ಬೆಂಗಳೂರು: ಜೆಡಿಎಸ್ ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದ್ದು ತಪ್ಪು. ಹಾಗೂ ವಜಾಗೊಳಿಸಬೇಕೆಂದಿದ್ದರೆ ಸಭೆ ಕರೆದು 2/3 ಬೆಂಬಲದೊಂದಿಗೆ ಮಾಡಬೇಕು. ಯಾವುದೇ ನಿಯಮ ಪಾಲನೆ ಮಾಡದೇ ನನ್ನನ್ನು ಏಕಾಏಕಿ ಸ್ಥಾನದಿಂದ ತೆಗೆದು ಹಾಕಿದ್ದಾರೆ. ಈ ಬಗ್ಗೆ ನಾನು ಕೋರ್ಟ್ಗೆ ಹೋಗುತ್ತೇನೆ ಎಂದು ಹಿರಿಯ ರಾಜಕೀಯ ಮುಖಂಡ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಜೆಡಿಎಸ್ನಿಂದ ಅಮಾನತು ಮಾಡಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಇನ್ನು ಏನು ಉಚ್ಚಾಟನೆ ರೀ, …
Read More »Daily Archives: ನವೆಂಬರ್ 21, 2023
ಅಕಾಲಿಕವಾಗಿ ಮೃತಪಟ್ಟ ತಮ್ಮ ಮಗನ ನೆನಪಿಗಾಗಿ ದಂಪತಿ ಗೋಶಾಲೆಯನ್ನು ನಿರ್ಮಿಸುವ ಮೂಲಕ ಇತರರಿಗೆ ಮಾದರಿ
ಹಾವೇರಿ: ಕೆಲ ತಿಂಗಳ ಹಿಂದೆ ಸಂದೇಶ ಸೇಟ್(21) ಯುವಕ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಸಂದೇಶನ ಅಕಾಲಿಕ ಸಾವು ತಂದೆ – ತಾಯಿಗೆ ಆಘಾತ ಉಂಟು ಮಾಡಿತ್ತು. ಸಂದೇಶ ಜೀವಂತವಾಗಿದ್ದರೆ ಇಂದಿಗೆ 22ನೇ ವರ್ಷಕ್ಕೆ ಕಾಲಿಡುತ್ತಿದ್ದರು. ಆದರೆ ಜನ್ಮದಿನ ಆಚರಿಸಿಕೊಳ್ಳಬೇಕಾಗಿದ್ದ ಮಗ ಈಗ ನೆನಪು ಮಾತ್ರ. ಹಾಗಾಗಿ ಕುಟುಂಬಸ್ಥರು ಸಂದೇಶನ ಹೆಸರನ್ನು ಚಿರಸ್ಥಾಯಿಯಾಗಿಸಲು ಮುಂದಾಗಿದ್ದಾರೆ. ಸಂದೇಶ ಸೇಟ್ಹೌದು, ಕುಟುಂಬ ಇದೀಗ ಸಂದೇಶ ಹೆಸರಿನಲ್ಲಿ ಹಾವೇರಿ ಸಮೀಪದ ಗಾಂಧಿಪುರ ಗ್ರಾಮದಲ್ಲಿ ಗೋಶಾಲೆಯೊಂದನ್ನು ತೆರೆದಿದೆ. ಸಂದೇಶ …
Read More »ಬರಗಾಲದ ನಡುವೆ ರಾಜ್ಯದಲ್ಲಿ ಬಿತ್ತನೆಯಾಗಿದ್ದೆಷ್ಟು, ಫಸಲು ನಷ್ಟವಾಗಿದ್ದೆಷ್ಟು?
ಬೆಂಗಳೂರು: ರಾಜ್ಯದಲ್ಲಿ ಹಲವು ವರ್ಷಗಳ ನಂತರ ಮಳೆ ಕೊರತೆಯಿಂದ ಭೀಕರ ಬರಗಾಲ ಎದುರಾಗಿದ್ದು, ಇದರಿಂದ ರೈತರು ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಸರಿಯಾಗಿ ಮಳೆಯಾಗದ ಕಾರಣ ಸರ್ಕಾರ ಈ ಮೊದಲು 216 ಬರಪೀಡಿತ ತಾಲೂಕುಗಳೆಂದು ಘೋಷಣೆ ಮಾಡಿತ್ತು. ನಂತರ 7 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈಗಾಗಲೇ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಈಗ ಮತ್ತೂ 7 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಮೂಲಕ …
Read More »ಹಿಂಡಲಗಾ ಜೈಲಿಗೆ ಗೃಹ ಸಚಿವ ಪರಮೇಶ್ವರ್ ದಿಢೀರ್ ಭೇಟಿ
ಬೆಳಗಾವಿ: ಬೆಳಗಾವಿಯ ಹಿಂಡಲಗಾದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇಂದು ಜೈಲಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೈಲು ಅಧಿಕಾರಿಗಳನ್ನು ಈ ವೇಳೆ ತರಾಟೆಗೆ ತೆಗೆದುಕೊಂಡಿದ್ದಾರೆ. ಹಿಂಡಲಗಾ ಜೈಲಿನಲ್ಲಿ ಹಣ ಕೊಟ್ಟರೆ ಕೈದಿಗಳಿಗೆ ಮೊಬೈಲ್ ಫೋನ್ ಸೇರಿ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ. ಇಲ್ಲದಿದ್ದರೆ ಸರಿಯಾದ ಸೌಲಭ್ಯಗಳನ್ನು ನೀಡುವುದಿಲ್ಲ ಎಂಬ ಬಗ್ಗೆ ಸ್ವತಃ ಅಲ್ಲಿನ ಕೈದಿಯೊಬ್ಬ ಜೈಲಿನಿಂದಲೇ ವಿಡಿಯೋ …
Read More »ವಿಶ್ವಕಪ್ ಫೈನಲ್ನಲ್ಲಿ ಭಾರತದ ಸೋಲು: ನಿರಾಸೆಯಿಂದ ಯುವಕ ಸಾವು!
ಗುವಾಹಟಿ(ಅಸ್ಸೋಂ): ನಿನ್ನೆ ನಡೆದ ಐಸಿಸಿ ಕ್ರಿಕೆಟ್ ವಿಶ್ವಕಪ್ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲನುಭವಿಸಿದ್ದರಿಂದ ತೀವ್ರ ನಿರಾಸೆಯಿಂದ ಖಿನ್ನತೆಗೆ ಒಳಗಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಗುವಾಹಟಿಯ ಸಾವ್ಕುಚಿಯಲ್ಲಿ ನಡೆದಿದೆ. ಮೃಣಾಲ್ ಮಜುಂದಾರ್(20) ಮೃತ ಯುವಕ. ಮೃತ ಮೃಣಾಲ್ ಕುಟುಂಬಸ್ಥರ ಪ್ರಕಾರ, ಮೃಣಾಲ್ ನಿನ್ನೆ ಭಾರತದ ಸೋಲಿನಿಂದ ನಿರಾಸೆಗೊಂಡು ಊಟ ಸೇವಿಸದೇ ರಾತ್ರಿ 11 ಗಂಟೆಗೆ ಮಲಗಿದ್ದರು. ಮೃಣಾಲ್ ಬೆಳಗ್ಗೆ ಎಷ್ಟೊತ್ತಾದರೂ ಏಳದಿದ್ದಾಗ. ಅನುಮಾನಗೊಂಡ ಕುಟುಂಬಸ್ಥರು, ಮೃಣಾಲ್ ಮಲಗಿದ್ದ ಕೊಠಡಿಯ ಬಾಗಿಲು ಮುರಿದು …
Read More »ಆಸ್ಟ್ರೇಲಿಯಾ ವಿರುದ್ಧದ ಟಿ-20 ಸರಣಿಗೆ ಸೂರ್ಯ ನಾಯಕ
ಹೈದರಾಬಾದ್: ವಿಶ್ವಕಪ್ಗೂ ಮುನ್ನ ಆರಂಭವಾಗಿದ್ದ ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿಯ ಏಕದಿನ ಪಂದ್ಯಗಳು ಮುಗಿದಿವೆ. 5 ಟಿ20 ಪಂದ್ಯಗಳು ಬಾಕಿ ಇದ್ದು, ಇದು ನವೆಂಬರ್ 23ರಿಂದ ಆರಂಭವಾಗಲಿದೆ. ವಿಶ್ವಕಪ್ ಮುಗಿದ ನಾಲ್ಕು ದಿನಗಳ ಅವಧಿಯ ಅಂತರದಲ್ಲಿ ಸರಣಿ ಆರಂಭವಾಗುತ್ತಿದೆ. ಇದಕ್ಕೆ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ 15 ಜನ ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ. ನವೆಂಬರ್ 23 ರಂದು ವಿಶಾಖಪಟ್ಟಣದಲ್ಲಿ ಆರಂಭವಾಗಲಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ-20ಸರಣಿ ಡಿಸೆಂಬರ್ 3 ರಂದು …
Read More »ಹೈಕೋರ್ಟ್ ಆದೇಶ: ಶಿವಮೂರ್ತಿ ಮುರುಘಾ ಶರಣರ ಬಿಡುಗಡೆ
ದಾವಣಗೆರೆ: ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಚಿತ್ರದುರ್ಗದ ಎರಡನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜಾರಿ ಮಾಡಿದ್ದ ಜಾಮೀನು ರಹಿತ ವಾರಂಟ್ಗೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೇ ಶರಣರನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲಾಗಿದೆ. ಎರಡನೇ ಫೋಕ್ಸೊ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ವಿಚಾರಣೆ ನಡೆಸಿದ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಸ್ವಾಮೀಜಿ ಬಂಧನಕ್ಕೆ ವಾರಂಟ್ ಜಾರಿ ಮಾಡಿತ್ತು. ವಾರಂಟ್ ಪಡೆದ …
Read More »ಕಾಂಗ್ರೆಸ್ ಮುಖಂಡೆ ವೀಣಾ ಕಾಶಪ್ಪನವರ ಕಾರು ಅಪಘಾತ
ಬಾಗಲಕೋಟೆ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಹಾಗೂ ಕಾಂಗ್ರೆಸ್ ಮುಖಂಡೆ ವೀಣಾ ಕಾಶಪ್ಪನವರ ಕಾರು ಅಪಘಾತವಾಗಿದ್ದು, ಅಪಾಯದಿಂದ ಅವರು ಪಾರಾಗಿದ್ದಾರೆ. ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ರಸ್ತೆಯಲ್ಲಿ ಸೋಮವಾರ ಕಾರು ಅಪಘಾತ ಸಂಭವಿಸಿದೆ. ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ವೀಣಾ ಕಾಶಪ್ಪನವರ ಅವರಿದ್ದ ಕಾರು ಎದುರುಗಡೆ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಎದುರುಗಡೆ ಕಾರಿನಲ್ಲಿದ್ದ ಪ್ರಯಾಣಿಕರು ಸಹ ಗಾಯಗೊಂಡಿದ್ದಾರೆ. ವೀಣಾ ಕಾಶಪ್ಪನವರಿಗೆ ಚಿಕ್ಕಪುಟ್ಟ ಗಾಯವಾಗಿದ್ದು, ವಿಜಯಪುರ ಸ್ಥಳೀಯ ಆಸ್ಪತ್ರೆಗೆ ವೀಣಾರನ್ನು …
Read More »