ಬೆಂಗಳೂರು : ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬಂಧಿಸಿದರೆ, ದೊಡ್ಡವರ ಹೆಸರು ಬಹಿರಂಗವಾಗಲಿದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದ ಬಂಧಿತೆ ಚೈತ್ರಾ ಕುಂದಾಪುರ ಸಿಸಿಬಿ ವಿಚಾರಣೆ ವೇಳೆ ಮೌನವಾಗಿದ್ದಾರೆ. ಉದ್ಯಮಿ ಗೋವಿಂದ ಬಾಬು ಪೂಜಾರಿ 5 ಕೋಟಿ ರೂ. ವಂಚನೆ ಆರೋಪದಡಿ ಬಂಧಿತರಾಗಿದ್ದ ಚೈತ್ರಾ, ಮಾಧ್ಯಮಗಳ ಮುಂದೆ ಸ್ವಾಮೀಜಿ ಹಾಲಶ್ರೀ ಬಂಧಿಸಿದರೆ ದೊಡ್ಡವರ ಹೆಸರು ಹೊರಬರಲಿದೆ ಎಂದು …
Read More »Monthly Archives: ಸೆಪ್ಟೆಂಬರ್ 2023
ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ.
ಬೆಳಗಾವಿ: ಸ್ವಾತಂತ್ರ್ಯ ಸಂಗ್ರಾಮಕ್ಕೆ ಜನರನ್ನು ಒಟ್ಟುಗೂಡಿಸಲು ಬೆಳಗಾವಿಯಲ್ಲಿ ಸ್ವತಃ ಲೋಕಮಾನ್ಯ ಬಾಲಗಂಗಾಧರ ತಿಲಕರೇ ಆರಂಭಿಸಿದ್ದ ಸಾರ್ವಜನಿಕ ಗಣೇಶೋತ್ಸವ 119ನೇ ವರ್ಷಕ್ಕೆ ಕಾಲಿಟ್ಟಿದೆ. ಇದು ರಾಜ್ಯದಲ್ಲೇ ಮೊಟ್ಟ ಮೊದಲ ಸಾರ್ವಜನಿಕ ಗಣಪತಿ ಉತ್ಸವ ಮಂಡಳಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಇತಿಹಾಸ: ಅದು ಬ್ರಿಟಿಷರ ವಿರುದ್ಧ ಚಳುವಳಿ ನಡೆಯುತ್ತಿದ್ದ ಸಂದರ್ಭ. ಹೇಗಾದರೂ ಮಾಡಿ ಜನರನ್ನು ಸಂಘಟಿಸಿ, ಹೋರಾಟ ತೀವ್ರಗೊಳಿಸಬೇಕೆಂಬ ಉದ್ದೇಶದಿಂದ ಮನೆಗಳಿಗೆ ಸೀಮಿತವಾಗಿದ್ದ ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸಲು ಬಾಲಗಂಗಾಧರ ತಿಲಕರು ಕರೆ ನೀಡಿದ್ದರು. 1893ರಲ್ಲಿ ಮಹಾರಾಷ್ಟ್ರದ …
Read More »ಕೆನಡಾದಲ್ಲಿ ಮತ್ತೊಬ್ಬ ಖಲಿಸ್ತಾನ ಉಗ್ರನ ಹತ್ಯೆ: ದುಷ್ಕರ್ಮಿಗಳ ಗುಂಡೇಟಿಗೆ ಸುಖ್ದೂಲ್ ಸಿಂಗ್ ಬಲಿ
ನವದೆಹಲಿ : ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಕಾರಣ ಕೆನಡಾ ಮತ್ತು ಭಾರತದ ಮಧ್ಯೆ ರಾಜತಾಂತ್ರಿಕ ಸಂಬಂಧ ಹಳಸಿದ ಬೆನ್ನಲ್ಲೇ ಇನ್ನೊಬ್ಬ ಖಲಿಸ್ತಾನ ಉಗ್ರ ಮತ್ತು ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ ಸುಖ್ದೂಲ್ ಸಿಂಗ್ ಅಲಿಯಾಸ್ ಸುಖ ಡುನೆಕೆ ಎಂಬಾತನ ಹತ್ಯೆ ನಡೆದಿದೆ. ಈಚೆಗೆ ನಡೆದ ಗುಂಡಿನ ದಾಳಿಯಲ್ಲಿ ಈತ ಮೃತಪಟ್ಟಿದ್ದಾನೆ ಎಂದು ತನಿಖಾ ಸಂಸ್ಥೆಗಳು ದೃಢಪಡಿಸಿವೆ. ಕೆನಡಾದ ವಿನ್ನಿಪೆಗ್ನಲ್ಲಿ ಸೆಪ್ಟೆಂಬರ್ 18 ರಂದು ನಡೆದ ಗುಂಡಿನ ಚಕಮಕಿಯಲ್ಲಿ ಸುಖ್ದೂಲ್ …
Read More »ಕೈ, ಕಾಲು ಕಟ್ಟಿ ಮನೆ ದರೋಡೆ; ₹1 ಕೋಟಿ ಮೌಲ್ಯದ ಚಿನ್ನ, ನಗದು ದೋಚಿ ದುಷ್ಕರ್ಮಿಗಳು ಪರಾರಿ
ಹುಬ್ಬಳ್ಳಿ: ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ದರೋಡೆಕೋರರು ಹುಬ್ಬಳ್ಳಿಯಲ್ಲಿ ದುಷ್ಕೃತ್ಯ ಎಸಗಿದ್ದಾರೆ. ಅಂದಾಜು ಒಂದು ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿದ್ದಾರೆ. ಇಲ್ಲಿನ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್ನ ಮನೆಯೊಂದರಲ್ಲಿ ತಡರಾತ್ರಿ ಘಟನೆ ನಡೆದಿದೆ. ವಿದ್ಯಾಮಂದಿರ ಬುಕ್ ಡಿಪೋ ಮಾಲೀಕ ಉಲ್ಲಾಸ ದೊಡ್ಡಮನಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆ ಕಿಟಕಿಯ ಕಬ್ಬಿಣದ ಗ್ರಿಲ್ ತುಂಡರಿಸಿ ಮನೆಯೊಳಗೆ ನುಗ್ಗಿದ ದರೋಡೆಕೋರರು, ಮನೆಯಲ್ಲಿದ್ದವರ ಕೈ, ಕಾಲು ಕಟ್ಟಿ ಹಾಕಿ ನಗ, …
Read More »ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿದ ಕೇಂದ್ರ ಕಾನೂನು ಸಚಿವ
ನವದೆಹಲಿ: ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಮಹತ್ವದ ಮಸೂದೆಯನ್ನು ಇಂದು ರಾಜ್ಯಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ ರಾಮ್ ಮೇಘವಾಲ್ ಮಂಡಿಸಿದರು. ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲ್ಪಟ್ಟ 128ನೇ ಸಂವಿಧಾನ ತಿದ್ದುಪಡಿ ಮಸೂದೆಗೆ ಭಾರಿ ಬೆಂಬಲ ವ್ಯಕ್ತವಾಗಿತ್ತು. ಮಸೂದೆ ಮಂಡಿಸಿದ ಸಚಿವರು, ಕಳೆದ ಒಂಬತ್ತು ವರ್ಷಗಳಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು. ಮಹಿಳೆಯರ ಹೆಸರಿನಲ್ಲಿ ಶೂನ್ಯ …
Read More »ದೆಹಲಿಗೆ ಪ್ರಯಾಣ ಬೆಳೆಸಿದ ಮಾಜಿ ಸಿಎಂ H.D.K.
ಬೆಂಗಳೂರು : ಬಹುದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಚರ್ಚೆ ಆಗುತ್ತಿರುವ ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಇಂದು ಅಂತಿಮ ಮುದ್ರೆ ಬೀಳುವ ಸಾಧ್ಯತೆ ಇದೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಲು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಮೈತ್ರಿಗೆ ಸಂಬಂಧಿಸಿದಂತೆ ಈಗಾಗಲೇ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಬಿಜೆಪಿ ಹೈಕಮಾಂಡ್ ಜೊತೆ ಚರ್ಚಿಸಿ ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಈಗ …
Read More »ಕಾವೇರಿ ಪರ ದನಿ ಎತ್ತಿದ ರಾಘವೇಂದ್ರ ರಾಜ್ಕುಮಾರ್
ಬೆಂಗಳೂರು: ಕಾವೇರಿ ವಿಚಾರವಾಗಿ ಕನ್ನಡ ಚಿತ್ರರಂಗ ದನಿ ಎತ್ತಿದೆ. ವಿಕಾಸಸೌಧದಲ್ಲಿ ಇಂದು ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ನಟ ರಾಘವೇಂದ್ರ ರಾಜ್ಕುಮಾರ್, ನನ್ನ ತಂದೆ ಕೆಲ ವಿಚಾರ ಕಲಿಸಿಕೊಟ್ಟು ಹೋಗಿದ್ದಾರೆ. ನಾಡು, ನುಡಿ, ಭಾಷೆ ವಿಚಾರ ಬಂದಾಗ ಜೊತೆಗಿರಬೇಕೆಂದು ಹೇಳಿದ್ದಾರೆ. ಅದಕ್ಕಾಗಿ ಪ್ರಾಣ ಮುಡಿಪಾಗಿಡುತ್ತೇವೆ ಎಂದು ತಿಳಿಸಿದರು. ಹೋರಾಟಕ್ಕೆ ಬರುತ್ತೇವೆ: ಸದ್ಯ ಈ ವಿಚಾರ ನ್ಯಾಯಾಲಯದಲ್ಲಿದೆ. ನಮ್ಮ ನಮ್ಮ ಪಾತ್ರ ಬಂದಾಗ ಜನರೇ ನಮ್ಮನ್ನು ಕರೆಸಿಕೊಳ್ಳುತ್ತಾರೆ, ಆಗ ಬರುತ್ತೇವೆ. ಕೊನೆವರೆಗೂ ನಾವು ಜನರ …
Read More »ಹಾಲಶ್ರೀ ಮಠದಲ್ಲಿದ್ದ 56 ಲಕ್ಷ ಸೇರಿ 76 ಲಕ್ಷ ನಗದು ವಶ: ಚೈತ್ರಾಳಿಂದ 2 ಕೋಟಿ ಹಣ, ಚಿನ್ನಾಭರಣ ಜಪ್ತಿ- ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ
ಬೆಂಗಳೂರು : ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವ ಆರೋಪದಡಿ ಬಂಧಿತರಾಗಿರುವ 8 ಮಂದಿ ಆರೋಪಿಗಳ ವಿಚಾರಣೆಯನ್ನ ಸಿಸಿಬಿ ತನಿಖಾಧಿಕಾರಿಗಳು ಚುರುಕುಗೊಳಿಸಿದ್ದಾರೆ. ಹಾಲಶ್ರೀ ಮಠಕ್ಕೆ ಹಣ ತಲುಪಿಸುವಂತೆ ಆರೋಪಿತ ಅಭಿನವ ಹಾಲಶ್ರೀ ಚಾಲಕ ರಾಜು ಎಂಬಾತ ತನಗೆ 56 ಲಕ್ಷವನ್ನ ನೀಡಿರುವ ಬಗ್ಗೆ ಪ್ರಣವ್ ಎಂಬುವರು ಮಠಕ್ಕೆ ಹಣ ತಲುಪಿಸಿರುವ ಕುರಿತು ನಿನ್ನೆ ವಿಡಿಯೋ ಮಾಡಿದ್ದರು. ಬಳಿಕ ಸಿಸಿಬಿಗೂ ಮಾಹಿತಿ ನೀಡಿದ್ದರು. ಈ ಬಗ್ಗೆ ಕಾರ್ಯಪ್ರವೃತ್ತಗೊಂಡ ಸಿಸಿಬಿ ಹಿರೇಹಡಗಲಿಯ ಹಾಲಶ್ರೀ ಮಠಕ್ಕೆ ತೆರಳಿ …
Read More »ಕಾವೇರಿ ಪ್ರಾಧಿಕಾರದ ಮುಂದೆ ರಾಜ್ಯ ಸರ್ಕಾರ ವಾಸ್ತವ ಸ್ಥಿತಿಯನ್ನು ತಿಳಿಸುವಲ್ಲಿ ವಿಫಲ
ಮೈಸೂರು: ಸುಪ್ರೀಂ ಕೋರ್ಟ್ನ ಬಗ್ಗೆ ನಮಗೆ ಗೌರವವಿದೆ. ಆದರೆ ನಮಗೆ ಮೊದಲು ನೀರು ಬೇಕು, ನಾವು ಬದುಕಬೇಕು. ಆನಂತರ ಬೇರೆಯವರಿಗೆ ನೀರು ಕೊಡಬೇಕು. ಆದರೆ ನಮ್ಮಲ್ಲೇ ನೀರಿಲ್ಲ. ಈ ಸಂದರ್ಭದಲ್ಲಿ ನೀರು ಕೊಡಿ ಎಂದು ಹೇಳಿದರೆ ಹೇಗೆ? ಈ ಕಾವೇರಿ ನೀರಿಗಾಗಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ರೈತ ಸಂಘದ ಮುಖಂಡ ನಂಜುಂಡೇಗೌಡ ಹೇಳಿದರು. ನಗರದ ಕಾಡಾ ಕಚೇರಿಯ ಮುಂಭಾಗ ಪ್ರತಿಭಟನೆಯಲ್ಲಿ ಭಾಗವಹಿಸಿ ನಂತರ ಈಟಿವಿ ಭಾರತ ಜೊತೆ ಮಾತನಾಡಿದ ರೈತ ಸಂಘದ ಮುಖಂಡ ನಂಜುಂಡೇಗೌಡ …
Read More »ಅನಾರೋಗ್ಯದಿಂದ ಮೃತಪಟ್ಟ ಯೋಧ: ಸ್ವಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಚಿಕ್ಕೋಡಿ: ಅನಾರೋಗ್ಯದಿಂದ ಮೃತಪಟ್ಟ ಯೋಧನ ಅಂತ್ಯ ಸಂಸ್ಕಾರವನ್ನು ಸ್ವಗ್ರಾಮ ಸಿದ್ದಾಪುರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿಸಲಾಯಿತು. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸಿದ್ದಾಪುರ ಗ್ರಾಮದ ಯೋಧ ಸಂತೋಷ್ ಯಳಗೂಡ (30) ಸೆಪ್ಟೆಂಬರ್ 19ರಂದು ಮಧ್ಯರಾತ್ರಿ ಎರಡು ಗಂಟೆಗೆ ದೆಹಲಿಯ ಮಿಲಿಟರಿ ಆಸ್ಪತ್ರೆಯಲ್ಲಿ ಕಾಮಾಲೆ ರೋಗದಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಇಂದು ಅವರ ಹುಟ್ಟುರಾದ ಸಿದ್ದಾಪುರ ಗ್ರಾಮಕ್ಕೆ ಪಾರ್ಥಿವ ಶರೀರವನ್ನು ತಂದಿದ್ದು, ರಸ್ತೆ ಉದ್ದಕ್ಕೂ ಗ್ರಾಮದ ಜನರು ಮತ್ತು ಶಾಲೆ ಮಕ್ಕಳು ಪುಷ್ಪ …
Read More »