Breaking News

Monthly Archives: ಆಗಷ್ಟ್ 2023

ರಾತ್ರಿ ವೇಳೆ ಬೈಕ್​ ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ದರೋಡೆಕೋರರ ಬಂಧನ

ಬೆಂಗಳೂರು: ಹೊಟ್ಟೆಪಾಡಿಗಾಗಿ ಕೆಲಸ ಮಾಡುವ ಡೆಲಿವರಿಬಾಯ್​​​ಗಳನ್ನು ಗುರಿಯಾಗಿಸಿಕೊಂಡು ರಾತ್ರಿವೇಳೆ ಅವರ ಎಲೆಕ್ಟ್ರಿಕಲ್ ಬೈಕ್​​ ಗಳನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆ ಮಾಡುತ್ತಿದ್ದ ಇಬ್ಬರು ಸುಲಿಗೆಕೋರರನ್ನು ಸುದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.   ಅಸ್ಸೋಂ ಮೂಲದ ರಾಕೇಶ್ ಹಾಗೂ ಮಲ್ಲಿಕ್ ಬಂಧಿತ ಆರೋಪಿಗಳು. ಈ ಹಿಂದೆ ಸೆಕ್ಯೂರಿಟಿಗಾರ್ಡ್​ಗಳಾಗಿ ಕೆಲಸ ಮಾಡುತ್ತಿದ್ದರು. ಹಣದ ಆಸೆಗಾಗಿ ಅಪರಾಧ ಎಸಗಲು ನಿರ್ಧರಿಸಿದ್ದ ಆರೋಪಿಗಳು, ಎಲೆಕ್ಟ್ರಿಕ್ ಬೈಕ್ ಗಳಲ್ಲಿ ಫುಡ್​ ಡೆಲಿವರಿ ಮಾಡುವ ಯುವಕರನ್ನು ಅಡ್ಡಗಟ್ಟಿ ಮೊಬೈಲ್ ಸುಲಿಗೆಗೆ ಇಳಿದಿದ್ದರು‌. …

Read More »

ಕಳೆದ ಎರಡು ತಿಂಗಳಿನಿಂದ ಗೌರವ ವೇತನ ಇಲ್ಲದೇ ಅತಿಥಿ ಉಪನ್ಯಾಸಕರು ಸಮಸ್ಯೆ ಎದುರಿಸುವಂತಾಗಿದ್ದು, ಕೂಡಲೇ ವೇತನ ಬಿಡುಗಡೆ ಮಾಡಬೇಕು ಎಂದು ಮಾಜಿ ಸಚಿವ ಸುರೇಶ್​ ಕುಮಾರ್​ ಪತ್ರ ಬರೆದಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಕಳೆದ ಎರಡೂವರೆ ತಿಂಗಳಿನಿಂದ ಗೌರವ ವೇತನ ಬಿಡುಗಡೆಯಾಗದೇ ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಬಾಕಿ ಉಳಿಸಿಕೊಂಡಿರುವ ಗೌರವ ವೇತನ ಬಿಡುಗಡೆ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್​ಗೆ ಮಾಜಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.   ಮಾಜಿ ಸಚಿವರು ಬರೆದ ಪತ್ರರಾಜ್ಯದ 436 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14 ಸಾವಿರಕ್ಕಿಂತ ಹೆಚ್ಚು ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. …

Read More »

ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಸಮಿತಿ ರಚನೆ ಅಗತ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು: ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯ ಮೂಡಿಸುವ ನಿಟ್ಟಿನಲ್ಲಿ ಸಮನ್ವಯ ಸಮಿತಿ ರಚನೆ ಮಾಡುವ ಅವಶ್ಯಕತೆ ಇಲ್ಲ. ಈ ಬಗ್ಗೆ ಚರ್ಚೆ ಆಗಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಇಂದು ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು ‘ಸಮನ್ವಯ ಸಮಿತಿ ರಚನೆ ಅಗತ್ಯ ಇಲ್ಲ.‌ ಇಂದು ದೆಹಲಿಯಲ್ಲಿ ವರಿಷ್ಠರ ಜೊತೆಗೆ ಬೇರೆ ಏನು ಚರ್ಚೆ ಆಗುತ್ತೋ, ಇಲ್ವೋ ಗೊತ್ತಿಲ್ಲ’ ಎಂದರು. ಕೆಲವು ಸಚಿವರಿಗೆ …

Read More »

ಕ್ಯಾಬ್​​ ಚಾಲಕನೊಬ್ಬ ಮಹಿಳೆಗೆ ನಂಬಿಸಿ ಬಳಿಕ ಸುಲಿಗೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು: ನೀವು ಕ್ಯಾಬ್​ನಲ್ಲಿ ಪ್ರಯಾಣ ಮಾಡುತ್ತ ಮೊಬೈಲ್ ಕರೆಯಲ್ಲಿ ಪರ್ಸನಲ್ ವಿಚಾರ ಮಾತನಾಡುವಾಗ ಎಚ್ಚರವಹಿಸಿ. ಕೊಂಚ ಯಾಮಾರಿದರೂ ನಿಮ್ಮ ವೀಕ್​ನೆಸ್​​ನ್ನೇ ಬಂಡವಾಳ ಮಾಡಿಕೊಂಡು ಹಣ ಸುಲಿಗೆ ಮಾಡಬಹುದು. ಚಾಲಕನೊಬ್ಬ ಮಹಿಳೆಯಿಂದ ಲಕ್ಷಾಂತರ ರೂ. ಹಣ ಹಾಗೂ ಚಿನ್ನಾಭರಣ ಸುಲಿಗೆ ಮಾಡಿದ ಪ್ರಕರಣವೊಂದು ರಾಜಧಾನಿ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸ್ನೇಹಿತನ ಸೋಗಿನಲ್ಲಿ ಕರೆ ಮಾಡಿ ಮಹಿಳೆಗೆ 22 ಲಕ್ಷ ರೂಪಾಯಿ ಹಾಕಿಸಿಕೊಂಡು ವಂಚಿಸಿದ್ದ ಕ್ಯಾಬ್ ಚಾಲಕನನ್ನು ಬೆಂಗಳೂರಿನ ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. …

Read More »

ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಇಂದಿನಿಂದ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿ ಪ್ರಾರಂಭ

ಮೈಸೂರು: ಉದ್ಯೋಗಿಕಾಂಕ್ಷಿಗಳಿಗೆ ಭಾರತೀಯ ಸೇನಾ ಇಲಾಖೆ ಸಿಹಿ ಸುದ್ದಿ ನೀಡಿದೆ. ಇಲ್ಲಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಅಗ್ನಿವೀರ್ ಯೋಜನೆಯಡಿ ಸೇನಾ ನೇಮಕಾತಿ ರ‍್ಯಾಲಿ ಇಂದಿನಿಂದ ಆರಂಭವಾಗಿದೆ. ನಾಲ್ಕು ದಿನಗಳ ಕಾಲ ಈ ನೇಮಕಾತಿ ರ‍್ಯಾಲಿ ನಡೆಯಲಿದೆ. ಸೇನಾ ನೇಮಕಾತಿ ರ‍್ಯಾಲಿಯ ಮೊದಲನೇ ದಿನವಾದ ಇಂದು 559 ಮಂದಿಗೆ ದೈಹಿಕ ಪರೀಕ್ಷೆ ಮಾಡಲಾಗಿದೆ. ಅದರಲ್ಲಿ ಆಯ್ಕೆಯಾದ 492 ಮಂದಿ ಮುಂದಿನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಇವರನ್ನು 5 ಬ್ಯಾಚ್​ಗಳಾಗಿ ವಿಂಗಡಣೆ ಮಾಡಿ ಪ್ರತಿ ಬ್ಯಾಚ್​ನಿಂದ …

Read More »

ಸಾರ್ವಜನಿಕರು ಜಿಲ್ಲಾಧಿಕಾರಿಯನ್ನು ಭೇಟಿಯಾಗಲು ಕಾಯುವಷ್ಟು ಸಮಯ ವ್ಯರ್ಥವಾಗದಂತೆ, ಓದಲು ನೂರಾರು ಪುಸ್ತಕಗಳನ್ನು ಜೋಡಿಸಲಾಗಿದೆ.

ಬೆಳಗಾವಿ: ಜಿಲ್ಲೆಯ‌ ವಿವಿಧೆಡೆಯಿಂದ ಸಮಸ್ಯೆಗಳನ್ನು ಹೊತ್ತು ಬರುವ ಜನರಿಗೆ ಸಮಸ್ಯೆ ನಿವಾರಣೆ ಜೊತೆಗೆ ಜ್ಞಾನ ಭಂಡಾರವನ್ನು ಉಣಬಡಿಸುವ ಕೆಲಸವನ್ನು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮತ್ತು ಜಿಲ್ಲಾ ಪಂಚಾಯಿತಿ ಮಾಡುತ್ತಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.   ಜಿಲ್ಲಾಧಿಕಾರಿ ಕಚೇರಿಯಲ್ಲಿ ಪುಸ್ತಕಗಳನ್ನು ಓದುತ್ತಿರುವುದುಒಂದೆಡೆ ಶಿಸ್ತಿನಿಂದ ಆಸನಗಳಲ್ಲಿ ಕುಳಿತುಕೊಂಡು ಪುಸ್ತಕ ಓದುತ್ತಿರುವ ಜನ, ಮತ್ತೊಂದೆಡೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣಗಳ ಭಾವಚಿತ್ರಗಳು ಎಲ್ಲರ ಗಮನ ಸೆಳೆಯುತ್ತಿರುವುದು. ಹೌದು ಜಿಲ್ಲಾಧಿಕಾರಿ ಕಚೇರಿಗೆ ನಿತ್ಯ ವಿವಿಧ ಕೆಲಸದ ನಿಮಿತ್ತ …

Read More »

ವರ್ಗಾವಣೆ ದಂಧೆಯಲ್ಲಿ ಎಐಸಿಸಿಗೆ ಪಾಲು ನಿಗದಿಪಡಿಸಲು ದೆಹಲಿಯಲ್ಲಿ ಕಾಂಗ್ರೆಸ್ ಸಭೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ”ಕಾಂಗ್ರೆಸ್​ನ ಡಬ್ಬಾ ಖಾಲಿಯಾಗಿದೆ ಮುಂದಿನ ಚುನಾವಣೆಗಾಗಿ ಡಬ್ಬಾ ತುಂಬಿಸಬೇಕಿದೆ. ಆ ಡಬ್ಬಾ ತುಂಬಿಸಲು ಇಂದು ಎಲ್ಲರನ್ನು ದೆಹಲಿಗೆ ಕರೆದು ವರ್ಗಾವಣೆ ದಂಧೆ ಕುರಿತು ಚರ್ಚೆ ಮಾಡುತ್ತಿದ್ದಾರೆ. ವರ್ಗಾವಣೆ ದಂಧೆಯ ಪಾಲು ಮುಂದಿನ ಚುನಾವಣೆಯಲ್ಲಿ ಎಐಸಿಸಿಗೆ ಎಷ್ಟು ಎಂದು ಫಿಕ್ಸ್ ಮಾಡುವ ಕುರಿತು ಸಭೆ ನಡೆಯುತ್ತಿದೆ” ಎಂದು ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ದೆಹಲಿ ಕಾಂಗ್ರೆಸ್ ಸಭೆಯನ್ನು ಟೀಕಿಸಿದರು. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಮಾಧ್ಯಮಗೋಷ್ಟಿಯಲ್ಲಿ …

Read More »

ಗೃಹ ಜ್ಯೋತಿ ಯೋಜನೆ: ಶೂನ್ಯ ವಿದ್ಯುತ್ ಬಿಲ್ ಪಡೆಯಲು ನೀವೂ ಅರ್ಹರೇ? ಈ ರೀತಿ ಮಾಹಿತಿ ತಿಳಿದು ಕೊಳ್ಳಿ

ರಂಜಿತ್‌ಬೆಂಗಳೂರು: : ಗೃಹ ಜ್ಯೋತಿ ಯೋಜನೆಯಡಿ ಶೂನ್ಯ ಬಿಲ್ ಪಡೆಯುವ ಯೋಜನೆಯ ಇದೇ ಆಗಸ್ಟ್‌ 1ರಿಂದ ಅಂದ್ರೆ ನಿನ್ನೆಯಿಂದ ಶುರುವಾಗಿದೆ. ಆಗಸ್ಟ್‌ 5ರಂದು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಈ ಯೋಚನೆಗೆ ಚಾಲನೆ ನೀಡಲಿದ್ದಾರೆ ಅಂತ ನಿನ್ನೆ ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮಾಹಿತಿ ನೀಡಿದ್ದಾರೆ. ಈ ನಡುವೆ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದು, ಅರ್ಹರಾಗಿದ್ದೇವೆಯೇ ಎನ್ನುವುದನ್ನು ಹೇಗೆ ತಿಳಿದುಕೊಳ್ಳಬಹುದು? ನಮಗೂ ಕೂಡ ಶೂನ್ಯ ಬಿಲ್‌ ಬರಲಿದ್ಯ ಎನ್ನುವುದು …

Read More »

ಶಾಸಕ ಹೆಚ್​ ಡಿ ರೇವಣ್ಣ ಮತ್ತು ಕಾಂಗ್ರೆಸ್​​ ಅಭ್ಯರ್ಥಿ ಶ್ರೇಯಸ್​ ಪಾಟೀಲ್​ಗೆ ಹೈಕೋರ್ಟ್​ ಸಮನ್ಸ್​ ಜಾರಿ ಮಾಡಿದೆ.

ಬೆಂಗಳೂರು: ಹಣ ಮತ್ತು ಕೊಳಿ ಮಾಂಸ ಹಂಚಿ ಚುನಾವಣೆ ಗೆದ್ದರುವುದಾಗಿ ಆರೋಪಿಸಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇದೇ ವೇಳೆ, ಕಾಂಗ್ರೆಸ್​ ಅಭ್ಯರ್ಥಿ ಶ್ರೇಯಸ್ ಪಾಟೀಲ್​​ಗೂ ಸಮನ್ಸ್ ಜಾರಿ ಮಾಡಲಾಗಿದೆ. ಹೊಳೆನರಸೀಪುರ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ನ್ಯಾಯಪೀಠ ಸಮನ್ಸ್ ಜಾರಿ ಮಾಡಿ ವಿಚಾರಣೆಯನ್ನು ಸೆಪ್ಟಂಬರ್ 4 ಕ್ಕೆ ಮುಂದೂಡಿದೆ. ರೇವಣ್ಣ …

Read More »

ಸಿಜೆಐ ವಿರುದ್ಧದ ಟೀಕೆ ವಿಚಾರ: ಪ್ರಕಾಶಕ ಬದ್ರಿ ಶೇಷಾದ್ರಿಗೆ ಜಾಮೀನು

ಚೆನ್ನೈ(ತಮಿಳುನಾಡು): ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಮತ್ತು ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಬಂಧಿತರಾಗಿದ್ದ ಪ್ರಕಾಶಕ ಮತ್ತು ಬಲಪಂಥೀಯ ವ್ಯಾಖ್ಯಾನಕಾರ ಬದ್ರಿ ಶೇಷಾದ್ರಿ ಅವರಿಗೆ ಪೆರಂಬಲೂರು ಜಿಲ್ಲೆಯ ಕುನ್ನಂನಲ್ಲಿರುವ ಜಿಲ್ಲಾ ಮುನ್ಸಿಫ್ ಕಮ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.   ಶೇಷಾದ್ರಿ ಅವರನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಕೋರಿ ಸಲ್ಲಿಸಿದ್ದ ಪ್ರಾಸಿಕ್ಯೂಷನ್ ಅರ್ಜಿಯನ್ನು ವಜಾಗೊಳಿಸಿದ ಜಿಲ್ಲಾ ಮುನ್ಸಿಫ್ ಕಮ್ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ಎಸ್. ಕವಿತಾ …

Read More »