Breaking News

Monthly Archives: ಸೆಪ್ಟೆಂಬರ್ 2023

ತಡರಾತ್ರಿ ಪಾರ್ಟಿ ವೇಳೆ ಗುಂಡೇಟಿಗೆ ವಿದ್ಯಾರ್ಥಿನಿ ಬಲಿ: ಸ್ನೇಹಿತನ ಬಂಧನ

ಲಖನೌ (ಉತ್ತರ ಪ್ರದೇಶ): ಉತ್ತರ ಪ್ರದೇಶ ರಾಜಧಾನಿ ಲಖನೌದಲ್ಲಿ ತಡರಾತ್ರಿ ಪಾರ್ಟಿಯ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಗುಂಡೇಟಿಗೆ ಬಲಿಯಾಗಿರುವ ಘಟನೆ ನಡೆದಿದೆ. ಇದು ಆಕಸ್ಮಿಕವಾಗಿ ನಡೆದ ಗುಂಡಿನ ದಾಳಿಯೋ ಅಥವಾ ಪಿತೂರಿಯ ಭಾಗವಾಗಿ ಗುಂಡಿನ ದಾಳಿ ನಡೆಸಲಾಗಿದೆಯೋ ಎಂದು ಕುರಿತು ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಕೊಲೆಯಾದ ವಿದ್ಯಾರ್ಥಿನಿಯನ್ನು ನಿಷ್ಠಾ ತ್ರಿಪಾಠಿ (23) ಎಂದು ಗುರುತಿಸಲಾಗಿದೆ. ಹರ್ದೋಯ್‌ ಜಿಲ್ಲೆಯ ಮೂಲದ ನಿಷ್ಠಾ ಲಖನೌದ ಬಿಬಿಡಿ ವಿಶ್ವವಿದ್ಯಾಲಯದಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದರು. ಇಲ್ಲಿನ ಚಿನ್ಹಾಟ್ …

Read More »

ಈ ವಾರ ಯಾವುದೇ ಸ್ಟಾರ್​ ಸಿನಿಮಾಗಳಿಲ್ಲದೆ ಹೊಸ ಪ್ರತಿಭೆಗಳ ಚಿತ್ರಗಳು ಬಿಡುಗಡೆಯಾಗುತ್ತಿವೆ.

ಈ ವಾರ ಯಾವುದೇ ಸ್ಟಾರ್​ ಸಿನಿಮಾಗಳಿಲ್ಲದೆ ಹೊಸ ಪ್ರತಿಭೆಗಳ ಚಿತ್ರಗಳು ಬಿಡುಗಡೆಯಾಗುತ್ತಿವೆ. ಸ್ಯಾಂಡಲ್​ವುಡ್​ನಲ್ಲಿ ಕಳೆದ ಒಂದೆರಡು ತಿಂಗಳಿಂದ ಚಿತ್ರಗಳ ಬಿಡುಗಡೆ ಕೊಂಚ ಕಡಿಮೆ ಆಗಿತ್ತು. ವಾರಕ್ಕೆ ಮೂರೋ ಅಥವಾ ನಾಲ್ಕೋ ಚಿತ್ರಗಳು ಬಿಡುಗಡೆ ಆದರೆ ಅದೇ ಹೆಚ್ಚು ಎನ್ನುವಂತಿತ್ತು. ಆದರೆ, ಈ ವಾರ ಯಾವುದೇ ಸ್ಟಾರ್ ಸಿನಿಮಾಗಳಿಲ್ಲದೇ ಬೆಳ್ಳಿ ತೆರೆಯಲ್ಲಿ ಹೊಸ ಪ್ರತಿಭೆಗಳ ಚಿತ್ರಗಳ ಬಿಡುಗಡೆ ಸಂಖ್ಯೆ ಹೆಚ್ಚಾಗಿದೆ. ಹಾಗಾದ್ರೆ ಈ ಶುಕ್ರವಾರ ಎಷ್ಟು ಸಿನಿಮಾಗಳು ಬಿಡುಗಡೆ ಆಗುತ್ತಿವೆ ಎಂಬುದರ ಮಾಹಿತಿ …

Read More »

ದಾವಣಗೆರೆ: ನೂರು ದಿನ ನೀರು ಹರಿಸುವುದಾಗಿ ಹೇಳಿ ಸರ್ಕಾರ ಮಾತಿಗೆ ತಪ್ಪಿದೆ ಎಂದು ರೈತರ ಪ್ರತಿಭಟನೆ, ಆಕ್ರೋಶ

ದಾವಣಗೆರೆ : ಭದ್ರಾ ಡ್ಯಾಂನಿಂದ ನೂರು ದಿನ ನೀರು ಬಿಡುತ್ತೇವೆ ಎಂದು ಸರ್ಕಾರ ಆದೇಶ ಹೊರಡಿಸಿದ ಬೆನ್ನಲ್ಲೇ ದಾವಣಗೆರೆ ಜಿಲ್ಲೆಯ ರೈತರು ಭತ್ತ ನಾಟಿ ಮಾಡಿದ್ದರು. ದಾವಣಗೆರೆ ಅಚ್ಚುಕಟ್ಟು ಪ್ರದೇಶದಲ್ಲಿ ಬರೋಬ್ಬರಿ ಒಂದೂವರೆ ಲಕ್ಷ ಎಕರೆಯಲ್ಲಿ ಭತ್ತವನ್ನು ರೈತರು ನಾಟಿ ಮಾಡಿ ಈಗಾಗಲೇ ಎರಡು ಬಾರಿ ಗೊಬ್ಬರ ಹಾಕಿದ್ದಾರೆ. ಆದರೆ, ರಾಜ್ಯ ಸರ್ಕಾರ ಇದ್ದಕ್ಕಿದ್ದಂತೆ ನೀರು ನಿಲ್ಲಿಸಿರುವುದು ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಇದರಿಂದಾಗಿ ಆಕ್ರೋಶಗೊಂಡಿರುವ ರೈತರು ಬೀದಿಗಿಳಿದು ರಸ್ತೆ ತಡೆ ನಡೆಸಿ, …

Read More »

ಚಲಿಸುತ್ತಿದ್ದ ಟ್ಯಾಕ್ಸಿಯಲ್ಲಿ 14 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ: ಇಬ್ಬರು ದುರುಳರು ಅರೆಸ್ಟ್​

ಮುಂಬೈ (ಮಹಾರಾಷ್ಟ್ರ) : ಅಪ್ರಾಪ್ತರ ಮೇಲೆ ಅತ್ಯಾಚಾರವೆಸಗಿದ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕಾನೂನು ತರಲು ಕೇಂದ್ರ ಸರ್ಕಾರ ಉದ್ದೇಶಿಸಿದ್ದರ ನಡುವೆ, ಮುಂಬೈನಲ್ಲಿ ಚಲಿಸುವ ಟ್ಯಾಕ್ಸಿಯಲ್ಲಿಯೇ 14 ವರ್ಷದ ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಆರೋಪ ಕೇಳಿಬಂದಿದೆ. ಕೇಸ್​ಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಸೆಪ್ಟೆಂಬರ್​ 18 ರಂದು ಪ್ರಕರಣ ನಡೆದಿದೆ. ಆರೋಪಿಗಳಾದ ಸಲ್ಮಾನ್ ಶೇಖ್ (26) ಮತ್ತು ಟ್ಯಾಕ್ಸಿ ಚಾಲಕ ಪ್ರಕಾಶ್ ಪಾಂಡೆ ಎಂಬ ಇಬ್ಬರನ್ನು ಲೈಂಗಿಕ ಅಪರಾಧಗಳಿಂದ …

Read More »

ಮೈಸೂರು ದಸರಾ -2023.. ಅಂಬಾರಿ ಹೊರುವ ಆನೆಗೆ ಸಿದ್ಧವಾಗುತ್ತಿದೆ ನಮ್ದಾ

ಮೈಸೂರು : ಐತಿಹಾಸಿಕ ಮೈಸೂರು ದಸರಾಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ದಸರಾ ಹಬ್ಬದ ಪ್ರಮುಖ ಕೇಂದ್ರ ಬಿಂದುವಾದ ಜಂಬೂಸವಾರಿಗೆ ಗಜಪಡೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಗಜಪಡೆಗೆ ಭಾರ ಹೊರುವ ತಾಲೀಮು ಈಗಾಗಲೇ ಆರಂಭವಾಗಿದ್ದು, ಜಂಬೂಸವಾರಿ ದಿನ ಅಂಬಾರಿ ಹೊರುವ ಅಭಿಮನ್ಯು ಆನೆಯ ಬೆನ್ನಿನ ಮೇಲೆ ಹಾಕುವ ನಮ್ದಾವನ್ನು ಇಲ್ಲಿ ಸಿದ್ಧಪಡಿಸಲಾಗುತ್ತಿದೆ. ಜಂಬೂಸವಾರಿಯ ಪ್ರಮುಖ ಆಕರ್ಷಣೆ ಎಂದರೆ ಚಿನ್ನದ ಅಂಬಾರಿ ಮತ್ತು ಅಂಬಾರಿ ಹೊರುವ ಆನೆ. ಅಂಬಾರಿ ಹೊರುವ ಆನೆಯು 750 ಕೆಜಿ ಚಿನ್ನದ ಅಂಬಾರಿಯನ್ನು …

Read More »

ಕಾವೇರಿ ವಿವಾದ: ನೀರಿನ ವಿಚಾರದಲ್ಲಿ ರಾಜಕೀಯ ಇಲ್ಲ- ಸಚಿವ ಜಿ ಪರಮೇಶ್ವರ್

ಬೆಂಗಳೂರು: ಇವತ್ತು ಕಾವೇರಿ ನೀರಿನ ವಿಚಾರದಲ್ಲಿ ತೀರ್ಪು ಬಂದಿದೆ. ನೀರೇ ಇಲ್ಲದೇ ಇರುವ ಸಂದರ್ಭದಲ್ಲಿ ನಮ್ಮ ಅಹವಾಲು ಸರಿಯಾದ ರೀತಿ ಕೇಳಿದ್ದರೂ ನ್ಯಾಯಾಲಯವು ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸುವಂತೆ ಹೇಳಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡೆಡ್ ಸ್ಟೋರೇಜ್ ಹೊರತುಪಡಿಸಿ ಉಳಿಯುವ 10 ಟಿಎಂಸಿ ನೀರಿನಲ್ಲಿ ನಾವು ನೀರು ಬಿಡುವುದು ಹೇಗೆ? ಎಂದು ಪ್ರಶ್ನಿಸಿದರು. ಕಾವೇರಿ ನೀರು …

Read More »

5 ಗ್ಯಾರಂಟಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ಹೈಕೋರ್ಟ್​ನಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು : ರಾಜ್ಯದಲ್ಲಿ ಆರ್ಥಿಕವಾಗಿ ದುರ್ಬಲವಾಗಿರುವ ಹಾಗೂ ಅವಕಾಶ ವಂಚಿತ ವರ್ಗಗಳ ಕಲ್ಯಾಣಕ್ಕೆ ಜಾರಿಗೆ ತರಲಾಗಿರುವ 5 ಗ್ಯಾರಂಟಿ ಯೋಜನೆಗಳು ಸಂವಿಧಾನ ಮತ್ತು ಚುನಾವಣಾ ಆಯೋಗದ ನಿಯಮಗಳು ಹಾಗೂ ಮಾರ್ಗಸೂಚಿಗಳ ಪ್ರಕಾರವೇ ಘೋಷಣೆ ಮಾಡಿದ್ದು, ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್​ಗೆ ಲಿಖಿತ ಸ್ಪಷ್ಟನೆ ಸಲ್ಲಿಸಿದ್ದಾರೆ.   ಗ್ಯಾರಂಟಿಗಳ ಹೆಸರಲ್ಲಿ ಮತದಾರರಿಗೆ ಆಮಿಷವೊಡ್ಡುವ ಮೂಲಕ ಚುನಾವಣಾ ಅಕ್ರಮವೆಸಗಿ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೈಸೂರಿನ ವರುಣಾ ಕ್ಷೇತ್ರದಿಂದ ಆಯ್ಕೆಯನ್ನು ಅಸಿಂಧುಗೊಳಿಸಬೇಕು …

Read More »

ಡಾ ರಾಜ್ ಕುಮಾರ್ ಅಕಾಡೆಮಿ ಜೊತೆ ಸರ್ಕಾರ ಒಡಂಬಡಿಕೆ : ವಿದ್ಯಾರ್ಥಿಗಳ ವಿಕಾಸವೇ ನಮ್ಮ ಮುಖ್ಯ ಗುರಿ.. ಸಚಿವ ಬಿ ನಾಗೇಂದ್ರ

ಬೆಂಗಳೂರು : ಡಾ. ರಾಜ್ ಕುಮಾರ್ ಅವರ ಇಡೀ ಕುಟುಂಬ ಸಮಾಜ ಸೇವೆಯ ಜೊತೆಗೆ ಶಿಕ್ಷಣದ ಮೌಲ್ಯಗಳನ್ನು ಹೆಚ್ಚಿಸಲು ರಾಜ್​ಕುಮಾರ್ ಅಕಾಡೆಮಿಯನ್ನು ಹುಟ್ಟುಹಾಕಿದೆ. ಇಂತಹ ಸಂಸ್ಥೆಯೊಂದಿಗೆ ನಾವು ಇಂದು ಒಡಂಬಡಿಕೆ ಮಾಡಿಕೊಂಡಿದ್ದು ಬಹಳ ಸಂತಸ ತಂದಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ ನಾಗೇಂದ್ರ ಹೇಳಿದರು. ವಿಕಾಸಸೌಧದಲ್ಲಿ ಇಂದು ರಾಜ್ಯ ಎನ್‌ಎಸ್‌ಎಸ್ ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಡಾ. …

Read More »

ಮೈಸೂರು ವಿವಿ ಕುಲಪತಿಯಾಗಿ ಲೋಕ್​ನಾಥ್ ಮುಂದುವರಿಕೆಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಕುಲಪತಿ ಆಗಿರುವ ಪ್ರೊ. ಎನ್ ಕೆ ಲೋಕನಾಥ್ ಅವರಿಗೆ ತಾತ್ಕಾಲಿಕ ರಿಲೀಫ್​ ನೀಡಿರುವ ಹೈಕೋರ್ಟ್​ ಮುಂದಿನ ಆದೇಶದವರೆಗೆ ಕುಲಪತಿ ಹುದ್ದೆಯಲ್ಲಿ ಮುಂದುವರಿಯಲು ಅವಕಾಶ ಮಾಡಿಕೊಟ್ಟಿದೆ. ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯು ಖಾಲಿಯಾಗುವಂತಿಲ್ಲ. ಈ ಹಿನ್ನೆಲೆ ಹುದ್ದೆಯಲ್ಲಿ ಮುದುವರೆಯಬೇಕು ಎಂದು ಸೂಚನೆ ನೀಡಿದ ನ್ಯಾಯಪೀಠ, ಈ ಸಂಬಂಧ ಯಾವುದೇ ಆಡಳಿತಾತ್ಮಕ ನಿರ್ಧಾರಗಳನ್ನು ಕೈಗೊಳ್ಳುವಂತಿಲ್ಲ ಎಂದು ತಿಳಿಸಿದೆ. ಮೈಸೂರು ವಿವಿ ಕುಲಪತಿ ಹುದ್ದೆಗೆ ಲೋಕನಾಥ್‌ ಅವರನ್ನು ನೇಮಿಸಿ 2023ರ ಮಾರ್ಚ್ …

Read More »

ಬನವಾಸಿಯಲ್ಲಿ ಅರಣ್ಯ ಇಲಾಖೆಯಿಂದ ಉದ್ಯಾನವನಕ್ಕೆ ಡಿಜಿಟಲ್ ಸ್ಪರ್ಶ

ಶಿರಸಿ: ಕನ್ನಡದ ಮೊದಲ ರಾಜಧಾನಿ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯ ಇತಿಹಾಸವನ್ನು ಈಗ ಇಲ್ಲಿಯ ಗಿಡಮರಗಳು ಸಾರುತ್ತಿವೆ. ಅದೂ ಡಿಜಿಟಲ್ ತಂತ್ರಜ್ಞಾನದ ಮೂಲಕ ಎಂಬುದು ವಿಶೇಷ. ಬನವಾಸಿಯ ಸಾಲುಮರದ ತಿಮ್ಮಕ್ಕ ಉದ್ಯಾನವನಕ್ಕೆ ಡಿಜಿಟಲ್ ಸ್ಪರ್ಶ ನೀಡಿರುವ ಅರಣ್ಯ ಇಲಾಖೆ, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಬನವಾಸಿಯ ಇತಿಹಾಸವನ್ನು ತಿಳಿಸುವ ಮಾದರಿ ಕಾರ್ಯ ಕೈಗೊಂಡಿದೆ. ಕದಂಬ ನಡಿಗೆ ಎಂಬ ನೂತನ ಕಲ್ಪನೆಯನ್ನು ಜಾರಿಗೆ ತಂದಿದೆ. ಶಿರಸಿ ತಾಲೂಕಿಗೆ ಒಳಪಡುವ ಬನವಾಸಿ ಕದಂಬರಾಳಿದ ಪ್ರದೇಶ. ಕನ್ನಡದ ಪ್ರಥಮ …

Read More »