಚಿವ ಜಿ.ಪರಮೇಶ್ವರ್

ಬೆಂಗಳೂರು: “ನಾಣ್ನುಡಿ ಇದೆ ಅಂತ ಸಮುದಾಯದ ಬಗ್ಗೆ ಕೀಳಾಗಿ ಮಾತಾಡೋದು ಸರಿಯಲ್ಲ. ಆ ತರ ಹೇಳಿಕೆಗಳನ್ನು ನಾನು ಸಹಿಸುವುದಿಲ್ಲ. ಸಚಿವರೇ ಆಗಲಿ, ಯಾರೇ ಆಗಲಿ ಕಾನೂ‌ನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ” ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್​ ತಿಳಿಸಿದರು. ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದಲ್ಲಿಂದು ಮಾತನಾಡಿದ ಅವರು, ಪರಿಶಿಷ್ಟ ಜಾತಿಯವರ ವಿರುದ್ಧ ಉಪೇಂದ್ರ ಮತ್ತು ಸಚಿವ ಮಲ್ಲಿಕಾರ್ಜುನ್​ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಯಾರೂ ಕೂಡಾ ಇಂತಹ ಹೇಳಿಕೆಗಳನ್ನು ಸಹಿಸುವುದಿಲ್ಲ. ಹೀಗೆ ಮಾತನಾಡೋರು ಅರ್ಥ …

Read More »

ಸಿಎಂ ನೇತೃತ್ವದಲ್ಲಿ ಬೆಂಗಳೂರು ಶಾಸಕರ ಸಭೆ; ಶೀಘ್ರ ಕಾಮಗಾರಿ ಬಿಲ್ ಬಿಡುಗಡೆಗೆ ಮನವಿ

ಬೆಂಗಳೂರು : ಆದಷ್ಟು ಬೇಗ ಬಿಬಿಎಂಪಿ ಎಸ್‌ಐಟಿ ತನಿಖೆ ಪೂರ್ಣಗೊಳಿಸಿ, ಕೆಲಸ ಮಾಡಿದ ಗುತ್ತಿಗೆದಾರರ ಬಿಲ್ ಬಿಡುಗಡೆ ಮಾಡಬೇಕು ಎಂದು ಬೆಂಗಳೂರು ಶಾಸಕರು ಸಿಎಂ ನಡೆಸಿದ ಸಭೆಯಲ್ಲಿ ಒತ್ತಾಯಿಸಿದರು. ಸಿಎಂ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ, ಪ್ರಮುಖವಾಗಿ ಬಾಕಿ ಬಿಲ್, ಅಭಿವೃದ್ಧಿ ಸಂಬಂಧ ಹೆಚ್ಚಿನ ಚರ್ಚೆ ನಡೆಸಲಾಯಿತು. ಉಳಿದಂತೆ ಕ್ಷೇತ್ರದ ಅಭಿವೃದ್ಧಿ, ಅನುದಾನ, ಸರ್ಕಾರ- ಪಕ್ಷದ ಜತೆಗಿನ ಸಮನ್ವಯ, ಬಿಬಿಎಂಪಿ ವ್ಯಾಪ್ತಿಯ ಅಭಿವೃದ್ಧಿ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಸೇರಿದಂತೆ ಹಲವು …

Read More »

ಮದ್ಯಪ್ರಿಯರ ನೆಚ್ಚಿನ ಬಿಯರ್‌ ಬ್ರ್ಯಾಂಡ್‌ವೊಂದರಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆ

ಮೈಸೂರು: ಮದ್ಯಪ್ರಿಯರ ನೆಚ್ಚಿನ ಬಿಯರ್‌ ಬ್ರ್ಯಾಂಡ್‌ವೊಂದರಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆಯಾಗಿದೆ. ಹೀಗಾಗಿ, 25 ಕೋಟಿ ರೂಪಾಯಿ ಮೌಲ್ಯದ 78,678 ಬಾಕ್ಸ್ ಮದ್ಯವನ್ನು ವಶಪಡಿಸಿಕೊಂಡಿರುವ ಮೈಸೂರು ಅಬಕಾರಿ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.   ನಂಜನಗೂಡಿನಲ್ಲಿರುವ ಕಂಪನಿ ತಯಾರಿಸಿದ್ದ ಬಿಯರ್‌ನಲ್ಲಿ ಸೆಡಿಮೆಂಟ್ ಅಂಶ ಕಂಡುಬಂದಿದೆ. ಕಂಪನಿಯ ಸ್ಟ್ರಾಂಗ್ ಹಾಗೂ ಅಲ್ಟ್ರಾ ಲ್ಯಾಗರ್ ಈ ಅಂಶ ಗೋಚರಿಸಿದ್ದು, 7e ಮತ್ತು 7c ನಮೂನೆಯ (ದಿನಾಂಕ 15-07-23ರಂದು) ಬಾಟಲಿಂಗ್‌ನಲ್ಲಿರುವುದು ತಿಳಿದುಬಂದಿದೆ. ಮಾಹಿತಿ ತಿಳಿದ ಕೂಡಲೇ ಬಿಯರ್ …

Read More »

ಅನೇಕ ವರ್ಷಗಳಿಂದ ಬೆಳಗಾವಿ ಪಾಲಿಕೆಯಲ್ಲಿಯೇ ಇದ್ದಂತಹ ಅಧಿಕಾರಿಗಳ ವರ್ಗಾವಣೆಗೆ ಇಂದಿನ ಸಭೆಯಲ್ಲಿ ಠರಾವ್​ ಪಾಸ್​

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅನುಭವದ ವಿಚಾರವಾಗಿ ಬಿಜೆಪಿ ಶಾಸಕ ಅಭಯ್​ ಪಾಟೀಲ್​ ಮತ್ತು ಕಾಂಗ್ರೆಸ್ ಶಾಸಕ ರಾಜು ಸೇಠ್ ನಡುವೆ ಪರಸ್ಪರ ವಾಗ್ದಾಳಿ ನಡೆಯಿತು. ಮರಾಠಿ ಭಾಷೆಯಲ್ಲಿಯೇ ನೋಟಿಸ್ ನೀಡುವಂತೆ ಎಂಇಎಸ್ ನಗರಸೇವಕರು ಪ್ರತಿಭಟನೆ ನಡೆಸಿದರು. ಅಧಿಕಾರಿಗಳ ವರ್ಗಾವಣೆ ಸೇರಿ ಕೆಲ ಪ್ರಮುಖ ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಕೈಗೊಳ್ಳಲಾಯಿತು. ಪಾಲಿಕೆ ಸಭೆಯ ಆರಂಭದಲ್ಲಿ ನಾಡಗೀತೆ ಮುಗಿದ ಬಳಿಕ ಎಂಇಎಸ್​ನ ಮೂವರು ನಗರ ಸೇವಕರು ಮರಾಠಿ ಭಾಷೆಯಲ್ಲಿ ನೊಟೀಸ್ …

Read More »

ಬೆಳಗಾವಿ ಕಪಿಲೇಶ್ವರ ಹೊಂಡದಲ್ಲಿ ಮುಳುಗಿದ್ದ ಎರಡು ಶವದ ಗುರುತು ಪತ್ತೆ, ತನಿಖೆ ಮುಂದುವರಿಕೆ

ಬೆಳಗಾವಿ: ಪತ್ನಿ ಮೃತಪಟ್ಟಿದ್ದರಿಂದ ಮನನೊಂದ ಪತಿ ಮತ್ತು ತಾಯಿ ಇಲ್ಲದ ನೆನಪಿನಲ್ಲಿ ಕೊರಗಿ ಮಗಳು ನೀರಿನ ಹೊಂಡಕ್ಕೆ ಬಿದ್ದು ಆತ್ಮಹತ್ಯೆಗೆ ಶರಣಾಗಿರುವ ಪ್ರತ್ಯೇಕ ಘಟನೆ ಬೆಳಗಾವಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.   ಕಪಿಲೇಶ್ವರ ಮಂದಿರದ ನೀರಿನ ಹೊಂಡದಲ್ಲಿ ಇಂದು ಬೆಳಗ್ಗೆ ತೇಲಾಡುತ್ತಿದ್ದ ಎರಡು ಶವಗಳ ಗುರುತು ಪತ್ತೆಯಾಗಿದ್ದು, ಬೆಳಗಾವಿಯ ಕಾಂಗಲೆ ಗಲ್ಲಿಯ ನಿವಾಸಿ ವಿಜಯ್ ಪವಾರ್ (58), ಶಹಾಪುರದ ದಾನೆ ಗಲ್ಲಿಯ ಚಿತ್ರಲೇಖಾ ಶ್ರೀಕಾಂತ ಸಫಾರ್‌ (70) ಎಂದು ಗುರುತಿಸಲಾಗಿದೆ. ಕಪಿಲೇಶ್ವರ …

Read More »

ನಾವು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಸ್ಥಾನವನ್ನು ಗೆಲ್ಲುತ್ತೇವೆ: ಸತೀಶ್ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ): “ಲೋಕಸಭಾ ಚುನಾವಣೆಗೆ ಇನ್ನು ತುಂಬಾ ಸಮಯವಿದೆ. ಯಾರು ಸ್ಪರ್ಧೆ ಮಾಡಬೇಕೆಂಬುದು ಇನ್ನೂ ಅಂತಿಮವಾಗಿಲ್ಲ. ಪಕ್ಷ ಯಾರನ್ನು ಗುರುತಿಸುತ್ತದೋ ಅವರು ಸ್ಪರ್ಧೆ ಮಾಡುತ್ತಾರೆ. ನಾವು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಸ್ಥಾನವನ್ನು ಗೆಲ್ಲುತ್ತೇವೆ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುನ್ನೂರು ಪ್ರವಾಸ ಮಂದಿರದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಎರಡೂವರೆ ವರ್ಷದ ಬಳಿಕ ಹಿರಿಯ ಸಚಿವರು ಬೇರೆಯವರಿಗೆ ಅವಕಾಶ ನೀಡಬೇಕು ಎಂಬ …

Read More »

ಬೆಳಗಾವಿ ತಾಲೂಕು ರಚನೆಗೆ ನನ್ನ ಸಹಮತ ಇದೆ.: ಅಭಯ ಪಾಟೀಲ

ಬೆಳಗಾವಿ‌: ಬೆಳಗಾವಿ ತಾಲೂಕು ರಚನೆಗೆ ನನ್ನ ಸಹಮತ ಇದೆ. ಆದರೆ, ಜಿಲ್ಲೆಯ ವಿಭಜನೆ ವಿಚಾರದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ನಿರ್ಣಯ ಕೈಗೊಂಡರೆ ಮಾತ್ರ ನನ್ನ ಒಪ್ಪಿಗೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು. ಬೆಳಗಾವಿಯಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಈ ಹಿಂದೆ ಮೂರು ಜಿಲ್ಲೆಗಳನ್ನು ಮಾಡುತ್ತೇವೆ ಎಂದಾಗ ತೀವ್ರ ವಿರೋಧ ವ್ಯಕ್ತವಾಗಿತ್ತು. ಹಾಗಾಗಿ ಮೂರು ಜಿಲ್ಲೆಗಳ ಬಗ್ಗೆ ಚರ್ಚಿಸಿ ನಿರ್ಣಯ ಮಾಡಬೇಕು. ಜಿಲ್ಲೆಗಾಗಿ ಗೋಕಾಕ್ ಮತ್ತು ಬೈಲಹೊಂಗಲ ತಾಲೂಕಿನವರ …

Read More »

ಚಿಕನ್ ಕರಿಯಲ್ಲಿ ಸತ್ತ ಇಲಿ ಮರಿ! ರೆಸ್ಟೋರೆಂಟ್​ ಮ್ಯಾನೇಜರ್, ಇಬ್ಬರು ಕುಕ್​ಗಳ ಬಂಧನ

ಮುಂಬೈ (ಮಹಾರಾಷ್ಟ್ರ): ರೆಸ್ಟೋರೆಂಟ್‌ವೊಂದರಲ್ಲಿ ಪೂರೈಕೆ ಮಾಡಿದ್ದ ಚಿಕನ್ ಕರಿಯಲ್ಲಿ ಸತ್ತ ಇಲಿ ಮರಿ ಸಿಕ್ಕಿರುವ ಘಟನೆ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ನಡೆದಿದೆ. ಈ ಕುರಿತು ಗ್ರಾಹಕರು ನೀಡಿದ ದೂರಿನ ಮೇರೆಗೆ ಪೊಲೀಸರು ರೆಸ್ಟೋರೆಂಟ್​ ಮ್ಯಾನೇಜರ್ ಸೇರಿದಂತೆ ಮೂವರನ್ನು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಮಧ್ಯಪ್ರದೇಶ ಮೂಲದ ಅನುರಾಗ್ ದಿಲೀಪ್ ಸಿಂಗ್​ ಎಂಬವರು ಗೋರೆಗಾಂವ್ ಪಶ್ಚಿಮ ವಿಭಾಗದಲ್ಲಿರುವ ಖಾಸಗಿ ಬ್ಯಾಂಕ್‌ನಲ್ಲಿ ಹಿರಿಯ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಆಗಸ್ಟ್ 13ರಂದು ತಮ್ಮ …

Read More »

ವಿದ್ಯುತ್ ಸಂಪರ್ಕ ಕಲ್ಪಿಸಲು ಲಂಚಕ್ಕೆ ಬೇಡಿಕೆಯಿಟ್ಟಿದ್ದ ಬೆಸ್ಕಾಂನ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಬೆಂಗಳೂರು: ವಿದ್ಯುತ್ ಸಂಪರ್ಕ ನೀಡಲು 13 ಲಕ್ಷ ರೂಪಾಯಿ ಲಂಚದ ಬೇಡಿಕೆಯಿಟ್ಟಿದ್ದ ಬೆಸ್ಕಾಂ ಎಇಇ ಧನಂಜಯ ಎಂಬವರನ್ನು ಲೋಕಾಯುಕ್ತರು ಬಂಧಿಸಿದ್ದಾರೆ. ಜಯನಗರದ ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕ ಪಡೆಯಲು ಕಾಂಟ್ರಾಕ್ಟರ್​ಗಳಾದ ಶಂಕರ್ ಮತ್ತು ಗುರುದತ್ ಎಂಬವರು ಅರ್ಜಿ ಸಲ್ಲಿಸಿದ್ದರು. ವಿದ್ಯುತ್ ಸಂಪರ್ಕ ನೀಡಲು ಧನಂಜಯ ಖಾಸಗಿ ವ್ಯಕ್ತಿ ಸಯ್ಯದ್ ನಿಜಾಮ್ ಎಂಬಾತನನ್ನು ಮುಂದಿಟ್ಟುಕೊಂಡು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಇನ್ಸ್ಪೆಕ್ಟರ್ ವೆಂಕಟೇಶ ಮತ್ತು ವಿಜಯಕೃಷ್ಣ …

Read More »