Breaking News

Monthly Archives: ನವೆಂಬರ್ 2023

ಇಸ್ರೇಲ್‌ಗೆ ಶಸ್ತ್ರಾಸ್ತ್ರ ರಫ್ತು ನಿಲ್ಲಿಸುವಂತೆ ಎಲ್ಲಾ ರಾಷ್ಟ್ರಗಳಿಗೆ ಸೌದಿ ಅರೇಬಿಯಾ ಒತ್ತಾಯ

ರಿಯಾದ್(ಸೌದಿ ಅರೇಬಿಯಾ): ಇಸ್ರೇಲ್-ಹಮಾಸ್ ಸಂಘರ್ಷ ನಿಲ್ಲುವಂತೆ ಕಾಣುತ್ತಿಲ್ಲ. ಈ ಬೆನ್ನಲ್ಲೇ ಇಸ್ರೇಲ್‌ಗೆ ಶಸ್ತ್ರಾಸ್ತ್ರ ರಫ್ತು ಮಾಡುವುದನ್ನು ನಿಲ್ಲಿಸುವಂತೆ ಸೌದಿ ಅರೇಬಿಯಾದ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಮಂಗಳವಾರ ಎಲ್ಲಾ ರಾಷ್ಟ್ರಗಳನ್ನು ಒತ್ತಾಯಿಸಿದ್ದಾರೆ. ಬ್ರಿಕ್ಸ್ ಜಂಟಿ ಸಭೆಯ ಸಂದರ್ಭದಲ್ಲಿ ಈ ವಿನಂತಿ ಮಾಡಿದ್ದಾರೆ. ಬ್ರಿಕ್ಸ್ ಗುಂಪಿನ ವರ್ಚುವಲ್ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸೌದಿ ಅರೇಬಿಯಾವು ಪ್ಯಾಲೇಸ್ಟಿನಿಯನ್ ರಾಜ್ಯವನ್ನು ಸ್ಥಾಪಿಸಲು ಗಂಭೀರ ಮತ್ತು ಸಮಗ್ರ ಶಾಂತಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಒತ್ತಾಯಿಸುತ್ತಿದೆ. ಇಸ್ರೇಲ್ …

Read More »

ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ:B.S.Y.

ಬೆಂಗಳೂರು: ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಬುಧವಾರ) ತೆಲಂಗಾಣಕ್ಕೆ ತೆರಳುವರು. ಬೆಳಿಗ್ಗೆ 7.40ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹೈದರಾಬಾದ್​ಗೆ ಪ್ರಯಾಣಿಸಲಿದ್ದಾರೆ. ಬೆಳಿಗ್ಗೆ 11.20ಕ್ಕೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಜಹೀರಾಬಾದ್​ನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವ ಅವರು ಮಧ್ಯಾಹ್ನ 2ಕ್ಕೆ ರ‍್ಯಾಲಿಯಲ್ಲಿ ಭಾಗವಹಿಸುವರು. ಬಳಿಕ ಬೀದರ್​ಗೆ ಆಗಮಿಸಿ, ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ …

Read More »

ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು:ಡಿ .ಕೆ. ಶಿ.

ಬೆಂಗಳೂರು : ಜಾತಿ ಗಣತಿ ಮಾಡಿ ಸಾಮಾಜಿಕ ನ್ಯಾಯ ಒದಗಿಸಬೇಕು ಎಂಬುದು ನಮ್ಮ ಪಕ್ಷದ ನಿಲುವು. ಆ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಆದರೆ ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ಆಗಬೇಕು ಎಂದು ವಿವಿಧ ಸಮುದಾಯಗಳು ಆಗ್ರಹಿಸಿವೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದ ಬಳಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಸಿಗಬೇಕು ಎಂದು ಅನೇಕ ಸಮುದಾಯಗಳು …

Read More »

ತಾಯಿ, ಮಗು ಸಾವು ಪ್ರಕರಣ: ಸಚಿವ ಜಾರ್ಜ್ ರಾಜೀನಾಮೆಗೆ ಆರ್​ ಅಶೋಕ್ ಆಗ್ರಹ

ಬೆಂಗಳೂರು : ನಗರದಲ್ಲಿ ಇತ್ತೀಚೆಗೆ ವಿದ್ಯುತ್​ ಅವಘಡದಲ್ಲಿ ತಾಯಿ, ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ನೈತಿಕ ಹೊಣೆ ಹೊತ್ತು ಇಂಧನ ಸಚಿವ ಕೆ ಜೆ ಜಾರ್ಜ್​ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವೈರ್​ಗಳಿಗೆ ಇಲಿ ಕಚ್ಚಿ ಘಟನೆ ಸಂಭವಿಸಿದೆ ಎಂಬ ನೆಪ ಹೇಳಿಕೊಂಡು ತಿಪ್ಪೆ ಸಾರಿಸುವ ಮಟ್ಟಕ್ಕೆ ಸಚಿವರು ಇಳಿದಿರುವುದು …

Read More »

ಹಣಕಾಸಿನ ವಿಚಾರ: ವಿಜಯಪುರದಲ್ಲಿ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದ 12 ಜನ ಆರೋಪಿಗಳ ಬಂಧನ

ವಿಜಯಪುರ: ಹಣಕಾಸಿನ ವಿಚಾರದ ಹಿನ್ನೆಲೆ ವ್ಯಕ್ತಿಯೊಬ್ಬನ ಮೇಲೆ ಗುಂಡು ಹಾರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನ ಆರೋಪಿಗನ್ನು ಗೋಲಗುಂಬಜ್‌ ಪೊಲೀಸರು ಬಂಧಿಸಿದ್ದಾರೆ ಎಂದು ಎಸ್ಪಿ ಋಷಿಕೇಶ್ ಸೋನಾವಣೆ ತಿಳಿಸಿದ್ದಾರೆ.   ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ”ಹಣಕಾಸಿನ ವ್ಯವಹಾರ ಹಿನ್ನೆಲೆ ಫೈರಿಂಗ್ ಮಾಡಿದ್ದ ರೌಡಿಶೀಟರ್ ಹೈದರ್ ಅಲಿ ನದಾಫ್ ಸೇರಿದಂತೆ 12 ಜನ ಆರೋಪಿಗಳನ್ನು ಅರೆಸ್ಟ್​ ಮಾಡಲಾಗಿದೆ. ನವೆಂಬರ್ 10ರಂದು ನಗರದ ಒಡ್ಡರ ಓಣಿಯಲ್ಲಿ ಸೋಹೆಲ್ ಕಕ್ಕಳಮೇಲಿ ಎಂಬವರ …

Read More »

ಭಗವದ್ವೀತೆಯಿಂದ ಸಿಗುವ ಚಿತ್‌ ಸ್ವಾಸ್ಥ್ಯದ ಮೂಲಕ ಜಗತ್ತಿನ ಜಟಿಲ ಸಮಸ್ಯೆ ನಿವಾರಣೆ ಸಾಧ್ಯ’ :ಸ್ವರ್ಣವಲ್ಲಿ ಶ್ರೀ

ಬೆಳಗಾವಿ: ‘ಭಗವದ್ವೀತೆಯಿಂದ ಸಿಗುವ ಚಿತ್‌ ಸ್ವಾಸ್ಥ್ಯದ ಮೂಲಕ ಜಗತ್ತಿನ ಜಟಿಲ ಸಮಸ್ಯೆ ನಿವಾರಣೆ ಸಾಧ್ಯ’ ಎಂದು ಶಿರಸಿ ಸೋಂದಾ ಸ್ವರ್ಣವಲ್ಲಿ ಮಠಾಧೀಶ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ತಿಳಿಸಿದರು. ಇಲ್ಲಿನ ಸಂತ ಮೀರಾ ಶಾಲೆಯಲ್ಲಿ ಮಂಗಳವಾರ ರಾಜ್ಯಮಟ್ಟದ ಭವದ್ಗೀತಾ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಮಾನಾಡಿದ ಅವರು,’ಸ್ವಚ್ಛ ಮನಸ್ಸಿನ ತಳಹದಿ ಮೇಲೆ ವ್ಯಕ್ತಿತ್ವ ವಿಕಸನ, ನೈತಿಕ ಪುನರುತ್ಥಾನ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರೀಯ ಭಾವೈಕ್ಯ ಎಂಬ ನಾಲ್ಕು ಕಂಬಗಳನ್ನು ನೆಟ್ಟು ಭಾರತ ಎಂಬ ಮಹಲ್ …

Read More »

ಬೈಲಹೊಂಗಲ | ಕಬ್ಬಿನ ಜಮೀನಿಗೆ ಬೆಂಕಿ; ₹12 ಲಕ್ಷ ಹಾನಿ

ಬೈಲಹೊಂಗಲ: ಸಮೀಪದ ಹೊಸೂರ ಗ್ರಾಮದಲ್ಲಿ ರೈತರೊಬ್ಬರ ಕಬ್ಬಿನ ಜಮೀನಿಗೆ ವಿದ್ಯುತ್ ತಗುಲಿ ಮಂಗಳವಾರ ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾಗಿದೆ. ಗ್ರಾಮದ ರೈತ ಬಾಳಪ್ಪ ತುಕ್ಕನ್ನವರ ಅವರಿಗೆ ಸೇರಿದ ಸುಮಾರು ಆರು ಎಕರೆ ಜಮೀನಿನಲ್ಲಿ ಕಬ್ಬು ಬೆಳೆಯಲಾಗಿತ್ತು. ಕಬ್ಬು ಕಟಾವಿಗೆ ಬಂದಿತ್ತು. ಕಬ್ಬಿನ ಬೆಳೆಗೆ ತಾಗಿಕೊಂಡು ವಿದ್ಯುತ್ ಪ್ರಸರಣದ ತಂತಿಗಳು ಜೋತು ಬಿದ್ದಿದ್ದವು. ಜೋತು ಬಿದ್ದ ವಿದ್ಯುತ್ ತಂತಿಗಳನ್ನು ತೆರುವುಗೊಳಿಸುವಂತೆ ರೈತರು ಸಂಬಂಧಿಸಿದ ಹೆಸ್ಕಾಂ ಇಲಾಖೆಗೆ ಸಾಕಷ್ಟು ಮನವಿ ಮಾಡಿದ್ದರು. …

Read More »

ಮಗಳನ್ನು ಪ್ರೀತಿಸುವಂತೆ (Love) ಪೀಡಿಸುತ್ತಿದ್ದ ಪಾಗಲ್ ಪ್ರೇಮಿಯ ಉಸಿರನ್ನ ಯುವತಿಯ ತಂದೆ ನಿಲ್ಲಿಸಿದ್ದಾರೆ.

ಬೆಂಗಳೂರು: ಮಗಳನ್ನು ಪ್ರೀತಿಸುವಂತೆ (Love) ಪೀಡಿಸುತ್ತಿದ್ದ ಪಾಗಲ್ ಪ್ರೇಮಿಯ ಉಸಿರನ್ನ ಯುವತಿಯ ತಂದೆ ನಿಲ್ಲಿಸಿದ್ದಾರೆ. ಡೇವಿಡ್ ಕೊಲೆಯಾದ ಯುವಕ. ಮಂಜುನಾಥ್ ಎಂಬವರ ಮಗಳನ್ನು ಡೇವಿಡ್ ಪ್ರೀತಿಸುವಂತೆ ಪೀಡಿಸುತ್ತಿದ್ದನು. ಇದೇ ವಿಚಾರವಾಗಿ ಒಂದೂವರೆ ವರ್ಷದ ಹಿಂದೆ ರಾಜಿ ಪಂಚಾಯ್ತಿಯೂ ನಡೆದಿತ್ತು. ಮಗಳ ತಂಟೆಗೆ ಬರದಂತೆ ಡೇವಿಡ್​ಗೆ ಎಚ್ಚರಿಕೆ ನೀಡಲಾಗಿತ್ತು. ಆದ್ರೂ ಡೇವಿಡ್ ತನ್ನ ಚಾಳಿಯನ್ನು ನಿಲ್ಲಿಸಿರಲಿಲ್ಲ. ಮದುವೆ ಮಾಡಿಕೊಡಿ ಇಲ್ಲವಾದ್ರೆ ಖಾಸಗಿ ಫೋಟೋಗಳನ್ನು (Private Photo) ರಿವೀಲ್ ಮಾಡುತ್ತೀನಿ ಎಂದು ಬೆದರಿಕೆ …

Read More »

ಮುಂಬೈ ಉಗ್ರರ ದಾಳಿಗೆ 15 ವರ್ಷ! ಎಲ್​ಇಟಿಯನ್ನ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಇಸ್ರೇಲ್

ನವದೆಹಲಿ: ಭಾರತದ ವಾಣಿಜ್ಯ ನಗರಿ ಮುಂಬೈನಲ್ಲಿ 26/11 (Mumbai 26/11 attack) ದಾಳಿ ನಡೆದು ಇಂದಿಗೆ 15 ವರ್ಷಗಳು ಕಳೆದಿವೆ. ಈ ಕರಾಳ ದಿನದ ಸಂದರ್ಭದಲ್ಲಿ ಇಸ್ರೇಲ್ ಸರ್ಕಾರ (Isreal Government) ಮಹತ್ವದ ನಿರ್ಧಾರ ಕೈಗೊಂಡಿದೆ. ಭಾರತದ ಸ್ನೇಹಿ ರಾಷ್ಟ್ರಗಳಲ್ಲಿ ಒಂದಾಗಿರುವ ಇಸ್ರೇಲ್ ಅಧಿಕೃತವಾಗಿ ಲಷ್ಕರ್-ಎ-ತೈಬಾ (Lashkar-e-Taiba) ಸಂಘಟನೆಯನ್ನ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದೆ. ಭಾರತದಲ್ಲಿರುವ ಇಸ್ರೇಲ್ ರಾಯಭಾರ ಕಚೇರಿ ಮಂಗಳವಾರ ಹೇಳಿಕೆಯಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದೆ. ಈಗಾಗಲೇ ಎಲ್​ಇಟಿಯನ್ನ …

Read More »

ಸಂಜು ವೆಡ್ಸ್ ಗೀತಾ-2 ಏಪ್ರಿಲ್ 1 ರಂದು ರಿಲೀಸ್;

ಸ್ಯಾಂಡಲ್‌ವುಡ್‌ ಸಂಜು ವೆಡ್ಸ್ ಗೀತಾ ಎರಡನೇ (Sanju Weds Geetha-2) ಭಾಗದ ಶೂಟಿಂಗ್ ಭರದಿಂದ ಸಾಗಿದೆ. ಕನಕಪುರ ರಸ್ತೆಯ ಫಾಮ್ ಹೌಸ್‌ನಲ್ಲಿ ಸಿನಿಮಾ ಶೂಟಿಂಗ್ (Cinema Shooting) ಬಲು ಜೋರಾಗಿಯೇ ನಡೆಯುತ್ತಿದೆ. ಸಿನಿಮಾದ ಮಹತ್ವದ ದೃಶ್ಯವನ್ನ ಇಲ್ಲಿ ತೆಗೆಯಲಾಗುತ್ತಿದೆ. ಇದರೊಟ್ಟಿಗೆ ಸಿನಿಮಾದ ರಿಲೀಸ್ ಡೇಟ್ ಕೂಡ ರಿವೀಲ್ ಆಗಿದೆ. ಸಿನಿಮಾ ಶೂಟಿಂಗ್ ಹಂತದಲ್ಲಿಯೇ ರಿಲೀಸ್ ದಿನವನ್ನ ಪ್ಲಾನ್ (Release Plan) ಮಾಡಲಾಗಿದೆ. ಇದರ ಬಗ್ಗೆ ನಿರ್ದೇಶಕ ನಾಗಶೇಖರ್ ಈಗಾಗಲೇ ಹೇಳಿಕೊಂಡಾಗಿದೆ. …

Read More »