Breaking News

Daily Archives: ಸೆಪ್ಟೆಂಬರ್ 28, 2023

ಕಾವೇರಿಗಾಗಿ ನಾಳೆ ರಾಜ್ಯ ಬಂದ್.. ದಕ್ಷಿಣ ಕನ್ನಡದಲ್ಲಿ ಇಲ್ಲ ಬೆಂಬಲ

ಮಂಗಳೂರು: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವ ವಿಚಾರದಲ್ಲಿ ಸರ್ಕಾರದ ನಿಲುವನ್ನು ವಿರೋಧಿಸಿ ನಾಳೆ ರಾಜ್ಯ ಬಂದ್ ಗೆ ಕರೆ ನೀಡಲಾಗಿದೆ. ಆದರೆ, ಕರ್ನಾಟಕ ಬಂದ್​ಗೆ ರಾಜ್ಯದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಕಾವೇರಿ ಹೋರಾಟದ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಸರ್ಕಾರದ ಮನವಿಗೂ ಮಣಿಯದೇ ಕನ್ನಡ ಪರ ಮತ್ತು ರೈತ ಸಂಘಟನೆಗಳು ಶುಕ್ರವಾರ ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಬಂದ್ ನಿರ್ಧರವನ್ನು ಕೈಬಿಡಲು ಜಲಸಂಪನ್ಮೂಲ ಸಚಿವರೂ ಆಗಿರುವ …

Read More »

ನಿನ್ನೆ ಕೊಲೆ ಮಾಡಿ ಇಂದು ನೇಣಿಗೆ ಶರಣಾದ ವಾಚಮನ್

ಯುವಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌‌ನಲ್ಲಿ ಮೌಲಾಲಿ ಎನ್ನುವ ಯುವಕನ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದ ಆರೋಪಿ ಪರಸಪ್ಪ‌, ಅಪೂರ್ವ ನಗರದ ಪ್ರಮುಖ ರಸ್ತೆಯಲ್ಲಿರುವ ಗಿಡದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಸಪ್ಪ (50) ನೇಣಿಗೆ ಶರಣಾದ ಆರೋಪಿಯಾಗಿದ್ದು, ನಿನ್ನೆ ಹುಬ್ಬಳ್ಳಿಯ ಸಿಲ್ವರ್ ಟೌನ್‌‌ನಲ್ಲಿ ಮೌಲಾಲಿ ಎನ್ನುವ ಯುವಕನ ಕೊಲೆ ಮಾಡಿದ ಆರೋಪ ಈತನ ಮೇಲಿತ್ತು. ಪೊಲೀಸರು ಈತನನ್ನು ವಶಕ್ಕೆ …

Read More »

ಕಾರವಾರಕ್ಕೆ ಬಂದ ಟುಪೆಲೊವ್-142 ಯುದ್ಧವಿಮಾನ

ಕಾರವಾರ: ಬಹುನಿರೀಕ್ಷಿತ ಟುಪೆಲೊವ್-142 ಯುದ್ಧ ವಿಮಾನ ಕೊನೆಗೂ ಕಾರವಾರಕ್ಕೆ ಆಗಮಿಸಿದೆ. ನಗರದ ಚಾಪೆಲ್ ಯುದ್ಧ ನೌಕೆ ಸಂಗ್ರಹಾಲಯದ ಬಳಿಯೇ ಸಿದ್ಧತೆ ನಡೆದಿದೆ. ನಿರೀಕ್ಷೆಯಂತೆ ಜೋಡಣೆ ನಡೆದಲ್ಲಿ ತಿಂಗಳೊಳಗೆ ಜಿಲ್ಲೆಯ ಪ್ರವಾಸೋಧ್ಯಮಕ್ಕೆ ಮತ್ತೊಂದು ಗರಿ‌ ಮೂಡಲಿದೆ. ಕರಾವಳಿಯ ಹೆಬ್ಬಾಗಿಲು ಉತ್ತರಕನ್ನಡ ಜಿಲ್ಲೆಯ ಕಾರವಾರ ಅಂದಾಕ್ಷಣ ಮೊದಲು ನೆನಪಾಗೋದೇ ಇಲ್ಲಿನ ವಿಶಾಲವಾದ ಕಡಲತೀರ. ಜೊತೆಗೆ ದೇಶದ ಪ್ರತಿಷ್ಠಿತ ಯೋಜನೆಗಳಲ್ಲಿ ಒಂದಾದ ಕದಂಬ ನೌಕಾ ನೆಲೆ. ತಾಲೂಕಿನ ಅರಗಾ ಗ್ರಾಮದ ಬಳಿ ಇರುವ ಕದಂಬ ನೌಕಾನೆಲೆ …

Read More »

ಬಾಂಬ್​ನಂತೆ ಸಿಡಿದ ಜಾರ್ಜಿಂಗ್​ ಇಟ್ಟ ಮೊಬೈಲ್ ಫೋನ್​: ಮನೆಗೆ ಭಾರಿ ಹಾನಿ, ಮೂವರಿಗೆ ತೀವ್ರ ಗಾಯ

(ಮಹಾರಾಷ್ಟ್ರ) : ಮೊಬೈಲ್​ಗಳು ಸ್ಫೋಟಗೊಳ್ಳುತ್ತಿರುವ ವರದಿಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಮಹಾರಾಷ್ಟ್ರದ ನಾಸಿಕ್​ನಲ್ಲೂ ಇಂಥದ್ದೊಂದು ಸುದ್ದಿಯಾಗಿದೆ. ಜಾರ್ಜ್​ ಮಾಡುವ ವೇಳೆ ಮೊಬೈಲ್​ ಬಾಂಬ್​ನಂತೆ ಸಿಡಿದು ಇಡೀ ಮನೆಯನ್ನು ಧ್ವಂಸ ಮಾಡಿದೆ. ಮನೆಯಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಿಟಕಿ, ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಲ್ಲದೇ, ಸುತ್ತಮುತ್ತ ಮನೆಗಳಿಗೂ ಹಾನಿಯಾಗಿದೆ. ಮೊಬೈಲ್ ಫೋನ್ ಸ್ಫೋಟದಿಂದಾಗಿ ಇಷ್ಟು ದೊಡ್ಡ ಪ್ರಮಾಣದ ಹಾನಿ ಸಂಭವಿಸಿರುವುದನ್ನು ಕಂಡು ಸ್ಥಳೀಯರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಮೂವರ ಪೈಕಿ ಒಬ್ಬರ ಸ್ಥಿತಿ …

Read More »

ಅಭ್ಯಾಸ ಪಂದ್ಯಕ್ಕೆ ಎರಡು ದಿನ ಮುಂಚಿತವಾಗಿ ಇಂಡಿಯಾಕ್ಕೆ ಬಂದ ಬಾಬರ್​ ಪಡೆ..

ಹೈದರಾಬಾದ್: ಏಕದಿನ ವಿಶ್ವಕಪ್​ಗೆ ಭಾರತ ಪ್ರವಾಸಕ್ಕೆ ವೀಸಾ ಸಿಕ್ಕಿಲ್ಲ ಎಂದು ಆರೋಪಿಸಿದ್ದ ಪಾಕಿಸ್ತಾನಕ್ಕೆ ಅಭ್ಯಾಸ ಪಂದ್ಯಕ್ಕೆ ಎರಡು ದಿನ ಮುಂಚಿತವಾಗಿ ಇಲ್ಲಿನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಭಾರತ ಸರ್ಕಾರ ಪಾಕಿಸ್ತಾನ ತಂಡಕ್ಕೆ ಸೂಕ್ತ ಸಮಯಕ್ಕೆ ವೀಸಾ ವ್ಯವಸ್ಥೆಯನ್ನು ಮಾಡಿಕೊಟ್ಟಿದೆ. ಆದರೆ ಪಾಕಿಸ್ತಾನ ಕ್ರಿಕೆಟ್​ ತಂಡದ ನಿರ್ವಹಣಾ ಕಮಿಟಿ​ ಮಾತ್ರ ಎರಡು ದಿನಗಳ ಹಿಂದೆ ವೀಸಾ ಸಮಸ್ಯೆ ಆಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ಐಸಿಸಿಗೂ ಪತ್ರ ಬರೆದಿದ್ದರು. ಆದರೆ …

Read More »

ಬೆಳಗಾವಿಯಲ್ಲಿ ಇಂದು ಸಾರ್ವಜನಿಕ‌ ಅದ್ಧೂರಿಯಾಗಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು ಸಾರ್ವಜನಿಕ‌ ಅದ್ಧೂರಿಯಾಗಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಇದಕ್ಕೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಮಹಾನಗರ ಪಾಲಿಕೆ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಈ ನಿಟ್ಟಿನಲ್ಲಿಂದು ನಗರದಲ್ಲಿ ಪೊಲೀಸರು ಬುಧವಾರ ಪಥ ಸಂಚಲನ ನಡೆಸಿದರು. ನಗರ ಪೊಲೀಸ್ ಆಯುಕ್ತ ಎಸ್ ಎನ್ ಸಿದ್ದರಾಮಪ್ಪ ಅವರ ನೇತೃತ್ವದಲ್ಲಿ ನಗರದ ಚನ್ನಮ್ಮ ವೃತ್ತದಿಂದ ಆರಂಭವಾದ ಪಥ ಸಂಚಲನ ಶನಿವಾರ ಕೂಟ, ಗಣಪತಿ ಗಲ್ಲಿ, ಕಂಬಳಿಕೂಟ, ಮಾರುತಿ ಗಲ್ಲಿ, …

Read More »