ಬೆಳಗಾವಿ: ಇವರು 45ಕ್ಕೂ ಹೆಚ್ಚು ಪ್ರಾಣಿ, ಪಕ್ಷಿಗಳ ಧ್ವನಿ ಅನುಕರಣೆ ಮಾಡುತ್ತಾರೆ. 81ರ ವಯಸ್ಸಿನಲ್ಲೂ ಕುಗ್ಗಿಲ್ಲ ಇವರ ಉತ್ಸಾಹ. ಆದರೆ ಇಷ್ಟೆಲ್ಲಾ ಕಲೆ ಇದ್ದರೂ ತಪ್ಪಿಲ್ಲ ಸಂಕಷ್ಟ. ಇಳಿ ವಯಸ್ಸಿನಲ್ಲಿರುವ ಈ ಕಲಾವಿದನಿಗೆ ಬೇಕಿದೆ ಸರ್ಕಾರದ ನೆರವು ಮತ್ತು ಪ್ರೋತ್ಸಾಹ. ಬಡ ಕಲಾವಿದನ ಕುರಿತಾದ ಕರುಣಾಜನಕ ಸ್ಟೋರಿ ಇಲ್ಲಿದೆ.. ಹೌದು, ಇವರ ಹೆಸರು ಸಿದ್ದಪ್ಪ ಉದ್ದಪ್ಪ ಖಿಲಾರಿ. ಊರು ಗೋಕಾಕ್ ತಾಲೂಕಿನ ಬೆಣಚಿನಮರಡಿ. ಹುಟ್ಟು ಕಲಾವಿದ ಆಗಿರುವ ಸಿದ್ದಪ್ಪ ಪ್ರಾಣಿ ಪಕ್ಷಿಗಳ …
Read More »Daily Archives: ಅಕ್ಟೋಬರ್ 16, 2023
ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿರುವ ಅತಿಥಿ ಉಪನ್ಯಾಸಕರ ಜೀವನವೇ ಅಭದ್ರ
ಬೆಳಗಾವಿ : ಸಾವಿರಾರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುತ್ತಿರುವ ಅತಿಥಿ ಉಪನ್ಯಾಸಕರ ಜೀವನವೇ ಅಭದ್ರವಾಗಿದೆ. ಸೇವಾ ಭದ್ರತೆ ಈ ಬಾರಿಯೂ ಸಿಗದಿದ್ದರೆ ನಾವು ಆತ್ಮಹತ್ಯೆಯ ದಾರಿ ತುಳಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ರಾಜ್ಯದ 430ಕ್ಕೂ ಅಧಿಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 11 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅನೇಕ ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಭತ್ಯೆ ಪಡೆದು ಸೇವೆ ಸಲ್ಲಿಸುತ್ತಿದ್ದಾರೆ. ಇವರಲ್ಲಿ ಸಾವಿರಾರು …
Read More »ಮೈಸೂರು ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಹೆಸರುವಾಸಿ: ಸಿದ್ದರಾಮಯ್ಯ
ಮೈಸೂರು: ”ಮೈಸೂರು ಮಹಾರಾಜರ ಕಾಲದಿಂದಲೂ ಕೂಡ ಕನ್ನಡ ನಾಡಿನಲ್ಲಿ ಕಲೆ, ಸಂಸ್ಕೃತಿ, ಸಾಹಿತ್ಯಕ್ಕೆ ಹೆಚ್ಚಿನ ರೀತಿಯ ಪ್ರೋತ್ಸಾಹ ನೀಡಲಾಗುತ್ತಿದೆ. ಸಾಹಿತ್ಯ, ಸಂಸ್ಕೃತಿಗೆ ಹೆಸರಾದ ಜಿಲ್ಲೆ ಮೈಸೂರು. ಮೈಸೂರು ಸಾಹಿತ್ಯ ನೆಲೆಯ ತವರೂರು ಎಂದರೆ ತಪ್ಪಾಗಲಾರದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಾಡಹಬ್ಬ ಮೈಸೂರು ದಸರಾ ಪ್ರಯುಕ್ತ ಅರಮನೆ ವೇದಿಕೆಯಲ್ಲಿ ಭಾನುವಾರ ಆಯೋಜಿಸಿದ್ದ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು …
Read More »ಶಿವನ ಪಾದ ಸೇರಿದ ಅರಭಾವಿ ದುರದುಂಡೀಶ್ವರ ಪೀಠದ ಶಿವಯೋಗಿ ಪರಮಪೂಜ್ಯರ ಅಗಲಿಕೆಗೆ ಕಂಬನಿ ಮಿಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಗೋಕಾವಿ ನೆಲದ ಪಂಚ- ಪೀಠಗಳಲ್ಲಿ ಒಂದಾಗಿರುವ ತಾಲ್ಲೂಕಿನ ಅರಭಾವಿ ದುರದುಂಡೀಶ್ವರ ಪೀಠದ ಜಗದ್ಗುರು ಪರಮಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು (೭೫) ರವಿವಾರ ರಾತ್ರಿ ಲಿಂಗೈಕ್ಯೆರಾಗಿದ್ದಾರೆ. ಪರಮ ಪೂಜ್ಯರ ಅಗಲಿಕೆಗೆ ಶಾಸಕರೂ ಆಗಿರುವ ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಅರಭಾವಿ ಭಾಗದಲ್ಲಿ ಭಕ್ತರ ಪಾಲಿನ ದೇವರು ಆಗಿದ್ದ ಸದಾ ಸೌಮ್ಯ ಹಾಗೂ ಶಾಂತ ಸ್ವಭಾವದ ಸಾಕಾರ ಮೂರ್ತಿಯಾಗಿದ್ದ ಪೂಜ್ಯರ ಅಗಲಿಕೆಯಿಂದ ನಮ್ಮ ನಾಡಿಗೆ ಅಪಾರ ಹಾನಿಯಾಗಿದೆ. …
Read More »