Breaking News

Monthly Archives: ನವೆಂಬರ್ 2023

155 ಪೌರಕಾರ್ಮಿಕರ ಖಾಯಮಾತಿಗೆ ನಿರ್ಧಾರ: ಬೆಳಗಾವಿ ಡಿಸಿ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅರ್ಹ 155 ಪೌರಕಾರ್ಮಿಕರನ್ನು ಖಾಯಂಗೊಳಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಪಾಲಿಕೆಯಲ್ಲಿ ನೇರ ನೇಮಕಾತಿಯಡಿ ಖಾಲಿ ಇರುವ ಒಟ್ಟು 155 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ ದಿನಾಂಕದ ಪೂರ್ವದಲ್ಲಿ ನಿರಂತರವಾಗಿ ಕ್ಷೇಮಾಭಿವೃದ್ಧಿ/ದಿನಗೂಲಿ/ಗುತ್ತಿಗೆ/ಸಮಾನ ಕೆಲಸಕ್ಕೆ ಸಮಾನ ವೇತನ/ಹೊರಗುತ್ತಿಗೆ ಮೇರೆಗೆ ಕನಿಷ್ಠ 2 ವರ್ಷಗಳ ಸೇವೆ ಸಲ್ಲಿಸಿರುವ ಮತ್ತು ಹಾಲಿ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಸ್ವೀಕೃತ ಅರ್ಜಿಗಳನ್ನು ಪರಿಶೀಲನಾ ಸಮಿತಿಯಿಂದ ಪರಿಶೀಲನೆಗೆ …

Read More »

ಅಂಬರೀಶ್ ಪುಣ್ಯಸ್ಮರಣೆಯಂದು ಪುತ್ರನ ಹೊಸ ಸಿನಿಮಾ ಬಿಡುಗಡೆ; ಸುಮಲತಾ, ದರ್ಶನ್​​ ಭಾವುಕ

 ಹಿರಿಯ ನಟ​ ಅಂಬರೀಶ್ ಇಹಲೋಕ ತ್ಯಜಿಸಿ ಇಂದಿಗೆ ಐದು ವರ್ಷ. 5ನೇ ಪುಣ್ಯಸ್ಮರಣೆಯಂದು ಅವರ ಪುತ್ರ ನಟಿಸಿರುವ ಹೊಸ ಸಿನಿಮಾ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದ ಜನಪ್ರಿಯ ನಟ, ಮಂಡ್ಯದ ಗಂಡು ಹಿರಿಮೆಯ ಡಾ.ಅಂಬರೀಶ್​ ಕೊನೆಯುಸಿರೆಳೆದು ಇಂದಿಗೆ 5 ವರ್ಷವಾಗುತ್ತಿದೆ. ಐದನೇ ವರ್ಷದ ಪುಣ್ಯಸ್ಮರಣೆಯ ಈ ದಿನ ಪುತ್ರ ಅಭಿಷೇಕ್ ಅಂಬರೀಶ್‌​ ನಟಿಸಿರುವ ‘ಬ್ಯಾಡ್​ ಮ್ಯಾನರ್ಸ್’ ಸಿನಿಮಾ ತೆರೆಕಂಡಿದೆ. ಪತ್ನಿ ಸುಮಲತಾ ಅಂಬರೀಶ್​ ಸೇರಿದಂತೆ ಗಣ್ಯರು ಅಂಬಿ ಅವರನ್ನು ಸ್ಮರಿಸಿ, ಭಾವುಕ …

Read More »

ಯುವತಿಯರಿಂದ ನಗ್ನ ವಿಡಿಯೋ ಕಾಲ್ ಮಾಡಿ ವಂಚಿಸುವ ಗ್ಯಾಂಗ್ ಆಯಕ್ಟಿವ್

ಹುಬ್ಬಳ್ಳಿ: ಸೈಬರ್ ವಂಚನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ಸಾಮಾಜಿಕ ಜಾಲತಾಣವನ್ನು ಸದ್ಬಳಕೆ ಮಾಡಿಕೊಂಡು ವಂಚನೆ ಮಾಡುವ ವಂಚಕರ ಜಾಲ ಸದ್ಯ ನಗರದಲ್ಲಿ ಫುಲ್​ ಆಯಕ್ಟಿವ್​​ ಆಗಿದೆ.‌ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಯುವಕನೊಬ್ಬ ವಂಚಕ ಜಾಲದಲ್ಲಿ ಸಿಲುಕಿ ಒದ್ದಾಡಿದ್ದಾರೆ. ವಿಡಿಯೋ ಕಾಲ್ ಮೂಲಕ ಸ್ಕ್ರೀನ್​ ಶಾಟ್​ ತೆಗೆದುಕೊಂಡು ಸಂತ್ರಸ್ತರನ್ನು ಬ್ಲಾಕ್​ಮೇಲ್ ಮಾಡುವ ಮೂಲಕ ಆರೋಪಿಗಳು ವಂಚಿಸುತ್ತಿದ್ದಾರೆ. ವ್ಯಕ್ತಿಯೊಬ್ಬರಿಗೆ ಅಪರಿಚಿತ ಮಹಿಳೆಯೊಬ್ಬಳು ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡಿದ್ದಾರೆ. ಬಳಿಕ ಇವರ …

Read More »

ತಹಶೀಲ್ದಾರ್ ಬಂಧನಕ್ಕೆ ವಾರಂಟ್ ಜಾರಿ

ಹಾಸನ: ಜಮೀನು ವ್ಯಾಜ್ಯ ಪ್ರಕರಣವೊಂದರಲ್ಲಿ ಸಾಕ್ಷ್ಯ ಹೇಳಲು ಕೋರ್ಟ್‌ಗೆ ಹಾಜರಾಗದ ಹಾಸನ ತಹಶೀಲ್ದಾರ್ ಶ್ವೇತಾ ವಿರುದ್ಧ ಸಿಟಿ ಸಿವಿಲ್ ಕೋರ್ಟ್ ಬಂಧನ ವಾರಂಟ್‌ ಹೊರಡಿಸಿದೆ. ಶ್ವೇತಾ ಅವರನ್ನು ಕರೆದುಕೊಂಡು ಹೋಗಲು ಗುರುವಾರ ಕೋರ್ಟ್‌ ಸಿಬ್ಬಂದಿ ಮತ್ತು ವಕೀಲರು ಕಚೇರಿಗೆ ಆಗಮಿಸಿದ್ದರು. ಆದರೆ ಶ್ವೇತಾ ಕಚೇರಿಯಲ್ಲಿರಲಿಲ್ಲ. ಪ್ರಕರಣವೇನು?: ಹಾಸನ ತಾಲೂಕಿನ ಹೇಮಾ ಎಂಬವರ ಭೂಮಿ 6/1 ಭಾಗಕ್ಕೆ ಆದೇಶವಾಗಿದ್ದು, ನಂತರ ಹದ್ದುಬಸ್ತ್‌ಗಾಗಿ ಸ್ವಾಧೀನ ಮಾಡಬೇಕು ಎಂದು ಕೋರ್ಟ್‌ ಆದೇಶಿಸಿತ್ತು. 2014ರಿಂದ ಇಲ್ಲಿವರೆಗೂ ಈ ಕುರಿತು …

Read More »

ಅಟ್ರಾಸಿಟಿ ಕೇಸ್ ರದ್ದತಿಗೆ ನಕಾರ: ಆಧುನಿಕ ಯುಗದಲ್ಲೂ ಅಸ್ಪೃಶ್ಯತೆ ಆಚರಣೆಗೆ ಹೈಕೋರ್ಟ್ ಬೇಸರ

ಬೆಂಗಳೂರು: ಆಧುನಿಕ ಯುಗದಲ್ಲಿಯೂ ಗ್ರಾಮೀಣ ಪ್ರದೇಶಗಳಲ್ಲಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವ ಕುರಿತು ಆಘಾತ ವ್ಯಕ್ತಪಡಿಸಿರುವ ಹೈಕೋರ್ಟ್, ಸಾರ್ವಜನಿಕ ಸ್ಥಳದಂತಿರುವ ದೇವಾಲಯಕ್ಕೆ ದಲಿತ ಕುಟುಂಬ ಪ್ರವೇಶಕ್ಕೆ ಅಡ್ಡಿಪಡಿಸಿ, ಜಾತಿ ಹೆಸರಿನಲ್ಲಿ ನಿಂದಿಸಿ ಹಲ್ಲೆ ನಡೆಸಿದ ಆರೋಪದಲ್ಲಿ ಎಂಟು ಮಂದಿಯ ವಿರುದ್ಧದ ಪ್ರಕರಣ ರದ್ದುಗೊಳಿಸಲು ನಿರಾಕರಿಸಿತು.   ತಮ್ಮನ್ನು ಪ್ರಕರಣದಿಂದ ಮುಕ್ತಗೊಳಿಸುವಂತೆ ಕೋರಿ ಪಾಂಡುರಗ ಭಟ್ ಸೇರಿದಂತೆ ಇತರೆ ಏಳು ಮಂದಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪಪೀಠ, …

Read More »

ಬಾಲಕ ಸಾವು ಪ್ರಕರಣ: ಶಾಲೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೋಸಂಬೆ ಭೇಟಿ, ಪರಿಶೀಲನೆ

ವಿಜಯಪುರ : ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಬುಧವಾರ ಶಾಲಾ ಕಟ್ಟಡದಲ್ಲಿ ನೀರಿನ ವಾಟರ್​ ಫಿಲ್ಟರ್​ ಟ್ಯಾಂಕ್‌ ಮಗುವಿನ ಮೇಲೆ ಬಿದ್ದು ಬಾಲಕ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಗುರುವಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಶಾಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.   ಅವರೊಂದಿಗೆ ಇನ್ನಿತರ ಅಧಿಕಾರಿಗಳು ಜೊತೆಗಿದ್ದರು. ಬಳಿಕ ಮೃತ ಬಾಲಕನ ಮನೆಗೆ ಭೇಟಿ ನೀಡಿ ಆ ಬಾಲಕನ ತಾಯಿಗೆ ಸಾಂತ್ವನ ಹೇಳಿದರು. …

Read More »

ನ.28ಕ್ಕೆ ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್ ಎಲೆಕ್ಷನ್‍

ಬಳ್ಳಾರಿ ನ.11: ಬಳ್ಳಾರಿ (Bellari) ಜಿಲ್ಲೆ ಕಾಂಗ್ರೆಸ್ (Congress)​ ಹಿಡಿತದಲ್ಲಿದೆ. ಜಿಲ್ಲೆಯ ಐದೂ ಕ್ಷೇತ್ರದಲ್ಲಿ ಕಾಂಗ್ರೆಸ್​ ಶಾಸಕರಿದ್ದಾರೆ. ಇದೀಗ ಬಳ್ಳಾರಿ ಮಹಾನಗರ ಪಾಲಿಕೆ (Bellari City Corporation) ಮೇಯರ್ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇದು “ಕೈ” ಗೆ ಪ್ರತಿಷ್ಠೆಯಾಗಿದೆ. ನ.28ರಂದು ಬಳ್ಳಾರಿ ಪಾಲಿಕೆ ಮೇಯರ್​, ಉಪಮೇಯರ್ ಚುನಾವಣೆ ನಡೆಯಲಿದೆ. ರಾಜ್ಯದ ಕಿರಿಯ ಮೇಯರ್ ಹೆಗ್ಗಳಿಕೆಗೆ ಪಾತ್ರವಾಗಿದ್ದ 23 ವರ್ಷದ ಡಿ.ತ್ರಿವೇಣಿ ಏಳು ತಿಂಗಳು ಆಡಳಿತ ನಡೆಸಿ, ನವೆಂಬರ್​​ 4ರಂದು ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ನೂತನ …

Read More »

ಮದ್ವೆ ಮಂಟಪಕ್ಕೆ ಹೋಗುತ್ತಿದ್ದಾಗ ವರ ಎಸ್ಕೇಪ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಪ್ರಿಯಕರ

ತುಮಕೂರು, (ನವೆಂಬರ್ 08): ಬೆಂಗಳೂರಿನ ನೆಲಗದರನಹಳ್ಳಿ ಹಾಗೂ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಯುವತಿ ಸಾಮಾಜಿಕ ಜಾಲತಾಣಗಳಲ್ಲಿ (Social Media) ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಪ್ರೇಮಾಂಕುರವಾಗಿದೆ(Love). ಬಳಿಕ ಬೆಂಗಳೂರಿನ (Bengaluru) ನೆಲಗದರನಹಳ್ಳಿ ಮೂಲಕ ಗಜೇಂದ್ರ, ಮದುವೆಯಾಗುವುದಾಗಿ (Marriage) ಎರಡು ವರ್ಷಗಳಿಂದ ಯುವತಿಯನ್ನು ಕರೆದುಕೊಂಡು ಎಲ್ಲೊಂದರಲ್ಲಿ ಸುತ್ತಾಡಿದ್ದಾನೆ. ಆದ್ರೆ, ಇದೀಗ ಮದುವೆ ಮುಹೂರ್ತ ಸಮೀಪಿಸುತ್ತಿದ್ದಂತೆಯೇ ಗಜೇಂದ್ರ ಎಸ್ಕೇಪ್ ಆಗಿದ್ದಾನೆ. ಹೌದು…ಬೆಂಗಳೂರಿನ ಪಿಣ್ಯಾದ ದುಗ್ಗಾಲಮ್ಮ ದೇವಾಲಯದಲ್ಲಿ ಇಬ್ಬರ ಮದುವೆ ಫಿಕ್ಸ್ ಆಗಿತ್ತು. ಆದ್ರೆ, …

Read More »

ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತ: ಸರ್ಕಾರದ ವಿರುದ್ಧ ಯತ್ನಾಳ್ ಆಕ್ರೋಶ

ಬೆಂಗಳೂರು, ನವೆಂಬರ್ 22: ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ (Siddi community) ವಿಶೇಷ ಗಿರಿಜನ ಯೋಜನೆಯಡಿ ನೀಡಲಾಗುತ್ತಿದ್ದ ಪೌಷ್ಠಿಕಾಹಾರವನ್ನು ಅನುದಾನ ಕೊರತೆಯ ಕಾರಣ ಸ್ಥಗಿತಗೊಳಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ಧಿ ಬುಡಕಟ್ಟು ಸಮುದಾಯದ ಪೌಷ್ಟಿಕಾಹಾರ ಸ್ಥಗಿತಗೊಂಡ ವಿಷಯಕ್ಕೆ ಸಂಬಂಧಿಸಿದ ವರದಿಯೊಂದನ್ನು ಲಗತ್ತಿಸಿ ಸಾಮಾಜಿಕ ಮಾಧ್ಯಮ ಎಕ್ಸ್​​ ಪೋಸ್ಟ್​​ನಲ್ಲಿ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಸಿದ್ಧಿ ಬುಡಕಟ್ಟು ಸಮುದಾಯಕ್ಕೆ …

Read More »

ಇನ್ನೂ 2000 ರೂ. ಜಮೆ ಆಗಿಲ್ವಾ? ಗೃಹಲಕ್ಷ್ಮಿಯರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜಾರಿಗೊಂಡು ಹಲವು ತಿಂಗಳು ಕಳೆದರೂ ಇನ್ನೂ ಅನೇಕ ಗೃಹಿಣಿಯ ಖಾತೆಗೆ 2,000 ರೂ. ಜಮೆಯಾಗಿಲ್ಲ. ಕೊನೆಗೂ ಈ ಸಮಸ್ಯೆಗೆ ಅಂತ್ಯ ಹಾಡಲು ಸರ್ಕಾರ ಮುಂದಾಗಿದೆ. ಈ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಒಟ್ಟು 1.10 ಕೋಟಿ ಗೃಹಲಕ್ಷ್ಮಿಯರಿಗೆ ಹಣ ಜಮೆಯಾಗಿದ್ರೂ 5-6 ಲಕ್ಷದಷ್ಟು ಮಹಿಳೆಯರಿಗೆ ತಾಂತ್ರಿಕ ದೋಷದಿಂದ ಹಣ ಜಮೆಯಾಗಿರಲಿಲ್ಲ. ಇದೀಗ ಗೃಹಲಕ್ಷ್ಮಿಯರಿದ್ದಡೆಗೆ ಅಧಿಕಾರಿಗಳು ತೆರಳಿ ಅದಾಲತ್ ನಡೆಸಲಿದ್ದಾರೆ. ಇನ್ನೊಂದು …

Read More »