ಧಾರವಾಡ : ದೀಪಾವಳಿ ನಿಮಿತ್ತ ಜೂಜಾಡುತ್ತಿದ್ದ ಗುಂಪಿನ ಮೇಲೆ ದಾಳಿ ಮಾಡಿದ ಪೊಲೀಸರ ಮೇಲೆ ಹಲ್ಲೆ ಮಾಡಿದ ಘಟನೆ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ. ಗಾಯಾಳು ಪೊಲೀಸ್ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ನರೇಂದ್ರ ಗ್ರಾಮದಲ್ಲಿ ಜೂಜಾಟ ನಡೆಯುವ ಖಚಿತ ಮಾಹಿತಿ ಮೇರೆಗೆ ಪಿಎಸ್ಐ ನಾಗರಾಜ್ ಪಾಟೀಲ ನೇತೃತ್ವದಲ್ಲಿ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ, ಜೂಜುಕೋರರು ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ …
Read More »Monthly Archives: ನವೆಂಬರ್ 2023
ಅಣ್ಣಾವ್ರು ಹುಟ್ಟಿದ ಮನೆಯಲ್ಲಿ ದೀಪಾವಳಿ ಸಂಭ್ರಮ: ‘ಗ್ರಾಮಾಯಣ’ದಿಂದ ವಿಶೇಷ ವಿಡಿಯೋ ರಿಲೀಸ್
ವಿನಯ್ ರಾಜ್ಕುಮಾರ್ ನಟನೆಯ ‘ಗ್ರಾಮಾಯಣ’ ಚಿತ್ರತಂಡ ದೀಪಾವಳಿ ಹಬ್ಬಕ್ಕೆ ವಿಶೇಷ ವಿಡಿಯೋವೊಂದನ್ನು ರಿಲೀಸ್ ಮಾಡಿದೆ. ಅಣ್ಣಾವ್ರು ಹುಟ್ಟಿದ ಮನೆಯಲ್ಲಿ ದೀಪಾವಳಿ ಸಂಭ್ರಮ: ‘ಗ್ರಾಮಾಯಣ’ದಿಂದ ವಿಶೇಷ ವಿಡಿಯೋ ರಿಲೀಸ್ ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಚಿತ್ರಗಳ ಮೂಲಕ ತನ್ನದೇ ಸ್ಟಾರ್ಡಮ್ ಗಿಟ್ಟಿಸಿಕೊಂಡಿರುವ ನಟ ವಿನಯ್ ರಾಜ್ಕುಮಾರ್. ಸದ್ಯ ‘ಪೆಪೆ’ ಹಾಗೂ ‘ಗ್ರಾಮಾಯಣ’ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ವಿನಯ್ ರಾಜ್ಕುಮಾರ್ ಅವರ ತಾತ ಹುಟ್ಟಿದ ಮನೆ ಅಂದ್ರೆ ಡಾ.ರಾಜ್ಕುಮಾರ್ ಅವರ ಮನೆ ಗಾಜನೂರಿನಲ್ಲಿ ಬಹಳ ವಿಶೇಷವಾಗಿ …
Read More »ಎರಡು – ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ’: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ಡಿ.ಕೆ. ಶಿವಕುಮಾರ್ ಮತ್ತೊಂದು ಪವರ್ ಸೆಂಟರ್ ಆಗಿರಬಾರದು ಎಂದು ಕಾಂಗ್ರೆಸ್ನಲ್ಲಿ ದೊಡ್ಡ ಪ್ರಮಾಣದ ಷಡ್ಯಂತ್ರ ನಡೆಯುತ್ತಿದೆ. ಅವರವರ ಜಗಳದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಎರಡು – ಮೂರು ದಿನಗಳಲ್ಲಿ ವಿಪಕ್ಷ ನಾಯಕರ ನೇಮಕ’: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಗರದ ತಮ್ಮ ಕಚೇರಿಯಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಇದೊಂದು ನೆಗೆಟಿವ್ ಸರ್ಕಾರವಾಗಿ ಪರಿವರ್ತನೆಯಾಗಿದೆ. ಹಳ್ಳಿಗಳಿಗೆ, ರೈತರಿಗೆ ಸಮರ್ಪಕ …
Read More »ಹರ್ಷಾ ಹೊಟೇಲ್ ಮಾಲೀಕ ಸುರೇಶ ನಾಯಿರಿ ನಿಧನ
ಹರ್ಷಾ ಹೊಟೇಲ್ ಮಾಲೀಕ ಸುರೇಶ ನಾಯಿರಿ ನಿಧನ ಬೆಳಗಾವಿ: ನಗರದ ಪ್ರತಿಷ್ಠಿತ ಹರ್ಷಾ ಹೊಟೇಲ್, ಶಬರಿ ಹೊಟೇಲ್ ಮಾಲೀಕರಾದ, ರಾಮತೀರ್ಥನಗರ ನಿವಾಸಿ ಮೂಲತಃ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಸುರೇಶ ಗಣಪಯ್ಯ ನಾಯಿರಿ(52) ಅನಾರೋಗ್ಯದಿಂದ ಸೋಮವಾರ ರಾತ್ರಿ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಸುರೇಶ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಉಡುಪಿ ಜಿಲ್ಲೆಯ …
Read More »ಪತ್ನಿ ನವಾಜ್ರಿಂದ ಬೇರ್ಪಟ್ಟ ರೇಮಂಡ್ಸ್ ಅಧ್ಯಕ್ಷ ಗೌತಮ್ ಸಿಂಘಾನಿಯಾ
ನವದೆಹಲಿ: ರೇಮಂಡ್ ಗ್ರೂಪ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಗೌತಮ್ ಸಿಂಘಾನಿಯಾ ಮತ್ತು ಅವರ ಪತ್ನಿ ನವಾಜ್ ಸಿಂಘಾನಿಯಾ ಸೋಮವಾರ ಬೇರ್ಪಡುವುದಾಗಿ ಘೋಷಿಸಿದ್ದಾರೆ. “ಈ ದೀಪಾವಳಿ ಹಿಂದಿನಂತೆ ಇರುವುದಿಲ್ಲ. ದಂಪತಿಗಳಾಗಿ ಒಟ್ಟಿಗೆ 32 ವರ್ಷ ಕಳೆದಿದ್ದೇವೆ, ಪೋಷಕರಾಗಿ ಜವಾಬ್ದಾರಿ ನಿಭಾಯಿಸಿದ್ದೇವೆ ಮತ್ತು ಯಾವಾಗಲೂ ಪರಸ್ಪರ ಶಕ್ತಿಯ ಮೂಲವಾಗಿದ್ದೆವು… ನಮ್ಮ ಜೀವನದಲ್ಲಿ ಮತ್ತೆರಡು ಸುಂದರ ಜೀವಗಳು ಸೇರ್ಪಡೆಯಾಗಿದ್ದರಿಂದ ನಾವು ಬದ್ಧತೆ, ಸಂಕಲ್ಪ, ನಂಬಿಕೆಯೊಂದಿಗೆ ಪ್ರಯಾಣಿಸಿದ್ದೇವೆ” ಎಂದು ಗೌತಮ್ ಸಿಂಘಾನಿಯಾ ಎಕ್ಸ್ (ಟ್ವಿಟರ್) …
Read More »ದೀಪದಿಂದ ಮನೆಗೆ ಹೊತ್ತಿಕೊಂಡ ಬೆಂಕಿ: 4 ಕುರಿ ಸಜೀವ ದಹನ, ಟ್ರ್ಯಾಕ್ಟರ್ ಖರೀದಿಗೆ ಇಟ್ಟಿದ್ದ 4.75 ಲಕ್ಷ ರೂ. ನಗದು ಸುಟ್ಟು ಭಸ್ಮ
ಬೆಳಗಾವಿ: ಮಹಿಳೆಯರೇ ದುಡಿದು ಆ ಕುಟುಂಬ ಜೀವನ ಸಾಗಿಸುತ್ತಿತ್ತು. ಎಲ್ಲರ ಮನೆಯಲ್ಲಂತೆ ಈ ಮನೆಯಲ್ಲಿಯೂ ದೀಪಾವಳಿ ಸಂಭ್ರಮ ಮನೆ ಮಾಡಿತ್ತು. ನಾಳೆ ಬೆಳಕಾದರೆ ಮನೆಗೆ ಟ್ರ್ಯಾಕ್ಟರ್ ತರುವ ಖುಷಿಯಲ್ಲಿದ್ದರು. ಆದರೆ ವಿಧಿ ಈ ಕುಟುಂಬದ ಜೊತೆ ಚೆಲ್ಲಾಟ ಆಡಿದೆ. ಆಕಸ್ಮಿಕವಾಗಿ ಹತ್ತಿದ ಬೆಂಕಿಗೆ ಸಂಪೂರ್ಣ ಮನೆ ಸುಟ್ಟು ಭಸ್ಮವಾಗಿ, ಬದುಕು ಬೀದಿಗೆ ಬಂದಿದೆ. ಹೌದು ಬಸವನ ಕುಡಚಿ ಗ್ರಾಮದ ಸವಿತಾ ದುನೊಳ್ಳಿ ಮತ್ತು ಅನಿತಾ ಕೌಲಗಿ ಎಂಬ ಸಹೋದರಿಯರಿಗೆ ಸೇರಿದ ಎರಡೂ …
Read More »ಥಿಯೇಟರ್ಗಳಲ್ಲಿ ಪಟಾಕಿ ಸಿಡಿಸಿ ಅವಾಂತರ; ಅತಿರೇಕದ ಅಭಿಮಾನಿಗಳಿಗೆ ಸಲ್ಮಾನ್ ಖಾನ್ ಕಿವಿ ಮಾತು
ಮುಂಬೈ (ಮಹಾರಾಷ್ಟ್ರ): ಟೈಗರ್ 3 ಚಿತ್ರದ ವೀಕ್ಷಣೆ ವೇಳೆ ಥಿಯೇಟರ್ಗಳಲ್ಲಿಯೇ ಪಟಾಕಿ ಸಿಡಿಸಿ ಅತಿರೇಕದ ಅಭಿಮಾನ ತೋರಿರುವ ಬಗ್ಗೆ ನಟ ಸಲ್ಮಾನ್ ಖಾನ್ ವಿಷಾದ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಯಾರೂ ಸಹ ಜೀವಕ್ಕೆ ಅಪಾಯವನ್ನುಂಟು ಮಾಡುವ ಇಂತಹ ಅಭಿಮಾನಕ್ಕೆ ಮುಂದಾಗಬಾರದು ಎಂದು ಅವರು ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದಾರೆ. ಇನ್ಸ್ಟಾಗ್ರಾಮ್ ವಿಷಾದ ವ್ಯಕ್ತಪಡಿಸಿರುವ ಸಲ್ಮಾನ್ ಖಾನ್, “ಥಿಯೇಟರ್ಗಳಲ್ಲಿ ಪಟಾಕಿ ಸಿಡಿಸಿದ ಬಗ್ಗೆ ನಾನೂ ಸಹ ಕೇಳಿದೆ. ಈ ಘಟನೆ ತುಂಬಾ ಅಪಾಯಕಾರಿ. ನಮ್ಮನ್ನು …
Read More »ಹಾವೇರಿ: ತೈವಾನ್ ದೇಶದ ಪಪ್ಪಾಯಿ ಬೆಳೆದ ರೈತ.. 8 ಲಕ್ಷ ರೂ ಆದಾಯದ ನಿರೀಕ್ಷೆಯಲ್ಲಿ ಬೆಳೆಗಾರ!
ಹಾವೇರಿ : ತಾಲೂಕಿನ ಕಬ್ಬೂರು ಗ್ರಾಮದಲ್ಲಿ ಹಲವು ಬೆಳೆಗಳಲ್ಲಿ ಅಂತರಬೆಳೆ ಬೆಳೆಯುವ ಮೂಲಕ ಪ್ರಗತಿಪರ ರೈತರೊಬ್ಬರು ಕೃಷಿಯಲ್ಲಿ ಲಾಭಗಳಿಸಿಕೊಂಡಿದ್ದಾರೆ. ಕಬ್ಬೂರು ಗ್ರಾಮದ ಪ್ರಗತಿಪರ ರೈತ ಉಮೇಶ ಸಂಗೂರು ಅವರು ಎಲ್ಲ ರೈತರಂತೆ ಒಂದೇ ಬೆಳೆಗೆ ಅಂಟಿಕೊಂಡಿಲ್ಲ. ಗ್ರಾಮದ ಸಮೀಪ ಇರುವ ಎರಡು ಎಕರೆ ಜಮೀನಿನಲ್ಲಿ ಎರಡು ವರ್ಷದ ಹಿಂದೆ ಅಡಕೆ ನೆಟ್ಟಿದ್ದಾರೆ. ಅಡಿಕೆ ಗಿಡಗಳ ನಡುವೆ ಇರುವ ಜಾಗದಲ್ಲಿ ಉಮೇಶ್ ಈ ವರ್ಷ ಪಪ್ಪಾಯಿ ಬೆಳೆದಿದ್ದಾರೆ. ಉಮೇಶ್ ತೈವಾನ್ ದೇಶದ ರೆಡ್ …
Read More »ಲೋಕಸಭೆ ಚುನಾವಣೆ: ಬೆಳಗಾವಿ ಲಿಂಗಾಯತ, ಚಿಕ್ಕೋಡಿ ಕುರುಬರಿಗೆ ಟಿಕೆಟ್ ಚಿಂತನೆ – ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರಕ್ಕೆ ಲಿಂಗಾಯತ, ಚಿಕ್ಕೋಡಿಯಲ್ಲಿ ಕುರುಬ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲು ಚಿಂತನೆ ನಡೆದಿದೆ. ರಾಜ್ಯದ 20 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಗುರಿ ಹೊಂದಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಈಗಾಗಲೇ ತಯಾರಿ ನಡೆಸಿದ್ದೇವೆ. ಕಾರ್ಯಕರ್ತರು ಚುನಾವಣೆ ಎದುರಿಸಲು ಸಿದ್ಧರಾಗಿದ್ದು, ಎಲ್ಲ ರೀತಿಯ ಮಾನದಂಡಗಳನ್ನು ಅನುಸರಿಸಿ, ಮೂರು ಹಂತಗಳಲ್ಲಿ …
Read More »ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣಕಾರ್ಯಕ್ರಮಕ್ಕೆ ನಾನು ಹೋಗಲ್ಲ.:C.T.RAVI
ಚಿಕ್ಕಮಗಳೂರು : ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿರುವ ಕಾರ್ಯಕ್ರಮಕ್ಕೆ ನಾನು ಹೋಗಲ್ಲ. ಅವರು ನನ್ನ ಜೊತೆ 2 ಬಾರಿ ಫೋನ್ನಲ್ಲಿ ಮಾತನಾಡಿದ್ದಾರೆ. 15ನೇ ತಾರೀಖು ಜವಾಬ್ದಾರಿ ಸ್ವೀಕಾರ ಮಾಡ್ತಿದ್ದಾರೆ. 15 ರ ರಾತ್ರಿವರೆಗೂ ಮಧ್ಯ ಪ್ರದೇಶದಲ್ಲಿ ಚುನಾವಣಾ ಕ್ಯಾಂಪೇನ್ ಇದೆ. 15ಕ್ಕೆ ನಾನು ಇರಲ್ಲ ಅಂತ ಹೇಳಿದ್ದೇನೆ ಎಂದು ಚಿಕ್ಕಮಗಳೂರಿನಲ್ಲಿ ಮಾಜಿ ಸಚಿವ ಸಿ ಟಿ ರವಿ ಹೇಳಿದ್ದಾರೆ. ನಂತರ ಎಂ ಪಿ ರೇಣುಕಾಚಾರ್ಯ ಹೇಳಿಕೆಗೆ ಸಿ ಟಿ ರವಿ …
Read More »