Breaking News

Monthly Archives: ಆಗಷ್ಟ್ 2023

ನೆಚ್ಚಿನ‌ ಶಿಕ್ಷಕಿಗೆ ಮಕ್ಕಳ‌ ಕಣ್ಣೀರ ಬೀಳ್ಕೊಡುಗೆ

ಕಲಬುರಗಿ : ಗುರು ಬ್ರಹ್ಮ, ಗುರು ವಿಷ್ಣು ಗುರುದೇವೋ ಮಹೇಶ್ವರ.. ಗುರು ಸಾಕ್ಷಾತ್​ ಪರಬ್ರಹ್ಮ.. ತಸ್ಮೈ ಶ್ರೀ ಗುರುವೇ ನಮಃ.. ಎಂಬಂತೆ ಭಾರತೀಯ ಸಂಸ್ಕೃತಿಯಲ್ಲಿ ಗುರುಗಳಿಗೆ ಉನ್ನತ ಸ್ಥಾನ ನೀಡಲಾಗುತ್ತೆ. ವಿದ್ಯಾರ್ಥಿಗಳು ತಮಗೆ ವಿದ್ಯೆ ಕಲಿಸುವ ಗುರುಗಳನ್ನು ಗೌರವದಿಂದ ಕಾಣುತ್ತಾರೆ. ಶಿಕ್ಷಕರು ಸಹ ಮಕ್ಕಳ ಬಗ್ಗೆ ಕಾಳಜಿ ವಹಿಸಿ ಅವರ ಜ್ಞಾನಾರ್ಜನೆಗೆ ಶ್ರಮಿಸುತ್ತಾರೆ. ಈ ನಡುವೆ ಗುರು ಶಿಷ್ಯರ ನಡುವೆ ಸಂಬಂಧ ಗಟ್ಟಿಯಾಗಿ ಬೆಳೆಯುತ್ತೆ. ಸರ್ಕಾರಿ ಶಾಲೆಯಲ್ಲಿ 9 ವರ್ಷ ಸೇವೆ …

Read More »

ರಾಜ್ಯದಲ್ಲಿ ಆನ್​ಲೈನ್ ಗೇಮ್ ನಿಷೇಧಕ್ಕೆ ಚಿಂತನೆ: C.M.

ಮಂಗಳೂರು: ರಾಜ್ಯದಲ್ಲಿ ಆನ್​​ಲೈನ್ ಗೇಮ್ ನಿಷೇಧ ಮಾಡುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆನ್​​ಲೈನ್ ಗೇಮ್​​ಗಳ ಮೂಲಕ ಸಾಕಷ್ಟು ಜನರು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆನ್​​ಲೈನ್ ಗೇಮ್​ಗಳನ್ನು ನಿಷೇಧ ಮಾಡಲು ಚಿಂತಿಸಲಾಗಿದೆ ಎಂದರು. ಮಂಗಳೂರಿನಲ್ಲಿ ಮಾದಕ ವಸ್ತು ಹಾವಳಿ ವಿಪರೀತ ಹೆಚ್ಚಾಗುತ್ತಿದೆ. ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು …

Read More »

ನಿಗಮ ಮಂಡಳಿ ನೇಮಕಕ್ಕೆ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

ಮಂಗಳೂರು: ನಿಗಮ ಮಂಡಳಿ ನೇಮಕಕ್ಕೆ ಸಂಬಂಧಿಸಿದಂತೆ ಸಮಿತಿ ರಚನೆ ಮಾಡುತ್ತೇವೆ. ಈ ಸಮಿತಿಯಲ್ಲಿ ಶಾಸಕರನ್ನು ಸೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು ದೆಹಲಿ ಸಭೆಗೂ ಶಾಸಕರ ಸಭೆಗೂ ಲಿಂಕ್ ಮಾಡುವುದು ಬೇಡ. ಶಾಸಕರ ಸಭೆಯಲ್ಲಿ ಶಾಸಕರು ಕ್ಷೇತ್ರದ ಸಮಸ್ಯೆ ಹೇಳಿದ್ದಾರೆ ಎಂದು ಸ್ಪಷ್ಟಪಡಿಸಿದರು. ಬುಧವಾರ ದೆಹಲಿಯಲ್ಲಿ ಕರೆದಿದ್ದು ಲೀಡರ್​ಗಳ ಸಭೆ. ದೆಹಲಿಯಲ್ಲಿ ಪಾರ್ಲಿಮೆಂಟ್ ಎಲೆಕ್ಷನ್ ಬಗ್ಗೆ ಚರ್ಚೆ ಮಾಡಲು ಸಭೆ ಕರೆದಿದ್ದಾರೆ. 37 ಜನ ಸೀನಿಯರ್ ಲೀಡರ್​ಗಳ …

Read More »

ಶಕ್ತಿ ಯೋಜನೆ ಸಂಬಂಧ ರಾಜ್ಯ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಂಕ್ಷಿ ಶಕ್ತಿ ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಈ ಯೋಜನೆ ಸಂಬಂಧ ಸರ್ಕಾರ ಮೊದಲ ಕಂತಿನ ಪೈಕಿ 125.48 ಕೋಟಿ ರೂ. ಸಹಾಯಾನುದಾನ ಬಿಡುಗಡೆ ಮಾಡಿದೆ. ಮೊದಲ ಕಂತಿನ ಮೊತ್ತ 250.96 ಕೋಟಿ ರೂ. ಆಗಿದ್ದು, ಈ ಪೈಕಿ 125.48 ಕೋಟಿ ರೂ.‌ ಅನುದಾನ ಬಿಡುಗಡೆ ಮಾಡಲಾಗಿದೆ. ಶಕ್ತಿ ಯೋಜನೆ ಸಂಬಂಧ ರಾಜ್ಯ ಸರ್ಕಾರ ಮೊದಲ ಕಂತಿನ ಹಣ ಬಿಡುಗಡೆ ಮಾಡಿದೆ. ಆದರೆ, ಮೊದಲ ಕಂತಿನ ಸಂಪೂರ್ಣ …

Read More »

ಈಗಲೇ ರಂಗೇರಿದ ಲೋಕಸಭೆ ಚುನಾವಣೆ ಕಣ: ಇಂದು ದೆಹಲಿಯಲ್ಲಿ ಮಹತ್ವದ ಸಭೆ, 50ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ಭಾಗಿ!

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಸುಮಾರು 50 ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಸಚಿವರು ಇಂದು ನವದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೆಂಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೆವಾಲಾ ಸೇರಿದಂತೆ ಇತರರು ಭಾಗವಹಿಸುವ ಸಾಧ್ಯತೆಯಿದೆ. ಕರ್ನಾಟಕ ಡಿಸಿಎಂ …

Read More »

ನಾಳೆ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್​ ನಾಯಕರ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ರಾಜಕೀಯ ಬುಧವಾರ ದೆಹಲಿಗೆ ಶಿಫ್ಟ್ ಆಗಲಿದೆ. ರಾಜ್ಯ ನಾಯಕರ ಜೊತೆ ಕೈ ಹೈಕಮಾಂಡ್ ಲೋಕಸಭೆ ಚುನಾವಣೆ ಕಾರ್ಯತಂತ್ರ ನಡೆಸಲಿದೆ.‌ ಅದರ ಜೊತೆಗೆ ಶಾಸಕರ ಅಸಮಾಧಾನಕ್ಕೆ ಮದ್ದು ಅರೆಯುವ ಕೆಲಸವೂ ನಡೆಯಲಿದೆ.   ಕೈ ಪಕ್ಷದಲ್ಲಿನ ಬೇಗುದಿ ತಣಿಸಲು ಹೈಕಮಾಂಡ್ ಎಂಟ್ರಿ ಕೊಟ್ಟಿದೆ. ಹೈಕಮಾಂಡ್ ಬುಲಾವ್ ಹಿನ್ನೆಲೆ ಬುಧವಾರ ಸಿಎಂ, ಡಿಸಿಎಂ, ಸಚಿವರು ಸೇರಿ ಪ್ರಮುಖ ನಾಯಕರೆಲ್ಲ ದೆಹಲಿ ಕಡೆ ದೌಡಾಯಿಸ್ತಿದ್ದಾರೆ. ಶಾಸಕರ ಅತೃಪ್ತಿ ಶಮನಕ್ಕೆ ಮದ್ದೆರಚಲು ಎಐಸಿಸಿ …

Read More »

”ಠೇವಣಿ ಏಜೆಂಟ್​ಗಳಿಂದ ಪಿಗ್ಮಿ ಕಲೆಕ್ಷನ್​ಗಳಲ್ಲಿ ಈಗಾಗಲೇ ಅನೇಕ ಅವ್ಯವಹಾರ ಪ್ರಕರಣಗಳು ಬೆಳಕಿಗೆ ಬಂದಿವೆ.

ಬೆಳಗಾವಿ: ”ಸಹಕಾರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಪಿಕೆಪಿಎಸ್, ಡಿಸಿಸಿ ಬ್ಯಾಂಕ್, ಅರ್ಬನ್ ಸೊಸೈಟಿಗಳಲ್ಲಿ ಹಣ ಕಬಳಿಸಿ, ದುರುಪಯೋಗಪಡಿಸಿಕೊಂಡು ಸಂಸ್ಥೆಗಳಿಗೆ ವಂಚನೆ ಎಸಗುವವರ ವಿರುದ್ಧ ಅಧಿಕಾರಿಗಳು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು” ಎಂದು ಸಹಕಾರ ಇಲಾಖೆ ಸಚಿವ ಕೆ.ಎನ್ ರಾಜಣ್ಣ ಸೂಚನೆ ನೀಡಿದರು. ಸುವರ್ಣ ವಿಧಾನ ಸೌಧದ ಕಾನ್ಫರೆನ್ಸ್ ಹಾಲ್​ನಲ್ಲಿ ಇಂದು ನಡೆದ ಬೆಳಗಾವಿ ಪ್ರಾಂತ್ಯದ ಇಲಾಖಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ”ಜಿಲ್ಲೆಗಳ ಸಹಕಾರ ಸಂಘಗಳು ಮತ್ತು ಬ್ಯಾಂಕ್‌ಗಳಲ್ಲಿ …

Read More »

ವಿಟಿಯು 23ನೇ ಘಟಿಕೋತ್ಸವ ಜರುಗಿದ್ದು, ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರ ಅಧ್ಯಕ್ಷತೆಯಲ್ಲಿ ಚಿನ್ನದ ಪದಕ ವಿಜೇತರು ಹಾಗೂ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಬೆಳಗಾವಿ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಡಾ. ಎ ಪಿ ಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ಮಂಗಳವಾರ 23ನೇ ಘಟಿಕೋತ್ಸವ ಜರುಗಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ‌ ಚಿನ್ನದ ಪದಕ ವಿಜೇತರು ಹಾಗೂ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಭಾರತೀಯ ತಂತ್ರಜ್ಞಾನ ಸಂಸ್ಥೆ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರು ಘಟಿಕೋತ್ಸವ ಭಾಷಣ ಮಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸನ್ನು ನನಸು ಮಾಡಿಕೊಳ್ಳಲು …

Read More »

ಟೊಮೆಟೊ ಕಳ್ಳನನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ ರೈತ

ಚಿಕ್ಕೋಡಿ (ಬೆಳಗಾವಿ) : ಕಳೆದ ಎರಡು ತಿಂಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದ್ದು, 200 ರೂ. ಗಡಿ ಮುಟ್ಟಿದೆ. ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿರುವ ಟೊಮೆಟೊ, ರೈತರಿಗೆ ಹೆಚ್ಚಿನ ಲಾಭವನ್ನು ತಂದುಕೊಡುತ್ತಿದೆ. ಆದರೆ ಇತ್ತೀಚೆಗೆ ತೋಟಕ್ಕೆ ನುಗ್ಗಿ ಟೊಮೆಟೊ ಕಳ್ಳತನ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಡುವೆ ರೈತರೋರ್ವರು ಟೊಮೆಟೊ ಕಳ್ಳನನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಸಿದ್ದಾಪೂರ ಗ್ರಾಮದ ಬುಜಪ್ಪಾ ಗಾಣಗೇರ ಎಂಬುವರು ಟೊಮೆಟೊ ಕಳ್ಳತನ …

Read More »

ಲೋಕಸಭೆ ಚುನಾವಣೆ ಕುರಿತು ಚರ್ಚೆ ನಡೆಸಲು ದೆಹಲಿಯಲ್ಲಿ ಹೈಕಮಾಂಡ್ ಸಭೆ : ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ

ಚಿಕ್ಕೋಡಿ (ಬೆಳಗಾವಿ): ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆ ಪಕ್ಷ ಸಂಘಟನೆಯ ಕುರಿತು ಚರ್ಚೆ ನಡೆಸಲು ದೆಹಲಿಯಲ್ಲಿ ಹೈಕಮಾಂಡ್ ಸಭೆ ಕರೆದಿದೆ. ಈ ನಿಟ್ಟಿನಲ್ಲಿ ಕೆಲವರು ದೆಹಲಿಗೆ ಹೊರಟಿದ್ದೇವೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಕೆಡಿಪಿ ಸಭೆ ನಡೆಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಚಿವರ ವಿರುದ್ಧ ಶಾಸಕರು ದೂರು ನೀಡಿದ ವಿಚಾರವಾಗಿ …

Read More »