Breaking News

Monthly Archives: ಸೆಪ್ಟೆಂಬರ್ 2023

ದೆಹಲಿಯ ಸರ್​ ಗಂಗಾರಾಮ್​ ಆಸ್ಪತ್ರೆಗೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ದಾಖಲ!

ನವದೆಹಲಿ: ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಇಂದು ರಾಷ್ಟ್ರ ರಾಜಧಾನಿ ದೆಹಲಿಯ ಸರ್​ ಗಂಗಾರಾಮ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೌಮ್ಯ ಜ್ವರದಿಂದ (Mild Fever) ಅವರು ಬಳಲುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ತಜ್ಞ ವೈದ್ಯರು ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ”ಸೋನಿಯಾ ಗಾಂಧಿ ಶನಿವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಚೆನ್ನಾಗಿಯೇ ಇದ್ದಾರೆ. ವೈದ್ಯರ ತಂಡ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ” ಎಂದು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ ಎಂದು ಪಿಟಿಐ …

Read More »

ಬೆಳಗಾವಿಯಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಕೊಲೆ ಕೇಸ್: ಇಬ್ಬರು ಆರೋಪಿಗಳ ಬಂಧನ

ಬೆಳಗಾವಿ: ಇಲ್ಲಿನ ಶಿವಬಸವ ನಗರದಲ್ಲಿ ಆ.30ರಂದು ರಾತ್ರಿ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಮಾಳಮಾರುತಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ರಾಜಾರಾಮಪುರಿ ಬಾಯಪಾಸ್ ಚಾಳ ಗಲ್ಲಿಯ ಪ್ರಥಮೇಶ ಧರ್ಮೇಂದ್ರ ಕಸಬೇಕರ್ (20) ಹಾಗೂ ಆಕಾಶ ಕಾಡಪ್ಪಾ ಪವಾರ್(21) ಬಂಧಿತ ಆರೋಪಿಗಳು. ಆ.30ರ ರಾತ್ರಿ ಶಿವಬಸವ ನಗರದ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ನಾಗರಾಜ ಈರಪ್ಪ ಗಾಡಿವಡ್ಡರ್ (26) ಎಂಬ ಯುವಕನನ್ನು ಬೈಕ್‍ನಲ್ಲಿ …

Read More »

Bigg Boss season 10: ಬಿಗ್​ ಬಾಸ್​ ಸೀಸನ್​ 10 ಶೀಘ್ರವೇ ಪ್ರಾರಂಭವಾಗಲಿದೆ.

Bigg Boss season 10: ಬಿಗ್​ ಬಾಸ್​ ಸೀಸನ್​ 10 ಶೀಘ್ರವೇ ಪ್ರಾರಂಭವಾಗಲಿದೆ. ಕನ್ನಡದ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ‘ಬಿಗ್​ ಬಾಸ್’​ ಕೂಡ ಒಂದು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ನಡೆಸಿಕೊಡುವ ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ಈವರೆಗೆ ಒಂಬತ್ತು ಸೀಸನ್​ಗಳನ್ನು ಯಶಸ್ವಿಯಾಗಿ ಮುಗಿಸಿರುವ ಬಿಗ್​ ಬಾಸ್​ ಇದೀಗ ಮತ್ತೆ ಬಂದಿದೆ. ಬಿಗ್​ ಬಾಸ್​ 10ನೇ ಸೀಸನ್​ ಶೀಘ್ರವೇ ಪ್ರಾರಂಭವಾಗಲಿದೆ. ನಿನ್ನೆ ಕಿಚ್ಚನ ಹುಟ್ಟುಹಬ್ಬದಂದು ಹೊಸ ಸೀಸನ್​ನ ಪ್ರೋಮೋ …

Read More »

ಕ್ಯಾನ್ಸರ್​ನಿಂದ ಬಳಲುತ್ತಿದ್ದ ಜಿಂಬಾಬ್ವೆ ಕ್ರಿಕೆಟಿಗ ಹೀತ್ ಸ್ಟ್ರೀಕ್ ನಿಧನ

ಬುಲವಾಯೊ: ಜಿಂಬಾಬ್ವೆ ಕ್ರಿಕೆಟ್​​ ಪರ ಟೆಸ್ಟ್​​ನಲ್ಲಿ ಶತಕ ವಿಕೆಟ್​ ಗಳಿಸಿದ ದಿಗ್ಗಜ ಆಲ್​ರೌಂಡರ್​ ಆಟಗಾರ ಹೀತ್ ಸ್ಟ್ರೀಕ್ ನಿಧನರಾಗಿದ್ದಾರೆ. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರು 49ನೇ ವಯಸ್ಸಿಗೆ ಇಹಲೋಕವನ್ನು ತ್ಯಜಿಸಿದ್ದಾರೆ. ಹೀತ್ ಸ್ಟ್ರೀಕ್ ಮರಣದ ಸುದ್ದಿಯಲ್ಲಿ ಅವರ ಪತ್ನಿ ನಾಡಿನ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್​​ ಮಾಡುವ ಮೂಲಕ ತಿಳಿಸಿದ್ದಾರೆ. ಜಿಂಬಾಬ್ವೆಯ ಮಾಜಿ ನಾಯಕನ ಅಗಲಿಕೆಗೆ ಕ್ರಿಕೆಟ್​ ಜಗತ್ತು ಕಂಬನಿ ಮಿಡಿದಿದೆ. ಹೀತ್ ಸ್ಟ್ರೀಕ್ ಪತ್ನಿ ನಾಡಿನ್ ತಮ್ಮ ಫೇಸ್​ ಬುಕ್​ ಖಾತೆಯಲ್ಲಿ “ಸೆಪ್ಟೆಂಬರ್ …

Read More »

ಇಂಡಿಯಾ ಮೈತ್ರಿಕೂಟದಿಂದ ಸನಾತನ ಧರ್ಮಕ್ಕೆ ಅವಮಾನ; ಗೃಹ ಸಚಿವ ಅಮಿತ್​ ಶಾ

ಜೈಪುರ (ರಾಜಸ್ಥಾನ): ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷ ಡಿಎಂಕೆ ನಾಯಕ, ಸಚಿವ ಉದಯನಿಧಿ ಸ್ಟಾಲಿನ್​ ‘ಸನಾತನ ಧರ್ಮ ಸೊಳ್ಳೆ, ಡೆಂಗ್ಯೂ, ಪ್ಲೂ, ಮಲೇರಿಯಾ ಇದ್ದ ಹಾಗೆ’ ಎಂದು ಹೇಳಿಕೆ ನೀಡಿದ್ದು, ವಿವಾದಕ್ಕೆ ಕಾರಣವಾಗಿದೆ. ಜೊತೆಗೆ ಬಿಜೆಪಿಗೆ ಪ್ರಬಲ ಟೀಕಾಸ್ತ್ರ ನೀಡಿದಂತಾಗಿದ್ದು, ಇಂಡಿಯಾ ಮೈತ್ರಿಕೂಟ ಸನಾತನ ಧರ್ಮದ ವಿರುದ್ಧವಾಗಿದೆ. ಕಾಂಗ್ರೆಸ್​ ಸೇರಿದಂತೆ ಅದರ ಮಿತ್ರ ಪಕ್ಷಗಳು ಹಿಂದು ಧರ್ಮವನ್ನು ಪದೆ ಪದೇ ಅವಮಾನಿಸುತ್ತಿವೆ ಎಂದು ಕಿಡಿಕಾರಿದೆ. ಚುನಾವಣಾ ರಾಜ್ಯವಾದ ರಾಜಸ್ಥಾನದಲ್ಲಿ ಪ್ರಚಾರ ಸಭೆಯಲ್ಲಿ …

Read More »

ಗಡಿಭಾಗದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೂರು ಸರ್ಕಾರಿ ಶಾಲೆಗಳು ಬಂದ್ ಆಗಿವೆ.

ಮಕ್ಕಳ ಶೂನ್ಯ ಹಾಜರಾತಿಯಿಂದ ಶಾಲೆಗಳು ಬಂದ್ ಆಗಿವೆ ಅಂತಾ ಅಧಿಕಾರಿಗಳು ಹೇಳ್ತಾರೆ. ಆದ್ರೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಶೂನ್ಯ ಹಾಜರಾತಿ ಆಗುತ್ತಿರೋದೇಕೆ? ಸರ್ಕಾರಿ ಶಾಲೆಗಳಿಂದ ಮಕ್ಕಳು ದೂರವಾಗುತ್ತಿದ್ದಾರೆ. ಇದನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಗೆ ಒಟ್ಟು ಎಂಟು ತಾಲೂಕುಗಳು ಬರುತ್ತೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ 3500ಕ್ಕೂ ಹೆಚ್ಚು ಪ್ರಾಥಮಿಕ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು 99 ಪ್ರಾಥಮಿಕ ಶಾಲೆಗಳಲ್ಲಿ ಸರ್ಕಾರಿ ಶಿಕ್ಷಕರೇ ಇಲ್ಲ. ಅದರಲ್ಲೂ …

Read More »

ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕೈದಿ ಕಾರಾಗೃಹದಿಂದ ಪರಾರಿ

ರಾಯಚೂರು : ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕೈದಿ ಕಾರಾಗೃಹದಿಂದ ಪರಾರಿಯಾಗಿರುವ ಘಟನೆ ಜಿಲ್ಲೆಯ ದೇವದುರ್ಗದ ಉಪಕಾರಾಗೃಹದಲ್ಲಿ ನಡೆದಿದೆ. ವಿಚಾರಣಾಧೀನ ಕೈದಿ ಅನ್ವರ‌ಬಾಷಾ ಪರಾರಿಯಾಗಿರುವ ಕೈದಿ.   ವಿಜಯನಗರ ಜಿಲ್ಲೆಯ ರಾಮನಗರ ನಿವಾಸಿಯಾಗಿದ್ದ ಅನ್ವರಬಾಷಾ ಪೇಂಟಿಂಗ್​ ಕೆಲಸ ಮಾಡುತ್ತಿದ್ದ. ಕಳೆದ ಮೇ ತಿಂಗಳಲ್ಲಿ ದೇವದುರ್ಗ ತಾಲೂಕಿನ ಗಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಾಶಾಳ ಹತ್ತಿರ ನಡೆದ ಕೊಲೆ ಪ್ರಕರಣ ಸಂಬಂಧ ಅನ್ವರಬಾಷಾನನ್ನು ಬಂಧಿಸಿ ಜೈಲಿನಲ್ಲಿರಿಸಲಾಗಿತ್ತು. ಕಳೆದ ಮೂರು ತಿಂಗಳಿನಿಂದ ಜೈಲಿನಲ್ಲಿದ್ದ ಆರೋಪಿ, …

Read More »

ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಿದ್ದಾರೆ: ದೇವೇಗೌಡ

ಹಾಸನ: ಪ್ರಜ್ವಲ್ ರೇವಣ್ಣರನ್ನು ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್ ತೀರ್ಪಿನ ಕುರಿತಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, “ಮೊಮ್ಮಗ ಪ್ರಜ್ವಲ್ ರೇವಣ್ಣ ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಹೋರಾಟ ನಡೆಸಲಿದ್ದಾರೆ” ಎಂದು ತಿಳಿಸಿದ್ದಾರೆ. ಹಾಸನದ ಮಾವಿನಕೆರೆ ಬೆಟ್ಟದಲ್ಲಿ ಶನಿವಾರ ಈ ಕುರಿತು ಅವರು ಮಾತನಾಡಿದರು. “ಮುಚ್ಚಿಡಲು ಇಲ್ಲಿ ಏನೂ ಇಲ್ಲ. ಕೆಳ ನ್ಯಾಯಾಲಯಗಳಲ್ಲಿ ನ್ಯಾಯ ಸಿಗದಿದ್ದರೆ ಜನರು ಸಾಮಾನ್ಯವಾಗಿ ಸುಪ್ರೀಂ ಕೋರ್ಟ್‌ಗೆ ಹೋಗುತ್ತಾರೆ. ಅಂತೆಯೇ ಪ್ರಜ್ವಲ್ ಕೂಡ ಸುಪ್ರೀಂ ಕೋರ್ಟ್‌ …

Read More »

ಇಸ್ರೋ) ಖಗೋಳಶಾಸ್ತ್ರದ ವೈಜ್ಞಾನಿಕ ತಿಳುವಳಿಕೆಯ ಮಟ್ಟ ಹೆಚ್ಚಿಸುವ ಕುರಿತಾದ ಮಹತ್ವದ ಯೋಜನೆಗೆ ಅಣಿಯಾಗುತ್ತಿದೆ.

ಬೆಂಗಳೂರು : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಮೊದಲ ಸೌರ ಯೋಜನೆ ಆದಿತ್ಯ-L1 ಅನ್ನು ನಿನ್ನೆ (ಶನಿವಾರ) ಬೆಳಗ್ಗೆ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಇದಕ್ಕೂ ಮೊದಲು ಆಗಸ್ಟ್ 23ರಂದು ಚಂದ್ರಯಾನ-3 ಅನ್ನು ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಬಾಹ್ಯಾಕಾಶ ಪ್ರಪಂಚದಲ್ಲಿ ಇತಿಹಾಸ ಸೃಷ್ಟಿಸಿತ್ತು. ಚಂದ್ರ ಮತ್ತು ಸೂರ್ಯನ ನಂತರ ಇಸ್ರೋ ಹೊಸ ಮಿಷನ್ ಸಿದ್ಧಪಡಿಸಿದೆ. ಈ ಮಿಷನ್ ಏನು? ಉದ್ದೇಶವೇನು? ನೋಡೋಣ. ಇಸ್ರೋ ಸಂಸ್ಥೆಯು …

Read More »

ಗ್ರಾಮ ಪಂಚಾಯತ್​ ಗ್ರಂಥಾಲಯಗಳಲ್ಲಿ ಮಕ್ಕಳಿಗೆ ‘ಓದುವ ಬೆಳಕು’ ಅಭಿಯಾನ: ಸರ್ಕಾರದ ಉದ್ದೇಶವೇನು? ಹೇಗಿರಲಿದೆ?

ಬೆಂಗಳೂರು : ಮಕ್ಕಳು ನಿರಂತರವಾಗಿ ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗಲೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯಾದ್ಯಂತ ‘ಓದುವ ಬೆಳಕು’ ಎಂಬ ವಿನೂತನ ಕಾರ್ಯಕ್ರಮವನ್ನು ಶುರು ಮಾಡಿದೆ. ಶಾಲಾ ಮಕ್ಕಳನ್ನು ವಿಶೇಷವಾಗಿ ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿ ಇದೆ ಎಂದು ಗ್ರಾಮೀಣ ಅಭಿವೃದ್ಧಿ, ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಶನಿವಾರ ಹೇಳಿದ್ದಾರೆ. ಗ್ರಂಥಾಲಯಗಳನ್ನು …

Read More »