ಹುಬ್ಬಳ್ಳಿ: ಸಚಿವ ಜಿ. ಪರಮೇಶ್ವರ್ ಮುಖ್ಯಮಂತ್ರಿ, ಸತೀಶ್ ಜಾರಕಿಹೊಳಿ ಉಪಮುಖ್ಯಮಂತ್ರಿ ಆಗಬೇಕೆಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರು ಸಾಂದರ್ಭಿಕವಾಗಿ ಹೇಳಿರಬಹುದು. ಆದರೆ ಮುಂದೊಂದು ದಿನ ದಲಿತರಿಗೆ ಅವಕಾಶ ಸಿಕ್ಕೇ ಸಿಗುತ್ತದೆ. ಅದಕ್ಕೆ ಕಾಯಬೇಕಷ್ಟೇ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿ.ಕೆ.ಹರಿಪ್ರಸಾದ್ ಅವರು ಒಳ್ಳೆಯ ದೃಷ್ಟಿಯಿಂದ ಹೇಳಿದ್ದಾರೆ. ಹೇಳಿದ ತಕ್ಷಣ ಯಾವುದು ಆಗೋದಿಲ್ಲ. ಈ ಬಗ್ಗೆ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ಸದ್ಯ ರಾಜ್ಯದಲ್ಲಿ …
Read More »Monthly Archives: ಸೆಪ್ಟೆಂಬರ್ 2023
ಕಾವೇರಿ ಜಲಾನಯನ ಪ್ರದೇಶದ ಜನರಿಗೆ, ರೈತರಿಗೆ ಸಂಕಷ್ಟ ಇದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಹಾವೇರಿ : ಕಾವೇರಿ ನೀರಿನ ವಿಚಾರದಲ್ಲಿ ಮುಖ್ಯಮಂತ್ರಿಗಳು ಇಂದು ಸರ್ವಪಕ್ಷ ಸಭೆ ಕರೆದಿದ್ದರು. ಇದಕ್ಕೆ ಹೋಗಲು ನನಗೆ ತಡರಾತ್ರಿ ಆಹ್ವಾನ ಬಂದಿತ್ತು. ಹೀಗಾಗಿ ಅದಕ್ಕೆ ಅಟೆಂಡ್ ಮಾಡೊಕೆ ಆಗಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹಾವೇರಿ ಜಿಲ್ಲಾ ಸವಣೂರಲ್ಲಿ ಮಾತನಾಡಿದ ಅವರು, ನಾನು ಇಂದು ಪ್ರವಾಸದಲ್ಲಿದ್ದೇನೆ. ನಮ್ಮ ನಿಲುವು ಬಹಳ ಸ್ಪಷ್ಟವಾಗಿದೆ. ಈಗಾಗಲೇ 15,16 ಟಿಎಂಸಿಯ 15,000 ಕ್ಯೂಸೆಕ್ ನೀರು ಹರಿಸಿದ್ದಾರೆ. ಮತ್ತೆ ನೀರು ಬಿಡಿ ಎನ್ನುವುದು …
Read More »ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದೂಡಿಕೆ: ಫೆಬ್ರವರಿಯಲ್ಲಿ ನಡೆಸಲು ಸರ್ಕಾರ ನಿರ್ಧಾರ
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಹಂಪಿ ಉತ್ಸವ ಮುಂದಿನ ವರ್ಷ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ವಿಜಯನಗರ – ಬಳ್ಳಾರಿ ಸೇರಿದಂತೆ ಬಹುತೇಕ ಜಿಲ್ಲೆಗಳ ಹೆಚ್ಚಿನ ಸಂಖ್ಯೆಯ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಹೀಗಾಗಿ ಇಂತಹ ಸ್ಥಿತಿಯಲ್ಲಿ ಉತ್ಸವ …
Read More »ಲಿಂಗಾಯತರಿಗೆ ಸ್ವತಂತ್ರ ಧರ್ಮದ ಮಾನ್ಯತೆ ಸಿಕ್ಕರೆ ಮೀಸಲಾತಿ ಕೈತಪ್ಪಲ್ಲ: ಎಸ್.ಎಂ. ಜಾಮದಾರ
ಬೆಳಗಾವಿ: ಲಿಂಗಾಯತ ಧರ್ಮಕ್ಕೆ ಸಾಂವಿಧಾನಿಕ ಮಾನ್ಯತೆ ಸಿಕ್ಕರೆ, ಈಗಿರುವ ಮೀಸಲಾತಿ ಕೈತಪ್ಪುತ್ತದೆ ಎಂದು ಕೆಲವರು ಹೇಳುತ್ತಿರುವುದು ಶುದ್ಧ ಸುಳ್ಳು. ನಾವು ಪ್ರತ್ಯೇಕ ಧರ್ಮದ ಹೋರಾಟ ಆರಂಭಿಸಿದ ಮೊದಲ ದಿನದಿಂದಲೂ ತಮ್ಮ ಅಸ್ತಿತ್ವ ಮತ್ತು ಸ್ವಾರ್ಥಕ್ಕಾಗಿ ಈ ರೀತಿ ಅಪಪ್ರಚಾರ ಮಾಡುತ್ತಲೇ ಇದ್ದಾರೆ, ಇದು ಅನ್ಯಾಯ ಎಂದು ಜಾಗತಿಕ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಜಾಮದಾರ ಕಿಡಿಕಾರಿದರು. ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕ್ರೈಸ್ತರು, ಮುಸ್ಲಿಮರು, ಜೈನರು ಸೇರಿದಂತೆ ಇತರ …
Read More »ಕಾವೇರಿಗಾಗಿ ಭಿಕ್ಷಾ ಪಾತ್ರೆ ಹಿಡಿದು ರಕ್ಷಣಾವೇದಿಕೆಯಿಂದ ವಿಶೇಷ ಪ್ರತಿಭಟನೆ
ಮಂಡ್ಯ : ಮತ್ತೆ ತಮಿಳುನಾಡಿಗೆ ನೀರು ಬಿಡಲು ನಿಯಂತ್ರಣ ಸಮಿತಿ ಸೂಚನೆ ಹಿನ್ನೆಲೆಯಲ್ಲಿ ಮಂಡ್ಯದ ಸಂಜಯ ವೃತ್ತದಲ್ಲಿ ವಿಶೇಷವಾಗಿ ಭಿಕ್ಷೆ ಪಾತ್ರೆ ಹಿಡಿದು ರೈತರು ಪ್ರತಿಭಟನೆ ನಡೆಸಿದರು. ಹರಕಲು ಅಂಗಿ, ಚಡ್ಡಿ ಧರಿಸಿ, ಕೆಲವರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು. ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ವಿನೂತನ ಹೋರಾಟ ನಡೆದಿದ್ದು, ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ರಾಜ್ಯದ ಜನರು ಭಿಕ್ಷೆ ಎತ್ತಬೇಕಾಗುತ್ತೆ ಎಂದು ಅಣಕಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಈಗಾಗಲೇ ನಮ್ಮನ್ನ …
Read More »ಕಾವೇರಿಗಾಗಿ ಭಿಕ್ಷಾ ಪಾತ್ರೆ ಹಿಡಿದು ರಕ್ಷಣಾವೇದಿಕೆಯಿಂದ ವಿಶೇಷ ಪ್ರತಿಭಟನೆ
ಮಂಡ್ಯ : ಮತ್ತೆ ತಮಿಳುನಾಡಿಗೆ ನೀರು ಬಿಡಲು ನಿಯಂತ್ರಣ ಸಮಿತಿ ಸೂಚನೆ ಹಿನ್ನೆಲೆಯಲ್ಲಿ ಮಂಡ್ಯದ ಸಂಜಯ ವೃತ್ತದಲ್ಲಿ ವಿಶೇಷವಾಗಿ ಭಿಕ್ಷೆ ಪಾತ್ರೆ ಹಿಡಿದು ರೈತರು ಪ್ರತಿಭಟನೆ ನಡೆಸಿದರು. ಹರಕಲು ಅಂಗಿ, ಚಡ್ಡಿ ಧರಿಸಿ, ಕೆಲವರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದರು. ಮಂಡ್ಯ ರಕ್ಷಣಾ ವೇದಿಕೆ ವತಿಯಿಂದ ವಿನೂತನ ಹೋರಾಟ ನಡೆದಿದ್ದು, ಮತ್ತೆ ತಮಿಳುನಾಡಿಗೆ ನೀರು ಬಿಟ್ಟರೆ ರಾಜ್ಯದ ಜನರು ಭಿಕ್ಷೆ ಎತ್ತಬೇಕಾಗುತ್ತೆ ಎಂದು ಅಣಕಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಈಗಾಗಲೇ ನಮ್ಮನ್ನ …
Read More »ಬೆಂಗಳೂರಿನ 12 ಆರ್ಟಿಒ ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ
ಬೆಂಗಳೂರು: ವ್ಯಾಪಕ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರ ನೇತೃತ್ವದ ತಂಡ ನಗರದಲ್ಲಿನ 12 ಪ್ರಾದೇಶಿಕ ಸಾರಿಗೆ ಕಚೇರಿಗಳ (ಆರ್ಟಿಓ) ಮೇಲೆ ದಾಳಿ ನಡೆಸಿದೆ. ಬೆಂಗಳೂರಿನಲ್ಲಿ ಆರ್ಟಿಓ ಕಚೇರಿಗಳಲ್ಲಿ ನಿರಂತರ ಅವ್ಯವಹಾರ ಹಾಗೂ ಅಕ್ರಮ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆ, ಗೌಪ್ಯ ಮಾಹಿತಿ ಆಧರಿಸಿ ಬುಧವಾರ ಖುದ್ದು ಲೋಕಾಯುಕ್ತ ನ್ಯಾಯಮೂರ್ತಿಗಳು ಆರ್ಟಿಓ ಕಚೇರಿಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಜಯನಗರ ಹಾಗೂ ರಾಜಾಜಿನಗರದ ಆರ್ಟಿಓ …
Read More »ಬೈಕ್ನಲ್ಲಿ ಅವಿತುಕೊಂಡಿದ್ದ ನಾಗಪ್ಪಾ
ಬೈಕ್ನಲ್ಲಿ ಅವಿತುಕೊಂಡಿದ್ದ ಉರಗವನ್ನು ರಕ್ಷಣೆ ಮಾಡಿರುವ ಘಟನೆ ವಿಜಯಪುರ ನಗರ್ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ನಡೆದಿದೆ. ಉರಗ ಪ್ರೇಮಿ ಉಮೇಶ ಎಂಬುವರು ಉರಗವನ್ನು ರಕ್ಷಣೆ ಮಾಡಿದರು. ಇನ್ನೂ ಜಿಲ್ಲಾಡಳಿತ ಕಚೇರಿಯ ಆವರಣದಲ್ಲಿ ನಿಲ್ಲಿಸಿದ ಬೈಕ್ನಲ್ಲಿ ಹಾವು ಅವಿತುಕೊಂಡಿತ್ತು. ತಕ್ಷಣವೇ ಬೈಕ್ನಲ್ಲಿದ ಹಾವನ್ನು ಉಮೇಶ ಹೊರಗಡೆಗೆ ಜಾಗೃತವಾಗಿ ತೆಗೆದಿದ್ದಾನೆ. ಅಲ್ಲದೇ, ಇದೇ ವೇಳೆಯಲ್ಲಿ ಉರಗ ರಕ್ಷಕ ಉಮೇಶ ಹಾವನ್ನು ಖಾಲಿ ಡಬ್ಬದಲ್ಲಿ ತೆಗೆದುಕೊಂಡು ನಗರದ ಹೊರವಲಯದಲ್ಲಿರುವ ಪ್ರದೇಶದಲ್ಲಿ ಬಿಟ್ಟು ಬಂದಿದ್ದಾರೆ ಇವರ …
Read More »ಕಡೋಲಿ ಗ್ರಾಮದಲ್ಲಿ ಪ್ರೌಡಶಾಲೆ ಸಶ್ಯ ಶಾಮಲಾ ಕಾರ್ಯಕ್ರಮ
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದಲ್ಲಿನ ಸರಕಾರಿ ಕನ್ನಡ ಮಾದ್ಯಮದ ಪ್ರೌಡಶಾಲೆ ಶಾಲೆಯಲ್ಲಿ ಜಿಲ್ಹಾ ಮಟ್ಟದ ಸಶ್ಯ ಶಾಮಲಾ ಕಾರ್ಯಕ್ರಮ ಜರುಗಿತು ಸಸಿಗೆ ನಿರು ಹಾಕುವ ಮುಲಕ ಕಾರ್ಯಕ್ರಮಕ್ಕೆ ಚಾಲನೆ ನಿಡಲಾಯಿತು.ಶಾಲೆಯಲ್ಲಿನ ಕಾರ್ಯನಿರತ ಶಿಕ್ಷಕಿ ಶ್ರೀಮತಿ ಎಮ್ಮ.ಆಯ್.ಬುಳ್ಳಾ ಇವರಿಗೆ ಜಿಲ್ಹಾ ಆದರ್ಶ ಶಿಕ್ಷಕಿ ಪುರಸ್ಕಾರ ದೊರೆತ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯಿಂದ ಗೌರವಿಸಲಾಯಿತು. ಪ್ಲೊ ಕೆಪಿಸಿಸಿ ಸದಸ್ಯ ಮಲಗೌಡ ಅವರು ಮಾತನಾಡುತ್ತಾ ಇವತ್ತು ಇಡಿ ವಿಶ್ವದಲ್ಲಿಯೇ ಪರಿಸರ ರಕ್ಷಣೆ ಒಂದು ಗಂಭಿರ ಪ್ರಶ್ನೆಯಾಗಿದೆ …
Read More »ಸುಕ್ಷೇತ್ರ ಸುಳೇಭಾವಿ ಶ್ರೀ ಮಹಾಲಕ್ಷಿ ದೇವಿಗೆ ಶ್ರಾವಣ ಮಾಸದ ಕೊನೆಯ ಮಂಗಳವಾರ ಬಳೆಯ ಅಲಂಕಾರ
ಸುಕ್ಷೇತ್ರ ಸುಳೇಭಾವಿ ಶ್ರೀ ಮಹಾಲಕ್ಷಿ ದೇವಿಗೆ ಶ್ರಾವಣ ಮಾಸದ ಕೊನೆಯ ಮಂಗಳವಾರ ಬಳೆಯ ಅಲಂಕಾರ ಮಾಡಲಾಗಿದ್ದು, ಭಕ್ತರು ಶ್ರದ್ಧಾಭಕ್ತಿಯಿಂದ ದೇವಿಗೆ ಉಡಿ ತುಂಬಿದರು. ಬೆಳಗ್ಗೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತ ಸಾಗರ ದೇವಸ್ಥಾನಕ್ಕೆ ಆಗಮಿಸಿತ್ತು. ಬೆಳಗ್ಗೆ 4 ಗಂಟೆಯಿಂದ ಸರದಿ ಸಾಲಿನಲ್ಲಿ ನಿಂತಿದ್ದ ಭಕ್ತರು ದೇವಿಗೆ ಉಡಿ ತುಂಬಿದರು. ಶ್ರಾವಣ ಮಾಸದ ಕೊನೆಯ ಮಂಗಳವಾರ ಪ್ರತಿ ವರ್ಷ ಗ್ರಾಮಸ್ಥರು ಉಡಿ ತುಂಬುವ ಸಂಪ್ರದಾಯವಿದ್ದು, ಅದರಂತೆ ಗ್ರಾಮಸ್ಥರು ದೇವಿಗೆ ಉಡಿ ತುಂಬಿ ಪುನೀತರಾದರು. …
Read More »