Breaking News

Daily Archives: ಸೆಪ್ಟೆಂಬರ್ 5, 2023

ಟೀಮ್​ ಜರ್ಸಿಯಲ್ಲಿ “ಇಂಡಿಯಾ” ತೆಗೆದು “ಭಾರತ್​” ಮಾಡಿ.. ಪಾರ್ಟ್‌ಟೈಮ್ ಎಂಪಿ ಆಗಿರುವುದಕ್ಕಿಂತ ಫುಲ್​ಟೈಂ ಕ್ರಿಕೆಟಿಗನಾಗಿರುವೆ: ಸೆಹ್ವಾಗ್

ಹೈದರಾಬಾದ್​​​: ಇಂದು ಟ್ವಿಟರ್​ನಲ್ಲಿ ಎರಡು ವಿಷಯ ಟ್ರೆಂಡಿಂಗ್​ ಆಗಿದೆ. ಅದು ‘ಇಂಡಿಯಾ’ ವರ್ಸಸ್ ‘ಭಾರತ್’ ಆಗಿದ್ದರೆ, ಮತ್ತೊಂದೆಡೆ ವಿರೇಂದ್ರ ಸೆಹ್ವಾಗ್​, ಈ ಚರ್ಚೆ ಮುನ್ನಲೆಗೆ ಬರುವ ಮುನ್ನವೇ ಟೀಂ ಭಾರತ ಎಂದು ಹ್ಯಾಷ್​ ಟ್ಯಾಗ್​ ಹಾಕಿದ್ದರು. ಈ ವಿಷಯವೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಸದ್ದು ಮಾಡುತ್ತಿದೆ.     ಈ ನಡುವೆ ಭಾರತ ಸಂವಿಧಾನದಲ್ಲಿನ ಇಂಡಿಯಾ ಎಂಬ ಪದಕ್ಕೆ ಕೊಕ್​ ನೀಡಿ ಭಾರತವನ್ನು ಮಾತ್ರ ಉಳಿಸಿಕೊಳ್ಳುವ ನಿರ್ಧರಿಸಿದೆ ಎನ್ನಲಾಗಿದೆ. ಮುಂಬರುವ ವಿಶೇಷ …

Read More »

ಬಾಲಿವುಡ್​ ಕಿಲಾಡಿ ಅಕ್ಷಯ್​ ಕುಮಾರ್​ ಭಾರತದ ಅತ್ಯಂತ ಯಶಸ್ವಿ ನಟನಾಗಿ ಹೊರಹೊಮ್ಮಿದ್ದಾರೆ.

ಬಣ್ಣದ ಲೋಕವೇ ಹೀಗೆ ಅಲ್ಲವೇ! ನೂರು ಸಿನಿಮಾ ಮಾಡಿದ್ರೂ ಸಿಗದೇ ಇರೋ ಕ್ರೇಜ್​, ಸ್ಟಾರ್​ ಗಿರಿ ಪಟ್ಟ ಕೆಲವೊಬ್ಬರಿಗೆ ಒಂದೇ ಚಿತ್ರದಲ್ಲಿ ದಕ್ಕಿಬಿಡುತ್ತದೆ. ಇನ್ನು ಕೆಲವರಿಗೆ ಹೀಗಲ್ಲ. ಅನೇಕ ವರ್ಷಗಳಿಂದ ಚಿತ್ರರಂಗದಲ್ಲಿದ್ದು, ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಮನಸ್ಸನ್ನು ಪ್ರತಿ ಬಾರಿಯೂ ಗೆಲ್ಲುತ್ತಾ ಸ್ಟಾರ್​ ಹೀರೋಗಳಾಗಿದ್ದಾರೆ. ಡಾ.ರಾಜ್​ಕುಮಾರ್​, ಎನ್​ಟಿಆರ್​, ಅಮಿತಾಭ್​ ಬಚ್ಚನ್​ರಿಂದ ಹಿಡಿದು ರಜನಿಕಾಂತ್​, ಶಾರುಖ್​ ಖಾನ್​, ಯಶ್​, ಪ್ರಭಾಸ್​ ಹೀಗೆ ಅನೇಕರು ತಮ್ಮ ಕಠಿಣ ಶ್ರಮ, ಛಲದಿಂದ ಸ್ಟಾರ್​ …

Read More »

ಬ್ಯಾಂಕ್ವೆಟ್ ಹಾಲ್​ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು 2023-24ನೇ ಶೈಕ್ಷಣಿಕ ಸಾಲಿನಿಂದ ತರಲು ತೀರ್ಮಾನಿಸಲಾಗಿದೆ. ಇನ್ನು ಮುಂದೆ ಎಸ್‌ಎಸ್‌ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಅನುತ್ತೀರ್ಣಗೊಂಡರೆ, ವರ್ಷಕ್ಕೆ ಮೂರು ಬಾರಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ …

Read More »

ನೀರಜ್​ ಚೋಪ್ರಾ ಪ್ರತಿಮೆಯಲ್ಲಿದ್ದ ಜಾವೆಲಿನ್​ ಕಳ್ಳತನ.. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸರ ವ್ಯಕ್ತಪಡಿಸಿ ಸಾರ್ವಜನಿಕರು

ಮೀರತ್ (ಉತ್ತರ ಪ್ರದೇಶ): ಸ್ಟಾರ್ ಜಾವೆಲಿನ್ ಥ್ರೋವರ್ ಮತ್ತು ಒಲಿಂಪಿಕ್ ಚಾಂಪಿಯನ್‌, ಇತ್ತಿಚೆಗೆ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್​ನಲ್ಲಿ ಚಿನ್ನ ಗೆದ್ದ ನೀರಜ್​ ಚೋಪ್ರಾ ಅವರ ಪ್ರತಿಮೆಯನ್ನು ಇಲ್ಲಿನ ಹಾಪುರ್​ನ ಸರ್ಕಲ್ ಸ್ಥಾಪಿಸಲಾಗಿತ್ತು. ಮಂಗಳವಾರ ಬೆಳಗ್ಗೆ ಈ ಪ್ರತಿಮೆಯ ಕೈಯಲ್ಲಿದ್ದ ಜಾವೆಲಿನ್ ಬದಲಾಗಿತ್ತು. ಮೂರ್ತಿ ಸ್ಥಾಪಿಸಿದಾಗ ಫೈಬರ್​ನಿಂದ ಮಾಡಿದ ಜಾವೆಲಿನ್ ಇಡಲಾಗಿತ್ತು. ಈಗ ಆ ಜಾಗದಲ್ಲಿ ಕಿಡಿಗೇಡಿಗಳು ಮರದ ಕೋಲನ್ನು ಇಟ್ಟಿದ್ದಾರೆ. ಈ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೇ ಈ …

Read More »

ನಿರೀಕ್ಷೆಯಂತೆ ಸೇಂಟ್ ಪಾಲ್ಸ್ ಪ್ರೌಢಶಾಲೆಯು 55ನೇ ಫಾದರ್ ಎಡ್ಡಿ ಸ್ಮಾರಕ ಫುಟ್ಬಾಲ್ ಪಂದ್ಯಾವಳಿಯ ಪ್ರಶಸ್ತಿಯನ್ನು ಗೆದ್ದುಕೊಂಡಿತು..

ಬಿಗ್ ವೆಂಚರ್ ಬ್ರಾಡ್ಬ್ಯಾಂಡ್ ಪ್ರಾಯೋಜಕತ್ವದಲ್ಲಿ ಸೇಂಟ್ ಪಾಲ್ಸ್ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘವಾದ ಬೆಳಗಾವಿ ವರ್ಲ್ಡ್ವೈಡ್ ಪಾಲಿಟ್ಸ್ ಆಯೋಜಿಸಿದ್ದ 55ನೇ ಫಾದರ್ ಎಡ್ಡಿ ಸ್ಮೃತಿ ನಾಕ್ಔಟ್ ಫುಟ್ಬಾಲ್ ಪಂದ್ಯಾವಳಿಯ ಫೈನಲ್ ಪಂದ್ಯ ಇಂದು ಸೇಂಟ್ ಪಾಲ್ಸ್ ಹೈಸ್ಕೂಲ್ ಮತ್ತು ಲವ್ ಡೇಲ್ ಸೆಂಟ್ರಲ್ ಸ್ಕೂಲ್ ನಡುವೆ ನಡೆಯಿತು. . ಶಿಬಿರದ ಸೇಂಟ್ ಪಾಲ್ಸ್ ಹೈಸ್ಕೂಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸೇಂಟ್ ಪಾಲ್ಸ್ ಪ್ರೌಢಶಾಲೆ 6-5 ಗೋಲುಗಳಿಂದ ಲವ್ ಡೇಲ್ …

Read More »

ಡಾ. ರಾಮಣ್ಣವರ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ

ಬೆಳಗಾವಿ- ಬೆಳಗಾವಿ ಕೆಎಲ್‌ಇ ಶ್ರೀ ಬಿ.ಎಂ. ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯದ ಶಾರೀರ ರಚನಾಶಾಸ್ತç ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರಾದ ಡಾ. ಮಹಾಂತೇಶ ರಾಮಣ್ಣವರ ಅವರ ಆಯುರ್ವೆದ ವೈದ್ಯಕೀಯ ಬೋಧನಾ ಸೇವೆಯನ್ನು ಪರಿಗಣಿಸಿ ಇವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಬೆಳಗಾವಿ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಮತ್ತು ರಿಸರ್ಚ (ಸ್ವಾಯತ್ತ ವಿಶ್ವವಿದ್ಯಾಲಯ) ವತಿಯಿಂದ ಸೆ.೫ ರಂದು ಬೆಳಗಾವಿ ಕೆಎಲ್‌ಇ ಜೆಎನ್‌ಎಂಸಿಯ ಡಾ.ಎಚ್.ಬಿ.ರಾಜಶೇಖರ ಸಭಾಗೃಹದಲ್ಲಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ …

Read More »

30 ಶಾಲೆಗಳಿಗೆ ಲ್ಯಾಪಟಾಪ್ ಹಾಗೂ ಕಲರ್ ಪ್ರಿಂಟಗಳನ್ನು ವಿತರಿಸಿದರ ಶಾಸಕ ಗಣೇಶ ಹುಕ್ಕೇರಿ

ಶಿಕ್ಷಣ ಸಚಿವರನ್ನು ಚಿಕ್ಕೋಡಿಗೆ ಕರೆಯಿಸಿ ಶಿಕ್ಷಣ ಇಲಾಖೆಯ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಶಾಸಕ ಗಣೇಶ ಹುಕ್ಕೇರಿ ಹೇಳಿದರು. ಚಿಕ್ಕೋಡಿ ಪಟ್ಟಣದ ಪರಟಿನಾಗಲಿಂಗೇಶ್ವರ ಸಭಾಭವನದಲ್ಲಿ ಆಯೋಜಿಸಿದ ಶೈಕ್ಷಣಿಕ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮಾತನಾಡುತ್ತಾ ತಂದೆ ತಾಯಿಯವರ ನಂತರ ಶಿಕ್ಷಕರೇ ಗುರುಗಳು,ಶಿಕ್ಷಕರನ್ನು ದೇವರಂತೆ ಕಾಣಬೇಕು.ಶಿಕ್ಷಕರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ಯಶಸ್ಸು ಕಂಡಿತ ಎಂದರು. ಜಿಲ್ಲೆಯ ಎಲ್ಲ ಸಮಸ್ಯೆಗಳನ್ನು ನಾನು ಹಾಗೂ ದೆಹಲಿ ಪ್ರತಿನಿಧಿ ಪ್ರಕಾಶ ಹುಕ್ಕೇರಿಯವರು ಬಗೆಹರಿಸುತ್ತೇವೆ.ಮುಂದಿನ …

Read More »

ಎರಡು ವಿಧಾನಸಭಾ ಮತಕ್ಷೇತ್ರಗಳಲ್ಲಿ ಹೆಸರು: ಸಿಎಂ ಅರವಿಂದ್​ ಕೇಜ್ರಿವಾಲ್​ ಪತ್ನಿಗೆ ದೆಹಲಿ ಕೋರ್ಟ್​ ಸಮನ್ಸ್​

ನವದೆಹಲಿ: ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿ ಕಾನೂನು ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರ ಪತ್ನಿ ಸುನೀತಾ ಕೇಜ್ರಿವಾಲ್​ರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಸಮನ್ಸ್​ ನೀಡಿದೆ.   ಮೆಟ್ರೋಪಾಲಿಟನ್ ನ್ಯಾಯಾಧೀಶ ಅರ್ಜಿಂದರ್ ಕೌರ್ ಕೇಜ್ರಿವಾಲ್​ ಪತ್ನಿಗೆ ಸಮನ್ಸ್​ ಜಾರಿ ಮಾಡಿದ್ದಾರೆ. ಬಿಜೆಪಿ ನಾಯಕ ಹರೀಶ್ ಖುರಾನಾ ಅವರು ಸುನಿತಾ ಅವರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆಯ (ಆರ್‌ಪಿ) ಕಾನೂನು ಉಲ್ಲಂಘಿಸಿರುವ ಆರೋಪ …

Read More »

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೇಸ್​ಗಳ ಸಂಖ್ಯೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 6,806 ಪ್ರಕರಣಗಳು ಪತ್ತೆಯಾಗಿದ್ದು, ಆ ಪೈಕಿ 3,454 ಕೇಸ್​ಗಳು ಬೆಂಗಳೂರಿನಲ್ಲೇ ಇವೆ. ಪ್ರಕರಣಗಳ ಸಂಖ್ಯೆ ಏರುತ್ತಿರುವುದು ಆತಂಕ ಮೂಡಿಸಿದೆ. 2022ರಲ್ಲಿ ಇದೇ ವೇಳೆಗೆ ರಾಜ್ಯದಲ್ಲಿ 5,500 ಪ್ರಕರಣಗಳು ಪತ್ತೆಯಾಗಿದ್ದವು. ರಾಜಧಾನಿ ಬೆಂಗಳೂರಿನಲ್ಲಿ 1,058 ಪ್ರಕರಣಗಳು ವರದಿಯಾಗಿದ್ದವು. 2021ರ ಸೆಪ್ಟೆಂಬರ್‌ ಅಂತ್ಯಕ್ಕೆ ನಗರದಲ್ಲಿ 520 ಪ್ರಕರಣಗಳು ದಾಖಲಾಗಿದ್ದವು. ರಾಜ್ಯದಲ್ಲಿ ಉಂಟಾಗುತ್ತಿರುವ ಹಮಾಮಾನ ಬದಲಾವಣೆಯಿಂದಾಗಿ …

Read More »

ರಸ್ತೆ ಅಪಘಾತದಲ್ಲಿ ಸಾವಿನಲ್ಲೂ ಒಂದಾದ ಅಣ್ಣ ತಂಗಿ

ಬೆಳಗಾವಿ : ಕಾರು ಮತ್ತು ಬೈಕ್​ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನ ಮೇಲಿದ್ದ ಅಣ್ಣ-ತಂಗಿ ಸಾವನ್ನಪ್ಪಿರುವ ಘಟನೆ ಮಲಿಕವಾಡ-ನಣದಿವಾಡಿ ರಸ್ತೆಯಲ್ಲಿ ನಡೆದಿದೆ. ಪ್ರಶಾಂತ ನಾಗರಾಜ ತುಳಸಿಕಟ್ಟಿ(21) ಮತ್ತು ಪ್ರಿಯಾಂಕ ನಾಗರಾಜ ತುಳಸಿಕಟ್ಟಿ (19) ಸಾವಿನಲ್ಲೂ ಒಂದಾದ ಅಣ್ಣ-ತಂಗಿ ಎಂದು ತಿಳಿದು ಬಂದಿದೆ. ಮೂಲತಃ ಸದಲಗಾ ಪಟ್ಟಣದ ನಿವಾಸಿಗಳಾಗಿದ್ದು, ಮಂಗಳವಾರ ಮಧ್ಯಾಹ್ನ ಚಿಕ್ಕೋಡಿಯ ಪರಟಿನಾಗಲಿಂಗೇಶ್ವರ ದೇವಸ್ಥಾನಕ್ಕೆ ಎಂದು ದ್ವಿಚಕ್ರ ವಾಹನ ಮೇಲೆ ಹೋಗುತ್ತಿರುವ ಸಂದರ್ಭದಲ್ಲಿ ಕಾರ ಡಿಕ್ಕಿ ಹೊಡೆದಿದೆ. ಪರಿಣಾಮ …

Read More »