Breaking News

Monthly Archives: ಅಕ್ಟೋಬರ್ 2023

ಪಾಸ್​ವರ್ಡ್​ ರಹಿತ ಲಾಗಿನ್​; ಇದು ವಾಟ್ಸ್​ಆಯಪ್​ನ ಹೊಸ ಪಾಸ್​ ಕೀ ವೈಶಿಷ್ಟ್ಯ!

ನವದೆಹಲಿ: ತನ್ನ ಪ್ಲಾಟ್​ಫಾರ್ಮ್​ನಲ್ಲಿ ಪಾಸ್​ವರ್ಡ್ ಬದಲಾಗಿ ಪಾಸ್​ ಕೀ ವೈಶಿಷ್ಟ್ಯವನ್ನು ಶೀಘ್ರದಲ್ಲೇ ಜಾರಿಗೊಳಿಸುವುದಾಗಿ ವಾಟ್ಸ್​ಆಯಪ್ ಘೋಷಿಸಿದೆ. ಈ ಬದಲಾವಣೆಯಿಂದ ಬಳಕೆದಾರರು ಕಿರಿಕಿರಿ ಉಂಟು ಮಾಡುವ ಹಾಗೂ ಅಸುರಕ್ಷಿತವಾದ ಟು – ಸ್ಟೆಪ್ ಎಸ್​ಎಂಎಸ್​ ದೃಢೀಕರಣದ ಪ್ರಕ್ರಿಯೆಯಿಂದ ಪಾರಾಗಲಿದ್ದಾರೆ. “ಆಂಡ್ರಾಯ್ಡ್ ಬಳಕೆದಾರರು ಸುಲಭವಾಗಿ ಮತ್ತು ಸುರಕ್ಷಿತವಾಗಿ ಪಾಸ್ ಕೀಗಳೊಂದಿಗೆ ಲಾಗ್ ಇನ್ ಮಾಡಬಹುದು. ನಿಮ್ಮ ಮುಖ, ಬೆರಳಚ್ಚು ಅಥವಾ ಪಿನ್ ಮಾತ್ರ ನಿಮ್ಮ ವಾಟ್ಸ್​​ಆಯಪ್ ಖಾತೆಯನ್ನು ಅನ್ಲಾಕ್ ಮಾಡುತ್ತದೆ” ಎಂದು ಕಂಪನಿ ಸೋಮವಾರ …

Read More »

ದಸರಾ ದರ್ಶಿನಿ: ನವರಾತ್ರಿ ಹಿನ್ನೆಲೆ ದೇವಾಲಯ ದರ್ಶನಕ್ಕೆ ಕೆಎಸ್‌ಆರ್​ಟಿಸಿಯಿಂದ ವಿಶೇಷ ಪ್ಯಾಕೇಜ್

ಮಂಗಳೂರು : ನವರಾತ್ರಿ ಹಬ್ಬದ ಸಂದರ್ಭದಲ್ಲಿ ಭಕ್ತರಿಗೆ ದೇವಾಲಯ ದರ್ಶನಕ್ಕೆ ಕಳೆದ ವರ್ಷ ಕೆಎಸ್​​ಆರ್​ಟಿಸಿಯಿಂದ ದಸರಾ ದರ್ಶಿನಿ ಎಂಬ ಪ್ಯಾಕೇಜ್ ಆರಂಭಿಸಲಾಗಿತ್ತು. ಇದಕ್ಕೆ ಜನರ ಅದ್ಬುತ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಮಂಗಳೂರಿನ ಕೆಎಸ್​​ಆರ್​ಟಿಸಿ ಈ ಬಾರಿಯು ದಸರಾ ದರ್ಶಿನಿ ಆರಂಭಿಸಿದೆ. ದೇವಾಲಯ ದರ್ಶನಕ್ಕೆ ಕೆಎಸ್​​ಆರ್​ಟಿಸಿಯಿಂದ ವಿಶೇಷ ಪ್ಯಾಕೇಜ್​ : ನವರಾತ್ರಿ ಸಮಯದಲ್ಲಿ ದೇವಿ ದೇವಾಲಯಗಳ ದರ್ಶನ ಮಾಡುವುದು ಸಾಮಾನ್ಯ. ದೇಗುಲ ದರ್ಶನ ಮಾಡುವ ಭಕ್ತರಿಗೆ ಎಂದೇ ಮಂಗಳೂರಿನಲ್ಲಿ ಕೆಎಸ್​​ಆರ್​ಟಿಸಿ ಇದೀಗ ದಸರಾ ದೇಗುಲ …

Read More »

ಐಸಿಸಿ ಏಕದಿನ ವಿಶ್ವಕಪ್: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಟಿಕೆಟ್ ಮಾರಾಟ

ಬೆಂಗಳೂರು : ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದ ಆತಿಥ್ಯಕ್ಕೆ ಸಜ್ಜಾಗಿರುವ ಬೆಂಗಳೂರಿನ ಎಂ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ 4 ಪಂದ್ಯಗಳ ಟಿಕೆಟ್ ಮಾರಾಟದ ದಿನಾಂಕವನ್ನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಪ್ರಕಟಿಸಿದೆ. ಆತಿಥೇಯ ಭಾರತ ಹಾಗೂ ನೆದರ್‌ಲ್ಯಾಂಡ್ಸ್ ನಡುವಿನ ಪಂದ್ಯ ಹೊರತುಪಡಿಸಿ ಉಳಿದ ಮೂರು ಪಂದ್ಯಗಳ ಟಿಕೆಟ್ ಮಾರಾಟ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಈಗಾಗಲೇ ಕ್ರಿಕೆಟ್​ ಅಭಿಮಾನಿಗಳು ಟಿಕೆಟ್​ ಪಡೆಯಲು ಕ್ರೀಂಡಾಂಗಣದ ಮುಂದೆ ಸಾಲುಗಟ್ಟಿ ನಿಂತಿದ್ದಾರೆ. ಈಗಾಗಲೇ …

Read More »

ಹಳಿ ತಪ್ಪಿದ ಕಾರಟಗಿ – ಯಶವಂತಪುರ ರೈಲು:

ಗಂಗಾವತಿ (ಕೊಪ್ಪಳ): ಕಾರಟಗಿ – ಯಶವಂತರಪುರ ರೈಲು ಹಳಿ ತಪ್ಪಿದ ಘಟನೆ ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕಾರಟಗಿ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದಾಗಿ ರೈಲಿನಲ್ಲಿದ್ದ ನೂರಾರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ಕಾರಣದಿಂದ ಎಂಜಿನ್ ಮುಂಭಾಗದಲ್ಲಿನ ಚಕ್ರ ಹಳಿ ತಪ್ಪಿದ್ದು ಗಮನಕ್ಕೆ ಬರುತ್ತಿದ್ದಂತೆಯೆ ತಕ್ಷಣ ಎಚ್ಚೆತ್ತುಕೊಂಡ ಲೋಕೋ ಪೈಲಟ್ ಕೂಡಲೇ ವೇಗವನ್ನು ಶೂನ್ಯಕ್ಕೆ ಇಳಿಸಿ ಅಪಾಯ ತಪ್ಪಿಸಿದ್ದಾರೆ. ಹೀಗಾಗಿ ರೈಲಿನ ಎಂಜಿನ್ ಮಾತ್ರ …

Read More »

ನಮ್ಮದೇ ಒರಿಜಿನಲ್ ಜಾತ್ಯತೀತ ಜನತಾದಳ, ನಾನೇ ಅದರ ಅಧ್ಯಕ್ಷ.: ಸಿ.ಎಂ.ಇಬ್ರಾಹಿಂ ‘ದಳ’ಪತಿಗಳಿಗೆ ಖಡಕ್ ಸಂದೇಶ

ಬೆಂಗಳೂರು: ನಮ್ಮದೇ ಒರಿಜಿನಲ್ ಜಾತ್ಯತೀತ ಜನತಾದಳ. ನಾನೇ ಅದರ ಅಧ್ಯಕ್ಷ. ಇದು ನನ್ನ ಮನೆ. ಮುಂದೇನಾಗುತ್ತದೆ ಎಂಬುದನ್ನು ಪರದೆ ಮೇಲೆ ನೋಡಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ‘ದಳ’ಪತಿಗಳಿಗೆ ಖಡಕ್ ಸಂದೇಶ ರವಾನಿಸಿದರು. ನಗರದ ನಾಗವಾರ ಮುಖ್ಯ ರಸ್ತೆಯಲ್ಲಿರುವ ಸಿಎಂಎ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಿದ್ದ ‘ಜೆಡಿಎಸ್ ಚಿಂತನ ಮಂಥನ’ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ನನ್ನನ್ನು ಯಾರಿಂದಲೂ‌ ತೆಗೆಯಲು ಸಾಧ್ಯವಿಲ್ಲ. ಅದಕ್ಕೆ ಸಭೆ ನಡೆಸಿ ತೀರ್ಮಾನ ಮಾಡಬೇಕು. …

Read More »

ಪೋಷಕರ ಒಪ್ಪಿಗೆ ಇಲ್ಲದೆ ಆಗುವ ಪ್ರೇಮ ವಿವಾಹಗಳನ್ನು ಸರ್ಕಾರ ನಿಷೇಧಿಸಬೇಕು……..

ಕಲಬುರಗಿ: ಪೋಷಕರ ಒಪ್ಪಿಗೆ ಇಲ್ಲದೆ ಆಗುವ ಪ್ರೇಮ ವಿವಾಹಗಳನ್ನು ಸರ್ಕಾರ ನಿಷೇಧಿಸಬೇಕು ಎಂದು ಇಲ್ಲಿನ ಕಮಲಾಪುರ ತಾಲೂಕಿನ ಡೊಂಗರಗಾಂವ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಾಂತಕುಮಾರ ಕೆ. ಮೂಲಗೆ ಹಾಗೂ ಸದಸ್ಯರು ಸಭೆ ನಡೆಸಿ ಠರಾವು ಪಾಸ್ ಮಾಡಿದ್ದಾರೆ. ಅಕ್ಟೋಬರ್ 10 ರಂದು ಶಾಂತಕುಮಾರ್ ಮೂಲಗೆ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿಯಲ್ಲಿ ಸಾಮಾನ್ಯ ಸಭೆ ನಡೆದಿತ್ತು. ವಿಶೇಷವಾಗಿ, ಪ್ರೇಮ ವಿವಾಹಗಳ ಬಗ್ಗೆ ಚರ್ಚಿಸಲೆಂದೇ ಈ ಸಭೆ ಕರೆಯಲಾಗಿತ್ತು. ಶಾಂತಕುಮಾರ ಕೆ. ಮೂಲಗೆ ಮಾತನಾಡಿ, “ನಮ್ಮ …

Read More »

ನಗರಸಭೆ ಆಯುಕ್ತರ ಕುರ್ಚಿಗಾಗಿ ಬಾಗಲಕೋಟೆ ನಗರದಲ್ಲಿ ಗೊಂದಲ 2ರು ಒಂದೇ ಚೇಂಬರ್​ನಲ್ಲಿ ಕುಳಿತು ಆಡಳಿತ

ಬಾಗಲಕೋಟೆ : ನಗರಸಭೆ ಆಯುಕ್ತರ ಕುರ್ಚಿಗಾಗಿ ಬಾಗಲಕೋಟೆ ನಗರದಲ್ಲಿ ಗೊಂದಲ ಮುಂದುವರೆದಿದೆ. ಇತ್ತೀಚೆಗಷ್ಟೇ ಆರೋಗ್ಯ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳು ಗೊಂದಲ ಮಾಡಿಕೊಂಡಿದ್ದರು. ಅದು ಮಾಸುವ ಮುಂಚೆ ಈಗ ನಗರಸಭೆ ಆಯುಕ್ತರ ಕುರ್ಚಿಗಾಗಿ ಇಬ್ಬರು ಅಧಿಕಾರಿಗಳ ಮಧ್ಯೆ ಪೈಪೋಟಿ ನಡೆದಿರುವುದು ಚರ್ಚೆಗೆ ಗ್ರಾಸವಾಗಿದೆ. ಹಿಂದಿನ ಆಯುಕ್ತ ಹಾಗೂ ಹಾಲಿ ಆಯುಕ್ತರ ಮಧ್ಯೆ ಕುರ್ಚಿಗಾಗಿ ಸ್ಪರ್ಧೆ ಏರ್ಪಟ್ಟಿದ್ದು, ಒಂದೇ ಚೇಂಬರ್​ನಲ್ಲಿ ಕುಳಿತ ಇಬ್ಬರೂ ಆಯುಕ್ತರು, ಆಡಳಿತ ನಡೆಸಲು ಮುಂದಾಗಿದ್ದಾರೆ. …

Read More »

ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ವಿದ್ಯುತ್​ ತಂತಿ ಸ್ಪರ್ಶಿಸಿ 26 ಎಕರೆಯಲ್ಲಿ ಬೆಳೆದಿದ್ದ ಕಬ್ಬು ನಾಶ;

ಚಿಕ್ಕೋಡಿ (ಬೆಳಗಾವಿ): ವಿದ್ಯುತ್​ ತಂತಿ ಸ್ಪರ್ಶಿಸಿ 26 ಎಕರೆ ಪ್ರದೇಶದಲ್ಲಿ ಬೆಳೆದ ಕಬ್ಬು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದ ಸರ್ವೆ ನಂಬರ್​ 8 ಮತ್ತು 10ರಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿತು. ಹೈವೋಲ್ಟೇಜ್ ವಿದ್ಯುತ್ ತಂತಿ ತುಂಡಾಗಿ ಬಿದ್ದು ಬೆಂಕಿ ಹೊತ್ತಿಕೊಂಡಿತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರೈತರಾದ ಪಾರೀಸ್ ವಾಳ್ವೆ ಹಾಗೂ ನಿಗಂಪ್ಪಾ ಮನಗೋಳಿ ಮಾತನಾಡಿ, “ಇನ್ನೇನು ಕೆಲವೇ ದಿನಗಳಲ್ಲಿ ಕಬ್ಬು ಕಾರ್ಖಾನೆಗೆ …

Read More »

ರೈತರ ಜಮೀನಿನಲ್ಲಿ ಕೆರೆ ನಿರ್ಮಿಸಿ 14 ವರ್ಷಗಳೇ ಕಳೆದಿವೆ. ಭೂಮಿ ಕೊಟ್ಟ ರೈತರಿಗೆ ಪರಿಹಾರ ಸಿಕ್ಕಿಲ್ಲ. ಕೆರೆಯಲ್ಲಿ ಮುಳುಗಿ ಪ್ರಾಣ ಬಿಡುವ ಎಚ್ಚರಿಕೆ!

ಬೆಳಗಾವಿ: ಊರಲ್ಲಿ ಕುಡಿಯುವ ನೀರಿಗೆ ಹಾಹಾಕಾರವಿತ್ತು.‌ ನೀರಿನ ಬವಣೆ ನೀಗಿಸಲು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಗ್ರಾಮದ ರೈತರ ಜಮೀನಿನಲ್ಲಿ ಕೆರೆ ನಿರ್ಮಿಸಿ 14 ವರ್ಷಗಳೇ ಕಳೆದಿವೆ. ಆದರೆ, ಈವರೆಗೂ ಭೂಮಿ ಕೊಟ್ಟ ರೈತರಿಗೆ ಪರಿಹಾರ ಸಿಕ್ಕಿಲ್ಲ. ಇದರಿಂದ ಆಕ್ರೋಶಗೊಂಡ ಸಂತ್ರಸ್ಥರು ಪರಿಹಾರ ಕೊಡದಿದ್ದರೆ, ಇದೇ ಕೆರೆಯಲ್ಲಿ ಮುಳುಗಿ ಜೀವ ಬಿಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ಹಾಗಾದರೆ ಯಾವ ಊರು? ಏನಿವರ ವ್ಯಥೆ? ಸಚಿವರ ತವರು ಕ್ಷೇತ್ರ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ …

Read More »

ಲಿಂಗ ವಿವಾಹ.. ಇಂದು ಸುಪ್ರೀಂ ಕೋರ್ಟ್​ನಿಂದ ಮಹತ್ವದ ತೀರ್ಪು

ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕೋರಿ ಸಲ್ಲಿಸಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಕಾಯ್ದಿರಿಸಿರುವ ತನ್ನ ಬಹುನಿರೀಕ್ಷಿತ ತೀರ್ಪನ್ನು ಇಂದು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಮ್ಯಾರಥಾನ್ ವಿಚಾರಣೆ ಪೂರ್ಣಗೊಳಿಸಿದ ನಂತರ ಮೇ 11 ರಂದು ತೀರ್ಪು ಕಾಯ್ದಿರಿಸಿತ್ತು. ಮುುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿ ಎಸ್ …

Read More »