Breaking News

Monthly Archives: ಸೆಪ್ಟೆಂಬರ್ 2023

ಮರಾಠ ಮೀಸಲಾತಿಗೆ ಸಿಎಂ ಶಿಂಧೆ ಭರವಸೆ:

ಜಲ್ನಾ (ಮಹಾರಾಷ್ಟ್ರ): ಮರಾಠಾ ಮೀಸಲಾತಿಯ ಬೇಡಿಕೆಗಾಗಿ ಜಲ್ನಾದಲ್ಲಿ ಕಳೆದ 16 ದಿನಗಳಿಂದ ನಡೆಯುತ್ತಿದ್ದ ಉಪವಾಸ ಸತ್ಯಾಗ್ರಹ ಕೊನೆಗೊಂಡಿದೆ. ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ನೀಡದ ಭರವಸೆ ಮೇರೆಗೆ ಧರಣಿ ನಡಸುತ್ತಿದ್ದ ಮನೋಜ್ ಜಾರಂಜ್ ಅವರು ಉಪವಾಸವನ್ನು ಹಿಂಪಡೆದಿದ್ದಾರೆ. ಸಿಎಂ ಶಿಂಧೆ ಅವರ ಕೈಯಿಂದ ಮನೋಜ್​ ಅವರು ಜ್ಯೂಸ್​ ಕುಡಿಯುವ ಮೂಲಕ ಉಪವಾಸ ಕೊನೆಗೊಂಡಿತು. ಈ ವೇಳೆ ಮಾತನಾಡಿದ ಮನೋಜ್ ಜಾರಂಗೆ, ಮರಾಠ ಮೀಸಲಾತಿ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ಒಂದು ತಿಂಗಳ ಕಾಲಾವಕಾಶ …

Read More »

ತಮಿಳುನಾಡು ಸರ್ಕಾರ ಪ್ರತಿ ಮನೆಯೊಡತಿಗೆ ತಲಾ ₹1000 ರೂ. ನೀಡುವ ಯೋಜನೆಯನ್ನು ನಾಳೆ (ಸೆ. 15 ರಂದು) ಜಾರಿಗೆ ತರಲಿದೆ.

ಚೆನ್ನೈ (ತಮಿಳುನಾಡು): ರಾಜ್ಯದ ಕಾಂಗ್ರೆಸ್​ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಂತೆಯೇ ತಮಿಳುನಾಡು ಸರ್ಕಾರ ಇದೀಗ ಪ್ರತಿ ಕುಟುಂಬದ ಅರ್ಹ ಯಜಮಾನಿಗೆ ಪ್ರತಿ ತಿಂಗಳು ತಲಾ 1000 ರೂ ಆರ್ಥಿಕ ನೆರವು ನೀಡಲು ಮುಂದಾಗಿದೆ. ಇದಕ್ಕಾಗಿ ಆ ರಾಜ್ಯದ 1.06 ಕೋಟಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಬೃಹತ್ ಯೋಜನೆಗೆ ನಾಳೆ ( ಸೆ.15 ರಿಂದ) ಚಾಲನೆ ನೀಡಲಿದೆ. ಈ ಬಗ್ಗೆ ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, …

Read More »

ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ!

ಹಾವೇರಿ: ಕ್ಷುಲ್ಲಕ ಕಾರಣಕ್ಕಾಗಿ ವಿದ್ಯುತ್ ಕಂಬಕ್ಕೆ ಕಟ್ಟಿ ವ್ಯಕ್ತಿಯ ಥಳಿಸಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮೂಕಬಸರಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನ ರಾಮಪ್ಪ ಹರಿಜನ ಎಂದು ಗುರುತಿಸಲಾಗಿದೆ. ಡಿಶ್ ಟಿವಿ ಕೇಬಲ್ ಕತ್ತರಿಸಿದ ಆರೋಪದ ಹಿನ್ನೆಲೆ ವ್ಯಕ್ತಿಯನ್ನ ವಿದ್ಯುತ್ ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಏರಿಯಾದಲ್ಲಿ ಕೆಇಬಿ ಸಿಬ್ಬಂದಿ ಮರದ ಟೊಂಗೆಗಳನ್ನ ಕತ್ತರಿಸಿ ಹೋಗಿದ್ದಾರೆ. ಅದರ ಜೊತೆಗೆ ಕೇಬಲ್ ಟಿವಿ ವೈಯರ್ ಕತ್ತರಿಸಿ ಹೋಗಿದ್ದಾರೆ. …

Read More »

ರಾಜ್ಯ ಸರ್ಕಾರ ಬರ ಘೋಷಣೆ ಮಾಡಿದೆ. ಒಟ್ಟು 161 ತೀವ್ರ ಮತ್ತು 34 ಸಾಧಾರಣ ಬರಪೀಡಿತ ತಾಲೂಕುಗಳೆಂದು ಆದೇಶ ಹೊರಡಿಸಿದೆ.

ಬೆಂಗಳೂರು : ಕೊನೆಗೂ ರಾಜ್ಯ ಸರ್ಕಾರ ಬರ ಘೋಷಣೆ ಮಾಡಿದೆ. 161 ತಾಲೂಕುಗಳನ್ನು ತೀವ್ರ ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕುಗಳೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ.   2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 195 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಕಂಡುಬಂದಿದ್ದು, ಈ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲ್ಲೂಕುಗಳು ಮತ್ತು 34 ಸಾಧಾರಣ ಬರಪೀಡಿತ ತಾಲೂಕುಗಳೆಂದು ತಕ್ಷಣದಿಂದ ಜಾರಿಗೆ ಬರುವಂತೆ …

Read More »

ರಾಜ್ಯ- ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ ಎಂದು ಕೋಡಿಮಠ ಶ್ರೀ ಭವಿಷ್ಯ ನುಡಿದಿದ್ದಾರೆ.

ದಾವಣಗೆರೆ : ಕಾರ್ತಿಕ ಮಾಸ, ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ ಎಂದು ಕೋಡಿಮಠ ಮಹಾಸಂಸ್ಥಾನದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಜಿಲ್ಲೆಯ ಹೊನ್ನಾಳಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯ ರಾಷ್ಟ್ರದಲ್ಲಿ ನಡೆಯುವ ಅವಘಡಗಳಿಂದ ಪಾರು ಮಾಡಿದ್ರೇ ಮುಂದಿನ ಭವಿಷ್ಯ ಹೇಳುವೆ, ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರುತ್ತದೆ. ಆತಂಕ ಪಡುವ ಅಗತ್ಯವಿಲ್ಲ ಎಂದರು. ಅನೇಕ ತಪ್ಪು ಒಪ್ಪುಗಳು ಪ್ರಾಣಿಗಳಲ್ಲಾಗುತ್ತಿವೆ ಹಾಗೂ …

Read More »

ಗೂಗಲ್​ನೊಂದಿಗೆ ಬೈಲಹೊಂಗಲ‌ನ ಅಂಧ ಸರ್ಕಾರಿ ನೌಕರನೊಬ್ಬ ಉತ್ತಮ ಒಡನಾಟ ಹೊಂದಿದ್ದಾರೆ. ಇವರು ಗೂಗಲ್ ಆಯಪ್​​ ​ಯೊಂದರಲ್ಲಿ ಕನ್ನಡ ಭಾಷೆ ಸೇರಿಸುವ ಕಾರ್ಯವನ್ನು ಯಶಸ್ವಿಗೊಳಿಸಿದ್ದಾರೆ.

ಬೆಳಗಾವಿ: ಅಂಧರಿಗೆ ಅನುಕೂಲ‌ ಆಗಲಿ ಎಂದು ಗೂಗಲ್ ಒಂದು ತಂತ್ರಾಂಶವನ್ನು ಕಂಡು ಹಿಡಿದಿತ್ತು. ಆದರೆ, ಅದು ಕನ್ನಡದಲ್ಲಿ ಇರಲಿಲ್ಲ. ಇದರಿಂದ ಕನ್ನಡವಷ್ಟೇ ಬಲ್ಲ ಅಂಧರು ಈ ತಂತ್ರಾಂಶವನ್ನು ಬಳಸಲು ಪರದಾಡಬೇಕಿತ್ತು. ಮನಗಂಡ ಬೈಲಹೊಂಗಲ‌ದ ಅಂಧ ಸರ್ಕಾರಿ ನೌಕರನೊಬ್ಬ ನಿರಂತರವಾಗಿ ಎರಡು ವರ್ಷ ಶ್ರಮವಹಿಸಿ ಕೊನೆಗೂ ಆ ಆಯಪ್​​ನಲ್ಲಿ ಕನ್ನಡ ಭಾಷೆ ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಪ್ಪು ಕನ್ನಡಕ ಹಾಕಿಕೊಂಡಿರುವ ಬೈಲಹೊಂಗಲ ಪಟ್ಟಣದ ಸಿದ್ದಲಿಂಗೇಶ್ವರ ಮಹಾಂತೇಶ ಇಂಗಳಗಿ ಅವರೇ ಅಂಧರ ಪರವಾಗಿ‌ ಕಾರ್ಯನಿರ್ವಹಿಸಿ ಯಶಸ್ವಿಯಾಗಿದ್ದಾರೆ. …

Read More »

ಬರಗಾಲದ ವಿಚಾರದಲ್ಲಿ ನಮಗೆ ಯಾವ ಗೊಂದಲವೂ ಇಲ್ಲ.ಕಂದಾಯ ಸಚಿವ ಕೃಷ್ಣಬೈರೇಗೌಡ

ಹುಬ್ಬಳ್ಳಿ : ಬರಗಾಲದ ವಿಚಾರದಲ್ಲಿ ನಮಗೆ ಯಾವ ಗೊಂದಲವೂ ಇಲ್ಲ. ರೈತರನ್ನು ಗೊಂದಲಕ್ಕೀಡು ಮಾಡಿದ್ದು ಕೇಂದ್ರ ಸರ್ಕಾರ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಆರೋಪಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ನಿನ್ನೆ ಬರಗಾಲ ಘೋಷಣೆ ಮಾಡಿದ್ದೇವೆ. 195 ತಾಲೂಕುಗಳನ್ನು ಬರಪೀಡಿತವೆಂದುು ಘೋಷಿಸಿದ್ದೇವೆ. ಈ ಸಂಬಂಧ ಒಂದೂವರೆ ತಿಂಗಳಿಂದ ಕೆಲಸ ಮಾಡಿ ಬರಗಾಲ ಘೋಷಣೆ ಮಾಡಿದ್ದೇವೆ‌. ಕೇಂದ್ರ ಸರ್ಕಾರದ ಮಾನದಂಡಗಳಿಗೆ ಕೆಲ ತಾಲೂಕುಗಳು ಬರುತ್ತಿಲ್ಲ ಎಂದು ತಿಳಿಸಿದರು. ನಮಗೆ ಸರಿ ಮಾಡೋಕೆ …

Read More »

ಮಹಾರಾಷ್ಟ್ರದ ಪುಣೆ – ಬೆಂಗಳೂರು ಹೆದ್ದಾರಿಯಲ್ಲಿ ಐಸರ್​​​ ಟೆಂಪೋ ಲಾರಿ ಅಪಘಾತ ,ಕರ್ನಾಟಕದ ಮೂವರು ಸ್ಥಳದಲ್ಲೇ ಸಾವು

ಪುಣೆ( ಮಹಾರಾಷ್ಟ್ರ): ಇಲ್ಲಿನ ಪುಣೆ – ಬೆಂಗಳೂರು ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಐಸರ್​ ಟೆಂಪೋ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಅಪಘಾತದಲ್ಲಿ ಟೆಂಪೋ ಮಾಲೀಕ, ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಮೂವರೂ ಬೆಳಗಾವಿ ಜಿಲ್ಲೆಯವರು. ಬುಧವಾರ ರಾತ್ರಿ ಸತಾರಾ – ಖಂಡಾಲಾ ತಾಲೂಕಿನ ಧನಗರವಾಡಿ (ಈಗ ಖಂಡಾಲಾ) ಗ್ರಾಮದ ವ್ಯಾಪ್ತಿಯ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಐಸರ್​ ಟೆಂಪೋ ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಮೃತರ ಹೆಸರು ಮಂಜುನಾಥ …

Read More »

ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಟಾಪನೆಗೆ ಬಿಜೆಪಿ ಪಟ್ಟು

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ವಿಳಂಭ ಮಾಡುತ್ತಿರುವದನ್ನು‌ ಖಂಡಿಸಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಮಹಾನಗರ ಪಾಲಿಕೆಯಲ್ಲಿ ಮುತ್ತಿಗೆ ಹಾಕಿ ಮಹಾನಗರ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದರು. ಈದ್ಗಾ ಮೈದಾನಲ್ಲಿ ಅನುಮತಿ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕ ಅರವಿಂದ ಬೆಲ್ಲದ ನೇತೃತ್ವದ ನಿಯೋಗ ಕೂಡಲೇ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಇಲ್ಲದಿದ್ದರೆ ಇಲ್ಲಿಂದ ಎದ್ದು ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈದ್ಗಾ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬರುವ ಮುಂಚೆಯೇ …

Read More »

ಕರ್ತವ್ಯದ ಜೊತೆಗೆ ಪರಿಸರ ರಕ್ಷಣೆಗೆ ಮುಂದಾದ ಹಾರೂಗೇರಿ ಸಿಪಿಐ ರವಿಚಂದ್ರನ್

ವೀಕ್ಷಕರೇ ಇಲ್ಲೊಬ್ಬ ಪೊಲೀಸ್ ವೃತ್ತ ನಿರೀಕ್ಷಕ ತಮ್ಮ ಕರ್ತವ್ಯದ ಜೊತೆಗೆ ಪರಿಸರ ಬಗ್ಗೆ ಅಪರೂಪ ಕಾಳಜಿ ತೋರಿಸುತ್ತಿರುವುದು ಒಂದು ವಿಶೇಷ ಸಂಗತಿ. ಹಾಗಾದರೆ ಈ ವರದಿ ಎಲ್ಲಿಯದು ಪೋಲಿಸ್ ವ್ರತ ನಿರೀಕ್ಷಕರು ಯಾರು ಎನ್ನುವುದು ತಿಳಿಯಲು ಈ ವರದಿ ತಪ್ಪದೆ ನೋಡಿ ‌. ಕೊರೋನಾ ಎಂದರೆ ಎಲ್ಲರೂ ಭಯಬೀಳುವುದು ಸಹಜ ಯಾಕೆಂದರೆ ಕಳೆದ ಎರಡು ವರ್ಷಗಳ ಹಿಂದೆ ಭಯಂಕರ ಅನುಭವವನ್ನು ನೀಡಿದ್ದು ಎಲ್ಲರಿಗೂ ಗೊತ್ತಿರುವ ವಿಷಯ ಕೊರೋನಾ ಸಮಯದಲ್ಲಿ ಆಕ್ಸಿಜನ್ …

Read More »