ಉಡುಪಿ: ಇಲ್ಲಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು, ಬೆಳಗಾವಿ ಪೊಲೀಸರ ಸಹಕಾರದಿಂದ ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರವೀಣ್ ಅರುಣ್ ಚೌಗಲೆ(35) ಬಂಧಿತ ಆರೋಪಿ. ಬೆಳಗಾವಿಯ ಕುಡುಚಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಪ್ರವೀಣ್, ಮಂಗಳೂರು ಏರ್ಪೋರ್ಟ್ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ಸದ್ಯಕ್ಕೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಂಧಿತ ಆರೋಪಿ ಮಹಾರಾಷ್ಟ್ರದ ಸಾಂಗ್ಲಿ ಮೂಲದವನಾಗಿದ್ದಾನೆ ಎಂದು ತಿಳಿದು ಬಂದಿದೆ. ಕುಡಚಿಯಲ್ಲಿರುವ …
Read More »Daily Archives: ನವೆಂಬರ್ 15, 2023
ಬೆಳಗಾವಿಯಲ್ಲಿ ದೀಪಾವಳಿ ಹಬ್ಬ ಗುಡಿ ಪಾಡವಾ ನಿಮಿತ್ತ ಎಮ್ಮೆಗಳ ಓಟ
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಲ್ಲ ಹಬ್ಬ, ಉತ್ಸವಗಳನ್ನು ಅದ್ಧೂರಿ ಮತ್ತು ವಿಶಿಷ್ಟವಾಗಿ ಆಚರಿಸಲಾಗುತ್ತದೆ. ದೀಪಾವಳಿ ಹಬ್ಬದ ಗುಡಿ ಪಾಡವಾ ನಿಮಿತ್ತ ನಗರದ ವಿವಿಧೆಡೆ ಆಯೋಜಿಸಿದ್ದ ಎಮ್ಮೆಗಳ ಓಟ ನೋಡುಗರನ್ನು ರೋಮಾಂಚನಗೊಳಿಸಿತು. ಎಮ್ಮೆಗಳ ವೈಯ್ಯಾರ, ಶೃಂಗಾರಕ್ಕೆ ಜನ ಮನಸೋತರು. ಎಮ್ಮೆ ಇಲ್ಲಿನ ಗೌಳಿಗರ ಪಾಲಿನ ನಿಜವಾದ ಲಕ್ಷ್ಮೀ ದೇವಿ. ವರ್ಷಪೂರ್ತಿ ಎಮ್ಮೆಗಳನ್ನು ಚೆನ್ನಾಗಿ ಮೇಯಿಸಿ, ಹಾಲು ಕರೆದು ಮಾರಾಟ ಮಾಡಿ ಬದುಕು ಕಟ್ಟಿಕೊಳ್ಳಲು ಶ್ರಮಿಸುವ ಇವರು, ದೀಪಾವಳಿ ಬಂತು ಎಂದರೆ ಸಾಕು …
Read More »ವಿಶ್ವಕಪ್ ಕ್ರಿಕೆಟ್: ಭಾರತ-ನ್ಯೂಜಿಲೆಂಡ್ ಹೈವೋಲ್ಟೇಜ್ ಸೆಮಿ ಫೈನಲ್ ವೀಕ್ಷಿಸಲಿರುವ ರಜಿನಿಕಾಂತ್
ಮುಂಬೈ: ಏಕದಿನ ವಿಶ್ವಕಪ್ ಕ್ರಿಕೆಟ್ನಲ್ಲಿಂದು ಭಾರತ-ನ್ಯೂಜಿಲೆಂಡ್ ತಂಡಗಳ ನಡುವೆ ಸೆಮಿ ಫೈನಲ್ ಪಂದ್ಯ ನಡೆಯಲಿದೆ. ಮುಂಬೈನ ಪ್ರಸಿದ್ಧ ವಾಂಖೆಡೆ ಕ್ರೀಡಾಂಗಣ ಈ ರೋಚಕ ಹಣಾಹಣಿಗೆ ಆತಿಥ್ಯ ವಹಿಸುತ್ತಿದೆ. ಜಗತ್ತಿನೆಲ್ಲೆಡೆಯ ಕ್ರಿಕೆಟ್ ಅಭಿಮಾನಿಗಳು ಈ ಪಂದ್ಯವನ್ನು ಎದುರು ನೋಡುತ್ತಿದ್ದು, ಭಾರತದ ಗೆಲುವಿಗಾಗಿ ಪೂಜೆ-ಪ್ರಾರ್ಥನೆಯಲ್ಲಿ ನಿರತರಾಗಿದ್ದಾರೆ. ಇನ್ನೊಂದೆಡೆ ಸಾವಿರಾರು ಪ್ರೇಕ್ಷಕರೊಂದಿಗೆ ಕ್ರೀಡಾಂಗಣದಲ್ಲೇ ಕುಳಿತು ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ತಮಿಳಿನ ಖ್ಯಾತ ನಟ ರಜಿನಿಕಾಂತ್ ಕೂಡಾ ಉತ್ಸುಕರಾಗಿದ್ದಾರೆ. ರಜಿನಿಕಾಂತ್ ಮಾತ್ರವಲ್ಲ, ಪ್ರಸಿದ್ಧ ಮಾಜಿ ಫುಟ್ಬಾಲ್ …
Read More »ನಿಕಟಪೂರ್ವ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಅಧಿಕಾರ ಸ್ವೀಕರಿಸಿ ಅಧಿಕೃತವಾಗಿ ಬಿ.ವೈ.ವಿಜಯೇಂದ್ರ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಅಲಂಕರಿಸಿದರು.
ಬೆಂಗಳೂರು: ರಾಜ್ಯ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಕ್ಷೇತ್ರದ ಶಾಸಕ ಹಾಗು ರಾಜ್ಯ ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪನವರ ಪುತ್ರ ಬಿ.ವೈ.ವಿಜಯೇಂದ್ರ ಇಂದು ಅಧಿಕಾರ ಸ್ವೀಕರಿಸಿದರು. ಈ ಮೂಲಕ ರಾಜ್ಯ ಬಿಜೆಪಿಗೆ ಯುವ ನೇತಾರನ ಸಾರಥ್ಯ ಸಿಕ್ಕಿದೆ. ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಹಿರಿಯರ ಆಶೀರ್ವಾದ ಪಡೆದು, ನಳೀನ್ ಕುಮಾರ್ ಕಟೀಲ್ ಅವರಿಂದ ವಿಜಯೇಂದ್ರ ಅಧಿಕಾರ ಸ್ವೀಕರಿಸಿದರು. ಸಮಾರಂಭದಲ್ಲಿ ಭಾಗವಹಿಸಿ ಬಿ.ಎಸ್.ಯಡಿಯೂರಪ್ಪ …
Read More »
Laxmi News 24×7